Homeಮುಖಪುಟಉತ್ತರಾಖಂಡ: 'ಲವ್ ಜಿಹಾದ್' ಆರೋಪದ ಮೇಲೆ ಬಲವಂತವಾಗಿ ಸಲೂನ್ ಮುಚ್ಚಿಸಿದ ಹಿಂದುತ್ವ ಗುಂಪು

ಉತ್ತರಾಖಂಡ: ‘ಲವ್ ಜಿಹಾದ್’ ಆರೋಪದ ಮೇಲೆ ಬಲವಂತವಾಗಿ ಸಲೂನ್ ಮುಚ್ಚಿಸಿದ ಹಿಂದುತ್ವ ಗುಂಪು

- Advertisement -
- Advertisement -

ಉತ್ತರಾಖಂಡದ ಋಷಿಕೇಶದಲ್ಲಿ ಮುಸ್ಲಿಂ ಒಡೆತನದ ಯೂನಿಸೆಕ್ಸ್ ಸಲೂನ್ ಅನ್ನು ‘ಅನೈತಿಕ ಚಟುವಟಿಕೆಯ ಕೇಂದ್ರ’ ಎಂದು ಹಿಂದುತ್ವ ಸಂಘಟನೆ ಗುಂಪೊಂದು ಆರೋಪಿಸಿದ ನಂತರ ಅದನ್ನು ಬಲವಂತವಾಗಿ ಮುಚ್ಚಲಾಯಿತು.

ಸೆಪ್ಟೆಂಬರ್ 30 ರ ಗುರುವಾರ ತಿಲಕ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಬಲಪಂಥೀಯ ಸದಸ್ಯರು ಕೋಮು ಘೋಷಣೆಗಳನ್ನು ಕೂಗಿ, ರಾಜ್ಯಾದ್ಯಂತ ಎಲ್ಲ ಯೂನಿಸೆಕ್ಸ್ ಸಲೂನ್‌ಗಳನ್ನು ಮುಚ್ಚಬೇಕೆಂದು ಒತ್ತಾಯಿಸಿದರು.

ಅದರ ಅಧ್ಯಕ್ಷ ರಾಘವೇಂದ್ರ ಭಟನಾಗರ್, ಮುಸ್ಲಿಂ ಕ್ಷೌರಿಕರು ‘ಲವ್ ಜಿಹಾದ್’ ಮಾಡುತ್ತಿದ್ದಾರೆ. ಅವರು ಹಿಂದೂ ಮಹಿಳೆಯರನ್ನು ಆಮಿಷವೊಡ್ಡುತ್ತಾರೆ, ಅವರನ್ನು ಇಸ್ಲಾಂಗೆ ಮತಾಂತರಗೊಳಿಸುತ್ತಾರೆ” ಎಂದು ಆರೋಪಿ.

“ಒಂದು ನಿರ್ದಿಷ್ಟ ಸಮುದಾಯದ ಹುಡುಗರು ಈ ಸಲೂನ್‌ಗಳ ಹಿಂದೂ ಗ್ರಾಹಕರ ಫೋನ್ ಸಂಖ್ಯೆಗಳನ್ನು ತೆಗೆದುಕೊಳ್ಳುತ್ತಾರೆ. ಅವರು ಅವರನ್ನು ಬ್ರೈನ್ ವಾಶ್ ಮಾಡುತ್ತಾರೆ, ಜಿಹಾದಿ ಮಾತಿನಿಂದ ಬಲೆಗೆ ಬೀಳಿಸುತ್ತಾರೆ. ಅವರೊಂದಿಗೆ ಓಡಿಹೋಗುತ್ತಾರೆ. ಇದು ನಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರಿಗೆ ಅಪಾಯಕಾರಿ” ಎಂದು ಅವರು ಹೇಳಿದರು.

“ಲವ್ ಜಿಹಾದ್ ಎಂಬುದು ಒಂದು ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಇಸ್ಲಾಮೀಕರಣ ಯೋಜನೆಯ ಭಾಗವಾಗಿ ಮುಸ್ಲಿಮೇತರ ಮಹಿಳೆಯರನ್ನು ಮದುವೆಯಾಗಲು, ಮತಾಂತರಿಸಲು ಉದ್ದೇಶಪೂರ್ವಕವಾಗಿ ಮತ್ತು ಕಾರ್ಯತಂತ್ರದಿಂದ ಆಕರ್ಷಿಸುತ್ತಿದ್ದಾರೆ” ಎಂದು ಆರೋಪಿಸುತ್ತಾರೆ.

ಸಲೂನ್ ಕೆಲಸಗಾರರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರೆ, ಹಿಂದೂ ಮಹಿಳೆಯರನ್ನು ಸಹಾಯಕರಾಗಿ ಏಕೆ ನೇಮಿಸಲಾಗಿತ್ತು ಎಂದು ಅವರು ಪ್ರಶ್ನಿಸಿದರು. “ಅವರು ತಮ್ಮ ಸ್ವಂತ ಕುಟುಂಬಗಳ ಮಹಿಳೆಯರನ್ನು ಏಕೆ ನೇಮಿಸಿಕೊಳ್ಳುವುದಿಲ್ಲ? ನಮ್ಮ ಹೆಣ್ಣುಮಕ್ಕಳನ್ನು ಮಾತ್ರ ಇದರಲ್ಲಿ ಏಕೆ ಎಳೆಯಲಾಗುತ್ತಿದೆ” ಎಂದು ಅವರು ಪ್ರಶ್ನಿಸಿದರು, ಸಲೂನ್‌ಗಳು ತಮ್ಮ ವ್ಯವಹಾರವನ್ನು ಮುಂದುವರಿಸಿದರೆ ಬೀದಿಗಳಲ್ಲಿ ದೊಡ್ಡ ಚಳುವಳಿ ನಡೆಯುವ ಬಗ್ಗೆ ಎಚ್ಚರಿಸಿದರು.

ಸ್ಥಳೀಯ ಕ್ಷೌರಿಕರ ಸಂಘವು ಹಿಂದೂ ಶಕ್ತಿ ಸಂಘಟನೆಯ ಬೇಡಿಕೆಗಳಿಗೆ ಬೆಂಬಲ ನೀಡಿದ್ದು, ಯುನಿಸೆಕ್ಸ್ ಸಲೂನ್‌ಗಳು ಅಸ್ತಿತ್ವದಲ್ಲಿರಬಾರದು ಎಂದು ಹೇಳಿದೆ.

ಘಟನೆ ಬಗ್ಗೆ ಮುಸ್ಲಿಮರು ಭಯ ಮತ್ತು ಕೋಪ ವ್ಯಕ್ತಪಡಿಸಿದ್ದು, ಒಂದು ದಿನ ಚಹಾ ಮಾರಾಟ ಮಾಡುವುದನ್ನು ಸಹ ‘ಲವ್ ಜಿಹಾದ್’ ಎಂದು ಕರೆಯಲಾಗುತ್ತದೆ ಎಂದು ಒಬ್ಬರು ಹೇಳಿದ್ದಾರೆ.

“ಇದು ಮುಸ್ಲಿಂ ಅಸ್ತಿತ್ವದ ಮೇಲೆ ಯೋಜಿತ ದಾಳಿ. ಮುಸ್ಲಿಮರ ಜೀವನ ನಿರ್ವಹಣೆಯ ಪ್ರತಿಯೊಂದು ಮಾರ್ಗವನ್ನು ಹತ್ತಿಕ್ಕಲು ಬಯಸುತ್ತಾರೆ, ಇದರಿಂದ ನಾವು ಗುಲಾಮರಂತೆ ಆಗುತ್ತೇವೆ ಅಥವಾ ಬದುಕುತ್ತೇವೆ. ಸರ್ಕಾರವು ಈ ದ್ವೇಷವನ್ನು ಸಕ್ರಿಯವಾಗಿ ಪ್ರೋತ್ಸಾಹಿಸುತ್ತಿಲ್ಲವಾದರೂ ಮೌನವಾಗಿ ನೋಡುತ್ತಿದೆ” ಎಂದು ಡೆಹ್ರಾಡೂನ್ ಮೂಲದ ಮುಸ್ಲಿಂ ಹಕ್ಕುಗಳ ಕಾರ್ಯಕರ್ತ ಹೇಳಿದರು.

ಇದು ಮೊದಲ ನಿದರ್ಶನವಲ್ಲ, ಇತ್ತೀಚೆಗೆ, ಉತ್ತರಾಖಂಡದಾದ್ಯಂತ ಯುನಿಸೆಕ್ಸ್ ಸಲೂನ್‌ಗಳನ್ನು ಹೊಂದಿರುವ ಅನೇಕ ಮುಸ್ಲಿಂ ಕ್ಷೌರಿಕರು ಬಲಪಂಥೀಯ ಸಂಘಟನೆಗಳ ದಾಳಿಗೆ ಗುರಿಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...