Homeಅಂತರಾಷ್ಟ್ರೀಯಹಂಗೇರಿಯನ್ ಕಾದಂಬರಿಕಾರ ಲಾಸ್ಲೋ ಕ್ರಾಸ್ನಾಹೊರ್ಕಾಯ್‌ಗೆ 2025ರ ಸಾಹಿತ್ಯ ನೊಬೆಲ್‌ ಪ್ರಶಸ್ತಿ

ಹಂಗೇರಿಯನ್ ಕಾದಂಬರಿಕಾರ ಲಾಸ್ಲೋ ಕ್ರಾಸ್ನಾಹೊರ್ಕಾಯ್‌ಗೆ 2025ರ ಸಾಹಿತ್ಯ ನೊಬೆಲ್‌ ಪ್ರಶಸ್ತಿ

- Advertisement -
- Advertisement -

ಹಂಗೇರಿಯ ಪ್ರಸಿದ್ಧ ಕಾದಂಬರಿಕಾರ ಲಾಸ್ಲೊ ಕ್ರಾಸ್ನಾಹೊರ್ಕಾಯ್ ತಮ್ಮ ತಾತ್ವಿಕ, ದು:ಖಮಯ ಹಾಸ್ಯ ಮತ್ತು ವಿಶಿಷ್ಟ ಶೈಲಿಯ ಕೃತಿಗಳಿಗಾಗಿ 2025ರ ಸಾಹಿತ್ಯದ ನೊಬೆಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಸ್ಟಾಕ್‌ಹೋಮ್‌ನಲ್ಲಿ ಗುರುವಾರ (ಅ.9) ಪ್ರಶಸ್ತಿ ಘೋಷಣೆಯಾಗಿದ್ದು, ಕ್ರಾಸ್ನಾಹೊರ್ಕಾಯ್ ಅವರ ‘ಪ್ರೇರಕ ಮತ್ತು ದೂರದೃಷ್ಟಿಯ ಕೃತಿಗಳಿಗಾಗಿ (compelling and visionary oeuvre)ಈ ಗೌರವವನ್ನು ನೀಡಲಾಗಿದೆ ಎಂದು ಸ್ವೀಡಿಷ್ ಅಕಾಡೆಮಿ ತಿಳಿಸಿದೆ.

ಕ್ರಾಸ್ನಾಹೊರ್ಕಾಯ್ ಅವರ “Herscht 07769” ಕಾದಂಬರಿಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂದು ವರದಿಯಾಗಿದೆ.

1954 ಜನವರಿ 5 ರಂದು ಹಂಗೇರಿಯ ಜಿಯುಲಾದಲ್ಲಿ ಜನಿಸಿದ ಕ್ರಾಸ್ನಾಹೊರ್ಕಾಯ್ ಅವರ ಕಾದಂಬರಿಗಳು ಒಂದೇ ಉದ್ದನೆಯ, ಸಂಕೀರ್ಣವಾದ ವಾಕ್ಯಗಳಲ್ಲಿ ರಚಿತವಾಗಿರುತ್ತವೆ. ಇದು ಅವರನ್ನು ವಿಶಿಷ್ಟ ಬರಹಗಾರನನ್ನಾಗಿ ಮಾಡಿದೆ. ಅವರ ಕೃತಿಗಳು ತಾತ್ವಿಕ ಚಿಂತನೆ, ದು:ಖದ ಹಾಸ್ಯ, ಮತ್ತು ಮಾನವ ಸ್ಥಿತಿಯ ಆಳವಾದ ಚಿತ್ರಣವನ್ನು ಒಳಗೊಂಡಿರುತ್ತವೆ.

ಕ್ರಾಸ್ನಾಹೊರ್ಕಾಯ್ ಅವರ ಕೃತಿಗಳು ಜಾಗತಿಕ ಸಾಹಿತ್ಯದಲ್ಲಿ ಮಹತ್ವದ ಸ್ಥಾನವನ್ನು ಹೊಂದಿವೆ. ಅವರ ಕಾದಂಬರಿಗಳು ಹಂಗೇರಿಯ ಸಾಮಾಜಿಕ-ಸಾಂಸ್ಕೃತಿಕ ಸನ್ನಿವೇಶಗಳನ್ನು ಚಿತ್ರಿಸುವುದರ ಜೊತೆಗೆ, ಸಾರ್ವತ್ರಿಕ ಮಾನವೀಯ ವಿಷಯಗಳನ್ನು ಸ್ಪರ್ಶಿಸುತ್ತವೆ.

ಸ್ವೀಡಿಷ್ ಅಕಾಡೆಮಿಯು ಕ್ರಾಸ್ನಾಹೊರ್ಕಾಯ್ ಅವರ ಕೃತಿಗಳ “ದೀರ್ಘವಾದ, ಆಕರ್ಷಕವಾದ ವಾಕ್ಯಗಳ ಮೂಲಕ ಓದುಗರನ್ನು ತಮ್ಮ ಕಾಲ್ಪನಿಕ ಜಗತ್ತಿಗೆ ಕರೆದೊಯ್ಯುವ” ಶಕ್ತಿಯನ್ನು ಶ್ಲಾಘಿಸಿದೆ.

ಈ ಬಾರಿ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾರತದ ಅಮಿತಾವ್ ಘೋಷ್ ಹಾಗೂ ಸಲ್ಮಾನ್ ರುಶ್ದಿ ಕೂಡ ಇದ್ದರು. ಇಬ್ಬರೂ ದೀರ್ಘಕಾಲದಿಂದಲೇ ವಿಶ್ವ ಸಾಹಿತ್ಯ ವೇದಿಕೆಯಲ್ಲಿ ಪ್ರಭಾವ ಬೀರಿದ ಲೇಖಕರು.

ಘೋಷ್ ಅವರ “The Shadow Lines, The Hungry Tide”ಮುಂತಾದ ಕೃತಿಗಳು ಭಾರತೀಯ ಇತಿಹಾಸ, ವಲಸೆ, ಮತ್ತು ಪರಿಸರ ಚಿಂತನೆಗಳ ಕುರಿತ ಆಳವಾದ ಅನ್ವೇಷಣೆಗೆ ಹೆಸರುವಾಸಿಯಾಗಿವೆ. ರಶ್ದಿ ಅವರ “Midnight’s Children” ಮತ್ತು “The Satanic Verses” ಕೃತಿಗಳು ಭಾರತೀಯ ಇಂಗ್ಲಿಷ್ ಸಾಹಿತ್ಯದ ದಿಕ್ಕು ತೋರಿಸಿದ ಕೃತಿಗಳೆಂದು ಪರಿಗಣಿಸಲಾಗುತ್ತದೆ.

ಎರಡು ವರ್ಷಗಳ ಗಾಝಾ ‘ನರಮೇಧ’: 20,179 ಕಂದಮ್ಮಗಳನ್ನು ಹತ್ಯೆಗೈದ ಇಸ್ರೇಲ್, ಆಹಾರ ವಂಚಿತರಾದ 12 ಲಕ್ಷಕ್ಕೂ ಅಧಿಕ ಮಕ್ಕಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...