Homeಮುಖಪುಟಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ಒದಗಿಸಲು ಕಾಯ್ದೆ: ತೇಜಸ್ವಿ ಯಾದವ್ ಭರವಸೆ

ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ಒದಗಿಸಲು ಕಾಯ್ದೆ: ತೇಜಸ್ವಿ ಯಾದವ್ ಭರವಸೆ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಮುನ್ನ ಪ್ರಮುಖ ಘೋಷಣೆ ಮಾಡಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಪ್ರಸಾದ್ ಯಾದವ್, ಬಿಹಾರದಲ್ಲಿ ಆರ್‌ಜೆಡಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ರಾಜ್ಯದ ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ಖಚಿತಪಡಿಸುವ ಕಾಯ್ದೆ ತರಲಾಗುವುದು ಎಂದಿದ್ದಾರೆ.

ಪಾಟ್ನಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ಸರ್ಕಾರ ರಚನೆಯಾದ 20 ದಿನಗಳಲ್ಲಿ ಪ್ರಸ್ತಾವಿತ ಕಾಯ್ದೆಯನ್ನು ಪರಿಚಯಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. “ಎನ್‌ಡಿಎಗೆ 20 ವರ್ಷಗಳಲ್ಲಿ ಯುವಕರಿಗೆ ಉದ್ಯೋಗ ನೀಡಲು ಸಾಧ್ಯವಾಗಿಲ್ಲ. ನಾವು ಅಧಿಕಾರಕ್ಕೆ ಬಂದ 20 ದಿನಗಳಲ್ಲಿ ಕಾಯ್ದೆ ಜಾರಿಗೆ ತರುತ್ತೇವೆ ಮತ್ತು 20 ತಿಂಗಳೊಳಗೆ ಅದರ ಅನುಷ್ಠಾನವನ್ನು ಖಚಿತಪಡಿಸುತ್ತೇವೆ” ಎಂದು ಹೇಳಿದ್ದಾರೆ.

“2020ರ ವಿಧಾನಸಭಾ ಚುನಾವಣೆಯಲ್ಲೂ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದೆವು. ನಮ್ಮ ಮಹಾ ಮೈತ್ರಿಕೂಟ ಸರ್ಕಾರದ 17 ತಿಂಗಳ ಆಡಳಿತದಲ್ಲಿ ಐದು ಲಕ್ಷ ಯುವಕರಿಗೆ ಉದ್ಯೋಗ ನೀಡಲಾಗಿದೆ. ಹಾಗಾದರೆ, ನಮಗೆ ಐದು ವರ್ಷಗಳ ಪೂರ್ಣ ಅವಧಿ ಸಿಕ್ಕಿದ್ದರೆ ಏನಾಗುತ್ತಿತ್ತು ಎಂದು ಊಹಿಸಿ” ಎಂದಿದ್ದಾರೆ.

ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮತದಾರರನ್ನು ಸೆಳೆಯಲು ವಿರೋಧ ಪಕ್ಷಗಳ ಮೈತ್ರಿಕೂಟ ಈಗಾಗಲೇ ಜನರಿಗೆ ಹಲವು ಭರವಸೆಗಳನ್ನು ನೀಡಿದೆ. ಈ ಪೈಕಿ “ಚುನಾವಣೆಗೆ ಮುನ್ನ ನಾನು ಮಾಡಲಿರುವ ಹಲವು ಘೋಷಣೆಗಳಲ್ಲಿ ಇದು ಮೊದಲನೆಯದು” ಎಂದು ಅವರು ಹೇಳಿದರು.

ಬಿಹಾರದಲ್ಲಿ ಸರ್ಕಾರ ಉದ್ಯೋಗಿಗಳಿಲ್ಲದ ಮನೆಗಳೇ ಇರಬಾರದು. ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯುವ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳ ಮೈತ್ರಿಕೂಟ ಜನರಿಗೆ ನೀಡಿರುವ ವಾಗ್ದಾನಗಳ ದೊಡ್ಡ ಪಟ್ಟಿಯಲ್ಲಿ ಇದು ಮತ್ತೊಂದು ಭರವಸೆಯಾಗಿದೆ. ಚುನಾವಣೆಗೆ ಮುನ್ನ ನಾನು ಮಾಡಲಿರುವ ಹಲವು ಘೋಷಣೆಗಳಲ್ಲಿ ಇದು ಮೊದಲನೆಯದು ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ನಿತೀಶ್ ಕುಮಾರ್ ಸರ್ಕಾರ ಘೋಷಣೆ ಮಾಡಿದಂತೆ ಬಿಹಾರದ ಜನರಿಗೆ ನಿರುದ್ಯೋಗ ಭತ್ಯೆ ನೀಡುವುದಕ್ಕಿಂತ ಉದ್ಯೋಗ ಒದಗಿಸುವುದು ನಮ್ಮ ಆದ್ಯತೆ. ಬಿಹಾರಕ್ಕೆ 75 ವರ್ಷದ ಮುಖ್ಯಮಂತ್ರಿ ಅಗತ್ಯವಿಲ್ಲ ಎಂದಿದ್ದಾರೆ.

ತೇಜಸ್ವಿಯ ಯಾದವ್ ಅವರ ಘೋಷಣೆಯನ್ನು ಚುನಾವಣೆಗೆ ಮುನ್ನ ಕಲ್ಯಾಣ ಯೋಜನೆಗಳ ಮೂಲಕ ಆಡಳಿತಾರೂಢ ಎನ್‌ಡಿಎ ಸರ್ಕಾರ ಮಾಡಿರುವ ಕಸರತ್ತಿಗೆ ತಿರುಗೇಟು ಎಂದು ಹೇಳಲಾಗ್ತಿದೆ.

ಪ್ರಧಾನಿ ಮೋದಿ ಇತ್ತೀಚೆಗೆ ಘೋಷಣೆ ಮಾಡಿರುವ ಬಿಹಾರದ ಮಹಿಳಾ ಉದ್ಯಮಿಗಳಿಗೆ ತಲಾ 10,000 ರೂ.ಗಳನ್ನು ನೀಡುವ ಸರ್ಕಾರದ ಉಪಕ್ರಮವು ಮಹಿಳಾ ಮತದಾರರನ್ನು ಆಡಳಿತ ಮೈತ್ರಿಕೂಟದ ಕಡೆಗೆ ಆಕರ್ಷಿಸಿದೆ ಎಂದು ವರದಿಗಳು ಹೇಳಿವೆ.

ಸೆಪ್ಟೆಂಬರ್ 27ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ ಮಹಿಳೆಯರಿಗಾಗಿ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸ್ವ-ಉದ್ಯೋಗ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಅಲ್ಲದೆ, ರಾಜ್ಯದ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ತಲಾ 10,000 ರೂ.ಗಳನ್ನು ವರ್ಗಾಯಿಸಿದ್ದಾರೆ.

ಇದಲ್ಲದೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಅಕ್ಟೋಬರ್ 3 ರಂದು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ 2,500 ಕೋಟಿ ರೂ.ಗಳನ್ನು ವರ್ಗಾಯಿಸಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯಡಿಯಲ್ಲಿ ತಲಾ 10,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಿದ್ದಾರೆ.

ದಾಳಿ ಯತ್ನದ ನಂತರ ಸಿಜೆಐ ಜಾತಿ ನಿಂದಿಸಿ ಪೋಸ್ಟ್ : 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...