Homeಅಂತರಾಷ್ಟ್ರೀಯಎರಡು ವರ್ಷಗಳ ಗಾಝಾ 'ನರಮೇಧ': 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ...

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

- Advertisement -
- Advertisement -

ಎರಡು ವರ್ಷಗಳಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ಪರಿಣಾಮ 12 ಲಕ್ಷಕ್ಕೂ ಹೆಚ್ಚು ಮಕ್ಕಳು ಆಹಾರದಿಂದ ವಂಚಿತರಾಗಿದ್ದಾರೆ ಮತ್ತು 58,554 ಮಕ್ಕಳು ಅನಾಥರಾಗಿದ್ದಾರೆ ಎಂದು ಅಕ್ಟೋಬರ್ 7, 2025ರಂದು ಗಾಝಾ ಆರೋಗ್ಯ ಸಚಿವಾಲಯದ ಬಿಡುಗಡೆ ಮಾಡಿದ ಅಂಕಿ ಅಂಶಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ವಿಶ್ವಸಂಸ್ಥೆಯ ತನಿಖಾ ಆಯೋಗವು ‘ನರಮೇಧ’ ಎಂದು ಘೋಷಿಸಿರುವ ಇಸ್ರೇಲ್ ಆಕ್ರಮಣದಲ್ಲಿ 9,14,102 ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಮತ್ತು 5,580 ಮಕ್ಕಳು ವೈದ್ಯಕೀಯ ಸ್ಥಳಾಂತರಕ್ಕಾಗಿ ಕಾಯುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಆಕ್ರಮಣ ಪ್ರಾರಂಭಿಸಿ ಎರಡು ವರ್ಷ ಪೂರ್ಣಗೊಳ್ಳುವಾಗ, ಅಂದರೆ ಅಕ್ಟೋಬರ್ 7, 2025ರವರೆಗೆ ಒಟ್ಟು 20,179 ಮಕ್ಕಳನ್ನು ಇಸ್ರೇಲ್ ಹತ್ಯೆ ಮಾಡಿದೆ. ಗಾಝಾದಲ್ಲಿ ಪ್ರತಿ 52 ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಹತ್ಯೆಗೈದ ಮಕ್ಕಳಲ್ಲಿ 1,029 ಮಂದಿ ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನವರು, 5,031 ಮಕ್ಕಳು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮತ್ತು 420 ಮಕ್ಕಳು ಯುದ್ಧದ ಅವಧಿಯಲ್ಲೇ ಜನಿಸಿ ಕೊಲ್ಲಲ್ಪಟ್ಟರು ಎಂದಿದೆ.

ಮಕ್ಕಳಿಗೆ ಲಸಿಕೆ ಹಾಕುವ ಪ್ರಮಾಣ 2022ರಲ್ಲಿ ಶೇಕಡ 98.7ರಷ್ಟು ಇತ್ತು. ಅದು 2025ರಲ್ಲಿ ಶೇಕಡ 80ಕ್ಕೆ ಇಳಿದಿದೆ. 1,102 ಮಕ್ಕಳು ಯುದ್ಧದ ಸಮಯದಲ್ಲಿ ಅಂಗಚ್ಛೇದನಕ್ಕೆ ಒಳಗಾಗಿದ್ದಾರೆ.

ಪೂರ್ವ ಜೆರುಸಲೇಂ ಮತ್ತು ಗಾಝಾದಲ್ಲಿ ಇಸ್ರೇಲ್‌ ‘ನರಮೇಧ’ ನಡೆಸುತ್ತಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗವು ತನ್ನ ವರದಿಯಲ್ಲಿ ಹೇಳಿದೆ.

ಅಕ್ಟೋಬರ್ 8 ಬುಧವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಮತ್ತು ಹಮಾಸ್ ಸಹಿ ಹಾಕಿದೆ ಎಂದು ವರದಿಯಾಗಿದೆ. ಈ ನಡುವೆ ಗುರುವಾರ ಉತ್ತರ ಗಾಝಾದಲ್ಲಿ ಇಸ್ರೇಲ್ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ.

ಇಸ್ರೇಲ್ ಆಕ್ರಮಣದಿಂದ ಅಕ್ಟೋಬರ್ 7ರವರೆಗೆ ಗಾಝಾದಲ್ಲಿ 67,173 ಜನರು ಸಾವನ್ನಪ್ಪಿದ್ದಾರೆ ಮತ್ತು 1,69,780 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ವಿವರಿಸಿದೆ.

ಸಾವನ್ನಪ್ಪಿದವರಲ್ಲಿ 20,179 (30%) ಮಕ್ಕಳು, 10,427 (16%) ಮಹಿಳೆಯರು, 4,813 (7%) ವೃದ್ಧರು ಮತ್ತು 31,754 (47%) ಪುರುಷರು ಒಳಗೊಂಡಿದ್ದಾರೆ. ಇದಲ್ಲದೆ, 4,900 ಜನರು ಅಂಗವಿಕಲತೆಗೆ ಒಳಗಾಗಿದ್ದಾರೆ. ಪ್ರತಿದಿನ ಕನಿಷ್ಠ 13 ಕುಟುಂಬಗಳು ಹತ್ಯಾಕಾಂಡಕ್ಕೆ ಒಳಗಾಗುತ್ತಿವೆ. ಇದುವರೆಗೆ ಒಟ್ಟು 8,910 ಕುಟುಂಬಗಳು ಹತ್ಯಾಕಾಂಡಕ್ಕೆ ಒಳಗಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ,

ಆಹಾರ ಅಭದ್ರತೆ ಮತ್ತು ಆರೋಗ್ಯ ರಕ್ಷಣೆ

ದತ್ತಾಂಶ ತೋರಿಸುವಂತೆ, 2025ರಲ್ಲಿ ಗಾಝಾದಲ್ಲಿ 4,163 ಗರ್ಭಪಾತಗಳು, 2,415 ಅಕಾಲಿಕ ಜನನಗಳು ಮತ್ತು 274 ನವಜಾತ ಶಿಶುಗಳ ಸಾವುಗಳು ವರದಿಯಾಗಿವೆ.

ಅಪೌಷ್ಟಿಕತೆಯಿಂದ ಸಂಭವಿಸಿದ ಸಾವುಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, 2023ರಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, 2025ರಲ್ಲಿ ಈ ಸಂಖ್ಯೆ 408ಕ್ಕೆ ಏರಿಕೆಯಾಗಿದೆ. ಈ ಸಾವುಗಳಲ್ಲಿ 157 (34.1%) ಮಕ್ಕಳು, 188 (40.8%) ವೃದ್ಧರು, 44 (9.5%) ಮಹಿಳೆಯರು ಮತ್ತು 72 (15.6%) ಪುರುಷರು ಒಳಗೊಂಡಿದ್ದಾರೆ.

ಆಗಸ್ಟ್ 2025ರಲ್ಲಿ ಐದು ವರ್ಷದೊಳಗಿನ 14,383 ಮಕ್ಕಳು ಅಪೌಷ್ಟಿಕತೆಗೆ ಒಳಗಾಗಿರುವುದು ವರದಿಯಾಗಿದೆ. ಈ ಪೈಕಿ 3,466 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಜನವರಿ 2025ರ ನಂತರ 452 ಮಕ್ಕಳು ಅಪೌಷ್ಠಿಕತೆಗೆ ತುತ್ತಾಗಿದ್ದಾರೆ.

ಗಾಝಾದಲ್ಲಿರುವ ಎಲ್ಲಾ 38 ಆಸ್ಪತ್ರೆಗಳ ಮೇಲೂ ಇಸ್ರೇಲ್ ದಾಳಿ ಮಾಡಿದೆ. ಪರಿಣಾಮ ಕೇವಲ 13 ಆಸ್ಪತ್ರೆಗಳು ಭಾಗಶಃ ಕಾರ್ಯನಿರ್ವಹಿಸುತ್ತಿವೆ, 25 ಆಸ್ಪತ್ರೆಗಳು ಮುಚ್ಚಲ್ಪಟ್ಟಿವೆ.

ಗಾಝಾದಲ್ಲಿರುವ ಎಲ್ಲಾ 157 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲೂ ಇಸ್ರೇಲ್ ದಾಳಿ ಮಾಡಿದೆ. ಪರಿಣಾಮ 103 ಆಸ್ಪತ್ರೆಗಳು ಮುಚ್ಚಲ್ಪಟ್ಟಿವೆ ಮತ್ತು 54 ಭಾಗಶಃ ಕಾರ್ಯನಿರ್ವಹಿಸುತ್ತಿವೆ.

2023ರ ಸೆಪ್ಟೆಂಬರ್‌ನಲ್ಲಿ ಆಸ್ಪತ್ರೆಯ ಬೆಡ್‌ಗಳ ಬಳಕೆಯ ಪ್ರಮಾಣ ಶೇಕಡ 82 ಆಗಿತ್ತು. ಆದರೆ, 2025ರ ಸೆಪ್ಟೆಂಬರ್‌ನಲ್ಲಿ ಈ ದರ ಶೇಕಡ 225.5ಕ್ಕೆ ಏರಿಕೆಯಾಗಿದೆ. ಇದರರ್ಥ, ಆಸ್ಪತ್ರೆಯ ಬೆಡ್‌ಗಳ ಬೇಡಿಕೆಯು ಲಭ್ಯವಿರುವ ಬೆಡ್‌ಗಳ ಸಂಖ್ಯೆಗಿಂತ ಗಣನೀಯವಾಗಿ ಹೆಚ್ಚಾಗಿದೆ, ಒಂದೇ ಬೆಡ್‌ ಅನ್ನು ಒಂದಕ್ಕಿಂತ ಹೆಚ್ಚು ರೋಗಿಗಳಿಗೆ ಬಳಸಲಾಗುತ್ತಿದೆ.

ಗಾಝಾದ ಜನಸಂಖ್ಯೆಯು 21,00,000 ಎಂದು ಅಂದಾಜಿಸಲಾಗಿದೆ. ಆಸ್ಪತ್ರೆಯ ಬೆಡ್‌ಗಳ ಒಟ್ಟು ಸಂಖ್ಯೆ 2022ರಲ್ಲಿ 3,560 ಇದ್ದದ್ದು 2025ರ ವೇಳೆಗೆ 1,578ಕ್ಕೆ ಕಡಿಮೆಯಾಗಿದೆ. ಇದರಿಂದ ಆಸ್ಪತ್ರೆಯ ಸೌಲಭ್ಯಗಳ ಮೇಲಿನ ಒತ್ತಡವು ಗಮನಾರ್ಹವಾಗಿ ಹೆಚ್ಚಾಗಿದೆ, ಏಕೆಂದರೆ ಕಡಿಮೆ ಬೆಡ್‌ಗಳು ಇರುವಾಗ ಬೇಡಿಕೆಯು ತೀವ್ರವಾಗಿ ಏರಿಕೆಯಾಗಿದೆ.

ಇದಲ್ಲದೆ, 362 ಆರೋಗ್ಯ ಸಿಬ್ಬಂದಿ ಇಸ್ರೇಲಿ ಬಂಧನದಲ್ಲಿದ್ದಾರೆ, 1,701 ಆರೋಗ್ಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು 211 ಆಂಬ್ಯುಲೆನ್ಸ್‌ಗಳ ಮೇಲೆ ಇಸ್ರೇಲ್ ದಾಳಿ ಮಾಡಿದೆ ಎಂದು ದತ್ತಾಂಶ ತೋರಿಸಿದೆ.

ಎಲ್ಲಾ ಏಳು ಎಂಆರ್‌ಐ ಯಂತ್ರಗಳು, 17ರಲ್ಲಿ 10 ಸಿಟಿ ಸ್ಕ್ಯಾನರ್‌ಗಳು 35 ರಲ್ಲಿ 25 ಆಮ್ಲಜನಕ ಕೇಂದ್ರಗಳು ಮತ್ತು 110ರಲ್ಲಿ 61 ವಿದ್ಯುತ್ ಜನರೇಟರ್‌ಗಳು ನಾಶವಾದ ವೈದ್ಯಕೀಯ ಉಪಕರಣಗಳಲ್ಲಿ ಸೇರಿವೆ.

ಗಾಝಾದಲ್ಲಿರುವ 260 ನೀರಿನ ಬಾವಿಗಳಲ್ಲಿ ಕೇವಲ 116 ಬಾವಿಗಳು ಮಾತ್ರ ಈಗ ಕಾರ್ಯನಿರ್ವಹಿಸುತ್ತಿವೆ. ಇದರ ಜೊತೆಗೆ, ಒಬ್ಬ ವ್ಯಕ್ತಿಗೆ ದಿನಕ್ಕೆ ಲಭ್ಯವಿರುವ ನೀರಿನ ಪ್ರಮಾಣವು 2023ರ ಅಕ್ಟೋಬರ್ 7ರ ಮೊದಲು 84.6 ಇದ್ದದ್ದು, ಈಗ ಕೇವಲ 5 ಲೀಟರ್‌ಗಳಿಗೆ ಕಡಿಮೆಯಾಗಿದೆ.

ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...