Homeಮುಖಪುಟಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಸೇರಿ ಮಲಯಾಳಂ ನಟರ ಮನೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್ಇಎಂಎ) ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ತಮಿಳುನಾಡಿನ 17 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬುಧವಾರ (ಅ.8) ದಾಳಿ ನಡೆಸಿದ್ದಾರೆ.

ಮಲಯಾಳಂ ಸಿನಿಮಾ ನಟರಾದ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರ ಮನೆ ಮತ್ತು ಇತರ ಸಂಸ್ಥೆಗಳು ಹಾಗೂ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್, ಮಲಪ್ಪುರಂ, ಕೊಟ್ಟಾಯಂ, ಕೊಯಮತ್ತೂರಿನಲ್ಲಿರುವ ಕೆಲವು ವಾಹನ ಮಾಲೀಕರು, ಆಟೋಮೊಬೈಲ್ ಕಾರ್ಯಾಗಾರಗಳು ಮತ್ತು ವ್ಯಾಪಾರಿಗಳಿಗೆ ಸಂಬಂಧಿಸಿದ ಜಾಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ದುಲ್ಕರ್ ಸಲ್ಮಾನ್ ಅವರ ತಂದೆ ಮಲಯಾಳಂ ಸಿನಿಮಾ ರಂಗದ ಹಿರಿಯ ನಟ ಮಮ್ಮುಟ್ಟಿ ಅವರ ಕೊಚ್ಚಿಯ ಪನಂಪಿಲ್ಲಿ ನಗರದಲ್ಲಿರುವ ಮನೆಯಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದು ಹಳೆಯ ಮನೆಯಾಗಿದ್ದು, ಪ್ರಸ್ತುತ ಮಮ್ಮುಟ್ಟಿ ಅಲ್ಲಿ ವಾಸ ಇಲ್ಲ ಎಂದು ವರದಿಯಾಗಿದೆ.

ಇನ್ನುಳಿದಂತೆ ಚೆನ್ನೈಯ ಗ್ರೀನ್‌ವೇಸ್ ರೋಡ್‌ನಲ್ಲಿರುವ ಮಮ್ಮುಟ್ಟಿ ಮತ್ತು ದುಲ್ಕರ್ ಸಲ್ಮಾನ್ ಅವರಿಗೆ ಸೇರಿದ ‘ವೇಫೇರ್ ಫಿಲ್ಮ್ಸ್’ ಸಂಸ್ಥೆ ಮೇಲೂ ಇಡಿ ದಾಳಿ ಮಾಡಿದೆ.

ದುಲ್ಕರ್ ಸಲ್ಮಾನ್ ಅವರ ಕೊಚ್ಚಿ ಮತ್ತು ಚೆನ್ನೈನಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಸೆಪ್ಟೆಂಬರ್ 23ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ನಟರ ಮನೆಗಳು ಸೇರಿದಂತೆ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತ್ತು. ಈ ದಾಳಿಗಳಲ್ಲಿ, ಕಳೆದ ಕೆಲವು ವರ್ಷಗಳಿಂದ ಭೂತಾನ್‌ನಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಶಂಕಿಸಲಾದ 37 ಐಷಾರಾಮಿ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂಡೋ-ಭೂತಾನ್/ನೇಪಾಳ ಮಾರ್ಗಗಳ ಮೂಲಕ ಲ್ಯಾಂಡ್ ಕ್ರೂಸರ್, ಡಿಫೆಂಡರ್ ಮತ್ತು ಮಸೆರಾಟಿಯಂತಹ ಐಷಾರಾಮಿ ಕಾರುಗಳ ಅಕ್ರಮ ಆಮದು ಮತ್ತು ನೋಂದಣಿಯಲ್ಲಿ ತೊಡಗಿರುವ ಜಾಲ ನೀಡಿದ ಮಾಹಿತಿಯ ಆಧಾರದ ಮೇಲೆ ಶೋಧ ನಡೆಸಲಾಗಿದೆ ಎಂದು ಇಡಿ ಬುಧವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸೇನೆ, ಅಮೆರಿಕ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ನಕಲಿ ದಾಖಲೆಗಳನ್ನು ಬಳಸಿಕೊಂಡು ಕೊಯಮತ್ತೂರು ಮೂಲದ ಜಾಲವೊಂದು ವಂಚನೆ ನಡೆಸುತ್ತಿದೆ. ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ಇತರ ರಾಜ್ಯಗಳ ಆರ್‌ಟಿಒ (ಪ್ರಾದೇಶಿಕ ಸಾರಿಗೆ ಕಚೇರಿ) ನೋಂದಣಿಗಳಲ್ಲಿ ವಂಚನೆ ಎಸಗುತ್ತಿದೆ. ನಂತರ ಈ ವಾಹನಗಳನ್ನು ಸಿನಿಮಾ ನಟರು ಸೇರಿದಂತೆ ಸೆಲೆಬ್ರೆಟಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪ್ರಕಟಣೆ ಹೇಳಿದೆ.

ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಎಫ್‌ಇಎಂಎ), 1999 ರ ಕಲಂ 3, 4, ಮತ್ತು 8 ರ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಇಡಿ ಕ್ರಮ ಕೈಗೊಂಡಿದೆ. ಅನಧಿಕೃತ ವಿದೇಶಿ ವಿನಿಮಯ ವ್ಯವಹಾರಗಳು ಮತ್ತು ಹವಾಲಾ ಮಾರ್ಗಗಳ ಮೂಲಕ ಗಡಿಯಾಚೆಗಿನ ಪಾವತಿಗಳು ಉಲ್ಲಂಘನೆಯಲ್ಲಿ ಒಳಗೊಂಡಿವೆ. ಹಣದ ಮಾರ್ಗ, ಫಲಾನುಭವಿಗಳ ಜಾಲ ಮತ್ತು ವಿದೇಶಿ ವಿನಿಮಯ ಚಲನೆಯನ್ನು ಕಂಡುಹಿಡಿಯಲು ಮುಂದಿನ ತನಿಖೆ ನಡೆಯುತ್ತಿದೆ.

ಕಸ್ಟಮ್ಸ್ ವಿಭಾಗವು ‘ನುಮ್‌ಖೋರ್’ ಎಂಬ ಕಾರ್ಯಾಚರಣೆಯನ್ನು ಕೇರಳದಾದ್ಯಂತ ಆರಂಭಿಸಿದೆ. ‘ನುಮ್‌ಖೋರ್’ ಎಂಬ ಪದವು ಭೂತಾನಿನ ಭಾಷೆಯಲ್ಲಿ ‘ವಾಹನ’ ಎಂಬ ಅರ್ಥವನ್ನು ಹೊಂದಿದೆ. ಈ ಕಾರ್ಯಾಚರಣೆಯ ಉದ್ದೇಶವು ಕಾನೂನುಬಾಹಿರವಾಗಿ ತರಲಾದ ವಾಹನಗಳನ್ನು ಗುರುತಿಸಿ, ಜಪ್ತಿ ಮಾಡುವುದಾಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಡೇಟಾಬೇಸ್‌ನಲ್ಲಿ 150 ರಿಂದ 200 ವಾಹನಗಳ ದಾಖಲೆಗಳಲ್ಲಿ ತಪ್ಪು ಮಾಹಿತಿ, ನಕಲಿ ದಾಖಲೆಗಳು ಮತ್ತು ಸುಂಕದಿಂದ ತಪ್ಪಿಸಿಕೊಂಡಿರುವುದನ್ನು ಗುರುತಿಸಿವೆ. ಈ ವಾಹನಗಳು ಕಾನೂನುಬಾಹಿರವಾಗಿ ದೇಶಕ್ಕೆ ತರಲಾದವು ಎಂಬ ಶಂಕೆಯಿದೆ.

ದುಲ್ಕರ್ ಸಲ್ಮಾನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರಿಗೆ ಸೇರಿದ ಹಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಕೊಚ್ಚಿಯಲ್ಲಿರುವ ಪೃಥ್ವಿರಾಜ್ ಅವರ ಮನೆ ಮೇಲೆ ದಾಳಿ ಮಾಡಿದ್ದರೂ, ಅವರ ಯಾವುದೇ ವಾಹನಗಳನ್ನು ವಶಪಡಿಸಿಕೊಂಡಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ದುಲ್ಕರ್ ಸಲ್ಮಾನ್ ತಮ್ಮ ವಾಹನಗಳನ್ನು ಬಿಡುಗಡೆ ಮಾಡುವಂತೆ ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮಂಗಳವಾರ, ನ್ಯಾಯಾಲಯವು ಅವರ ಐಷಾರಾಮಿ ಎಸ್‌ಯುವಿಗಳಲ್ಲಿ ಒಂದನ್ನು ಬಿಡುಗಡೆ ಮಾಡಲು ಕಸ್ಟಮ್ಸ್ ಕಾಯ್ದೆಯಡಿಯಲ್ಲಿ ನ್ಯಾಯನಿರ್ಣಯ ಪ್ರಾಧಿಕಾರವನ್ನು ಸಂಪರ್ಕಿಸಲು ನಿರ್ದೇಶಿಸಿದೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ; ಸಾವಿಗೆ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...