Homeಕರ್ನಾಟಕಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನೂ ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಸೋಮವಾರ (ಅ.6) ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಹೇಳಿಕೆಗೆ  ಪ್ರತಿಕ್ರಿಯಿಸಿದ ಸಿಎಂ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನೂ ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆಯವರೆಗೆ ಶೇ.63ರಷ್ಟು ಸಮೀಕ್ಷೆ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆಯವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಕೊಪ್ಪಳದಲ್ಲಿ ಶೇ.97ರಷ್ಟು ಸಮೀಕ್ಷೆ ಪೂರ್ಣ

ಕೊಪ್ಪಳ ಜಿಲ್ಲೆಯಿಂದ ಶೇ.97ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಸಿಎಂ ಮಾಹಿತಿ ನೀಡಿದರು. ಕೊಪ್ಪಳದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನರು ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಸಿಎಂ, ಜನತೆಗೆ ಧನ್ಯವಾದ ಹೇಳಿದರು.

ಬಲ್ಡೋಟಾ ಕಾರ್ಖಾನೆ ವಿರುದ್ದ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಸರ ಮಾಲಿನ್ಯ ತಡೆಯಲು ಕ್ರಮ

ಎಂಎಸ್‌ಪಿಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿನಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲಿದೆ

ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರಲ್ಹಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.

ಲಿಂಗಾಯಿತ ಪ್ರತ್ಯೇಕ ಧರ್ಮ: ಜನರೇ ನಿಲುವೇ ನನ್ನ ನಿಲುವು

ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು? ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ಕೆಮ್ಮಿನ ಔಷಧಿ-ಎಚ್ಚರಿಕೆ ವಹಿಸುವಂತೆ ಇಲಾಖೆಗೆ ಸೂಚನೆ

ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದ ಕ್ರಮವೇನು? ಎಂಬುದಕ್ಕೆ ಉತ್ತರಿಸಿದ ಸಿಎಂ, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವಿರೋಧಿಸುವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...