Homeದಲಿತ್ ಫೈಲ್ಸ್ತೆಲಂಗಾಣ| ದಲಿತ ಸಹೋದ್ಯೋಗಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ; ವಿಷಾಧ ವ್ಯಕ್ತಪಡಿಸಿದ ಸಚಿವ ಪೊನ್ನಮ್ ಪ್ರಭಾಕರ್

ತೆಲಂಗಾಣ| ದಲಿತ ಸಹೋದ್ಯೋಗಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ; ವಿಷಾಧ ವ್ಯಕ್ತಪಡಿಸಿದ ಸಚಿವ ಪೊನ್ನಮ್ ಪ್ರಭಾಕರ್

- Advertisement -
- Advertisement -

ತನ್ನ ಸಂಪುಟ ಸಹೋದ್ಯೋಗಿ ಹಾಗೂ ದಲಿತ ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಕ್ಕಾಗಿ ತೆಲಂಗಾಣದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಮ್ ಪ್ರಭಾಕರ್ ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಸಾವರ್ವಜನಿಕ ಸಭೆಯೊಂದರಲ್ಲಿ ಪರಿಶಿಷ್ಟ ಜಾತಿ ಕಲ್ಯಾಣ ಸಚಿವ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರ ಬಗ್ಗೆ ತಾವಾಡಿದ ಮಾತುಗಳಿಗೆ ಸಚಿವರು ಪ್ರತಿಕ್ರಿಯೆ ನಿಡಿದ್ದಾರೆ.

ನಿನ್ನೆ ತಡರಾತ್ರಿ ಬಿಡುಗಡೆಯಾದ ಹೇಳಿಕೆಯಲ್ಲಿ, ಲಕ್ಷ್ಮಣ್‌ ಕುಮಾರ್ ಅವರನ್ನು ನನ್ನ ‘ಸಹೋದರನಂತೆ’ ಎಂದು ಸಚಿವರು ಹೇಳಿದರು. “ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹ 30 ವರ್ಷಗಳನ್ನು ಹೊಂದಿದೆ, ಅದು ರಾಜಕೀಯವನ್ನು ಮೀರಿದೆ. ನಮ್ಮ ನಡುವಿನ ಬಾಂಧವ್ಯ ಮತ್ತು ಪರಸ್ಪರ ಗೌರವ ಯಾವಾಗಲೂ ಪ್ರಬಲವಾಗಿದೆ. ಯಾರೂ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

“ನಾನು ಅವರ ವಿರುದ್ಧ ಯಾವುದೇ ವೈಯಕ್ತಿಕ ಹೇಳಿಕೆಗಳನ್ನು ನೀಡಿಲ್ಲ. ತಳಮಟ್ಟದಿಂದ ಬೆಳೆದ ವ್ಯಕ್ತಿಯಾಗಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ನಾಯಕನಾಗಿ, ನಾನು ಯಾರ ಬಗ್ಗೆಯೂ ಅಂತಹ ಅಭಿಪ್ರಾಯವನ್ನು ಎಂದಿಗೂ ಹೊಂದಿರುವುದಿಲ್ಲ” ಎಂದಿದ್ದಾರೆ.

“ಆದರೆ, ರಾಜಕೀಯ ದುರುದ್ದೇಶದಿಂದ, ಕೆಲವರು ನನ್ನ ಹೇಳಿಕೆಗಳನ್ನು ತಿರುಚಿ ಸತ್ಯಕ್ಕೆ ವಿರುದ್ಧವಾಗಿ ಪ್ರಚಾರ ಮಾಡಿದ್ದಾರೆ. ಈ ತಪ್ಪು ತಿಳುವಳಿಕೆಗಳಿಂದಾಗಿ, ಅಣ್ಣ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರಂತಹ ವ್ಯಕ್ತಿಯ ಭಾವನೆಗಳಿಗೆ ನೋವುಂಟಾಗಿದೆ ಎಂದು ತಿಳಿದು ನನಗೆ ತುಂಬಾ ದುಃಖವಾಗಿದೆ” ಎಂದು ಪ್ರಭಾಕರ್ ಹೇಳಿದರು.

“ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರ ಭಾವನೆಗಳಿಗೆ ನೋವಾಗಿದ್ದರೆ ನನಗೆ ವಿಷಾದವಿದೆ. ಕಾಂಗ್ರೆಸ್ ಪಕ್ಷದ ತತ್ವಗಳನ್ನು ಬಲಪಡಿಸಲು, ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಸಾಮಾಜಿಕ ನ್ಯಾಯವನ್ನು ಸಾಧಿಸಲು ಮತ್ತು ಜನರ ಕಲ್ಯಾಣಕ್ಕಾಗಿ ಶ್ರಮಿಸಲು ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಅವರು ಹೇಳಿದರು.

ನವೆಂಬರ್ 11 ರಂದು ಜುಬಿಲಿ ಹಿಲ್ಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಾದ ಪ್ರಾರಂಭವಾಯಿತು. ಲಕ್ಷ್ಮಣ್‌ ಕುಮಾರ್ ಬರುವುದಕ್ಕಾಗಿ ಕಾಯುತ್ತಿದ್ದರು ಪ್ರಭಾಕರ್, ವಿಳಂಬದಿಂದ ಸಿಟ್ಟಾಗಿದ್ದರು. ಸಹ ಸಚಿವರೊಂದಿಗೆ ಮಾತನಾಡುವಾಗ, ಅವರು ಸಮಯಪಾಲನೆಯ ಬಗ್ಗೆ ಟೀಕಿಸಿದರು. ಲಕ್ಷ್ಮಣ್‌ ಕುಮಾರ್ ಅವರನ್ನು ಎಮ್ಮ (ತೆಲುಗಿನಲ್ಲಿ ಧುನ್ನಪೋತು) ಎಂದು ಉಲ್ಲೇಖಿಸಿದರು. ಸುದ್ದಿವಾಹಿನಿಗಳು ಮಾಧ್ಯಮ ಪ್ರಸಾರಕ್ಕಾಗಿ ಇಟ್ಟಿದ್ದ ಮೈಕ್ರೊಫೋನ್‌ಗಳು ಈ ಹೇಳಿಕೆಯನ್ನು ಸೆರೆಹಿಡಿದಿದ್ದವು.

ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಲಕ್ಷ್ಮಣ್‌ ಕುಮಾರ್, ತಮ್ಮ ಸಂಪುಟ ಸಹೋದ್ಯೋಗಿಯ ಹೇಳಿಕೆಗೆ ತೀವ್ರ ದುಃಖ ವ್ಯಕ್ತಪಡಿಸಿ ಭಾವನಾತ್ಮಕ ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಹೇಳಿಕೆಯನ್ನು ಅವರು ಜಾತಿವಾದಿ ಅವಮಾನವೆಂದು ಪರಿಗಣಿಸಿದ್ದು, ಅದು ಅವರನ್ನು ಮಾತ್ರವಲ್ಲದೆ ತಮ್ಮ ಸಮುದಾಯವನ್ನೂ ನಾಚಿಕೆಪಡಿಸಿದೆ, ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಪ್ರಭಾಕರ್ ಕ್ಷಮೆಯಾಚಿಸದಿದ್ದರೆ, ಈ ವಿಷಯವನ್ನು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಕೊಂಡೊಯ್ಯುವುದಾಗಿ ಕುಮಾರ್ ಎಚ್ಚರಿಸಿದರು.

ಕರೀಂನಗರ ಜಿಲ್ಲೆಯ ಪ್ರಭಾವಿ ನಾಯಕರು ಮತ್ತು ಕಾಂಗ್ರೆಸ್ ಸರ್ಕಾರದ ಪ್ರಮುಖ ವ್ಯಕ್ತಿಗಳಾದ ಹಿರಿಯ ಸಚಿವರ ನಡುವಿನ ಸಾರ್ವಜನಿಕ ಜಗಳವು ನಿರ್ಣಾಯಕ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಜುಬಿಲಿ ಹಿಲ್ಸ್ ಉಪಚುನಾವಣೆಗೆ ಮೊದಲು ಕೋಲಾಹಲಕ್ಕೆ ಕಾರಣವಾಯಿತು.

ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಿ ಮಹೇಶ್ ಕುಮಾರ್ ಗೌಡ್, ಮಧ್ಯಪ್ರವೇಶಿಸಿ ಇಬ್ಬರೂ ಸಚಿವರೊಂದಿಗೆ ಮಾತನಾಡಿದರತು. ಸಂಯಮ ಮತ್ತು ಸಮನ್ವಯವನ್ನು ಕಾಯ್ದುಕೊಳ್ಳುವಂತೆ ಒತ್ತಾಯಿಸಿದರು.

ದಲಿತ ಸಹೋದ್ಯೋಗಿಯನ್ನು ‘ಎಮ್ಮೆ’ ಎಂದು ಟೀಕಿಸಿದ ತೆಲಂಗಾಣ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...