Homeಅಂತರಾಷ್ಟ್ರೀಯರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

- Advertisement -
- Advertisement -

ಉಭಯ ದೇಶಗಳ ಸಂಘರ್ಷದಲ್ಲಿ ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ಪ್ರಜೆಯನ್ನು ಸೆರೆಹಿಡಿದಿರುವುದಾಗಿ ಉಕ್ರೇನ್ ಮಂಗಳವಾರ (ಅ.7) ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಉಕ್ರೇನ್‌ ಸಶಸ್ತ್ರ ಪಡೆಗಳ 63ನೇ ಯಾಂತ್ರಿಕೃತ ಬ್ರಿಗೇಡ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಗುಜರಾತ್‌ನ ಮೋರ್ಬಿ ನಿವಾಸಿ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಅವರು ಮಾತನಾಡುವ ವಿಡಿಯೋ ಬಿಡುಗಡೆ ಮಾಡಿದೆ.

ಹುಸೇನ್ ಅವರು ರಷ್ಯಾದ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಹೋಗಿದ್ದರು ಎಂದು ವರದಿಗಳು ಹೇಳಿವೆ.

ಉಕ್ರೇನ್ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ರಷ್ಯನ್ ಭಾಷೆಯಲ್ಲಿ ಮಾತನಾಡಿರುವ ಹುಸೇನ್, “ನಾನು ಅಧ್ಯಯನ ನಿಮಿತ್ತ ರಷ್ಯಾಗೆ ಹೋಗಿದ್ದೆ. ಅಲ್ಲಿ ಮಾದಕ ವಸ್ತು ಸಂಬಂಧಿತ ಆರೋಪದಲ್ಲಿ ನನ್ನನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ನನಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅದರಿಂದ ತಪ್ಪಿಸಿಕೊಳ್ಳಲು ಬಯಸಿದರೆ ರಷ್ಯಾ ಸೇನೆ ಪರ ಹೋರಾಡುವ ಒಪ್ಪಂದಕ್ಕೆ ಸಹಿ ಹಾಕಲು ನನಗೆ ಹೇಳಲಾಯಿತು. ನನಗೆ ಜೈಲ್ಲಿನಲ್ಲಿ ಇರಲು ಇಷ್ಟ ಇರಲಿಲ್ಲ. ಆದ್ದರಿಂದ ವಿಶೇಷ ಮಿಲಿಟರಿ ಕಾರ್ಯಾಚರಣೆಗಾಗಿ ಒಪ್ಪಂದಕ್ಕೆ ಸಹಿ ಹಾಕಿದೆ” ಎಂದು ಹೇಳಿದ್ದಾರೆ.

“16 ದಿನಗಳ ತರಬೇತಿಯ ನಂತರ ಅಕ್ಟೋಬರ್ 1ರಂದು ಮೊದಲ ಬಾರಿಗೆ ನನ್ನನ್ನು ಸೇನೆ ಜೊತೆ ಹೋರಾಡಲು ಕಳುಹಿಸಿದರು. ಮೂರು ದಿನಗಳ ಕಾಲ ನಾನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದೆ. ನನ್ನ ಕಮಾಂಡರ್ ಜೊತೆಗಿನ ವಾಗ್ವಾದದ ನಂತರ ಉಕ್ರೇನ್ ಸೇನೆಗೆ ಶರಣಾದೆ” ಎಂದು ಹುಸೇನ್ ತಿಳಿಸಿದ್ದಾರೆ.

“ನಾನು ರಷ್ಯಾ ಸೇನೆ ಪರ ಹೋರಾಡಲು ಬಂದಿದ್ದ ವೇಳೆ ಎರಡರಿಂದ ಮೂರು ಕಿಲೋ ಮೀಟರ್ ದೂರದಲ್ಲಿ ಉಕ್ರೇನ್ ಸೇನೆಯ ಜಾಗವನ್ನು ಕಂಡೆ. ತಕ್ಷಣ ನಾನು ರೈಫಲ್ ಕೆಳಗಿಟ್ಟು ನಾನು ಹೋರಾಡಲು ಬಯಸುವುದಿಲ್ಲ ಎಂದು ಹೇಳಿದೆ. ನನಗೆ ಸಹಾಯ ಬೇಕು. ನಾನು ರಷ್ಯಾಕ್ಕೆ ಹಿಂತಿರುಗಲು ಬಯಸುವುದಿಲ್ಲಎಂದೆ” ಎಂದು ಹುಸೇನ್ ವಿಡಿಯೋದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಭಾರತೀಯ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಷ್ಯಾ ಸೇನೆಗೆ ಇತ್ತೀಚೆಗೆ ನೇಮಕ ಮಾಡಿಕೊಂಡಿರುವ 27 ಭಾರತೀಯ ಪ್ರಜೆಗಳನ್ನು ತಕ್ಷಣ ಬಿಡುಗಡೆ ಮಾಡಿ ತಾಯ್ನಾಡಿಗೆ ಕಳುಹಿಸುವಂತೆ ಒತ್ತಾಯಿಸಿದ್ದಾಗಿ ಸೆಪ್ಟೆಂಬರ್‌ನಲ್ಲಿ ಭಾರತ ಸರ್ಕಾರ ಹೇಳಿಕೊಂಡಿತ್ತು. ಇದಾಗಿ ಕೆಲ ದಿನಗಳಲ್ಲಿ ವಿದ್ಯಾರ್ಥಿಯ ಶರಣಾಗತಿ ಸುದ್ದಿ ಬಂದಿದೆ.

ಯುವಜನರನ್ನು ಉದ್ಯೋಗದ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಿ, ಅಲ್ಲಿ ಶಸ್ತ್ರಾಸ್ತ ಕೊಟ್ಟು ಯುದ್ದ ಭೂಮಿಗೆ ಕಳುಹಿಸುವ ಜಾಲದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಕನಿಷ್ಠ 15 ಭಾರತೀಯರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲಿ ಅವರನ್ನು ರಷ್ಯಾ ಮಿಲಿಟರಿಯೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ಸೆಪ್ಟೆಂಬರ್‌ನಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿತ್ತು.

ವಿದ್ಯಾರ್ಥಿ ಉಕ್ರೇನ್ ಸೇನೆಗೆ ವಿದ್ಯಾರ್ಥಿ ಶರಣಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಣಧೀರ್ ಜೈಸ್ವಾಲ್, “ಆಮಿಷಗಳಿಗೆ ಬಲಿಯಾಗಿ ರಷ್ಯಾದ ಸೇನೆಗೆ ಸೇರುವುದು ಅಪಾಯಕಾರಿ” ಎಂದಿದ್ದಾರೆ.

ರಷ್ಯಾದ ಸಶಸ್ತ್ರ ಪಡೆಗಳಲ್ಲಿ 127 ಭಾರತೀಯ ನಾಗರಿಕರಿದ್ದರು. ಅವರಲ್ಲಿ 98 ಜನರನ್ನು ಮಿಲಿಟರಿಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಉಭಯ ರಾಷ್ಟ್ರಗಳ ಸರ್ಕಾರಗಳ ನಡುವಿನ ಮಾತುಕತೆಯ ಪರಿಣಾಮವಾಗಿ ಅವರು ಭಾರತಕ್ಕೆ ಮರಳಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಜುಲೈನಲ್ಲಿ ರಾಜ್ಯಸಭೆಗೆ ತಿಳಿಸಿತ್ತು.

ನವದೆಹಲಿಯಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಪ್ರಕಾರ, ರಷ್ಯಾದ ರಕ್ಷಣಾ ಸಚಿವಾಲಯವು 2024 ರ ಏಪ್ರಿಲ್‌ನಿಂದ ಭಾರತೀಯರನ್ನು ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಿದೆ. ಆದರೆ, ಸೈನಿಕ ಸೇವೆಗೆ ಸಂಬಂಧಿಸಿದ ಕಾಂಟ್ರಾಕ್ಟ್‌ಗಳು ಹಲವಾರು ಭಾರತೀಯರ ಬಿಡುಗಡೆಯನ್ನು ವಿಳಂಬಗೊಳಿಸಿವೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ತನ್ನ ಆಕ್ರಮಣವನ್ನು ಪ್ರಾರಂಭಿಸಿದ್ದು, ಈಗಲೂ ನಡೆಯುತ್ತಿದೆ. ಇದು ಎರಡನೇ ಮಹಾಯುದ್ಧದ ನಂತರ ಯುರೋಪ್‌ನಲ್ಲಿ ನಡೆಯುತ್ತಿರುವ ಅತ್ಯಂತ ಮಾರಕ ಸಂಘರ್ಷವಾಗಿದೆ.

ಮೇರಿ ಬ್ರಂಕೋವ್, ಫ್ರೆಡ್ ರಾಮ್ಸ್‌ಡೆಲ್, ಶಿಮೊನ್ ಸಕಾಗುಚಿ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...