Homeಮುಖಪುಟಬಿಹಾರ ಎಸ್‌ಐಆರ್ : ಅಂತಿಮ ಪಟ್ಟಿಯಿಂದ ಕೈಬಿಟ್ಟ 3.66 ಲಕ್ಷ ಮತದಾರರ ಮಾಹಿತಿ ಕೇಳಿದ ಸುಪ್ರೀಂ...

ಬಿಹಾರ ಎಸ್‌ಐಆರ್ : ಅಂತಿಮ ಪಟ್ಟಿಯಿಂದ ಕೈಬಿಟ್ಟ 3.66 ಲಕ್ಷ ಮತದಾರರ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಅಂತಿಮ ಪಟ್ಟಿಯಿಂದ ಕೈಬಿಟ್ಟಿರುವ 3.66 ಲಕ್ಷ ಮತದಾರರ ವಿವರಗಳನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.7) ಭಾರತೀಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ವಿಚಾರಣೆ ವೇಳೆ, ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಿದ ಹೆಚ್ಚಿನ ಹೆಸರುಗಳು ಹೊಸ ಮತದಾರರದ್ದು, ಕೆಲವು ಹಳೆಯ ಮತದಾರನ್ನು ಸೇರಿಸಲಾಗಿದೆ. ಪಟ್ಟಿಯಿಂದ ಕೈಬಿಟ್ಟಿರುವ ಯಾವುದೇ ಮತದಾರರು ಇದುವರೆಗೆ ಯಾವುದೇ ದೂರು ಅಥವಾ ಮೇಲ್ಮನವಿ ಸಲ್ಲಿಸಿಲ್ಲ ಚುನಾವಣಾ ಆಯೋಗ ಹೇಳಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಬಿಹಾರ ಎಸ್ಐಆರ್ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಇಂದಿನ ವಿಚಾರಣೆ ಬಳಿಕ, ಅಂತಿಮ ಪಟ್ಟಿಯಿಂದ ಕೈ ಬಿಡಲಾದ ಮತದಾರರ ಬಗ್ಗೆ ಅಕ್ಟೋಬರ್ 9ರೊಳಗೆ ಮಾಹಿತಿ ಒದಗಿಸುವಂತೆ ಪೀಠ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಅದೇ ದಿನ ನಡೆಸಲಿದೆ.

ಅಂತಿಮ ಪಟ್ಟಿಯನ್ನು ಪ್ರಕಟಿಸಿರುವುದರಿಂದ ಅಗತ್ಯವಿರುವ ದತ್ತಾಂಶವನ್ನು ತುಲನಾತ್ಮಕ ವಿಶ್ಲೇಷಣೆಯ ಮೂಲಕ ಒದಗಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಎಸ್‌ಐಆರ್ ಬಳಿಕ ಸೆಪ್ಟೆಂಬರ್ 30ರಂದು ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಅಕ್ಟೋಬರ್ 6 ರಂದು ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನೂ ಘೋಷಿಸಿದೆ.

ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿ ಬಾಗ್ಚಿ ಅವರು ಚುನಾವಣಾ ಆಯೋಗದ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರಿಗೆ, ನ್ಯಾಯಾಲಯದ ಆದೇಶಗಳು ಹೆಚ್ಚಿನ ಪಾರದರ್ಶಕತೆಗೆ ಕಾರಣವಾಗಿವೆ ಎಂದು ಹೇಳಿದ್ದಾರೆ.

“ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಜನರಿಗೆ ಲಭ್ಯತೆ ಸುಧಾರಿಸಿದೆ. ಆದರೆ, ಕರಡು ಮತದಾರರ ಪಟ್ಟಿಯಿಂದ 65 ಲಕ್ಷ ಜನರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ದತ್ತಾಂಶಗಳಿಂದ ತಿಳಿದುಬಂದಿದೆ. ಸತ್ತವರು ಅಥವಾ ಬೇರೆಡೆಗೆ ಸ್ಥಳಾಂತರಗೊಂಡವರ ಹೆಸರುಗಳನ್ನು ತೆಗೆಯುವುದು ಸರಿಯಾದ ಕ್ರಮವಾಗಿದೆ. ಆದರೂ, ಯಾರನ್ನಾದರೂ ಪಟ್ಟಿಯಿಂದ ಕೈಬಿಡುವಾಗ ಚುನಾವಣಾ ನಿಯಮ 21 ಮತ್ತು ನಿಗದಿತ ಕಾರ್ಯವಿಧಾನಗಳನ್ನು (ಎಸ್‌ಒಪಿ) ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಪೀಠ ಸೂಚಿಸಿದೆ.

“ಮತದಾರರ ಪಟ್ಟಿಯಿಂದ ಯಾರನ್ನಾದರು ಕೈ ಬಿಟ್ಟಾಗ ಅವರ ಮಾಹಿತಿಯನ್ನು ಚುನಾವಣಾ ಕಚೇರಿಗಳಲ್ಲಿ ಪ್ರದರ್ಶಿಸಬೇಕು ಎಂದು ಹಿಂದೆ ಸೂಚಿಸಲಾಗಿತ್ತು. ಆದರೆ, ಅಂತಿಮ ಮತದಾರರ ಪಟ್ಟಿಯು ಕೇವಲ ಸಂಖ್ಯೆಗಳ ಸಂಗ್ರಹವಾಗಿದ್ದು, ಇದರಿಂದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದೆ. ಪಟ್ಟಿಯಲ್ಲಿ ಸೇರಿಸಲಾದ ಹೊಸ ಹೆಸರುಗಳು ತೆಗೆದುಹಾಕಲಾದವರಿಗೆ ಸಂಬಂಧಿಸಿದವುಗಳೇ ಇಲ್ಲವೆ ಸಂಪೂರ್ಣ ಹೊಸ ಹೆಸರುಗಳೇ ಎಂಬ ಸ್ಪಷ್ಟತೆ ಇಲ್ಲ ಎಂದು ಪೀಠ ಹೇಳಿದೆ.

ಇದಕ್ಕೆ ಉತ್ತರಿಸಿದ ದ್ವಿವೇದಿ ಅವರು, ಇದುವರೆಗೆ ಯಾವುದೇ ತೆಗೆದುಹಾಕಲಾದ ಮತದಾರರಿಂದ ದೂರು ಅಥವಾ ಮೇಲ್ಮನವಿ ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದ್ದಾರೆ.

‘ಫಾದರ್ ಸ್ಟಾನ್ ಸ್ವಾಮಿ ನೈಸರ್ಗಿಕ ಕಾರಣಗಳಿಂದ ಸಾವನ್ನಪ್ಪಿದ್ದಾರೆ..’; ನ್ಯಾಯಾಲಯಕ್ಕೆ ತಿಳಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...