Homeಮುಖಪುಟಉತ್ತರಾಖಂಡ: 'ಲವ್ ಜಿಹಾದ್' ಆರೋಪದ ಮೇಲೆ ಬಲವಂತವಾಗಿ ಸಲೂನ್ ಮುಚ್ಚಿಸಿದ ಹಿಂದುತ್ವ ಗುಂಪು

ಉತ್ತರಾಖಂಡ: ‘ಲವ್ ಜಿಹಾದ್’ ಆರೋಪದ ಮೇಲೆ ಬಲವಂತವಾಗಿ ಸಲೂನ್ ಮುಚ್ಚಿಸಿದ ಹಿಂದುತ್ವ ಗುಂಪು

- Advertisement -
- Advertisement -

ಉತ್ತರಾಖಂಡದ ಋಷಿಕೇಶದಲ್ಲಿ ಮುಸ್ಲಿಂ ಒಡೆತನದ ಯೂನಿಸೆಕ್ಸ್ ಸಲೂನ್ ಅನ್ನು ‘ಅನೈತಿಕ ಚಟುವಟಿಕೆಯ ಕೇಂದ್ರ’ ಎಂದು ಹಿಂದುತ್ವ ಸಂಘಟನೆ ಗುಂಪೊಂದು ಆರೋಪಿಸಿದ ನಂತರ ಅದನ್ನು ಬಲವಂತವಾಗಿ ಮುಚ್ಚಲಾಯಿತು.

ಸೆಪ್ಟೆಂಬರ್ 30 ರ ಗುರುವಾರ ತಿಲಕ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಬಲಪಂಥೀಯ ಸದಸ್ಯರು ಕೋಮು ಘೋಷಣೆಗಳನ್ನು ಕೂಗಿ, ರಾಜ್ಯಾದ್ಯಂತ ಎಲ್ಲ ಯೂನಿಸೆಕ್ಸ್ ಸಲೂನ್‌ಗಳನ್ನು ಮುಚ್ಚಬೇಕೆಂದು ಒತ್ತಾಯಿಸಿದರು.

ಅದರ ಅಧ್ಯಕ್ಷ ರಾಘವೇಂದ್ರ ಭಟನಾಗರ್, ಮುಸ್ಲಿಂ ಕ್ಷೌರಿಕರು ‘ಲವ್ ಜಿಹಾದ್’ ಮಾಡುತ್ತಿದ್ದಾರೆ. ಅವರು ಹಿಂದೂ ಮಹಿಳೆಯರನ್ನು ಆಮಿಷವೊಡ್ಡುತ್ತಾರೆ, ಅವರನ್ನು ಇಸ್ಲಾಂಗೆ ಮತಾಂತರಗೊಳಿಸುತ್ತಾರೆ” ಎಂದು ಆರೋಪಿ.

“ಒಂದು ನಿರ್ದಿಷ್ಟ ಸಮುದಾಯದ ಹುಡುಗರು ಈ ಸಲೂನ್‌ಗಳ ಹಿಂದೂ ಗ್ರಾಹಕರ ಫೋನ್ ಸಂಖ್ಯೆಗಳನ್ನು ತೆಗೆದುಕೊಳ್ಳುತ್ತಾರೆ. ಅವರು ಅವರನ್ನು ಬ್ರೈನ್ ವಾಶ್ ಮಾಡುತ್ತಾರೆ, ಜಿಹಾದಿ ಮಾತಿನಿಂದ ಬಲೆಗೆ ಬೀಳಿಸುತ್ತಾರೆ. ಅವರೊಂದಿಗೆ ಓಡಿಹೋಗುತ್ತಾರೆ. ಇದು ನಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರಿಗೆ ಅಪಾಯಕಾರಿ” ಎಂದು ಅವರು ಹೇಳಿದರು.

“ಲವ್ ಜಿಹಾದ್ ಎಂಬುದು ಒಂದು ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಇಸ್ಲಾಮೀಕರಣ ಯೋಜನೆಯ ಭಾಗವಾಗಿ ಮುಸ್ಲಿಮೇತರ ಮಹಿಳೆಯರನ್ನು ಮದುವೆಯಾಗಲು, ಮತಾಂತರಿಸಲು ಉದ್ದೇಶಪೂರ್ವಕವಾಗಿ ಮತ್ತು ಕಾರ್ಯತಂತ್ರದಿಂದ ಆಕರ್ಷಿಸುತ್ತಿದ್ದಾರೆ” ಎಂದು ಆರೋಪಿಸುತ್ತಾರೆ.

ಸಲೂನ್ ಕೆಲಸಗಾರರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರೆ, ಹಿಂದೂ ಮಹಿಳೆಯರನ್ನು ಸಹಾಯಕರಾಗಿ ಏಕೆ ನೇಮಿಸಲಾಗಿತ್ತು ಎಂದು ಅವರು ಪ್ರಶ್ನಿಸಿದರು. “ಅವರು ತಮ್ಮ ಸ್ವಂತ ಕುಟುಂಬಗಳ ಮಹಿಳೆಯರನ್ನು ಏಕೆ ನೇಮಿಸಿಕೊಳ್ಳುವುದಿಲ್ಲ? ನಮ್ಮ ಹೆಣ್ಣುಮಕ್ಕಳನ್ನು ಮಾತ್ರ ಇದರಲ್ಲಿ ಏಕೆ ಎಳೆಯಲಾಗುತ್ತಿದೆ” ಎಂದು ಅವರು ಪ್ರಶ್ನಿಸಿದರು, ಸಲೂನ್‌ಗಳು ತಮ್ಮ ವ್ಯವಹಾರವನ್ನು ಮುಂದುವರಿಸಿದರೆ ಬೀದಿಗಳಲ್ಲಿ ದೊಡ್ಡ ಚಳುವಳಿ ನಡೆಯುವ ಬಗ್ಗೆ ಎಚ್ಚರಿಸಿದರು.

ಸ್ಥಳೀಯ ಕ್ಷೌರಿಕರ ಸಂಘವು ಹಿಂದೂ ಶಕ್ತಿ ಸಂಘಟನೆಯ ಬೇಡಿಕೆಗಳಿಗೆ ಬೆಂಬಲ ನೀಡಿದ್ದು, ಯುನಿಸೆಕ್ಸ್ ಸಲೂನ್‌ಗಳು ಅಸ್ತಿತ್ವದಲ್ಲಿರಬಾರದು ಎಂದು ಹೇಳಿದೆ.

ಘಟನೆ ಬಗ್ಗೆ ಮುಸ್ಲಿಮರು ಭಯ ಮತ್ತು ಕೋಪ ವ್ಯಕ್ತಪಡಿಸಿದ್ದು, ಒಂದು ದಿನ ಚಹಾ ಮಾರಾಟ ಮಾಡುವುದನ್ನು ಸಹ ‘ಲವ್ ಜಿಹಾದ್’ ಎಂದು ಕರೆಯಲಾಗುತ್ತದೆ ಎಂದು ಒಬ್ಬರು ಹೇಳಿದ್ದಾರೆ.

“ಇದು ಮುಸ್ಲಿಂ ಅಸ್ತಿತ್ವದ ಮೇಲೆ ಯೋಜಿತ ದಾಳಿ. ಮುಸ್ಲಿಮರ ಜೀವನ ನಿರ್ವಹಣೆಯ ಪ್ರತಿಯೊಂದು ಮಾರ್ಗವನ್ನು ಹತ್ತಿಕ್ಕಲು ಬಯಸುತ್ತಾರೆ, ಇದರಿಂದ ನಾವು ಗುಲಾಮರಂತೆ ಆಗುತ್ತೇವೆ ಅಥವಾ ಬದುಕುತ್ತೇವೆ. ಸರ್ಕಾರವು ಈ ದ್ವೇಷವನ್ನು ಸಕ್ರಿಯವಾಗಿ ಪ್ರೋತ್ಸಾಹಿಸುತ್ತಿಲ್ಲವಾದರೂ ಮೌನವಾಗಿ ನೋಡುತ್ತಿದೆ” ಎಂದು ಡೆಹ್ರಾಡೂನ್ ಮೂಲದ ಮುಸ್ಲಿಂ ಹಕ್ಕುಗಳ ಕಾರ್ಯಕರ್ತ ಹೇಳಿದರು.

ಇದು ಮೊದಲ ನಿದರ್ಶನವಲ್ಲ, ಇತ್ತೀಚೆಗೆ, ಉತ್ತರಾಖಂಡದಾದ್ಯಂತ ಯುನಿಸೆಕ್ಸ್ ಸಲೂನ್‌ಗಳನ್ನು ಹೊಂದಿರುವ ಅನೇಕ ಮುಸ್ಲಿಂ ಕ್ಷೌರಿಕರು ಬಲಪಂಥೀಯ ಸಂಘಟನೆಗಳ ದಾಳಿಗೆ ಗುರಿಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...