Homeಅಂತರಾಷ್ಟ್ರೀಯಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

ಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

- Advertisement -
- Advertisement -

‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಮೂಲಕ ಗಾಝಾಗೆ ಮಾನವೀಯ ನೆರವು ತಲುಪಿಸಲು ಪ್ರಯತ್ನಿಸಿದ ಸುಮಾರು 137 ಹೋರಾಟಗಾರರನ್ನು ಇಸ್ರೇಲ್‌ ಬಂಧಿಸಿತ್ತು. ಶನಿವಾರ (ಅ.4) ಅವರೆಲ್ಲರನ್ನೂ ಟರ್ಕಿಗೆ ಗಡಿಪಾರು ಮಾಡಲಾಗಿದೆ.

ಟರ್ಕಿ ತಲುಪಿದ ಹೋರಾಟಗಾರರ ಪೈಕಿ ಇಬ್ಬರು, ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರನ್ನು ಬಂಧನದ ಸಮಯದಲ್ಲಿ ಇಸ್ರೇಲ್ ಸೇನೆ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಹೊಸ ಆರೋಪಗಳ ಬಗ್ಗೆ ಇಸ್ರೇಲಿ ನಾಯಕರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಅವರ ವಿದೇಶಾಂಗ ಸಚಿವಾಲಯವು ಬಂಧಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂಬ ವರದಿಗಳು ‘ಸಂಪೂರ್ಣ ಸುಳ್ಳು’ ಎಂದಿದೆ.

ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣದ ತಲುಪಿದ ಹೋರಾಟಗಾರರಲ್ಲಿ 36 ಟರ್ಕಿಶ್ ಪ್ರಜೆಗಳು, ಅಮೆರಿಕ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಅಲ್ಜೀರಿಯಾ, ಮೊರಾಕೊ, ಇಟಲಿ, ಕುವೈತ್, ಲಿಬಿಯಾ, ಮಲೇಷ್ಯಾ, ಮಾರಿಟಾನಿಯಾ, ಸ್ವಿಟ್ಜರ್ಲೆಂಡ್, ಟುನೀಶಿಯಾ ಮತ್ತು ಜೋರ್ಡಾನ್ ನಾಗರಿಕರು ಸೇರಿದ್ದಾರೆ ಎಂದು ಟರ್ಕಿಶ್ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ಗ್ರೇಟಾ ಥನ್‌ಬರ್ಗ್ ಅವರನ್ನು ‘ಭಯಾನಕವಾಗಿ ನಡೆಸಿಕೊಂಡರು’- ಹೋರಾಟಗಾರರ ಆರೋಪ

ಗ್ರೇಟಾ ಥನ್‌ಬರ್ಗ್ ಅವರನ್ನು ಇಸ್ರೇಲ್ ಸೇನೆ ಕೆಟ್ಟದ್ದಾಗಿ ನಡೆಸಿಕೊಂಡಿದೆ. ಆಕೆಯ ಕೂದಳು ಹಿಡಿದು ಎಳೆದಾಡಿದ್ದಾರೆ. ಇಸ್ರೇಲ್ ಧ್ವಜ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೋರಾಟಗಾರರಾದ ಮಲೇಷ್ಯಾದ ಪ್ರಜೆ ಹಜ್ವಾನಿ ಹೆಲ್ಮಿ ಮತ್ತು ಅಮೆರಿಕನ್ ಪ್ರಜೆ ವಿಂಡ್‌ಫೀಲ್ಡ್ ಬೀವರ್ ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣ ತಲುಪಿದಾಗ ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಇಸ್ರೇಲ್ ನಮ್ಮನ್ನು ಬಂಧಿಸಿದ್ದ ವೇಳೆ ಪ್ರಾಣಿಗಳಂತೆ ನಡೆಸಿಕೊಂಡಿದೆ. ಶುದ್ದ ಆಹಾರ, ನೀರು ಒದಗಿಸಿಲ್ಲ. ನಮ್ಮಲ್ಲಿದ್ದ ಔಷಧ ಮತ್ತು ಇತರ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು 28 ವರ್ಷದ ಹೆಲ್ಮಿ ಹೇಳಿದ್ದಾರೆ.

ಇಸ್ರೇಲ್‌ನ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಬಂದಾಗ ತನ್ನನ್ನು ಕೋಣೆಗೆ ತಳ್ಳಲಾಯಿತು. ಗ್ರೇಟಾ ಥನ್‌ಬರ್ಗ್ ಅವರನ್ನು ಭಯಾನಕವಾಗಿ ಮತ್ತು ಪ್ರೊಪಗಂಡವಾಗಿ ನಡೆಸಿಕೊಂಡರು ಎಂದು 43 ವರ್ಷದ ಬೀವರ್ ಆರೋಪಿಸಿದ್ದಾರೆ.

ಗಾಝಾಗೆ ನೆರವು ಹೊತ್ತು ಸಾಗಿದ್ದ ಸುಮಾರು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ತಂಡದ 40 ಬೋಟ್‌ಗಳನ್ನು ತಡೆದು, ಅವುಗಳಲ್ಲಿ ಇದ್ದ ಸುಮಾರು 450ಕ್ಕೂ ಹೆಚ್ಚು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿರುವುದಕ್ಕೆ ಜಾಗತಿಕ ಖಂಡನೆ ವ್ಯಕ್ತವಾಗಿದೆ.

ಬಂಧಿತ ಎಲ್ಲಾ ಮಾನವ ಹಕ್ಕು ಕಾರ್ಯಕರ್ತರು ಸುರಕ್ಷಿತ ಮತ್ತು ಉತ್ತಮ ಆರೋಗ್ಯದಲ್ಲಿದ್ದಾರೆ. ಇನ್ನುಳಿದವರನ್ನು ಸಾಧ್ಯವಾದಷ್ಟು ಬೇಗ ಗಡಿಪಾರು ಮಾಡಲಾಗುವುದು ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿದೆ.

ಪ್ರತ್ಯೇಕ ಪೋಸ್ಟ್‌ನಲ್ಲಿ, ಕೆಲವು ಫ್ಲೋಟಿಲ್ಲಾ ಸದಸ್ಯರು ದಾಖಲೆಗಳನ್ನು ಒದಗಿಸದೆ ಗಡಿಪಾರು ಪ್ರಕ್ರಿಯೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದೆ. ಈ ಆರೋಪವನ್ನು ನಾವು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ತಿಳಿಸಿದೆ.

ದೌರ್ಜನ್ಯದ ಆರೋಪಗಳನ್ನು ತಳ್ಳಿ ಹಾಕಿದ ಇಸ್ರೇಲ್

ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ 26 ಇಟಾಲಿಯನ್ನರಿದ್ದರು, ಇನ್ನೂ 15 ಜನರನ್ನು ಇಸ್ರೇಲ್‌ನಲ್ಲಿ ಬಂಧಿಸಲಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಇತರ ರಾಷ್ಟ್ರಗಳ ಹೋರಾಟಗಾರರೊಂದಿಗೆ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ ಎಂದು ಇಟಲಿಯ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಹೇಳಿದ್ದಾರೆ.

ಉಳಿದ ನಮ್ಮ ಪ್ರಜೆಗಳನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೊಮ್ಮೆ ಟೆಲ್ ಅವೀವ್‌ನಲ್ಲಿರುವ ಇಟಾಲಿಯನ್ ರಾಯಭಾರ ಕಚೇರಿಗೆ ಸೂಚನೆಗಳನ್ನು ನೀಡಿದ್ದೇನೆ ಎಂದು ತಜಾನಿ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಗ್ಲೋಬಲ್ ಫ್ಲೋಟಿಲ್ಲಾದಲ್ಲಿದ್ದ ಇಟಾಲಿಯನ್ನರ ಮೊದಲ ಗುಂಪು (ನಾಲ್ವರು ಸಂಸದರು) ಶುಕ್ರವಾರ ರೋಮ್‌ ತಲುಪಿದ್ದಾರೆ ಎಂದು ರಾಯಿಟರ್ಸ್ ತಿಳಿಸಿದೆ.

“ಕಾನೂನುಬದ್ಧವಾಗಿ ವರ್ತಿಸಿದವರು ಬೋಟ್‌ಗಳಲ್ಲಿ ಇದ್ದವರು, ಕಾನೂನುಬಾಹಿರವಾಗಿ ವರ್ತಿಸಿದವರು ಗಾಝಾಗೆ ಮಾನವೀಯ ನೆರವು ತಲುಪದಂತೆ ತಡೆದವರು” ಎಂದು ಫ್ಲೋಟಿಲ್ಲಾದ ಭಾಗವಾಗಿದ್ದ ಇಟಾಲಿಯನ್ ಸಂಸದರಲ್ಲಿ ಒಬ್ಬರಾದ ಆರ್ಟುರೊ ಸ್ಕಾಟೊ ರೋಮ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ನಮ್ಮನ್ನು ಕ್ರೂರವಾಗಿ ತಡೆಹಿಡಿಯಲಾಯಿತು … ಕ್ರೂರವಾಗಿ ಒತ್ತೆಯಾಳಾಗಿ ಇರಿಸಲಾಯಿತು” ಎಂದು ಇಟಲಿಯ ಮತ್ತೊಬ್ಬ ಸಂಸದೆ ಬೆನೆಡೆಟ್ಟಾ ಸ್ಕುಡೆರಿ ಆರೋಪಿಸಿದ್ದಾರೆ.

ಫ್ಲೋಟಿಲ್ಲಾ ಸದಸ್ಯರಿಗೆ ಕಾನೂನು ನೆರವು ನೀಡುವ ಇಸ್ರೇಲಿ ಗುಂಪಿನ ಅದಾಲಾ ಪ್ರಕಾರ, ಕೆಲವು ಬಂಧಿತರಿಗೆ ವಕೀಲರು, ನೀರು, ಔಷಧಿಗಳು ಮತ್ತು ಶೌಚಾಲಯಗಳಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಕೆಲವು ಹೋರಾಟಗಾರರು ‘ಫ್ರೀ ಪ್ಯಾಲೆಸ್ಟೈನ್’ ಎಂದು ಘೋಷಣೆ ಕೂಗಿದ ನಂತರ, ಅವರ ಕೈಗಳನ್ನು ಜಿಪ್-ಟೈ (ಕೇಬಲ್ ಟೈ) ಬಳಸಿ ಕಟ್ಟಿ, ಕನಿಷ್ಠ ಐದು ಗಂಟೆಗಳ ಕಾಲ ಮಂಡಿಯೂರಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ಆದಾಲ ವಿವರಿಸಿದ್ದಾರೆ.

ದಾಳಿ ನಿಲ್ಲಿಸುವಂತೆ ಟ್ರಂಪ್ ಕರೆ ಬೆನ್ನಲ್ಲೇ ಗಾಜಾದಲ್ಲಿ ಇಸ್ರೇಲ್ ದಾಳಿ; 6 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...