Homeಮುಖಪುಟಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ಒದಗಿಸಲು ಕಾಯ್ದೆ: ತೇಜಸ್ವಿ ಯಾದವ್ ಭರವಸೆ

ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ಒದಗಿಸಲು ಕಾಯ್ದೆ: ತೇಜಸ್ವಿ ಯಾದವ್ ಭರವಸೆ

- Advertisement -
- Advertisement -

ವಿಧಾನಸಭಾ ಚುನಾವಣೆಗೆ ಮುನ್ನ ಪ್ರಮುಖ ಘೋಷಣೆ ಮಾಡಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಪ್ರಸಾದ್ ಯಾದವ್, ಬಿಹಾರದಲ್ಲಿ ಆರ್‌ಜೆಡಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ರಾಜ್ಯದ ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ಖಚಿತಪಡಿಸುವ ಕಾಯ್ದೆ ತರಲಾಗುವುದು ಎಂದಿದ್ದಾರೆ.

ಪಾಟ್ನಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ಸರ್ಕಾರ ರಚನೆಯಾದ 20 ದಿನಗಳಲ್ಲಿ ಪ್ರಸ್ತಾವಿತ ಕಾಯ್ದೆಯನ್ನು ಪರಿಚಯಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. “ಎನ್‌ಡಿಎಗೆ 20 ವರ್ಷಗಳಲ್ಲಿ ಯುವಕರಿಗೆ ಉದ್ಯೋಗ ನೀಡಲು ಸಾಧ್ಯವಾಗಿಲ್ಲ. ನಾವು ಅಧಿಕಾರಕ್ಕೆ ಬಂದ 20 ದಿನಗಳಲ್ಲಿ ಕಾಯ್ದೆ ಜಾರಿಗೆ ತರುತ್ತೇವೆ ಮತ್ತು 20 ತಿಂಗಳೊಳಗೆ ಅದರ ಅನುಷ್ಠಾನವನ್ನು ಖಚಿತಪಡಿಸುತ್ತೇವೆ” ಎಂದು ಹೇಳಿದ್ದಾರೆ.

“2020ರ ವಿಧಾನಸಭಾ ಚುನಾವಣೆಯಲ್ಲೂ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದೆವು. ನಮ್ಮ ಮಹಾ ಮೈತ್ರಿಕೂಟ ಸರ್ಕಾರದ 17 ತಿಂಗಳ ಆಡಳಿತದಲ್ಲಿ ಐದು ಲಕ್ಷ ಯುವಕರಿಗೆ ಉದ್ಯೋಗ ನೀಡಲಾಗಿದೆ. ಹಾಗಾದರೆ, ನಮಗೆ ಐದು ವರ್ಷಗಳ ಪೂರ್ಣ ಅವಧಿ ಸಿಕ್ಕಿದ್ದರೆ ಏನಾಗುತ್ತಿತ್ತು ಎಂದು ಊಹಿಸಿ” ಎಂದಿದ್ದಾರೆ.

ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮತದಾರರನ್ನು ಸೆಳೆಯಲು ವಿರೋಧ ಪಕ್ಷಗಳ ಮೈತ್ರಿಕೂಟ ಈಗಾಗಲೇ ಜನರಿಗೆ ಹಲವು ಭರವಸೆಗಳನ್ನು ನೀಡಿದೆ. ಈ ಪೈಕಿ “ಚುನಾವಣೆಗೆ ಮುನ್ನ ನಾನು ಮಾಡಲಿರುವ ಹಲವು ಘೋಷಣೆಗಳಲ್ಲಿ ಇದು ಮೊದಲನೆಯದು” ಎಂದು ಅವರು ಹೇಳಿದರು.

ಬಿಹಾರದಲ್ಲಿ ಸರ್ಕಾರ ಉದ್ಯೋಗಿಗಳಿಲ್ಲದ ಮನೆಗಳೇ ಇರಬಾರದು. ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯುವ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳ ಮೈತ್ರಿಕೂಟ ಜನರಿಗೆ ನೀಡಿರುವ ವಾಗ್ದಾನಗಳ ದೊಡ್ಡ ಪಟ್ಟಿಯಲ್ಲಿ ಇದು ಮತ್ತೊಂದು ಭರವಸೆಯಾಗಿದೆ. ಚುನಾವಣೆಗೆ ಮುನ್ನ ನಾನು ಮಾಡಲಿರುವ ಹಲವು ಘೋಷಣೆಗಳಲ್ಲಿ ಇದು ಮೊದಲನೆಯದು ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ನಿತೀಶ್ ಕುಮಾರ್ ಸರ್ಕಾರ ಘೋಷಣೆ ಮಾಡಿದಂತೆ ಬಿಹಾರದ ಜನರಿಗೆ ನಿರುದ್ಯೋಗ ಭತ್ಯೆ ನೀಡುವುದಕ್ಕಿಂತ ಉದ್ಯೋಗ ಒದಗಿಸುವುದು ನಮ್ಮ ಆದ್ಯತೆ. ಬಿಹಾರಕ್ಕೆ 75 ವರ್ಷದ ಮುಖ್ಯಮಂತ್ರಿ ಅಗತ್ಯವಿಲ್ಲ ಎಂದಿದ್ದಾರೆ.

ತೇಜಸ್ವಿಯ ಯಾದವ್ ಅವರ ಘೋಷಣೆಯನ್ನು ಚುನಾವಣೆಗೆ ಮುನ್ನ ಕಲ್ಯಾಣ ಯೋಜನೆಗಳ ಮೂಲಕ ಆಡಳಿತಾರೂಢ ಎನ್‌ಡಿಎ ಸರ್ಕಾರ ಮಾಡಿರುವ ಕಸರತ್ತಿಗೆ ತಿರುಗೇಟು ಎಂದು ಹೇಳಲಾಗ್ತಿದೆ.

ಪ್ರಧಾನಿ ಮೋದಿ ಇತ್ತೀಚೆಗೆ ಘೋಷಣೆ ಮಾಡಿರುವ ಬಿಹಾರದ ಮಹಿಳಾ ಉದ್ಯಮಿಗಳಿಗೆ ತಲಾ 10,000 ರೂ.ಗಳನ್ನು ನೀಡುವ ಸರ್ಕಾರದ ಉಪಕ್ರಮವು ಮಹಿಳಾ ಮತದಾರರನ್ನು ಆಡಳಿತ ಮೈತ್ರಿಕೂಟದ ಕಡೆಗೆ ಆಕರ್ಷಿಸಿದೆ ಎಂದು ವರದಿಗಳು ಹೇಳಿವೆ.

ಸೆಪ್ಟೆಂಬರ್ 27ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ ಮಹಿಳೆಯರಿಗಾಗಿ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸ್ವ-ಉದ್ಯೋಗ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಅಲ್ಲದೆ, ರಾಜ್ಯದ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ತಲಾ 10,000 ರೂ.ಗಳನ್ನು ವರ್ಗಾಯಿಸಿದ್ದಾರೆ.

ಇದಲ್ಲದೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಅಕ್ಟೋಬರ್ 3 ರಂದು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ 2,500 ಕೋಟಿ ರೂ.ಗಳನ್ನು ವರ್ಗಾಯಿಸಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯಡಿಯಲ್ಲಿ ತಲಾ 10,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಿದ್ದಾರೆ.

ದಾಳಿ ಯತ್ನದ ನಂತರ ಸಿಜೆಐ ಜಾತಿ ನಿಂದಿಸಿ ಪೋಸ್ಟ್ : 100ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...