Homeಮುಖಪುಟಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

- Advertisement -
- Advertisement -

ದುರ್ಗಾ ಮೂರ್ತಿ ಮೆರವಣಿಗೆ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಯೋಜಿಸಿದ್ದ ಬೈಕ್ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆ, ಕೋಮು ಉದ್ವಿಗ್ನತೆ ಹೆಚ್ಚಾಗುವುದನ್ನು ತಡೆಯಲು ಅಧಿಕಾರಿಗಳು ಭಾನುವಾರ (ಅ. 5) ರಾತ್ರಿಯಿಂದ ಒಡಿಶಾದ ಕಟಕ್‌ ನಗರದ ಹಲವು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 36 ಗಂಟೆಗಳ ಕರ್ಫ್ಯೂ ವಿಧಿಸಿದ್ದಾರೆ.

ಹಿಂಸಾಚಾರದ ಘಟನೆಗಳಲ್ಲಿ 25 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ವಿಎಚ್‌ಪಿ ಸೋಮವಾರ (ಅ.6)12 ಗಂಟೆಗಳ ಬಂದ್‌ಗೆ ಕರೆ ನೀಡಿದೆ ಎಂದು ವರದಿಯಾಗಿದೆ.

“ಶುಕ್ರವಾರ (ಅ. 3) ಸಂಜೆ ದುರ್ಗಾ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳ ನಡುವೆ ವೈಯಕ್ತಿಕ ಜಗಳ ನಡೆದಿತ್ತು. ನಂತರ, ನಾಲ್ವರು ದುಷ್ಕರ್ಮಿಗಳನ್ನು ಬಂಧಿಸಿ ಶನಿವಾರ (ಅ. 4) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ” ಎಂದು ಭಾನುವಾರ (ಅ. 5) ಸಂಜೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಪೊಲೀಸ್ ಆಯುಕ್ತ ಎಸ್. ದೇವ್ ದತ್ತ ಸಿಂಗ್ ಹೇಳಿದ್ದಾರೆ.

“ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಬಗ್ಗೆ ಆತಂಕ ಇದ್ದಿದ್ದರಿಂದ ವಿಎಚ್‌ಪಿ ಭಾನುವಾರ ಕಟಕ್‌ನಲ್ಲಿ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಅನುಮತಿ ನೀಡಿರಲಿಲ್ಲ” ಎಂದು ಅವರು ತಿಳಿಸಿದ್ದಾರೆ.

“ಪೊಲೀಸರು ರ‍್ಯಾಲಿಯನ್ನು ತಡೆಯಲು ಪ್ರಯತ್ನಿಸಿದಾಗ ಉದ್ವಿಗ್ನತೆ ಉಂಟಾಯಿತು. ರ‍್ಯಾಲಿಯು ಕೆಲವು ಸೂಕ್ಷ್ಮ ಪ್ರದೇಶಗಳ ಕಡೆಗೆ ಸಾಗುತ್ತಿತ್ತು, ಅಲ್ಲಿ ಕೋಮು ಉದ್ವಿಗ್ನತೆ ಭುಗಿಲೇಳಬಹುದು ಎಂದು ಪೊಲೀಸರು ದೃಢವಾದ ನಿಲುವನ್ನು ತೆಗೆದುಕೊಂಡು ರ‍್ಯಾಲಿ ಮುಂದೆ ಹೋಗದಂತೆ ತಡೆದರು. ಈ ವೇಳೆ ರ‍್ಯಾಲಿಯಲ್ಲಿದ್ದವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದರು. ಇದರಿಂದ ಇಪ್ಪತ್ತೈದು ಸಿಬ್ಬಂದಿ ಗಾಯಗೊಂಡರು, ಅವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ” ಎಂದು ದೇವ್ ದತ್ತ ಸಿಂಗ್ ವಿವರಿಸಿದ್ದಾರೆ.

“ದುಷ್ಕರ್ಮಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ ರಬ್ಬರ್ ಗುಂಡುಗಳನ್ನು ಹಾರಿಸಿದರು. ಪ್ರಸ್ತುತ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ” ಎಂದು ಅವರು ಹೇಳಿದ್ದಾರೆ.

ಅಗತ್ಯ ಸೇವೆಗಳಿಗೆ ವಿನಾಯಿತಿ

ಭಾನುವಾರ ರಾತ್ರಿ 10 ಗಂಟೆಯಿಂದ 36 ಗಂಟೆಗಳ ಕಾಲ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಆಯುಕ್ತರು ಘೋಷಿಸಿದ್ದಾರೆ. ಆರೋಗ್ಯ ಸೇವೆ, ಹಾಲು, ತರಕಾರಿ ಪೂರೈಕೆ, ವಿದ್ಯಾರ್ಥಿಗಳು ಮತ್ತು ಕಚೇರಿಗೆ ಹೋಗುವವರ ಸಂಚಾರ ಸೇರಿದಂತೆ ಅಗತ್ಯ ಸೇವೆಗಳಿವೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವೈ.ಬಿ. ಖುರಾನಿಯಾ ಎಚ್ಚರಿಸಿದ್ದಾರೆ. ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಸೂಕ್ತ ನಿಬಂಧನೆಗಳಡಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಹಿಂಸಾಚಾರದ ಹಿನ್ನೆಲೆ ಒಡಿಶಾ ಸರ್ಕಾರ ಕಟಕ್‌ನಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ವಿಎಚ್‌ಪಿ ಸೋಮವಾರ ಮುಂಜಾನೆಯಿಂದ ಸಂಜೆಯವರೆಗೆ ಬಂದ್‌ಗೆ ಕರೆ ನೀಡಿದೆ.

ಶಾಂತಿ ಕಾಪಾಡಲು ಸಿಎಂ ಮನವಿ

ಕಟಕ್‌ನ ವಿಶಿಷ್ಟವಾದ ಸಹೋದರತ್ವದ ಗುರುತನ್ನು ರಕ್ಷಿಸಲು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಮೋಹನ್ ಮಾಝಿ ಜನರಿಗೆ ಮನವಿ ಮಾಡಿದ್ದಾರೆ.

“ಕಟಕ್ ಸಾವಿರ ವರ್ಷಗಳಷ್ಟು ಹಳೆಯದಾದ ನಗರ, ಸಹೋದರತ್ವ ಮತ್ತು ಕೋಮು ಸೌಹಾರ್ದತೆಯ ವಿಶಿಷ್ಟ ಸಂಕೇತ. ಇತ್ತೀಚಿನ ದಿನಗಳಲ್ಲಿ ಕೆಲವು ದುಷ್ಕರ್ಮಿಗಳ ಕೃತ್ಯಗಳಿಂದಾಗಿ ನಗರದಲ್ಲಿ ಶಾಂತಿ ಭಂಗವಾಗಿದ್ದು, ಸಾಮಾನ್ಯ ನಾಗರಿಕರ ಜೀವನಕ್ಕೆ ಸಮಸ್ಯೆ ಉಂಟಾಗಿದೆ. ಸರ್ಕಾರವು ಇಂತಹ ಕಿಡಿಗೇಡಿಗಳ ಮೇಲೆ ನಿಗಾ ಇಡುತ್ತಿದೆ ಮತ್ತು ಕಾನೂನಿನ ಪ್ರಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಮಾಝಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಕಟಕ್ ನಗರ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಇತ್ತೀಚೆಗೆ ಉದ್ವಿಗ್ನತೆ ಉಂಟಾಗಿ ಹಿಂಸಾತ್ಮಕ ಘಟನೆಗಳು ನಡೆದ ನಂತರ, ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಸುಳ್ಳು ಮತ್ತು ಪ್ರಚೋದನಕಾರಿ ಸಂದೇಶಗಳನ್ನು ರವಾನಿಸುವ ಮೂಲಕ ಕೋಮು ಹಿಂಸಾಚಾರವನ್ನು ಹರಡಲು ಇಂಟರ್ನೆಟ್ ದುರುಪಯೋಗದ ಬಗ್ಗೆ ಜಿಲ್ಲಾಡಳಿತವು ಕಳವಳ ವ್ಯಕ್ತಪಡಿಸಿದೆ” ಎಂದು ರಾಜ್ಯ ಗೃಹ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆಯುವವರೆಗೂ ಜೈಲಿನಲ್ಲಿರಲು ಸಿದ್ಧ: ಸೋನಮ್ ವಾಂಗ್ಚುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...