Homeಮುಖಪುಟಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

- Advertisement -
- Advertisement -

ಕಾಸರಗೋಡಿನ ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಲೋತ್ಸವದ ವೇಳೆ ಗಾಝಾ ನರಮೇಧ ಕುರಿತ ವಿದ್ಯಾರ್ಥಿಗಳ ಮೂಕಾಭಿನಯ ಪ್ರದರ್ಶನವನ್ನು ಶಿಕ್ಷಕರು ತಡೆದಿರುವ ಘಟನೆ ಶುಕ್ರವಾರ (ಅ.3) ನಡೆದಿದ್ದು, ಈ ಬಗ್ಗೆ ತುರ್ತು ತನಿಖೆಗೆ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಆದೇಶಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದಿರುವ ಸಚಿವ ಶಿವನ್‌ಕುಟ್ಟಿ, “ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ವಿರುದ್ಧ ಕೇರಳವು ಯಾವಾಗಲೂ ದೃಢವಾಗಿ ನಿಂತಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಬೇಟೆಯಾಡುತ್ತಿರುವ ಮಕ್ಕಳೊಂದಿಗೆ ಕೇರಳ ನಿಲ್ಲುತ್ತದೆ” ಎಂದು ತಿಳಿಸಿದ್ದಾರೆ.

“ಪ್ಯಾಲೆಸ್ತೀನ್ ವಿಷಯದ ಕುರಿತ ಮೂಕಾಭಿನಯ ಪ್ರದರ್ಶನವನ್ನು ತಡೆಯಲು ಅಧಿಕಾರ ಕೊಟ್ಟವರು ಯಾರು? ಎಂದು ಪ್ರಶ್ನಿಸಿರುವ ಸಚಿವರು, ಕುಂಬಳೆ ಶಾಲೆಯ ವಿದ್ಯಾರ್ಥಿಗಳಿಗೆ ವೇದಿಕೆಯ ಮೇಲೆ ಮತ್ತೆ ತಮ್ಮ ಮೂಕಾಭಿನಯ ಪ್ರದರ್ಶಿಸಲು ಅವಕಾಶ ನೀಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬಸೇಕರ್ ಅವರು ಘಟನೆಯ ಕುರಿತು ಜಿಲ್ಲಾ ಪೊಲೀಸ್ ಮತ್ತು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಂದ ವರದಿಗಳನ್ನು ಕೇಳಿದ್ದಾರೆ.

ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಕಲೋತ್ಸವ’ವನ್ನು ಶಿಕ್ಷಕರು ಮೂಕಾಭಿನಯ ಪ್ರದರ್ಶನ ತಡೆದ ಹಿನ್ನೆಲೆ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಶಿಕ್ಷಕರ ನಡೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಾದ ಎಂಎಸ್‌ಎಫ್‌ ಮತ್ತು ಎಸ್‌ಎಫ್‌ಐ ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿವೆ.

ಇಸ್ರೇಲ್‌ ಬಾಂಬ್ ದಾಳಿಗೆ ಗಾಝಾದ ಅಮಾಯಕ ಕಂದಮ್ಮವೊಂದು ಬಲಿಯಾಗುವುದನ್ನು ಮತ್ತು ಗಾಝಾದ ಮಕ್ಕಳ ನೋವನ್ನು ಮೂಕಾಭಿನಯದ ಮೂಲಕ ವಿದ್ಯಾರ್ಥಿಗಳು ಪ್ರದರ್ಶಿಸುತ್ತಿದ್ದರು. ಅರ್ಧ ಪ್ರದರ್ಶನ ಮುಗಿಯುವಾಗ ಶಿಕ್ಷಕರೊಬ್ಬರು ಹಠಾತ್ ಪರದೆ ಎಳೆಸಿದ್ದಾರೆ. ಆದರೂ, ವಿದ್ಯಾರ್ಥಿಗಳು ಪ್ಯಾಲೆಸ್ತೀನ್‌ ಜೊತೆ ಒಗ್ಗಟ್ಟು ಪ್ರದರ್ಶಿಸುವ ಪೋಸ್ಟರ್ ಮತ್ತು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ್ದಾರೆ.

ಶಿಕ್ಷಕನ ನಡೆ ಖಂಡಿಸಿ ವೇದಿಕೆ ಮುಂಭಾಗದಲ್ಲಿದ್ದ ವಿದ್ಯಾರ್ಥಿಗಳು ಕೂಡ ವೇದಿಕೆ ಬಳಿಗೆ ತೆರಳಿ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ್ದರು.

“ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳು ಮೂಕಾಭಿನಯ ಪ್ರದರ್ಶನ ಮಾಡಿದ್ದಾರೆ. ಅವರು ಜಿಲ್ಲಾ ಕ್ರೀಡಾಕೂಟ ಇದ್ದ ಕಾರಣ ಒಂದು ದಿನ ಮೊದಲೇ ಈ ಪ್ರದರ್ಶನ ನೀಡಲು ಅವಕಾಶ ಕೇಳಿದ್ದರು. ಈ ಪ್ರದರ್ಶನದಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದರು ಮತ್ತು ಮೃದು ಆಟಿಕೆ, ದುಃಖದಲ್ಲಿರುವ ಪ್ಯಾಲೆಸ್ತೀನ್ ತಾಯಿಯ ಚಿತ್ರದಂತಹ ವಸ್ತುಗಳನ್ನು ಬಳಸಿದ್ದರು. ಇವುಗಳು ಮೂಕಾಭಿನಯ ಪ್ರದರ್ಶನ ಸ್ಪರ್ಧೆಯ ನಿಯಮಗಳಿಗೆ ವಿರುದ್ದವಾಗಿ” ಎಂದು ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ವಿ.ಆರ್ ಸಮರ್ಥಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಆಯೋಜಕರು ಆರಂಭದಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ಅವಕಾಶ ನೀಡಿದ್ದರು. ಆದರೆ, ಭಾವಚಿತ್ರವನ್ನು ಪ್ರದರ್ಶಿಸಿದಾಗ ಪರದೆಯನ್ನು ಇಳಿಸಲಾಯಿತು, ಇದು ವಿವಾದಕ್ಕೆ ಕಾರಣವಾಯಿತು ಎಂದು ವರದಿಗಳು ಹೇಳಿವೆ.

ಶಾಲೆಯಲ್ಲಿ ನಡೆದ ಘಟನೆಯನ್ನು ತಪ್ಪಾಗಿ ಚಿತ್ರಿಸಲಾಗಿದೆ. ಅದನ್ನು ಆಧಾರವಾಗಿಟ್ಟುಕೊಂಡು ವಿದ್ಯಾರ್ಥಿ ಸಂಘಟನೆಗಳು ಮತ್ತು ಸರ್ಕಾರ ಪ್ರತಿಕ್ರಿಯಿಸಿದೆ ಎಂದು ಶಾಲೆಯ ಶಿಕ್ಷಕರು ಹೇಳಿದ್ದಾರೆ.

ಮುಸ್ಲಿಂ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ವಿದ್ಯಾರ್ಥಿ ಒಕ್ಕೂಟದ (ಎಂಎಸ್‌ಎಫ್‌) ಸದಸ್ಯರು ಶುಕ್ರವಾರ ಸಂಜೆಯೇ ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪರದೆ ಇಳಿಸಿದ ಇಬ್ಬರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಪೊಲೀಸರು ಮಧ್ಯಪ್ರವೇಶಿಸಿದ್ದರು.

ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವವರೆಗೆ ಶಾಲೆಯಿಂದ ಕದಲುವುದಿಲ್ಲ ಎಂದು ಎಂಎಸ್‌ಎಫ್ ನಾಯಕರು ಪಟ್ಟು ಹಿಡಿದು ಕುಳಿತಿದ್ದರು. ಪರಿಸ್ಥಿತಿ ಹತೋಟಿಗೆ ತರಲು ಕುಂಬಳೆ ಪೊಲೀಸರು ಕೆಲ ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಕೂಡ ಸ್ಥಳಕ್ಕೆ ಭೇಟಿ ಕೊಟ್ಟಿದ್ದರು.

ನಂತರ, ಕೇರಳದ ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ವಿಭಾಗವಾದ ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತ್ತು. ಎಸ್‌ಡಿಪಿಐ ಕೂಡ ಶಾಲೆಯ ಹೊರಗೆ ಪ್ರತಿಭಟನೆ ಹಮ್ಮಿಕೊಂಡಿತ್ತು.

ಆರೋಪಿ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಕರು ಮತ್ತು ಪೋಷಕರ ಒಕ್ಕೂಟ (ಪಿಟಿಎ) ಅಧ್ಯಕ್ಷರು ತಿಳಿಸಿದ್ದಾರೆ. ಮೂಕಾಭಿನಯ ಸೇರಿದಂತೆ ಇತರ ಸ್ಪರ್ಥೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ದೇಶದ್ರೋಹದ ಕೃತ್ಯವಲ್ಲ, ಪ್ಯಾಲೆಸ್ತೀನ್‌ ಜೊತೆಗಿನ ಒಗ್ಗಟ್ಟಿನ ಸಂಕೇತವಾಗಿದೆ” ಎಂದು ಒತ್ತಿ ಹೇಳಿರುವ ಪಿಟಿಎ ಅಧ್ಯಕ್ಷರು, ಯುವಜನೋತ್ಸವಗಳು ಪ್ರಸ್ತುತ ಮತ್ತು ಸಮಕಾಲೀನ ವಿಷಯಗಳನ್ನು ಒಳಗೊಂಡಿರುತ್ತವೆ ಎಂದಿದ್ದಾರೆ.

ಕುಂಬಳೆ ಘಟನೆಯ ಒಂದು ದಿನ ಮೊದಲು ಕಣ್ಣೂರಿನಲ್ಲಿ ತಲಶ್ಶೇರಿಯ ಅಂಚರಕಂಡಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು, ಕೋಲ್ಕಲಿ (ಜಾನಪದ ಕಲೆ) ಪ್ರದರ್ಶನದ ವೇಳೆ ಪ್ಯಾಲೆಸ್ತೀನ್‌ ಪರ ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕಾಗಿ ಅವರ ಪ್ರದರ್ಶನವನ್ನು ಮಧ್ಯದಲ್ಲಿಯೇ ನಿಲ್ಲಿಸಲಾಗಿತ್ತು ಎಂದು ವರದಿಯಾಗಿದೆ.

‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...