Homeಮುಖಪುಟಉತ್ತರಾಖಂಡ: 'ಲವ್ ಜಿಹಾದ್' ಆರೋಪದ ಮೇಲೆ ಬಲವಂತವಾಗಿ ಸಲೂನ್ ಮುಚ್ಚಿಸಿದ ಹಿಂದುತ್ವ ಗುಂಪು

ಉತ್ತರಾಖಂಡ: ‘ಲವ್ ಜಿಹಾದ್’ ಆರೋಪದ ಮೇಲೆ ಬಲವಂತವಾಗಿ ಸಲೂನ್ ಮುಚ್ಚಿಸಿದ ಹಿಂದುತ್ವ ಗುಂಪು

- Advertisement -
- Advertisement -

ಉತ್ತರಾಖಂಡದ ಋಷಿಕೇಶದಲ್ಲಿ ಮುಸ್ಲಿಂ ಒಡೆತನದ ಯೂನಿಸೆಕ್ಸ್ ಸಲೂನ್ ಅನ್ನು ‘ಅನೈತಿಕ ಚಟುವಟಿಕೆಯ ಕೇಂದ್ರ’ ಎಂದು ಹಿಂದುತ್ವ ಸಂಘಟನೆ ಗುಂಪೊಂದು ಆರೋಪಿಸಿದ ನಂತರ ಅದನ್ನು ಬಲವಂತವಾಗಿ ಮುಚ್ಚಲಾಯಿತು.

ಸೆಪ್ಟೆಂಬರ್ 30 ರ ಗುರುವಾರ ತಿಲಕ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಬಲಪಂಥೀಯ ಸದಸ್ಯರು ಕೋಮು ಘೋಷಣೆಗಳನ್ನು ಕೂಗಿ, ರಾಜ್ಯಾದ್ಯಂತ ಎಲ್ಲ ಯೂನಿಸೆಕ್ಸ್ ಸಲೂನ್‌ಗಳನ್ನು ಮುಚ್ಚಬೇಕೆಂದು ಒತ್ತಾಯಿಸಿದರು.

ಅದರ ಅಧ್ಯಕ್ಷ ರಾಘವೇಂದ್ರ ಭಟನಾಗರ್, ಮುಸ್ಲಿಂ ಕ್ಷೌರಿಕರು ‘ಲವ್ ಜಿಹಾದ್’ ಮಾಡುತ್ತಿದ್ದಾರೆ. ಅವರು ಹಿಂದೂ ಮಹಿಳೆಯರನ್ನು ಆಮಿಷವೊಡ್ಡುತ್ತಾರೆ, ಅವರನ್ನು ಇಸ್ಲಾಂಗೆ ಮತಾಂತರಗೊಳಿಸುತ್ತಾರೆ” ಎಂದು ಆರೋಪಿ.

“ಒಂದು ನಿರ್ದಿಷ್ಟ ಸಮುದಾಯದ ಹುಡುಗರು ಈ ಸಲೂನ್‌ಗಳ ಹಿಂದೂ ಗ್ರಾಹಕರ ಫೋನ್ ಸಂಖ್ಯೆಗಳನ್ನು ತೆಗೆದುಕೊಳ್ಳುತ್ತಾರೆ. ಅವರು ಅವರನ್ನು ಬ್ರೈನ್ ವಾಶ್ ಮಾಡುತ್ತಾರೆ, ಜಿಹಾದಿ ಮಾತಿನಿಂದ ಬಲೆಗೆ ಬೀಳಿಸುತ್ತಾರೆ. ಅವರೊಂದಿಗೆ ಓಡಿಹೋಗುತ್ತಾರೆ. ಇದು ನಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರಿಗೆ ಅಪಾಯಕಾರಿ” ಎಂದು ಅವರು ಹೇಳಿದರು.

“ಲವ್ ಜಿಹಾದ್ ಎಂಬುದು ಒಂದು ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಇಸ್ಲಾಮೀಕರಣ ಯೋಜನೆಯ ಭಾಗವಾಗಿ ಮುಸ್ಲಿಮೇತರ ಮಹಿಳೆಯರನ್ನು ಮದುವೆಯಾಗಲು, ಮತಾಂತರಿಸಲು ಉದ್ದೇಶಪೂರ್ವಕವಾಗಿ ಮತ್ತು ಕಾರ್ಯತಂತ್ರದಿಂದ ಆಕರ್ಷಿಸುತ್ತಿದ್ದಾರೆ” ಎಂದು ಆರೋಪಿಸುತ್ತಾರೆ.

ಸಲೂನ್ ಕೆಲಸಗಾರರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರೆ, ಹಿಂದೂ ಮಹಿಳೆಯರನ್ನು ಸಹಾಯಕರಾಗಿ ಏಕೆ ನೇಮಿಸಲಾಗಿತ್ತು ಎಂದು ಅವರು ಪ್ರಶ್ನಿಸಿದರು. “ಅವರು ತಮ್ಮ ಸ್ವಂತ ಕುಟುಂಬಗಳ ಮಹಿಳೆಯರನ್ನು ಏಕೆ ನೇಮಿಸಿಕೊಳ್ಳುವುದಿಲ್ಲ? ನಮ್ಮ ಹೆಣ್ಣುಮಕ್ಕಳನ್ನು ಮಾತ್ರ ಇದರಲ್ಲಿ ಏಕೆ ಎಳೆಯಲಾಗುತ್ತಿದೆ” ಎಂದು ಅವರು ಪ್ರಶ್ನಿಸಿದರು, ಸಲೂನ್‌ಗಳು ತಮ್ಮ ವ್ಯವಹಾರವನ್ನು ಮುಂದುವರಿಸಿದರೆ ಬೀದಿಗಳಲ್ಲಿ ದೊಡ್ಡ ಚಳುವಳಿ ನಡೆಯುವ ಬಗ್ಗೆ ಎಚ್ಚರಿಸಿದರು.

ಸ್ಥಳೀಯ ಕ್ಷೌರಿಕರ ಸಂಘವು ಹಿಂದೂ ಶಕ್ತಿ ಸಂಘಟನೆಯ ಬೇಡಿಕೆಗಳಿಗೆ ಬೆಂಬಲ ನೀಡಿದ್ದು, ಯುನಿಸೆಕ್ಸ್ ಸಲೂನ್‌ಗಳು ಅಸ್ತಿತ್ವದಲ್ಲಿರಬಾರದು ಎಂದು ಹೇಳಿದೆ.

ಘಟನೆ ಬಗ್ಗೆ ಮುಸ್ಲಿಮರು ಭಯ ಮತ್ತು ಕೋಪ ವ್ಯಕ್ತಪಡಿಸಿದ್ದು, ಒಂದು ದಿನ ಚಹಾ ಮಾರಾಟ ಮಾಡುವುದನ್ನು ಸಹ ‘ಲವ್ ಜಿಹಾದ್’ ಎಂದು ಕರೆಯಲಾಗುತ್ತದೆ ಎಂದು ಒಬ್ಬರು ಹೇಳಿದ್ದಾರೆ.

“ಇದು ಮುಸ್ಲಿಂ ಅಸ್ತಿತ್ವದ ಮೇಲೆ ಯೋಜಿತ ದಾಳಿ. ಮುಸ್ಲಿಮರ ಜೀವನ ನಿರ್ವಹಣೆಯ ಪ್ರತಿಯೊಂದು ಮಾರ್ಗವನ್ನು ಹತ್ತಿಕ್ಕಲು ಬಯಸುತ್ತಾರೆ, ಇದರಿಂದ ನಾವು ಗುಲಾಮರಂತೆ ಆಗುತ್ತೇವೆ ಅಥವಾ ಬದುಕುತ್ತೇವೆ. ಸರ್ಕಾರವು ಈ ದ್ವೇಷವನ್ನು ಸಕ್ರಿಯವಾಗಿ ಪ್ರೋತ್ಸಾಹಿಸುತ್ತಿಲ್ಲವಾದರೂ ಮೌನವಾಗಿ ನೋಡುತ್ತಿದೆ” ಎಂದು ಡೆಹ್ರಾಡೂನ್ ಮೂಲದ ಮುಸ್ಲಿಂ ಹಕ್ಕುಗಳ ಕಾರ್ಯಕರ್ತ ಹೇಳಿದರು.

ಇದು ಮೊದಲ ನಿದರ್ಶನವಲ್ಲ, ಇತ್ತೀಚೆಗೆ, ಉತ್ತರಾಖಂಡದಾದ್ಯಂತ ಯುನಿಸೆಕ್ಸ್ ಸಲೂನ್‌ಗಳನ್ನು ಹೊಂದಿರುವ ಅನೇಕ ಮುಸ್ಲಿಂ ಕ್ಷೌರಿಕರು ಬಲಪಂಥೀಯ ಸಂಘಟನೆಗಳ ದಾಳಿಗೆ ಗುರಿಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...