Homeಮುಖಪುಟಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

ಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

- Advertisement -
- Advertisement -

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಸುದ್ದಿಯೊಂದು ಹರಿದಾಡುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಖರ್ಗೆಯವರ ಖಾಸಾ ಶಿಷ್ಯರೂ ಆಗಿರುವ ಶರಣಪ್ರಕಾಶ್ ಪಾಟೀಲ್ ಅವರು ಈ ಸಾಧ್ಯತೆಯನ್ನು ತಳ್ಳಿಹಾಕಿದ್ದಾರಾದರೂ ಹಲವು ಕಾಂಗ್ರೆಸ್ಸಿಗರೇ ಆ ಸಾಧ್ಯತೆಯನ್ನು ಬಲವಾಗಿ ನಂಬಿದ್ದಾರೆ. ಇದರ ಹಿಂದಿನ ಲಾಜಿಕ್ಕು ಈ ಸಾಧ್ಯತೆಗೆ ಪುಷ್ಠಿ ನೀಡುತ್ತಿವೆ.

ಮೊದಲನೆಯದಾಗಿ, ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಬೇಕಿರುವುದು ಕಾಂಗ್ರೆಸ್‍ಗೆ ಜೀವನ್ಮರಣದ ಪ್ರಶ್ನೆ. ಹಾಗಾಗಿ, ಗೆಲ್ಲಲೇಬೇಕು ಎಂಬ ಅನಿವಾರ್ಯತೆ ಇದ್ದುದರಿಂದ ಪಕ್ಷದಲ್ಲಿ ಗೆಲ್ಲುವವರು ಯಾರೇ ಇದ್ದರೂ ಸರಿ ತಂದು ಚುನಾವಣೆಗೆ ನಿಲ್ಲಿಸಬೇಕೆಂದು ಹೈಕಮಾಂಡ್ ಯೋಚಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆಯವರು ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ ಎಂಬುದು ಸಾಮಾನ್ಯ ಜ್ಞಾನ.

ಎರಡನೆಯದಾಗಿ, ಮಲ್ಲಿಕಾರ್ಜುನ ಖರ್ಗೆಯವರ ಮಗ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಬಾರಿ ಚಿತ್ತಾಪುರ ಕ್ಷೇತ್ರದಿಂದ ಗೆಲ್ಲುವುದು ಕಷ್ಟ ಎಂಬ ಅಭಿಪ್ರಾಯವಿದೆ. ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ವಿಶ್ವಾಸವನ್ನು ಜ್ಯೂನಿಯರ್ ಖರ್ಗೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ, ಚಿತ್ತಾಪುರ ಕ್ಷೇತ್ರದಿಂದ ತಾವೇ ನಿಂತರೆ ಈ ಎಲ್ಲಾ ಅಸಮಾಧಾನಗಳು ಇರುವುದಿಲ್ಲ. ಪಕ್ಷದ ಹಿರಿಯ, ಕಿರಿಯ ನಾಯಕರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ತಮ್ಮನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಸೀನಿಯರ್ ಖರ್ಗೆಗೂ ಇದೆ.

ಮೂರನೆಯದಾಗಿ, ಒಂದು ವೇಳೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಜೆಡಿಎಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ಅನಿವಾರ್ಯತೆ ಕಾಂಗ್ರೆಸ್ಸಿಗೆ ಬಂದರೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ದೇವೇಗೌಡರಾಗಲೀ, ಕುಮಾರಸ್ವಾಮಿಯವರಾಗಲಿ. ಸುತರಾಂ ಒಪ್ಪುವುದಿಲ್ಲ. ಅಂಥಾ ಸನ್ನಿವೇಶದಲ್ಲಿ ಖರ್ಗೆಯವರು ಮುಂಚೂಣಿಯಲ್ಲಿದ್ದರೆ ಉಭಯರಿಗೂ ಅನುಕೂಲ. ಹೀಗಾದರೆ ಒಂದೆಡೆ ದೇವೇಗೌಡರನ್ನೂ ತೃಪ್ತಿಪಡಿಸಿದಂತಾಗುತ್ತದೆ, ದಲಿತ ಮುಖ್ಯಮಂತ್ರಿಯ ಬಹುದಿನದ ಬೇಡಿಕೆಯನ್ನು ಈಡೇರಿಸಿ ದಲಿತರ ನಡುವಿನ ಬೇಸ್ ಗಟ್ಟಿಗೊಳಿಸಿದಂತಾಗುತ್ತದೆ.

ರಾಜಕೀಯದಲ್ಲಿ ಅಸಾಧ್ಯ ಎಂಬುದು ಯಾವುದೂ ಇಲ್ಲ. ಖರ್ಗೆ ಮತ್ತು ಹೈಕಮಾಂಡ್ ನಡೆಯ ಮೇಲೆ ಈ ರಾಜಕೀಯ ಲೆಕ್ಕಾಚಾರ ನಿಂತಿದೆ ಎನ್ನಲಾಗಿದೆ.

ಈ ಲೆಕ್ಕಾಚಾರ ಒಂದೆಡೆಯಾದರೆ, ಖರ್ಗೆಯವರ ಮಗನ ರಾಜಕೀಯ ಭವಿಷ್ಯವೇನು ಎಂಬುದು ಮತ್ತೊಂದು ಜಟಿಲ ಪ್ರಶ್ನೆ. ಅದಕ್ಕೂ ಒಂದು ಪರ್ಯಾಯ ಯೋಜನೆ ಸಿದ್ಧವಾಗಿದೆ. ಅದು ಗುಲ್ಬರ್ಗಾ ಗ್ರಾಮೀಣ ಕ್ಷೇತ್ರ. ಅದೂ ಕೂಡ ಚಿತ್ತಾಪುರದಂತೆಯೇ ಎಸ್‍ಸಿ ಮೀಸಲು ಕ್ಷೇತ್ರ. ಅಲ್ಲಿ ಕಳೆದ ಬಾರಿ ಬಿಜೆಪಿ, ಕೆಜೆಪಿ ಪಕ್ಷಗಳ ಮತವಿಭಜನೆಯಿಂದಾಗಿ ಕಾಂಗ್ರೆಸ್ಸಿನ ರಾಮಕೃಷ್ಣ ಗೆದ್ದಿದ್ದರು. ಅವರಿಗೆ ವಯಸ್ಸಾಗಿದೆ, ಆರೋಗ್ಯವೂ ಸರಿಯಿಲ್ಲ. ಅವರು ಈ ಬಾರಿ ಚುನಾವಣಾ ಕಣದಲ್ಲೂ ಇಲ್ಲ. ಅವರ ಮಗ ಟಿಕೆಟ್ ಆಕಾಂಕ್ಷಿಯಾಗಿದ್ದರೂ ತಂದೆಗಿದ್ದ ಜನಬೆಂಬಲ ಮಗನಿಗಿಲ್ಲ. ಹೀಗಾಗಿ, ಪ್ರಿಯಾಂಕ ಖರ್ಗೆಯನ್ನು ಅಲ್ಲಿಗೆ ತಂದರೆ ಅವರು ಒಮ್ಮತದ ಅಭ್ಯರ್ಥಿಯಾಗಿಬಿಡುತ್ತಾರೆ. ಅಲ್ಲಿ ಬಿಜೆಪಿ, ಕೆಜೆಪಿ ಒಂದಾಗಿದ್ದರೂ ಮೂವರು ಟಿಕೆಟ್ ಆಕಾಂಕ್ಷಿಗಳು ಪರಸ್ಪರ ಪೈಪೋಟಿಯ ಹಿನ್ನೆಲೆಯಲ್ಲಿ ಖರ್ಗೆ ಪುತ್ರನ ಹಾದಿ ಸುಗಮವಾಗಲಿದೆ. ರೇವುನಾಯಕ ಬೆಳಮಗಿಗೆ ಟಿಕೆಟ್ ಖಾತರಿಯಾಗಲಿದ್ದು ಉಳಿದವರು ಬಂಡಾಯವೇಳುವ ಸಾಧ್ಯತೆಯಿದೆ. ಬಿಜೆಪಿಯ ಈ ಬಂಡಾಯವನ್ನು ಉಪಯೋಗಿಸಿಕೊಳ್ಳುವುದಕ್ಕೂ ಪ್ರಿಯಾಂಕ್ ಖರ್ಗೆ ಸ್ಪರ್ಧೆ ಕಾಂಗ್ರೆಸ್ಸಿಗೆ ನೆರವಾಗಲಿದೆಯೆಂಬ ಲೆಕ್ಕಾಚಾರ ಚಾಲ್ತಿಯಲ್ಲಿದೆ. ರಾಜಕಾರಣದ ಒಳಸುಳಿಗಳೇ ಹೀಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...