Homeಅಂತರಾಷ್ಟ್ರೀಯಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

ಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

- Advertisement -
- Advertisement -

‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಮೂಲಕ ಗಾಝಾಗೆ ಮಾನವೀಯ ನೆರವು ತಲುಪಿಸಲು ಪ್ರಯತ್ನಿಸಿದ ಸುಮಾರು 137 ಹೋರಾಟಗಾರರನ್ನು ಇಸ್ರೇಲ್‌ ಬಂಧಿಸಿತ್ತು. ಶನಿವಾರ (ಅ.4) ಅವರೆಲ್ಲರನ್ನೂ ಟರ್ಕಿಗೆ ಗಡಿಪಾರು ಮಾಡಲಾಗಿದೆ.

ಟರ್ಕಿ ತಲುಪಿದ ಹೋರಾಟಗಾರರ ಪೈಕಿ ಇಬ್ಬರು, ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರನ್ನು ಬಂಧನದ ಸಮಯದಲ್ಲಿ ಇಸ್ರೇಲ್ ಸೇನೆ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಹೊಸ ಆರೋಪಗಳ ಬಗ್ಗೆ ಇಸ್ರೇಲಿ ನಾಯಕರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಅವರ ವಿದೇಶಾಂಗ ಸಚಿವಾಲಯವು ಬಂಧಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂಬ ವರದಿಗಳು ‘ಸಂಪೂರ್ಣ ಸುಳ್ಳು’ ಎಂದಿದೆ.

ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣದ ತಲುಪಿದ ಹೋರಾಟಗಾರರಲ್ಲಿ 36 ಟರ್ಕಿಶ್ ಪ್ರಜೆಗಳು, ಅಮೆರಿಕ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಅಲ್ಜೀರಿಯಾ, ಮೊರಾಕೊ, ಇಟಲಿ, ಕುವೈತ್, ಲಿಬಿಯಾ, ಮಲೇಷ್ಯಾ, ಮಾರಿಟಾನಿಯಾ, ಸ್ವಿಟ್ಜರ್ಲೆಂಡ್, ಟುನೀಶಿಯಾ ಮತ್ತು ಜೋರ್ಡಾನ್ ನಾಗರಿಕರು ಸೇರಿದ್ದಾರೆ ಎಂದು ಟರ್ಕಿಶ್ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ಗ್ರೇಟಾ ಥನ್‌ಬರ್ಗ್ ಅವರನ್ನು ‘ಭಯಾನಕವಾಗಿ ನಡೆಸಿಕೊಂಡರು’- ಹೋರಾಟಗಾರರ ಆರೋಪ

ಗ್ರೇಟಾ ಥನ್‌ಬರ್ಗ್ ಅವರನ್ನು ಇಸ್ರೇಲ್ ಸೇನೆ ಕೆಟ್ಟದ್ದಾಗಿ ನಡೆಸಿಕೊಂಡಿದೆ. ಆಕೆಯ ಕೂದಳು ಹಿಡಿದು ಎಳೆದಾಡಿದ್ದಾರೆ. ಇಸ್ರೇಲ್ ಧ್ವಜ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೋರಾಟಗಾರರಾದ ಮಲೇಷ್ಯಾದ ಪ್ರಜೆ ಹಜ್ವಾನಿ ಹೆಲ್ಮಿ ಮತ್ತು ಅಮೆರಿಕನ್ ಪ್ರಜೆ ವಿಂಡ್‌ಫೀಲ್ಡ್ ಬೀವರ್ ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣ ತಲುಪಿದಾಗ ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಇಸ್ರೇಲ್ ನಮ್ಮನ್ನು ಬಂಧಿಸಿದ್ದ ವೇಳೆ ಪ್ರಾಣಿಗಳಂತೆ ನಡೆಸಿಕೊಂಡಿದೆ. ಶುದ್ದ ಆಹಾರ, ನೀರು ಒದಗಿಸಿಲ್ಲ. ನಮ್ಮಲ್ಲಿದ್ದ ಔಷಧ ಮತ್ತು ಇತರ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು 28 ವರ್ಷದ ಹೆಲ್ಮಿ ಹೇಳಿದ್ದಾರೆ.

ಇಸ್ರೇಲ್‌ನ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಬಂದಾಗ ತನ್ನನ್ನು ಕೋಣೆಗೆ ತಳ್ಳಲಾಯಿತು. ಗ್ರೇಟಾ ಥನ್‌ಬರ್ಗ್ ಅವರನ್ನು ಭಯಾನಕವಾಗಿ ಮತ್ತು ಪ್ರೊಪಗಂಡವಾಗಿ ನಡೆಸಿಕೊಂಡರು ಎಂದು 43 ವರ್ಷದ ಬೀವರ್ ಆರೋಪಿಸಿದ್ದಾರೆ.

ಗಾಝಾಗೆ ನೆರವು ಹೊತ್ತು ಸಾಗಿದ್ದ ಸುಮಾರು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ತಂಡದ 40 ಬೋಟ್‌ಗಳನ್ನು ತಡೆದು, ಅವುಗಳಲ್ಲಿ ಇದ್ದ ಸುಮಾರು 450ಕ್ಕೂ ಹೆಚ್ಚು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿರುವುದಕ್ಕೆ ಜಾಗತಿಕ ಖಂಡನೆ ವ್ಯಕ್ತವಾಗಿದೆ.

ಬಂಧಿತ ಎಲ್ಲಾ ಮಾನವ ಹಕ್ಕು ಕಾರ್ಯಕರ್ತರು ಸುರಕ್ಷಿತ ಮತ್ತು ಉತ್ತಮ ಆರೋಗ್ಯದಲ್ಲಿದ್ದಾರೆ. ಇನ್ನುಳಿದವರನ್ನು ಸಾಧ್ಯವಾದಷ್ಟು ಬೇಗ ಗಡಿಪಾರು ಮಾಡಲಾಗುವುದು ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿದೆ.

ಪ್ರತ್ಯೇಕ ಪೋಸ್ಟ್‌ನಲ್ಲಿ, ಕೆಲವು ಫ್ಲೋಟಿಲ್ಲಾ ಸದಸ್ಯರು ದಾಖಲೆಗಳನ್ನು ಒದಗಿಸದೆ ಗಡಿಪಾರು ಪ್ರಕ್ರಿಯೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದೆ. ಈ ಆರೋಪವನ್ನು ನಾವು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ತಿಳಿಸಿದೆ.

ದೌರ್ಜನ್ಯದ ಆರೋಪಗಳನ್ನು ತಳ್ಳಿ ಹಾಕಿದ ಇಸ್ರೇಲ್

ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ 26 ಇಟಾಲಿಯನ್ನರಿದ್ದರು, ಇನ್ನೂ 15 ಜನರನ್ನು ಇಸ್ರೇಲ್‌ನಲ್ಲಿ ಬಂಧಿಸಲಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಇತರ ರಾಷ್ಟ್ರಗಳ ಹೋರಾಟಗಾರರೊಂದಿಗೆ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ ಎಂದು ಇಟಲಿಯ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಹೇಳಿದ್ದಾರೆ.

ಉಳಿದ ನಮ್ಮ ಪ್ರಜೆಗಳನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೊಮ್ಮೆ ಟೆಲ್ ಅವೀವ್‌ನಲ್ಲಿರುವ ಇಟಾಲಿಯನ್ ರಾಯಭಾರ ಕಚೇರಿಗೆ ಸೂಚನೆಗಳನ್ನು ನೀಡಿದ್ದೇನೆ ಎಂದು ತಜಾನಿ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಗ್ಲೋಬಲ್ ಫ್ಲೋಟಿಲ್ಲಾದಲ್ಲಿದ್ದ ಇಟಾಲಿಯನ್ನರ ಮೊದಲ ಗುಂಪು (ನಾಲ್ವರು ಸಂಸದರು) ಶುಕ್ರವಾರ ರೋಮ್‌ ತಲುಪಿದ್ದಾರೆ ಎಂದು ರಾಯಿಟರ್ಸ್ ತಿಳಿಸಿದೆ.

“ಕಾನೂನುಬದ್ಧವಾಗಿ ವರ್ತಿಸಿದವರು ಬೋಟ್‌ಗಳಲ್ಲಿ ಇದ್ದವರು, ಕಾನೂನುಬಾಹಿರವಾಗಿ ವರ್ತಿಸಿದವರು ಗಾಝಾಗೆ ಮಾನವೀಯ ನೆರವು ತಲುಪದಂತೆ ತಡೆದವರು” ಎಂದು ಫ್ಲೋಟಿಲ್ಲಾದ ಭಾಗವಾಗಿದ್ದ ಇಟಾಲಿಯನ್ ಸಂಸದರಲ್ಲಿ ಒಬ್ಬರಾದ ಆರ್ಟುರೊ ಸ್ಕಾಟೊ ರೋಮ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ನಮ್ಮನ್ನು ಕ್ರೂರವಾಗಿ ತಡೆಹಿಡಿಯಲಾಯಿತು … ಕ್ರೂರವಾಗಿ ಒತ್ತೆಯಾಳಾಗಿ ಇರಿಸಲಾಯಿತು” ಎಂದು ಇಟಲಿಯ ಮತ್ತೊಬ್ಬ ಸಂಸದೆ ಬೆನೆಡೆಟ್ಟಾ ಸ್ಕುಡೆರಿ ಆರೋಪಿಸಿದ್ದಾರೆ.

ಫ್ಲೋಟಿಲ್ಲಾ ಸದಸ್ಯರಿಗೆ ಕಾನೂನು ನೆರವು ನೀಡುವ ಇಸ್ರೇಲಿ ಗುಂಪಿನ ಅದಾಲಾ ಪ್ರಕಾರ, ಕೆಲವು ಬಂಧಿತರಿಗೆ ವಕೀಲರು, ನೀರು, ಔಷಧಿಗಳು ಮತ್ತು ಶೌಚಾಲಯಗಳಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಕೆಲವು ಹೋರಾಟಗಾರರು ‘ಫ್ರೀ ಪ್ಯಾಲೆಸ್ಟೈನ್’ ಎಂದು ಘೋಷಣೆ ಕೂಗಿದ ನಂತರ, ಅವರ ಕೈಗಳನ್ನು ಜಿಪ್-ಟೈ (ಕೇಬಲ್ ಟೈ) ಬಳಸಿ ಕಟ್ಟಿ, ಕನಿಷ್ಠ ಐದು ಗಂಟೆಗಳ ಕಾಲ ಮಂಡಿಯೂರಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ಆದಾಲ ವಿವರಿಸಿದ್ದಾರೆ.

ದಾಳಿ ನಿಲ್ಲಿಸುವಂತೆ ಟ್ರಂಪ್ ಕರೆ ಬೆನ್ನಲ್ಲೇ ಗಾಜಾದಲ್ಲಿ ಇಸ್ರೇಲ್ ದಾಳಿ; 6 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...