Homeಅಂತರಾಷ್ಟ್ರೀಯಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

ಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

- Advertisement -
- Advertisement -

‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಮೂಲಕ ಗಾಝಾಗೆ ಮಾನವೀಯ ನೆರವು ತಲುಪಿಸಲು ಪ್ರಯತ್ನಿಸಿದ ಸುಮಾರು 137 ಹೋರಾಟಗಾರರನ್ನು ಇಸ್ರೇಲ್‌ ಬಂಧಿಸಿತ್ತು. ಶನಿವಾರ (ಅ.4) ಅವರೆಲ್ಲರನ್ನೂ ಟರ್ಕಿಗೆ ಗಡಿಪಾರು ಮಾಡಲಾಗಿದೆ.

ಟರ್ಕಿ ತಲುಪಿದ ಹೋರಾಟಗಾರರ ಪೈಕಿ ಇಬ್ಬರು, ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರನ್ನು ಬಂಧನದ ಸಮಯದಲ್ಲಿ ಇಸ್ರೇಲ್ ಸೇನೆ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಹೊಸ ಆರೋಪಗಳ ಬಗ್ಗೆ ಇಸ್ರೇಲಿ ನಾಯಕರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಅವರ ವಿದೇಶಾಂಗ ಸಚಿವಾಲಯವು ಬಂಧಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂಬ ವರದಿಗಳು ‘ಸಂಪೂರ್ಣ ಸುಳ್ಳು’ ಎಂದಿದೆ.

ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣದ ತಲುಪಿದ ಹೋರಾಟಗಾರರಲ್ಲಿ 36 ಟರ್ಕಿಶ್ ಪ್ರಜೆಗಳು, ಅಮೆರಿಕ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಅಲ್ಜೀರಿಯಾ, ಮೊರಾಕೊ, ಇಟಲಿ, ಕುವೈತ್, ಲಿಬಿಯಾ, ಮಲೇಷ್ಯಾ, ಮಾರಿಟಾನಿಯಾ, ಸ್ವಿಟ್ಜರ್ಲೆಂಡ್, ಟುನೀಶಿಯಾ ಮತ್ತು ಜೋರ್ಡಾನ್ ನಾಗರಿಕರು ಸೇರಿದ್ದಾರೆ ಎಂದು ಟರ್ಕಿಶ್ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ಗ್ರೇಟಾ ಥನ್‌ಬರ್ಗ್ ಅವರನ್ನು ‘ಭಯಾನಕವಾಗಿ ನಡೆಸಿಕೊಂಡರು’- ಹೋರಾಟಗಾರರ ಆರೋಪ

ಗ್ರೇಟಾ ಥನ್‌ಬರ್ಗ್ ಅವರನ್ನು ಇಸ್ರೇಲ್ ಸೇನೆ ಕೆಟ್ಟದ್ದಾಗಿ ನಡೆಸಿಕೊಂಡಿದೆ. ಆಕೆಯ ಕೂದಳು ಹಿಡಿದು ಎಳೆದಾಡಿದ್ದಾರೆ. ಇಸ್ರೇಲ್ ಧ್ವಜ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೋರಾಟಗಾರರಾದ ಮಲೇಷ್ಯಾದ ಪ್ರಜೆ ಹಜ್ವಾನಿ ಹೆಲ್ಮಿ ಮತ್ತು ಅಮೆರಿಕನ್ ಪ್ರಜೆ ವಿಂಡ್‌ಫೀಲ್ಡ್ ಬೀವರ್ ಶನಿವಾರ ಇಸ್ತಾಂಬುಲ್ ವಿಮಾನ ನಿಲ್ದಾಣ ತಲುಪಿದಾಗ ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಇಸ್ರೇಲ್ ನಮ್ಮನ್ನು ಬಂಧಿಸಿದ್ದ ವೇಳೆ ಪ್ರಾಣಿಗಳಂತೆ ನಡೆಸಿಕೊಂಡಿದೆ. ಶುದ್ದ ಆಹಾರ, ನೀರು ಒದಗಿಸಿಲ್ಲ. ನಮ್ಮಲ್ಲಿದ್ದ ಔಷಧ ಮತ್ತು ಇತರ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು 28 ವರ್ಷದ ಹೆಲ್ಮಿ ಹೇಳಿದ್ದಾರೆ.

ಇಸ್ರೇಲ್‌ನ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಬಂದಾಗ ತನ್ನನ್ನು ಕೋಣೆಗೆ ತಳ್ಳಲಾಯಿತು. ಗ್ರೇಟಾ ಥನ್‌ಬರ್ಗ್ ಅವರನ್ನು ಭಯಾನಕವಾಗಿ ಮತ್ತು ಪ್ರೊಪಗಂಡವಾಗಿ ನಡೆಸಿಕೊಂಡರು ಎಂದು 43 ವರ್ಷದ ಬೀವರ್ ಆರೋಪಿಸಿದ್ದಾರೆ.

ಗಾಝಾಗೆ ನೆರವು ಹೊತ್ತು ಸಾಗಿದ್ದ ಸುಮಾರು ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ತಂಡದ 40 ಬೋಟ್‌ಗಳನ್ನು ತಡೆದು, ಅವುಗಳಲ್ಲಿ ಇದ್ದ ಸುಮಾರು 450ಕ್ಕೂ ಹೆಚ್ಚು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿರುವುದಕ್ಕೆ ಜಾಗತಿಕ ಖಂಡನೆ ವ್ಯಕ್ತವಾಗಿದೆ.

ಬಂಧಿತ ಎಲ್ಲಾ ಮಾನವ ಹಕ್ಕು ಕಾರ್ಯಕರ್ತರು ಸುರಕ್ಷಿತ ಮತ್ತು ಉತ್ತಮ ಆರೋಗ್ಯದಲ್ಲಿದ್ದಾರೆ. ಇನ್ನುಳಿದವರನ್ನು ಸಾಧ್ಯವಾದಷ್ಟು ಬೇಗ ಗಡಿಪಾರು ಮಾಡಲಾಗುವುದು ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿದೆ.

ಪ್ರತ್ಯೇಕ ಪೋಸ್ಟ್‌ನಲ್ಲಿ, ಕೆಲವು ಫ್ಲೋಟಿಲ್ಲಾ ಸದಸ್ಯರು ದಾಖಲೆಗಳನ್ನು ಒದಗಿಸದೆ ಗಡಿಪಾರು ಪ್ರಕ್ರಿಯೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದೆ. ಈ ಆರೋಪವನ್ನು ನಾವು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ತಿಳಿಸಿದೆ.

ದೌರ್ಜನ್ಯದ ಆರೋಪಗಳನ್ನು ತಳ್ಳಿ ಹಾಕಿದ ಇಸ್ರೇಲ್

ಟರ್ಕಿಶ್ ಏರ್‌ಲೈನ್ಸ್ ವಿಮಾನದಲ್ಲಿ 26 ಇಟಾಲಿಯನ್ನರಿದ್ದರು, ಇನ್ನೂ 15 ಜನರನ್ನು ಇಸ್ರೇಲ್‌ನಲ್ಲಿ ಬಂಧಿಸಲಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಇತರ ರಾಷ್ಟ್ರಗಳ ಹೋರಾಟಗಾರರೊಂದಿಗೆ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ ಎಂದು ಇಟಲಿಯ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಹೇಳಿದ್ದಾರೆ.

ಉಳಿದ ನಮ್ಮ ಪ್ರಜೆಗಳನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೊಮ್ಮೆ ಟೆಲ್ ಅವೀವ್‌ನಲ್ಲಿರುವ ಇಟಾಲಿಯನ್ ರಾಯಭಾರ ಕಚೇರಿಗೆ ಸೂಚನೆಗಳನ್ನು ನೀಡಿದ್ದೇನೆ ಎಂದು ತಜಾನಿ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಗ್ಲೋಬಲ್ ಫ್ಲೋಟಿಲ್ಲಾದಲ್ಲಿದ್ದ ಇಟಾಲಿಯನ್ನರ ಮೊದಲ ಗುಂಪು (ನಾಲ್ವರು ಸಂಸದರು) ಶುಕ್ರವಾರ ರೋಮ್‌ ತಲುಪಿದ್ದಾರೆ ಎಂದು ರಾಯಿಟರ್ಸ್ ತಿಳಿಸಿದೆ.

“ಕಾನೂನುಬದ್ಧವಾಗಿ ವರ್ತಿಸಿದವರು ಬೋಟ್‌ಗಳಲ್ಲಿ ಇದ್ದವರು, ಕಾನೂನುಬಾಹಿರವಾಗಿ ವರ್ತಿಸಿದವರು ಗಾಝಾಗೆ ಮಾನವೀಯ ನೆರವು ತಲುಪದಂತೆ ತಡೆದವರು” ಎಂದು ಫ್ಲೋಟಿಲ್ಲಾದ ಭಾಗವಾಗಿದ್ದ ಇಟಾಲಿಯನ್ ಸಂಸದರಲ್ಲಿ ಒಬ್ಬರಾದ ಆರ್ಟುರೊ ಸ್ಕಾಟೊ ರೋಮ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ನಮ್ಮನ್ನು ಕ್ರೂರವಾಗಿ ತಡೆಹಿಡಿಯಲಾಯಿತು … ಕ್ರೂರವಾಗಿ ಒತ್ತೆಯಾಳಾಗಿ ಇರಿಸಲಾಯಿತು” ಎಂದು ಇಟಲಿಯ ಮತ್ತೊಬ್ಬ ಸಂಸದೆ ಬೆನೆಡೆಟ್ಟಾ ಸ್ಕುಡೆರಿ ಆರೋಪಿಸಿದ್ದಾರೆ.

ಫ್ಲೋಟಿಲ್ಲಾ ಸದಸ್ಯರಿಗೆ ಕಾನೂನು ನೆರವು ನೀಡುವ ಇಸ್ರೇಲಿ ಗುಂಪಿನ ಅದಾಲಾ ಪ್ರಕಾರ, ಕೆಲವು ಬಂಧಿತರಿಗೆ ವಕೀಲರು, ನೀರು, ಔಷಧಿಗಳು ಮತ್ತು ಶೌಚಾಲಯಗಳಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಕೆಲವು ಹೋರಾಟಗಾರರು ‘ಫ್ರೀ ಪ್ಯಾಲೆಸ್ಟೈನ್’ ಎಂದು ಘೋಷಣೆ ಕೂಗಿದ ನಂತರ, ಅವರ ಕೈಗಳನ್ನು ಜಿಪ್-ಟೈ (ಕೇಬಲ್ ಟೈ) ಬಳಸಿ ಕಟ್ಟಿ, ಕನಿಷ್ಠ ಐದು ಗಂಟೆಗಳ ಕಾಲ ಮಂಡಿಯೂರಿ ಕುಳಿತುಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ಆದಾಲ ವಿವರಿಸಿದ್ದಾರೆ.

ದಾಳಿ ನಿಲ್ಲಿಸುವಂತೆ ಟ್ರಂಪ್ ಕರೆ ಬೆನ್ನಲ್ಲೇ ಗಾಜಾದಲ್ಲಿ ಇಸ್ರೇಲ್ ದಾಳಿ; 6 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...