Homeಮುಖಪುಟ'ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ': ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್‌ನಲ್ಲೇ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವುದನ್ನು ಹಲವು ಕ್ಷೇತ್ರಗಳ ಪ್ರಮುಖರು ತೀವ್ರವಾಗಿ ಖಂಡಿಸಿದ್ದಾರೆ.

“ಸನಾತನ ಧರ್ಮದ ಹೆಸರಲ್ಲಿ ಸಂವಿಧಾನಾತ್ಮಕವಾಗಿ ಉನ್ನತ ಹುದ್ದೆಯಲ್ಲಿರುವ ಮುಖ್ಯ ನ್ಯಾಯಾಧೀಶರಾದ ಶ್ರೀ ಬಿ ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವುದು ಖಂಡನೀಯ ಬೆಳವಣಿಗೆ” ಎಂದು ಸಚಿವ ಎಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

“ಸಂವಿಧಾನದ ಮೇಲೆ ಮಾಡಲು ಹೊರಟಿರುವ ಈ ಧಾರ್ಮಿಕ ಅಂಧತ್ವದ ಸವಾರಿಯನ್ನು ಜವಾಬ್ದಾರಿಯುತವಾದ ಪ್ರಜೆಗಳಾದ ಎಲ್ಲರೂ ಖಂಡಿಸಬೇಕು” ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಇಂದು ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿರುವುದು ನಾಚಿಕೆಗೇಡು ಮತ್ತು ಅಸಹ್ಯಕರವಾಗಿದೆ. ಇದು ನಮ್ಮ ನ್ಯಾಯಾಂಗದ ಘನತೆ ಮತ್ತು ಕಾನೂನಿನ ಆಡಳಿತದ ಮೇಲಿನ ದಾಳಿಯಾಗಿದೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.

“ಅರ್ಹತೆ, ಸಮಗ್ರತೆ ಮತ್ತು ಪರಿಶ್ರಮದ ಮೂಲಕ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ಏರಿದ ಹಾಲಿ ಮುಖ್ಯ ನ್ಯಾಯಮೂರ್ತಿಯೊಬ್ಬರನ್ನು ಈ ರೀತಿ ಗುರಿಯಾಗಿಸಿಕೊಂಡಾಗ, ಅದು ತೀವ್ರ ಆತಂಕಕಾರಿ ಸಂದೇಶವನ್ನು ರವಾನಿಸುತ್ತದೆ. ಸಂವಿಧಾನವನ್ನು ಎತ್ತಿಹಿಡಿಯಲು ಸಾಮಾಜಿಕ ಅಡೆತಡೆಗಳನ್ನು ಮುರಿದ ವ್ಯಕ್ತಿಯನ್ನು ಬೆದರಿಸುವ ಮತ್ತು ಅವಮಾನಿಸುವ ಪ್ರಯತ್ನವನ್ನು ಇದು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

“ಇಂತಹ ಬುದ್ದಿಹೀನ ಕೃತ್ಯವು ಕಳೆದ ದಶಕದಲ್ಲಿ ನಮ್ಮ ಸಮಾಜವನ್ನು ದ್ವೇಷ, ಮತಾಂಧತೆ ಮತ್ತು ಧರ್ಮಾಂಧತೆ ಹೇಗೆ ಆವರಿಸಿದೆ ಎಂಬುದನ್ನು ತೋರಿಸುತ್ತದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ನ್ಯಾಯಾಂಗದ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯ. ಬೆದರಿಕೆಯಲ್ಲ, ನ್ಯಾಯ ಮತ್ತು ತರ್ಕ ಮೇಲುಗೈ ಸಾಧಿಸಲಿ” ಎಂದು ಖರ್ಗೆ ಹೇಳಿದ್ದಾರೆ.

“ಇದು ಸಿಜೆಐ ಅವರನ್ನು ಬೆದರಿಸಲು ಬ್ರಾಹ್ಮಣ ಮನಸ್ಥಿತಿಯ ವಕೀಲರೊಬ್ಬರು ಮಾಡಿರುವ ಹೇಯ ಪ್ರಯತ್ನ. ಇದು ಕ್ರಿಮಿನಲ್ ನ್ಯಾಯಾಂಗ ನಿಂದನೆಯಾಗಿದೆ. ವಕೀಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ.

“ಸನಾತನ ವಿರೋಧಿ’ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ವಕೀಲರೊಬ್ಬರು ನ್ಯಾಯಾಲಯದಲ್ಲಿ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ಯಾವುದೇ ಕಾರಣಕ್ಕೂ ಒಪ್ಪುವಂತದ್ದಲ್ಲ. ಸಿಜೆಐ ವಿಚಾರಣೆ ವೇಳೆ ವಿಷ್ಣುವಿನ ವಿಗ್ರಹದ ಬಗ್ಗೆ ಮಾಡಿದ ಟೀಕೆಗಳು ಈ ರೀತಿಯ ಹಿಂಸಾತ್ಮಕ ಕೃತ್ಯಕ್ಕೆ ಕಾರಣವಾಗುತ್ತಿದ್ದರೆ, ಇದು ಅತ್ಯಂತ ಆತಂಕದ ವಿಷಯವಾಗಿದೆ” ಎಂದು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಹೇಳಿದ್ದಾರೆ.

“ದುರದೃಷ್ಟವಶಾತ್, ಜಾತಿ ದ್ವೇಷ ಮತ್ತು ಧಾರ್ಮಿಕ ಅಸಹಿಷ್ಣುತೆಯ ಸಂಸ್ಕೃತಿಯು ‘ಸಾಮಾನ್ಯವಾಗುತ್ತಿದೆ. ಸಾಮಾಜಿಕ ಮಾಧ್ಯಮದ ಗುಂಪುಗಳು ಹಾಗೂ ವಿಷಮಯ ಟಿವಿ ‘ವಾದ-ವಿವಾದ’ಗಳಿಂದ ಇಂತಹ ಹಿಂಸೆಯನ್ನು ಉತ್ತೇಜಿಸಲಾಗುತ್ತಿದೆ” ಎಂದಿದ್ದಾರೆ.

‘ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’: ವಕೀಲ ಶೂ ಎಸೆಯಲು ಯತ್ನಿಸಿದ ಬಗ್ಗೆ ಸಿಜೆಐ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...