Homeಅಂತರಾಷ್ಟ್ರೀಯಗಾಝಾದಲ್ಲಿ ಇಸ್ರೇಲ್ ನರಮೇಧ ಖಂಡಿಸಿ ಯುರೋಪಿನಾದ್ಯಂತ ಪ್ರತಿಭಟನೆ: ಲಕ್ಷಾಂತರ ಜನರು ಭಾಗಿ

ಗಾಝಾದಲ್ಲಿ ಇಸ್ರೇಲ್ ನರಮೇಧ ಖಂಡಿಸಿ ಯುರೋಪಿನಾದ್ಯಂತ ಪ್ರತಿಭಟನೆ: ಲಕ್ಷಾಂತರ ಜನರು ಭಾಗಿ

- Advertisement -
- Advertisement -

ಗಾಝಾಗೆ ಮಾನವೀಯ ನೆರವು ಹೊತ್ತು ಸಾಗಿದ್ದ ‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಬೋಟ್‌ಗಳನ್ನು ತಡೆದು, ಹೋರಾಟಗಾರರನ್ನು ಬಂಧಿಸಿದ ಬಳಿಕ, ಜಗತ್ತಿನಾದ್ಯಂತ ಇಸ್ರೇಲ್‌ ವಿರುದ್ದ ಆಕ್ರೋಶ ಭುಗಿಲೆದ್ದಿದೆ.

ಪ್ರಮುಖವಾಗಿ ಯುರೋಪ್‌ನಾದ್ಯಂತ ಕಳೆದ ನಾಲ್ಕು ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಲಕ್ಷಾಂತರ ಜನರು ಪ್ರತಿಭಟನೆಗಳಲ್ಲಿ ಭಾಗವಹಿಸಿ, ‘ಗಾಝಾ ಮೇಲಿನ ಆಕ್ರಮಣವನ್ನು ತಕ್ಷಣ ನಿಲ್ಲಿಸಬೇಕು ಮತ್ತು ಬಂಧಿತ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ರೋಮ್‌ ನಗರದಲ್ಲಿ ಸತತ ನಾಲ್ಕನೇ ದಿನವಾದ ಶನಿವಾರ (ಅ.4) ನಡೆದ ಪ್ರತಿಭಟನೆಗಳಲ್ಲಿ 250,000 ಜನರು ಭಾಗವಹಿಸಿದ್ದರು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅಲ್-ಜಝೀರಾ ವರದಿ ಮಾಡಿದೆ.

ಇಟಲಿ ರಾಜಧಾನಿಯಲ್ಲಿ ನಡೆದ ಪ್ರತಿಭಟನೆಯಲ್ಲಿ, ಮಕ್ಕಳು, ದೊಡ್ಡವರು ಎನ್ನದೆ ಕುಟುಂಬಗಳೇ ಭಾಗವಹಿಸಿ, “ನಾವೆಲ್ಲರೂ ಪ್ಯಾಲೆಸ್ತೀನಿಯರು”, “ಫ್ರೀ ಪ್ಯಾಲೆಸ್ಟೈನ್” ಮತ್ತು “ನರಮೇಧವನ್ನು ನಿಲ್ಲಿಸಿ” ಇತ್ಯಾದಿ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ಅನೇಕರು ಪ್ಯಾಲೆಸ್ತೀನ್ ಧ್ವಜಗಳನ್ನು ಹಿಡಿದಿದ್ದರು ಮತ್ತು ಕಪ್ಪು-ಬಿಳಿ ಚೌಕವಿನ್ಯಾಸದ ಕೆಫಿಯೆ ಶಾಲುಗಳನ್ನು ಧರಿಸಿದ್ದರು ಎಂದು ವರದಿ ವಿವರಿಸಿದೆ.

ಸ್ಪೇನ್‌ನ ಬಾರ್ಸಿಲೋನಾದಲ್ಲಿ ಸುಮಾರು 70,000 ಜನರು ಪ್ಯಾಲೆಸ್ತೀನ್ ಪರ ಬೀದಿಗಿಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಯಾಡ್ರಿಡ್ ಸರ್ಕಾರವು ರಾಜಧಾನಿಯಲ್ಲಿ ಸುಮಾರು 92,000 ಜನರು ಮೆರವಣಿಗೆ ನಡೆಸಿದ್ದಾರೆ ಎಂದು ಹೇಳಿದೆ.

ಮಾರ್ಟಾ ಕ್ಯಾರಾಂಜಾ ಎಂಬ 65 ವರ್ಷದ ವ್ಯಕ್ತಿ, ಸ್ಪೇನ್‌ನ ಬಾರ್ಸಿಲೋನಾದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವರು ಪ್ಯಾಲೆಸ್ತೀನ್ ಧ್ವಜವನ್ನು ತಮ್ಮ ಬೆನ್ನಿಗೆ ಕಟ್ಟಿಕೊಂಡು ಗಾಝಾ ಜನತೆಗೆ ಬೆಂಬಲ ವ್ಯಕ್ತಪಡಿಸಿದರು. ಇಸ್ರೇಲ್‌ನ ನೀತಿಗಳು ಹಲವು ವರ್ಷಗಳಿಂದ ತಪ್ಪಾಗಿವೆ ಎಂದು ಟೀಕಿಸಿದ ಅವರು, ಈ ಅನ್ಯಾಯದ ವಿರುದ್ಧ ಧ್ವನಿಯೆತ್ತಲು ಜನರು ಬೀದಿಗಿಳಿಯಬೇಕೆಂದು ಕರೆ ನೀಡಿದರು ಎಂದು ಅಲ್‌-ಜಝೀರಾ ವರದಿ ವಿವರಿಸಿದೆ.

ಐರ್ಲೆಂಡ್‌ನ ರಾಜಧಾನಿ ಡಬ್ಲಿನ್‌ನ ಕೇಂದ್ರ ಭಾಗದಲ್ಲಿ ನಡೆದ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಎರಡು ವರ್ಷಗಳಿಂದ ಇಸ್ರೇಲ್ ಗಾಝಾದಲ್ಲಿ ‘ನರಮೇಧ’ ನಡೆಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಪೇನ್ ಜೊತೆಗೆ ಐರ್ಲೆಂಡ್‌ ಕೂಡ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣವನ್ನು ಖಂಡಿಸುವ ಯುರೋಪಿನ ಪ್ರಮುಖ ದೇಶಗಳಲ್ಲಿ ಒಂದಾಗಿದೆ.

ಐರ್ಲೆಂಡ್‌ ಪ್ರತಿಭಟನೆಯಲ್ಲಿ ಭಾಷಣಕಾರರು ಇಸ್ರೇಲ್‌ ಮೇಲೆ ಆರ್ಥಿಕ ಮತ್ತು ರಾಜಕೀಯ ನಿರ್ಬಂಧಗಳನ್ನು ವಿಧಿಸಬೇಕೆಂದು, ಗಾಝಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ತಕ್ಷಣ ಕೊನೆಗೊಳಿಸಬೇಕೆಂದು ಮತ್ತು ಯಾವುದೇ ರೀತಿಯ ಕದನ ವಿರಾಮ ಒಪ್ಪಂದದಲ್ಲಿ ಪ್ಯಾಲೆಸ್ತೀನ್‌ನವರನ್ನು ಸಕ್ರಿಯವಾಗಿ ಒಳಗೊಳ್ಳಿಸಬೇಕೆಂದು ಒತ್ತಾಯಿಸಿದ್ದಾರೆ.

ಲಂಡನ್‌ನಲ್ಲಿ ‘ಪ್ಯಾಲೆಸ್ಟೈನ್ ಆಕ್ಷನ್’ ಎಂಬ ನಿಷೇಧಿತ ಗುಂಪನ್ನು ಬೆಂಬಲಿಸಿ ಸಭೆ ಸೇರಿದ್ದ ಕನಿಷ್ಠ 442 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪ್ಯಾರಿಸ್‌ನಲ್ಲಿ ಸುಮಾರು 10,000 ಜನರು ಪ್ಯಾಲೆಸ್ತೀನ್ ಪರ ಪ್ರತಿಭಟನೆಗೆ ಒಟ್ಟುಗೂಡಿದ್ದರು. ಸುಮುದ್ ಫ್ಲೊಟಿಲ್ಲಾದ ಫ್ರೆಂಚ್ ತಂಡದ ವಕ್ತಾರೆ ಹೆಲೆನ್ ಕೊರೊನ್ ಮಾತನಾಡಿ, “ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ” ಎಂದು ಘೋಷಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಸುಮುದ್ ಪ್ಲೋಟಿಲ್ಲಾವನ್ನು ಇಸ್ರೇಲ್‌ ತಡೆದಿರಬಹುದು. ಇಷ್ಟಕ್ಕೆ ನಾವು ಸುಮ್ಮನಾಗುವುದಿಲ್ಲ, ಇನ್ನೊಂದು ಫ್ಲೋಟಿಲ್ಲಾ ಹೋಗಲಿದೆ. ಗಾಝಾ ಆಕ್ರಮಣದಿಂದ ಮುಕ್ತವಾಗಿ ಜನರಿಗೆ ನೆರವು ತಲುಪುವವರೆಗೆ ನಮ್ಮ ಪ್ರಯತ್ನ ಮುಂದುವರಿಯುತ್ತದೆ” ಎಂದು ಹೆಲೆನ್ ಕೊರೊನ್ ಹೇಳಿದ್ದಾರೆ.

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರ ಬಲಪಂಥೀಯ ಸರ್ಕಾರವು ಗಾಝಾದ ವಿಷಯದಲ್ಲಿ ಯಾವುದೇ ಮಹತ್ವದ ಕ್ರಮ ಕೈಗೊಳ್ಳದಿರುವುದಕ್ಕೆ ಜನರ ಟೀಕೆಯನ್ನು ಎದುರಿಸುತ್ತಿದ್ದಾರೆ.

ಈ ನಡುವೆ ಶನಿವಾರ, ಮೆಲೋನಿ ಅವರು ರೋಮ್‌ನ ಪ್ರಮುಖ ರೈಲ್ವೆ ನಿಲ್ದಾಣದ ಮುಂದಿರುವ ಪೋಪ್ ಜಾನ್ ಪಾಲ್ II ಅವರ ಪ್ರತಿಮೆಯನ್ನು ಪ್ರತಿಭಟನಾಕಾರರು ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಿದ್ದು, ಇದು ನಾಚಿಕೆಗೇಡಿನ ಕೃತ್ಯ ಎಂದಿದ್ದಾರೆ. ಪ್ರತಿಭಟನಾಕಾರರ ವರ್ತನೆಯನ್ನು ಖಂಡಿಸಿದ್ದಾರೆ.

ಸೆಪ್ಟೆಂಬರ್ 14 ರಂದು, ಸ್ಪೇನ್‌ನ ರಾಜಧಾನಿಯಲ್ಲಿ ನಡೆಯುತ್ತಿದ್ದ ‘ವುಎಲ್ಟಾ ಎ ಎಸ್ಪಾನಾ’ ಎಂಬ ಪ್ರಮುಖ ಸೈಕ್ಲಿಂಗ್ ರೇಸ್‌ನ ಕೊನೆಯ ಹಂತವನ್ನು ಸುಮಾರು 100,000 ಪ್ಯಾಲೆಸ್ತೀನ್ ಬೆಂಬಲಿಗ ಪ್ರತಿಭಟನಾಕಾರರು ತಡೆದಿದ್ದರು. ರೇಸ್‌ನಲ್ಲಿ ಇಸ್ರೇಲಿ ತಂಡ ಭಾಗವಹಿಸಿತ್ತು ಎನ್ನುವುದು ಇದಕ್ಕೆ ಕಾರಣ.

ಸ್ಪೇನ್‌ ಪ್ರಧಾನಿ ಪೆಡ್ರೊ ಸಾಂಚೆಜ್ ಅವರು ಗಾಝಾದಲ್ಲಿ ಆಕ್ರಮಣ ನಡೆಸುತ್ತಿರುವ ಹಿನ್ನೆಲೆ, ಇಸ್ರೇಲ್‌ ಅನ್ನು ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಿಂದ ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ. ಉಕ್ರೇನ್‌ ಮೇಲಿನ ಆಕ್ರಮಣದ ಕಾರಣಕ್ಕೆ ರಷ್ಯಾವನ್ನು ಕ್ರೀಡೆಗಳಿಂದ ಹೊರಗಿಟ್ಟಿರುವಂತೆಯೇ, ಇಸ್ರೇಲ್‌ಗೂ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸೆಪ್ಟೆಂಬರ್‌ನಲ್ಲಿ, ಆಕ್ರಮಿತ ವೆಸ್ಟ್ ಬ್ಯಾಂಕ್‌ನಲ್ಲಿರುವ ಇಸ್ರೇಲಿ ವಸಾಹತುಗಳಿಂದ ಆಮದುಗಳನ್ನು ನಿಷೇಧಿಸುವುದಾಗಿ ಸ್ಪೇನ್ ಘೋಷಿಸಿತ್ತು. ಆಕ್ರಮಿತ ವೆಸ್ಟ್ ಬ್ಯಾಂಕ್‌ನಿಂದ ಇಸ್ರೇಲ್‌ನ ರಫ್ತು ಅಂತಾರಾಷ್ಟ್ರೀಯ ಕಾನೂನಿನಡಿ ಅಕ್ರಮವೆಂದು ಪರಿಗಣಿಸಲ್ಪಟ್ಟಿದೆ ಎಂದಿತ್ತು.

ಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...