Homeಮುಖಪುಟಸಿಜೆಐ ಗವಾಯಿ ಮೇಲೆ ದಾಳಿಗೆ ಯತ್ನ; ವಕೀಲನ ಮನೆ ಹೊರಗೆ ಪ್ರತಿಭಟನೆ

ಸಿಜೆಐ ಗವಾಯಿ ಮೇಲೆ ದಾಳಿಗೆ ಯತ್ನ; ವಕೀಲನ ಮನೆ ಹೊರಗೆ ಪ್ರತಿಭಟನೆ

- Advertisement -
- Advertisement -

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಯತ್ನದ ನಂತರ, ಎಎಪಿ ನಾಯಕ ಸೌರಭ್ ಭಾರದ್ವಾಜ್ ನೇತೃತ್ವದಲ್ಲಿ ದಲಿತ ಗುಂಪುಗಳು ಮತ್ತು ಪಕ್ಷದ ನಾಯಕರು ವಕೀಲ ರಾಕೇಶ್ ಕಿಶೋರ್ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ಭಾವಚಿತ್ರ ಹಿಡಿದಿದ್ದ ಪ್ರತಿಭಟನಾಕಾರರು, ಶೂಗಳ ಹಾರದೊಂದಿಗೆ ವಕೀಲನ ವಿರುದ್ಧ ಘೋಷಣೆ ಕೂಗಿದರು. ‘ಜೈ ಭೀಮ್’ ಮತ್ತು ‘ಸಿಜೆಐ ಕಾ ಅಪ್ಮಾನ್ ನಹಿ ಸಹೇಗಾ ಹಿಂದೂಸ್ತಾನ್’ ಎಂದು ಘೋಷಣೆಗಳನ್ನು ಕೂಗುತ್ತಾ ವಕೀಲ ರಾಕೇಶ್ ಕಿಶೋರ್ ವಿಹಾರದ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು. ಕಿಶೋರ್ ವಿರುದ್ಧ ಎಫ್‌ಐಆರ್ ಮತ್ತು ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ ವಕೀಲರ ಸಂಘವು ಸುಪ್ರೀಂ ಕೋರ್ಟ್ ಆವರಣದಲ್ಲಿ ಮೆರವಣಿಗೆ ನಡೆಸಿತು.

ಸುಪ್ರೀಂ ಕೋರ್ಟ್ ವಕೀಲನಾದ ರಾಕೇಶ್ ಕಿಶೋರ್, ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದರು. ಶಿರಚ್ಛೇದಿತ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಸಲ್ಲಿಸಿದ ಅರ್ಜಿಯನ್ನು ಗವಾಯಿ ಅವರು ವಜಾಗೊಳಿಸಿದ್ದರಿಂದ ಕೋಪಗೊಂಡ ಆತ, “ಸನಾತನ ಧರ್ಮದ ಮೇಲಿನ ಅವಮಾನ ಸಹಿಸುವುದಿಲ್ಲ” ಬಂಧನದ ಸಮಯದಲ್ಲಿ ಕಿರುಚಾಡಿದ್ದ.

ಭಾರತೀಯ ವಕೀಲರ ಮಂಡಳಿಯು ಕಿಶೋರ್ ಅವರ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ಈ ಕೃತ್ಯವನ್ನು ಖಂಡಿಸಿದರು, ಸಿಜೆಐ ಅವರ ಶಾಂತ ಪ್ರತಿಕ್ರಿಯೆಯನ್ನು ಶ್ಲಾಘಿಸಿದರು.

“ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಜಿ ಅವರೊಂದಿಗೆ ಮಾತನಾಡಿದೆ. ಇಂದು ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕೃತ್ಯಗಳಿಗೆ ಸ್ಥಳವಿಲ್ಲ. ಇದು ಸಂಪೂರ್ಣವಾಗಿ ಖಂಡನೀಯ. ಅಂತಹ ಪರಿಸ್ಥಿತಿಯನ್ನು ಎದುರಿಸುವಾಗ ನ್ಯಾಯಮೂರ್ತಿ ಗವಾಯಿ ಅವರು ಪ್ರದರ್ಶಿಸಿದ ಶಾಂತತೆಯನ್ನು ನಾನು ಮೆಚ್ಚುತ್ತೇನೆ. ಇದು ನ್ಯಾಯದ ಮೌಲ್ಯಗಳಿಗೆ ಮತ್ತು ನಮ್ಮ ಸಂವಿಧಾನದ ಚೈತನ್ಯವನ್ನು ಬಲಪಡಿಸಲು ಅವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಕೋರ್ಟ್ ಸಂಖ್ಯೆ 1 ರಲ್ಲಿ ನಿನ್ನೆ ಬೆಳಿಗ್ಗೆ 11:35 ಕ್ಕೆ 71 ವರ್ಷದ ಕಿಶೋರ್ ಪೀಠದ ಬಳಿ ಬಂದು, ತಮ್ಮ ಕ್ರೀಡಾ ಶೂ ತೆಗೆದು, ಸಿಜೆಐ ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರತ್ತ ಎಸೆದ ಘಟನೆ ನಡೆಯಿತು. ಭದ್ರತಾ ಸಿಬ್ಬಂದಿ ಕ್ಷಿಪ್ರವಾಗಿ ಮಧ್ಯಪ್ರವೇಶಿಸಿ, ಕಿಶೋರ್ ಅವರನ್ನು ತಡೆದು, ಘೋಷಣೆಗಳನ್ನು ಕೂಗುತ್ತಲೇ ಅವರನ್ನು ಹೊರಗೆ ಕರೆದೊಯ್ದರು.

ಉಲ್ಲಂಘನೆಯ ಹೊರತಾಗಿಯೂ, ಸಿಜೆಐ ಗವಾಯಿ ಎಲ್ಲರೂ ಅಡಚಣೆಯನ್ನು ‘ನಿರ್ಲಕ್ಷಿಸಬೇಕೆಂದು’ ಹೇಳಿದರು. “ಈ ವಿಷಯಗಳು ನನ್ನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ಹೇಳುವ ಮೂಲಕ ತಮ್ಮ ದಿನದ ಪ್ರಕರಣಗಳನ್ನು ಮುಂದುವರೆಸಿದರು.

ಮಂಗಳವಾರ, ದಲಿತ ಸಂಘಟನೆಗಳ ಕಾರ್ಯಕರ್ತರು ಮತ್ತು ಎಎಪಿ ಸದಸ್ಯರು ಕಿಶೋರ್ ಅವರ ಮಯೂರ್ ವಿಹಾರ್ ಅಪಾರ್ಟ್ಮೆಂಟ್ ಹೊರಗೆ ಜಮಾಯಿಸಿದರು, ಅಲ್ಲಿ ಪೊಲೀಸರು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಬ್ಯಾರಿಕೇಡ್ ಹಾಕಿದ್ದರು.

ಭಾರತದ ಎರಡನೇ ದಲಿತ ನ್ಯಾಯಾಂಗ ಮುಖ್ಯಸ್ಥರಾದ ಸಿಜೆಐ ಗವಾಯಿ ಅವರಿಗೆ ಒಗ್ಗಟ್ಟಿನಿಂದ ಎಎಪಿ ದೆಹಲಿ ಅಧ್ಯಕ್ಷ ಸೌರಭ್ ಭಾರದ್ವಾಜ್ ನೇತೃತ್ವದಲ್ಲಿ ‘ಹಲ್ಲಾ ಬೋಲ್’ ಮತ್ತು ‘ಜೈ ಭೀಮ್’ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳು ಮತ್ತು ಶೂಗಳ ಸಾಂಕೇತಿಕ ಹಾರಗಳನ್ನು ಹಿಡಿದುಕೊಂಡು ಆಕ್ರೋಶ ಹೊರಹಾಕಿದರು.

ಏಕಕಾಲದಲ್ಲಿ, ಅಖಿಲ ಭಾರತ ವಕೀಲರ ಸಂಘವು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಭಟನೆ ನಡೆಸಿ, ದಾಳಿಯನ್ನು ‘ಸಂವಿಧಾನದ ಮೇಲಿನ ದಾಳಿ’ ಎಂದು ಕರೆಯಿತು. ಕಿಶೋರ್ ವಿರುದ್ಧ ಔಪಚಾರಿಕ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ, ಆತನ ವಿರುದ್ಧ ನ್ಯಾಯಾಂಗ ನಿಂದನೆ ಆರೋಪಗಳನ್ನು ಮಾಡಿತು.

ಸಿಜೆಐ ಮೇಲೆ ದಾಳಿ: ಬಲಪಂಥೀಯ ಪ್ರಚೋದನೆಯ ಫಲಿತಾಂಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...