Homeಮುಖಪುಟಬಿಹಾರ ಎಸ್‌ಐಆರ್ : ಅಂತಿಮ ಪಟ್ಟಿಯಿಂದ ಕೈಬಿಟ್ಟ 3.66 ಲಕ್ಷ ಮತದಾರರ ಮಾಹಿತಿ ಕೇಳಿದ ಸುಪ್ರೀಂ...

ಬಿಹಾರ ಎಸ್‌ಐಆರ್ : ಅಂತಿಮ ಪಟ್ಟಿಯಿಂದ ಕೈಬಿಟ್ಟ 3.66 ಲಕ್ಷ ಮತದಾರರ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಅಂತಿಮ ಪಟ್ಟಿಯಿಂದ ಕೈಬಿಟ್ಟಿರುವ 3.66 ಲಕ್ಷ ಮತದಾರರ ವಿವರಗಳನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.7) ಭಾರತೀಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ವಿಚಾರಣೆ ವೇಳೆ, ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಿದ ಹೆಚ್ಚಿನ ಹೆಸರುಗಳು ಹೊಸ ಮತದಾರರದ್ದು, ಕೆಲವು ಹಳೆಯ ಮತದಾರನ್ನು ಸೇರಿಸಲಾಗಿದೆ. ಪಟ್ಟಿಯಿಂದ ಕೈಬಿಟ್ಟಿರುವ ಯಾವುದೇ ಮತದಾರರು ಇದುವರೆಗೆ ಯಾವುದೇ ದೂರು ಅಥವಾ ಮೇಲ್ಮನವಿ ಸಲ್ಲಿಸಿಲ್ಲ ಚುನಾವಣಾ ಆಯೋಗ ಹೇಳಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಬಿಹಾರ ಎಸ್ಐಆರ್ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಇಂದಿನ ವಿಚಾರಣೆ ಬಳಿಕ, ಅಂತಿಮ ಪಟ್ಟಿಯಿಂದ ಕೈ ಬಿಡಲಾದ ಮತದಾರರ ಬಗ್ಗೆ ಅಕ್ಟೋಬರ್ 9ರೊಳಗೆ ಮಾಹಿತಿ ಒದಗಿಸುವಂತೆ ಪೀಠ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಅದೇ ದಿನ ನಡೆಸಲಿದೆ.

ಅಂತಿಮ ಪಟ್ಟಿಯನ್ನು ಪ್ರಕಟಿಸಿರುವುದರಿಂದ ಅಗತ್ಯವಿರುವ ದತ್ತಾಂಶವನ್ನು ತುಲನಾತ್ಮಕ ವಿಶ್ಲೇಷಣೆಯ ಮೂಲಕ ಒದಗಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಎಸ್‌ಐಆರ್ ಬಳಿಕ ಸೆಪ್ಟೆಂಬರ್ 30ರಂದು ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಅಕ್ಟೋಬರ್ 6 ರಂದು ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನೂ ಘೋಷಿಸಿದೆ.

ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿ ಬಾಗ್ಚಿ ಅವರು ಚುನಾವಣಾ ಆಯೋಗದ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರಿಗೆ, ನ್ಯಾಯಾಲಯದ ಆದೇಶಗಳು ಹೆಚ್ಚಿನ ಪಾರದರ್ಶಕತೆಗೆ ಕಾರಣವಾಗಿವೆ ಎಂದು ಹೇಳಿದ್ದಾರೆ.

“ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಜನರಿಗೆ ಲಭ್ಯತೆ ಸುಧಾರಿಸಿದೆ. ಆದರೆ, ಕರಡು ಮತದಾರರ ಪಟ್ಟಿಯಿಂದ 65 ಲಕ್ಷ ಜನರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ದತ್ತಾಂಶಗಳಿಂದ ತಿಳಿದುಬಂದಿದೆ. ಸತ್ತವರು ಅಥವಾ ಬೇರೆಡೆಗೆ ಸ್ಥಳಾಂತರಗೊಂಡವರ ಹೆಸರುಗಳನ್ನು ತೆಗೆಯುವುದು ಸರಿಯಾದ ಕ್ರಮವಾಗಿದೆ. ಆದರೂ, ಯಾರನ್ನಾದರೂ ಪಟ್ಟಿಯಿಂದ ಕೈಬಿಡುವಾಗ ಚುನಾವಣಾ ನಿಯಮ 21 ಮತ್ತು ನಿಗದಿತ ಕಾರ್ಯವಿಧಾನಗಳನ್ನು (ಎಸ್‌ಒಪಿ) ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಪೀಠ ಸೂಚಿಸಿದೆ.

“ಮತದಾರರ ಪಟ್ಟಿಯಿಂದ ಯಾರನ್ನಾದರು ಕೈ ಬಿಟ್ಟಾಗ ಅವರ ಮಾಹಿತಿಯನ್ನು ಚುನಾವಣಾ ಕಚೇರಿಗಳಲ್ಲಿ ಪ್ರದರ್ಶಿಸಬೇಕು ಎಂದು ಹಿಂದೆ ಸೂಚಿಸಲಾಗಿತ್ತು. ಆದರೆ, ಅಂತಿಮ ಮತದಾರರ ಪಟ್ಟಿಯು ಕೇವಲ ಸಂಖ್ಯೆಗಳ ಸಂಗ್ರಹವಾಗಿದ್ದು, ಇದರಿಂದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದೆ. ಪಟ್ಟಿಯಲ್ಲಿ ಸೇರಿಸಲಾದ ಹೊಸ ಹೆಸರುಗಳು ತೆಗೆದುಹಾಕಲಾದವರಿಗೆ ಸಂಬಂಧಿಸಿದವುಗಳೇ ಇಲ್ಲವೆ ಸಂಪೂರ್ಣ ಹೊಸ ಹೆಸರುಗಳೇ ಎಂಬ ಸ್ಪಷ್ಟತೆ ಇಲ್ಲ ಎಂದು ಪೀಠ ಹೇಳಿದೆ.

ಇದಕ್ಕೆ ಉತ್ತರಿಸಿದ ದ್ವಿವೇದಿ ಅವರು, ಇದುವರೆಗೆ ಯಾವುದೇ ತೆಗೆದುಹಾಕಲಾದ ಮತದಾರರಿಂದ ದೂರು ಅಥವಾ ಮೇಲ್ಮನವಿ ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದ್ದಾರೆ.

‘ಫಾದರ್ ಸ್ಟಾನ್ ಸ್ವಾಮಿ ನೈಸರ್ಗಿಕ ಕಾರಣಗಳಿಂದ ಸಾವನ್ನಪ್ಪಿದ್ದಾರೆ..’; ನ್ಯಾಯಾಲಯಕ್ಕೆ ತಿಳಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...