Homeಅಂತರಾಷ್ಟ್ರೀಯಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

ಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

- Advertisement -
- Advertisement -

‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಮೂಲಕ ಗಾಝಾಗೆ ಮಾನವೀಯ ನೆರವು ತಲುಪಿಸಲು ಪ್ರಯತ್ನಿಸಿದ ಸುಮಾರು 137 ಹೋರಾಟಗಾರರನ್ನು ಇಸ್ರೇಲ್‌ ಬಂಧಿಸಿತ್ತು. ಶನಿವಾರ (ಅ.4) ಅವರೆಲ್ಲರನ್ನೂ ಟರ್ಕಿಗೆ ಗಡಿಪಾರು ಮಾಡಲಾಗಿದೆ.

ಟರ್ಕಿ ತಲುಪಿದ ಹೋರಾಟಗಾರರ ಪೈಕಿ ಇಬ್ಬರು, ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರನ್ನು ಬಂಧನದ ಸಮಯದಲ್ಲಿ ಇಸ್ರೇಲ್ ಸೇನೆ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಹೊಸ ಆರೋಪಗಳ ಬಗ್ಗೆ ಇಸ್ರೇಲಿ ನಾಯಕರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಅವರ ವಿದೇಶಾಂಗ ಸಚಿವಾಲಯವು ಬಂಧಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂಬ ವರದಿಗಳು ‘ಸಂಪೂರ್ಣ ಸುಳ್ಳು’ ಎಂದಿದೆ.

ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣದ ತಲುಪಿದ ಹೋರಾಟಗಾರರಲ್ಲಿ 36 ಟರ್ಕಿಶ್ ಪ್ರಜೆಗಳು, ಅಮೆರಿಕ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಅಲ್ಜೀರಿಯಾ, ಮೊರಾಕೊ, ಇಟಲಿ, ಕುವೈತ್, ಲಿಬಿಯಾ, ಮಲೇಷ್ಯಾ, ಮಾರಿಟಾನಿಯಾ, ಸ್ವಿಟ್ಜರ್ಲೆಂಡ್, ಟುನೀಶಿಯಾ ಮತ್ತು ಜೋರ್ಡಾನ್ ನಾಗರಿಕರು ಸೇರಿದ್ದಾರೆ ಎಂದು ಟರ್ಕಿಶ್ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ಗ್ರೇಟಾ ಥನ್‌ಬರ್ಗ್ ಅವರನ್ನು ‘ಭಯಾನಕವಾಗಿ ನಡೆಸಿಕೊಂಡರು’- ಹೋರಾಟಗಾರರ ಆರೋಪ

ಗ್ರೇಟಾ ಥನ್‌ಬರ್ಗ್ ಅವರನ್ನು ಇಸ್ರೇಲ್ ಸೇನೆ ಕೆಟ್ಟದ್ದಾಗಿ ನಡೆಸಿಕೊಂಡಿದೆ. ಆಕೆಯ ಕೂದಳು ಹಿಡಿದು ಎಳೆದಾಡಿದ್ದಾರೆ. ಇಸ್ರೇಲ್ ಧ್ವಜ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೋರಾಟಗಾರರಾದ ಮಲೇಷ್ಯಾದ ಪ್ರಜೆ ಹಜ್ವಾನಿ ಹೆಲ್ಮಿ ಮತ್ತು ಅಮೆರಿಕನ್ ಪ್ರಜೆ ವಿಂಡ್‌ಫೀಲ್ಡ್ ಬೀವರ್ ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣ ತಲುಪಿದಾಗ ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಇಸ್ರೇಲ್ ನಮ್ಮನ್ನು ಬಂಧಿಸಿದ್ದ ವೇಳೆ ಪ್ರಾಣಿಗಳಂತೆ ನಡೆಸಿಕೊಂಡಿದೆ. ಶುದ್ದ ಆಹಾರ, ನೀರು ಒದಗಿಸಿಲ್ಲ. ನಮ್ಮಲ್ಲಿದ್ದ ಔಷಧ ಮತ್ತು ಇತರ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು 28 ವರ್ಷದ ಹೆಲ್ಮಿ ಹೇಳಿದ್ದಾರೆ.

ಇಸ್ರೇಲ್‌ನ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಬಂದಾಗ ತನ್ನನ್ನು ಕೋಣೆಗೆ ತಳ್ಳಲಾಯಿತು. ಗ್ರೇಟಾ ಥನ್‌ಬರ್ಗ್ ಅವರನ್ನು ಭಯಾನಕವಾಗಿ ಮತ್ತು ಪ್ರೊಪಗಂಡವಾಗಿ ನಡೆಸಿಕೊಂಡರು ಎಂದು 43 ವರ್ಷದ ಬೀವರ್ ಆರೋಪಿಸಿದ್ದಾರೆ.

ಗಾಝಾಗೆ ನೆರವು ಹೊತ್ತು ಸಾಗಿದ್ದ ಸುಮಾರು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ತಂಡದ 40 ಬೋಟ್‌ಗಳನ್ನು ತಡೆದು, ಅವುಗಳಲ್ಲಿ ಇದ್ದ ಸುಮಾರು 450ಕ್ಕೂ ಹೆಚ್ಚು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿರುವುದಕ್ಕೆ ಜಾಗತಿಕ ಖಂಡನೆ ವ್ಯಕ್ತವಾಗಿದೆ.

ಬಂಧಿತ ಎಲ್ಲಾ ಮಾನವ ಹಕ್ಕು ಕಾರ್ಯಕರ್ತರು ಸುರಕ್ಷಿತ ಮತ್ತು ಉತ್ತಮ ಆರೋಗ್ಯದಲ್ಲಿದ್ದಾರೆ. ಇನ್ನುಳಿದವರನ್ನು ಸಾಧ್ಯವಾದಷ್ಟು ಬೇಗ ಗಡಿಪಾರು ಮಾಡಲಾಗುವುದು ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿದೆ.

ಪ್ರತ್ಯೇಕ ಪೋಸ್ಟ್‌ನಲ್ಲಿ, ಕೆಲವು ಫ್ಲೋಟಿಲ್ಲಾ ಸದಸ್ಯರು ದಾಖಲೆಗಳನ್ನು ಒದಗಿಸದೆ ಗಡಿಪಾರು ಪ್ರಕ್ರಿಯೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದೆ. ಈ ಆರೋಪವನ್ನು ನಾವು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ತಿಳಿಸಿದೆ.

ದೌರ್ಜನ್ಯದ ಆರೋಪಗಳನ್ನು ತಳ್ಳಿ ಹಾಕಿದ ಇಸ್ರೇಲ್

ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ 26 ಇಟಾಲಿಯನ್ನರಿದ್ದರು, ಇನ್ನೂ 15 ಜನರನ್ನು ಇಸ್ರೇಲ್‌ನಲ್ಲಿ ಬಂಧಿಸಲಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಇತರ ರಾಷ್ಟ್ರಗಳ ಹೋರಾಟಗಾರರೊಂದಿಗೆ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ ಎಂದು ಇಟಲಿಯ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಹೇಳಿದ್ದಾರೆ.

ಉಳಿದ ನಮ್ಮ ಪ್ರಜೆಗಳನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೊಮ್ಮೆ ಟೆಲ್ ಅವೀವ್‌ನಲ್ಲಿರುವ ಇಟಾಲಿಯನ್ ರಾಯಭಾರ ಕಚೇರಿಗೆ ಸೂಚನೆಗಳನ್ನು ನೀಡಿದ್ದೇನೆ ಎಂದು ತಜಾನಿ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಗ್ಲೋಬಲ್ ಫ್ಲೋಟಿಲ್ಲಾದಲ್ಲಿದ್ದ ಇಟಾಲಿಯನ್ನರ ಮೊದಲ ಗುಂಪು (ನಾಲ್ವರು ಸಂಸದರು) ಶುಕ್ರವಾರ ರೋಮ್‌ ತಲುಪಿದ್ದಾರೆ ಎಂದು ರಾಯಿಟರ್ಸ್ ತಿಳಿಸಿದೆ.

“ಕಾನೂನುಬದ್ಧವಾಗಿ ವರ್ತಿಸಿದವರು ಬೋಟ್‌ಗಳಲ್ಲಿ ಇದ್ದವರು, ಕಾನೂನುಬಾಹಿರವಾಗಿ ವರ್ತಿಸಿದವರು ಗಾಝಾಗೆ ಮಾನವೀಯ ನೆರವು ತಲುಪದಂತೆ ತಡೆದವರು” ಎಂದು ಫ್ಲೋಟಿಲ್ಲಾದ ಭಾಗವಾಗಿದ್ದ ಇಟಾಲಿಯನ್ ಸಂಸದರಲ್ಲಿ ಒಬ್ಬರಾದ ಆರ್ಟುರೊ ಸ್ಕಾಟೊ ರೋಮ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ನಮ್ಮನ್ನು ಕ್ರೂರವಾಗಿ ತಡೆಹಿಡಿಯಲಾಯಿತು … ಕ್ರೂರವಾಗಿ ಒತ್ತೆಯಾಳಾಗಿ ಇರಿಸಲಾಯಿತು” ಎಂದು ಇಟಲಿಯ ಮತ್ತೊಬ್ಬ ಸಂಸದೆ ಬೆನೆಡೆಟ್ಟಾ ಸ್ಕುಡೆರಿ ಆರೋಪಿಸಿದ್ದಾರೆ.

ಫ್ಲೋಟಿಲ್ಲಾ ಸದಸ್ಯರಿಗೆ ಕಾನೂನು ನೆರವು ನೀಡುವ ಇಸ್ರೇಲಿ ಗುಂಪಿನ ಅದಾಲಾ ಪ್ರಕಾರ, ಕೆಲವು ಬಂಧಿತರಿಗೆ ವಕೀಲರು, ನೀರು, ಔಷಧಿಗಳು ಮತ್ತು ಶೌಚಾಲಯಗಳಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಕೆಲವು ಹೋರಾಟಗಾರರು ‘ಫ್ರೀ ಪ್ಯಾಲೆಸ್ಟೈನ್’ ಎಂದು ಘೋಷಣೆ ಕೂಗಿದ ನಂತರ, ಅವರ ಕೈಗಳನ್ನು ಜಿಪ್-ಟೈ (ಕೇಬಲ್ ಟೈ) ಬಳಸಿ ಕಟ್ಟಿ, ಕನಿಷ್ಠ ಐದು ಗಂಟೆಗಳ ಕಾಲ ಮಂಡಿಯೂರಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ಆದಾಲ ವಿವರಿಸಿದ್ದಾರೆ.

ದಾಳಿ ನಿಲ್ಲಿಸುವಂತೆ ಟ್ರಂಪ್ ಕರೆ ಬೆನ್ನಲ್ಲೇ ಗಾಜಾದಲ್ಲಿ ಇಸ್ರೇಲ್ ದಾಳಿ; 6 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....