Homeಮುಖಪುಟಉತ್ತರಾಖಂಡ: 'ಲವ್ ಜಿಹಾದ್' ಆರೋಪದ ಮೇಲೆ ಬಲವಂತವಾಗಿ ಸಲೂನ್ ಮುಚ್ಚಿಸಿದ ಹಿಂದುತ್ವ ಗುಂಪು

ಉತ್ತರಾಖಂಡ: ‘ಲವ್ ಜಿಹಾದ್’ ಆರೋಪದ ಮೇಲೆ ಬಲವಂತವಾಗಿ ಸಲೂನ್ ಮುಚ್ಚಿಸಿದ ಹಿಂದುತ್ವ ಗುಂಪು

- Advertisement -
- Advertisement -

ಉತ್ತರಾಖಂಡದ ಋಷಿಕೇಶದಲ್ಲಿ ಮುಸ್ಲಿಂ ಒಡೆತನದ ಯೂನಿಸೆಕ್ಸ್ ಸಲೂನ್ ಅನ್ನು ‘ಅನೈತಿಕ ಚಟುವಟಿಕೆಯ ಕೇಂದ್ರ’ ಎಂದು ಹಿಂದುತ್ವ ಸಂಘಟನೆ ಗುಂಪೊಂದು ಆರೋಪಿಸಿದ ನಂತರ ಅದನ್ನು ಬಲವಂತವಾಗಿ ಮುಚ್ಚಲಾಯಿತು.

ಸೆಪ್ಟೆಂಬರ್ 30 ರ ಗುರುವಾರ ತಿಲಕ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಬಲಪಂಥೀಯ ಸದಸ್ಯರು ಕೋಮು ಘೋಷಣೆಗಳನ್ನು ಕೂಗಿ, ರಾಜ್ಯಾದ್ಯಂತ ಎಲ್ಲ ಯೂನಿಸೆಕ್ಸ್ ಸಲೂನ್‌ಗಳನ್ನು ಮುಚ್ಚಬೇಕೆಂದು ಒತ್ತಾಯಿಸಿದರು.

ಅದರ ಅಧ್ಯಕ್ಷ ರಾಘವೇಂದ್ರ ಭಟನಾಗರ್, ಮುಸ್ಲಿಂ ಕ್ಷೌರಿಕರು ‘ಲವ್ ಜಿಹಾದ್’ ಮಾಡುತ್ತಿದ್ದಾರೆ. ಅವರು ಹಿಂದೂ ಮಹಿಳೆಯರನ್ನು ಆಮಿಷವೊಡ್ಡುತ್ತಾರೆ, ಅವರನ್ನು ಇಸ್ಲಾಂಗೆ ಮತಾಂತರಗೊಳಿಸುತ್ತಾರೆ” ಎಂದು ಆರೋಪಿ.

“ಒಂದು ನಿರ್ದಿಷ್ಟ ಸಮುದಾಯದ ಹುಡುಗರು ಈ ಸಲೂನ್‌ಗಳ ಹಿಂದೂ ಗ್ರಾಹಕರ ಫೋನ್ ಸಂಖ್ಯೆಗಳನ್ನು ತೆಗೆದುಕೊಳ್ಳುತ್ತಾರೆ. ಅವರು ಅವರನ್ನು ಬ್ರೈನ್ ವಾಶ್ ಮಾಡುತ್ತಾರೆ, ಜಿಹಾದಿ ಮಾತಿನಿಂದ ಬಲೆಗೆ ಬೀಳಿಸುತ್ತಾರೆ. ಅವರೊಂದಿಗೆ ಓಡಿಹೋಗುತ್ತಾರೆ. ಇದು ನಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರಿಗೆ ಅಪಾಯಕಾರಿ” ಎಂದು ಅವರು ಹೇಳಿದರು.

“ಲವ್ ಜಿಹಾದ್ ಎಂಬುದು ಒಂದು ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಇಸ್ಲಾಮೀಕರಣ ಯೋಜನೆಯ ಭಾಗವಾಗಿ ಮುಸ್ಲಿಮೇತರ ಮಹಿಳೆಯರನ್ನು ಮದುವೆಯಾಗಲು, ಮತಾಂತರಿಸಲು ಉದ್ದೇಶಪೂರ್ವಕವಾಗಿ ಮತ್ತು ಕಾರ್ಯತಂತ್ರದಿಂದ ಆಕರ್ಷಿಸುತ್ತಿದ್ದಾರೆ” ಎಂದು ಆರೋಪಿಸುತ್ತಾರೆ.

ಸಲೂನ್ ಕೆಲಸಗಾರರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರೆ, ಹಿಂದೂ ಮಹಿಳೆಯರನ್ನು ಸಹಾಯಕರಾಗಿ ಏಕೆ ನೇಮಿಸಲಾಗಿತ್ತು ಎಂದು ಅವರು ಪ್ರಶ್ನಿಸಿದರು. “ಅವರು ತಮ್ಮ ಸ್ವಂತ ಕುಟುಂಬಗಳ ಮಹಿಳೆಯರನ್ನು ಏಕೆ ನೇಮಿಸಿಕೊಳ್ಳುವುದಿಲ್ಲ? ನಮ್ಮ ಹೆಣ್ಣುಮಕ್ಕಳನ್ನು ಮಾತ್ರ ಇದರಲ್ಲಿ ಏಕೆ ಎಳೆಯಲಾಗುತ್ತಿದೆ” ಎಂದು ಅವರು ಪ್ರಶ್ನಿಸಿದರು, ಸಲೂನ್‌ಗಳು ತಮ್ಮ ವ್ಯವಹಾರವನ್ನು ಮುಂದುವರಿಸಿದರೆ ಬೀದಿಗಳಲ್ಲಿ ದೊಡ್ಡ ಚಳುವಳಿ ನಡೆಯುವ ಬಗ್ಗೆ ಎಚ್ಚರಿಸಿದರು.

ಸ್ಥಳೀಯ ಕ್ಷೌರಿಕರ ಸಂಘವು ಹಿಂದೂ ಶಕ್ತಿ ಸಂಘಟನೆಯ ಬೇಡಿಕೆಗಳಿಗೆ ಬೆಂಬಲ ನೀಡಿದ್ದು, ಯುನಿಸೆಕ್ಸ್ ಸಲೂನ್‌ಗಳು ಅಸ್ತಿತ್ವದಲ್ಲಿರಬಾರದು ಎಂದು ಹೇಳಿದೆ.

ಘಟನೆ ಬಗ್ಗೆ ಮುಸ್ಲಿಮರು ಭಯ ಮತ್ತು ಕೋಪ ವ್ಯಕ್ತಪಡಿಸಿದ್ದು, ಒಂದು ದಿನ ಚಹಾ ಮಾರಾಟ ಮಾಡುವುದನ್ನು ಸಹ ‘ಲವ್ ಜಿಹಾದ್’ ಎಂದು ಕರೆಯಲಾಗುತ್ತದೆ ಎಂದು ಒಬ್ಬರು ಹೇಳಿದ್ದಾರೆ.

“ಇದು ಮುಸ್ಲಿಂ ಅಸ್ತಿತ್ವದ ಮೇಲೆ ಯೋಜಿತ ದಾಳಿ. ಮುಸ್ಲಿಮರ ಜೀವನ ನಿರ್ವಹಣೆಯ ಪ್ರತಿಯೊಂದು ಮಾರ್ಗವನ್ನು ಹತ್ತಿಕ್ಕಲು ಬಯಸುತ್ತಾರೆ, ಇದರಿಂದ ನಾವು ಗುಲಾಮರಂತೆ ಆಗುತ್ತೇವೆ ಅಥವಾ ಬದುಕುತ್ತೇವೆ. ಸರ್ಕಾರವು ಈ ದ್ವೇಷವನ್ನು ಸಕ್ರಿಯವಾಗಿ ಪ್ರೋತ್ಸಾಹಿಸುತ್ತಿಲ್ಲವಾದರೂ ಮೌನವಾಗಿ ನೋಡುತ್ತಿದೆ” ಎಂದು ಡೆಹ್ರಾಡೂನ್ ಮೂಲದ ಮುಸ್ಲಿಂ ಹಕ್ಕುಗಳ ಕಾರ್ಯಕರ್ತ ಹೇಳಿದರು.

ಇದು ಮೊದಲ ನಿದರ್ಶನವಲ್ಲ, ಇತ್ತೀಚೆಗೆ, ಉತ್ತರಾಖಂಡದಾದ್ಯಂತ ಯುನಿಸೆಕ್ಸ್ ಸಲೂನ್‌ಗಳನ್ನು ಹೊಂದಿರುವ ಅನೇಕ ಮುಸ್ಲಿಂ ಕ್ಷೌರಿಕರು ಬಲಪಂಥೀಯ ಸಂಘಟನೆಗಳ ದಾಳಿಗೆ ಗುರಿಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...