Homeಮುಖಪುಟಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

ಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

- Advertisement -
- Advertisement -

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಸುದ್ದಿಯೊಂದು ಹರಿದಾಡುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಖರ್ಗೆಯವರ ಖಾಸಾ ಶಿಷ್ಯರೂ ಆಗಿರುವ ಶರಣಪ್ರಕಾಶ್ ಪಾಟೀಲ್ ಅವರು ಈ ಸಾಧ್ಯತೆಯನ್ನು ತಳ್ಳಿಹಾಕಿದ್ದಾರಾದರೂ ಹಲವು ಕಾಂಗ್ರೆಸ್ಸಿಗರೇ ಆ ಸಾಧ್ಯತೆಯನ್ನು ಬಲವಾಗಿ ನಂಬಿದ್ದಾರೆ. ಇದರ ಹಿಂದಿನ ಲಾಜಿಕ್ಕು ಈ ಸಾಧ್ಯತೆಗೆ ಪುಷ್ಠಿ ನೀಡುತ್ತಿವೆ.

ಮೊದಲನೆಯದಾಗಿ, ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಬೇಕಿರುವುದು ಕಾಂಗ್ರೆಸ್‍ಗೆ ಜೀವನ್ಮರಣದ ಪ್ರಶ್ನೆ. ಹಾಗಾಗಿ, ಗೆಲ್ಲಲೇಬೇಕು ಎಂಬ ಅನಿವಾರ್ಯತೆ ಇದ್ದುದರಿಂದ ಪಕ್ಷದಲ್ಲಿ ಗೆಲ್ಲುವವರು ಯಾರೇ ಇದ್ದರೂ ಸರಿ ತಂದು ಚುನಾವಣೆಗೆ ನಿಲ್ಲಿಸಬೇಕೆಂದು ಹೈಕಮಾಂಡ್ ಯೋಚಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆಯವರು ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ ಎಂಬುದು ಸಾಮಾನ್ಯ ಜ್ಞಾನ.

ಎರಡನೆಯದಾಗಿ, ಮಲ್ಲಿಕಾರ್ಜುನ ಖರ್ಗೆಯವರ ಮಗ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಬಾರಿ ಚಿತ್ತಾಪುರ ಕ್ಷೇತ್ರದಿಂದ ಗೆಲ್ಲುವುದು ಕಷ್ಟ ಎಂಬ ಅಭಿಪ್ರಾಯವಿದೆ. ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ವಿಶ್ವಾಸವನ್ನು ಜ್ಯೂನಿಯರ್ ಖರ್ಗೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ, ಚಿತ್ತಾಪುರ ಕ್ಷೇತ್ರದಿಂದ ತಾವೇ ನಿಂತರೆ ಈ ಎಲ್ಲಾ ಅಸಮಾಧಾನಗಳು ಇರುವುದಿಲ್ಲ. ಪಕ್ಷದ ಹಿರಿಯ, ಕಿರಿಯ ನಾಯಕರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ತಮ್ಮನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಸೀನಿಯರ್ ಖರ್ಗೆಗೂ ಇದೆ.

ಮೂರನೆಯದಾಗಿ, ಒಂದು ವೇಳೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಜೆಡಿಎಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ಅನಿವಾರ್ಯತೆ ಕಾಂಗ್ರೆಸ್ಸಿಗೆ ಬಂದರೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ದೇವೇಗೌಡರಾಗಲೀ, ಕುಮಾರಸ್ವಾಮಿಯವರಾಗಲಿ. ಸುತರಾಂ ಒಪ್ಪುವುದಿಲ್ಲ. ಅಂಥಾ ಸನ್ನಿವೇಶದಲ್ಲಿ ಖರ್ಗೆಯವರು ಮುಂಚೂಣಿಯಲ್ಲಿದ್ದರೆ ಉಭಯರಿಗೂ ಅನುಕೂಲ. ಹೀಗಾದರೆ ಒಂದೆಡೆ ದೇವೇಗೌಡರನ್ನೂ ತೃಪ್ತಿಪಡಿಸಿದಂತಾಗುತ್ತದೆ, ದಲಿತ ಮುಖ್ಯಮಂತ್ರಿಯ ಬಹುದಿನದ ಬೇಡಿಕೆಯನ್ನು ಈಡೇರಿಸಿ ದಲಿತರ ನಡುವಿನ ಬೇಸ್ ಗಟ್ಟಿಗೊಳಿಸಿದಂತಾಗುತ್ತದೆ.

ರಾಜಕೀಯದಲ್ಲಿ ಅಸಾಧ್ಯ ಎಂಬುದು ಯಾವುದೂ ಇಲ್ಲ. ಖರ್ಗೆ ಮತ್ತು ಹೈಕಮಾಂಡ್ ನಡೆಯ ಮೇಲೆ ಈ ರಾಜಕೀಯ ಲೆಕ್ಕಾಚಾರ ನಿಂತಿದೆ ಎನ್ನಲಾಗಿದೆ.

ಈ ಲೆಕ್ಕಾಚಾರ ಒಂದೆಡೆಯಾದರೆ, ಖರ್ಗೆಯವರ ಮಗನ ರಾಜಕೀಯ ಭವಿಷ್ಯವೇನು ಎಂಬುದು ಮತ್ತೊಂದು ಜಟಿಲ ಪ್ರಶ್ನೆ. ಅದಕ್ಕೂ ಒಂದು ಪರ್ಯಾಯ ಯೋಜನೆ ಸಿದ್ಧವಾಗಿದೆ. ಅದು ಗುಲ್ಬರ್ಗಾ ಗ್ರಾಮೀಣ ಕ್ಷೇತ್ರ. ಅದೂ ಕೂಡ ಚಿತ್ತಾಪುರದಂತೆಯೇ ಎಸ್‍ಸಿ ಮೀಸಲು ಕ್ಷೇತ್ರ. ಅಲ್ಲಿ ಕಳೆದ ಬಾರಿ ಬಿಜೆಪಿ, ಕೆಜೆಪಿ ಪಕ್ಷಗಳ ಮತವಿಭಜನೆಯಿಂದಾಗಿ ಕಾಂಗ್ರೆಸ್ಸಿನ ರಾಮಕೃಷ್ಣ ಗೆದ್ದಿದ್ದರು. ಅವರಿಗೆ ವಯಸ್ಸಾಗಿದೆ, ಆರೋಗ್ಯವೂ ಸರಿಯಿಲ್ಲ. ಅವರು ಈ ಬಾರಿ ಚುನಾವಣಾ ಕಣದಲ್ಲೂ ಇಲ್ಲ. ಅವರ ಮಗ ಟಿಕೆಟ್ ಆಕಾಂಕ್ಷಿಯಾಗಿದ್ದರೂ ತಂದೆಗಿದ್ದ ಜನಬೆಂಬಲ ಮಗನಿಗಿಲ್ಲ. ಹೀಗಾಗಿ, ಪ್ರಿಯಾಂಕ ಖರ್ಗೆಯನ್ನು ಅಲ್ಲಿಗೆ ತಂದರೆ ಅವರು ಒಮ್ಮತದ ಅಭ್ಯರ್ಥಿಯಾಗಿಬಿಡುತ್ತಾರೆ. ಅಲ್ಲಿ ಬಿಜೆಪಿ, ಕೆಜೆಪಿ ಒಂದಾಗಿದ್ದರೂ ಮೂವರು ಟಿಕೆಟ್ ಆಕಾಂಕ್ಷಿಗಳು ಪರಸ್ಪರ ಪೈಪೋಟಿಯ ಹಿನ್ನೆಲೆಯಲ್ಲಿ ಖರ್ಗೆ ಪುತ್ರನ ಹಾದಿ ಸುಗಮವಾಗಲಿದೆ. ರೇವುನಾಯಕ ಬೆಳಮಗಿಗೆ ಟಿಕೆಟ್ ಖಾತರಿಯಾಗಲಿದ್ದು ಉಳಿದವರು ಬಂಡಾಯವೇಳುವ ಸಾಧ್ಯತೆಯಿದೆ. ಬಿಜೆಪಿಯ ಈ ಬಂಡಾಯವನ್ನು ಉಪಯೋಗಿಸಿಕೊಳ್ಳುವುದಕ್ಕೂ ಪ್ರಿಯಾಂಕ್ ಖರ್ಗೆ ಸ್ಪರ್ಧೆ ಕಾಂಗ್ರೆಸ್ಸಿಗೆ ನೆರವಾಗಲಿದೆಯೆಂಬ ಲೆಕ್ಕಾಚಾರ ಚಾಲ್ತಿಯಲ್ಲಿದೆ. ರಾಜಕಾರಣದ ಒಳಸುಳಿಗಳೇ ಹೀಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...