Homeದಲಿತ್ ಫೈಲ್ಸ್ಪೂರಣ್ ಕುಮಾರ್ ಡೆತ್‌ನೋಟ್ ಬಹಿರಂಗ; ಹಿರಿಯ ಅಧಿಕಾರಿಗಳಿಂದ ಜಾತಿ ಆಧಾರಿತ ತಾರತಮ್ಯ- ಮಾನಸಿಕ ಕಿರುಕುಳ ಆರೋಪ

ಪೂರಣ್ ಕುಮಾರ್ ಡೆತ್‌ನೋಟ್ ಬಹಿರಂಗ; ಹಿರಿಯ ಅಧಿಕಾರಿಗಳಿಂದ ಜಾತಿ ಆಧಾರಿತ ತಾರತಮ್ಯ- ಮಾನಸಿಕ ಕಿರುಕುಳ ಆರೋಪ

- Advertisement -
- Advertisement -

ಜಾತಿ ಆಧಾರಿತ ತಾರತಮ್ಯವು ತನ್ನನ್ನು ಹೇಗೆ ಆತ್ಮಹತ್ಯೆಗೆ ಪ್ರಚೋದಿಸಿತು ಎಂಬುದರ ಕುರಿತು ಉನ್ನತ ಹರಿಯಾಣದ ಪೊಲೀಸ್ ಅಧಿಕಾರಿಯ ವೈ.ಪೂರಣ್‌ ಕುಮಾರ್ ತಮ್ಮ ಎಂಟು ಪುಟಗಳ ಡೆತ್‌ನೋಟ್‌ನಲ್ಲಿ ವಿವರವಾಗಿ ಬಹಿರಂಗಪಡಿಸಿದ್ದಾರೆ.

ಮಂಗಳವಾರ ಚಂಡೀಗಢದ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ಹರಿಯಾಣದ ಪೊಲೀಸ್ ಮಹಾನಿರ್ದೇಶಕ ಮತ್ತು ಐಪಿಎಸ್ ಅಧಿಕಾರಿ ವೈ ಪುರಣ್ ಕುಮಾರ್, ಎಂಟು ಪುಟಗಳ ಡೆಎತ್‌ ನೋಟ್ ಬರೆದಿದ್ದು, 10 ಹಿರಿಯ ಮತ್ತು ನಿವೃತ್ತ ಪೊಲೀಸ್ ಅಧಿಕಾರಿಗಳ ಮೇಲೆ ‘ಸ್ಪಷ್ಟ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ದೌರ್ಜನ್ಯ’ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಅಧಿಕಾರಿಗಳಲ್ಲಿ ಹರಿಯಾಣದ ಉನ್ನತ ಪೊಲೀಸ್ ಮಹಾನಿರ್ದೇಶಕ ಶತ್ರುಜೀತ್ ಸಿಂಗ್ ಕಪೂರ್ ಮತ್ತು ರೋಹ್ಟಕ್ ಪೊಲೀಸ್ ಮುಖ್ಯಸ್ಥ ನರೇಂದ್ರ ಬಿಜಾರ್ನಿಯಾ ಸೇರಿದ್ದಾರೆ. ಪೂರಣ್‌ ಕುಮಾರ್ ಅವರ ಪತ್ನಿ ಐಎಎಸ್ ಅಧಿಕಾರಿ ಅಮ್ನೀತ್ ಪಿ ಕುಮಾರ್ ಈ ಹಿರಿಯ ಪೊಲೀಸರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ.

“ಇದು ಸಾಮಾನ್ಯ ಆತ್ಮಹತ್ಯೆ ಪ್ರಕರಣವಲ್ಲ. ಆದರೆ, ನನ್ನ ಪತಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಅಧಿಕಾರಿಯಾಗಿದ್ದಾರೆ, ಅವರ ಆತ್ಮಹತ್ಯೆಗೆ ಪ್ರಭಾವಿ ಮತ್ತು ಉನ್ನತ ಹುದ್ದೆಯ ಅಧಿಕಾರಿಗಳಿಂದ ವ್ಯವಸ್ಥಿತ ಕಿರುಕುಳದ ನೇರ ಪರಿಣಾಮವಾಗಿದೆ. ಮೇಲಧಿಕಾರಿಗಳು ತಮ್ಮ ಹುದ್ದೆಗಳನ್ನು ಬಳಸಿಕೊಂಡು ಪತಿಯನ್ನು ಮಾನಸಿಕವಾಗಿ ಹಿಂಸಿಸಿದ್ದಾರೆ, ಅಂತಿಮವಾಗಿ ಅವರಿಗೆ ತಮ್ಮ ಪ್ರಾಣ ತೆಗೆದುಕೊಳ್ಳುವುದು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ 1.30 ರ ಸುಮಾರಿಗೆ, ಐಪಿಎಸ್ ಅಧಿಕಾರಿ ಕುಮಾರ್ ಅವರು ಚಂಡೀಗಢದ ತಮ್ಮ ಮನೆಯ ನೆಲಮಾಳಿಗೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 2001 ರ ಬ್ಯಾಚ್ ಅಧಿಕಾರಿ ತಮ್ಮ ಸೇವಾ ರಿವಾಲ್ವರ್ ಬಳಸಿ ನೆಲಮಾಳಿಗೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂತರ, ಕೆಲವು ಉನ್ನತ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳ ವಿರುದ್ಧ ಖಂಡನೀಯ ಆರೋಪಗಳನ್ನು ಒಳಗೊಂಡ ಎಂಟು ಪುಟಗಳ ಟಿಪ್ಪಣಿ ಕಂಡುಬಂದಿದೆ.

ಈಗ ಹರಿಯಾಣ ಸರ್ಕಾರದ ವಿದೇಶಾಂಗ ಸಹಕಾರ ಇಲಾಖೆಯ ಆಯುಕ್ತ ಮತ್ತು ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅಮ್ನೀತ್, ಘಟನೆ ನಡೆದಾಗ ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ ನೇತೃತ್ವದ ನಿಯೋಗದ ಭಾಗವಾಗಿ ಜಪಾನ್‌ನಲ್ಲಿದ್ದರು.

ಕೊನೆಯ ಬಾರಿಗೆ ತಂದೆಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ

2020 ರಲ್ಲಿ ಅಂಬಾಲಾ ಪೊಲೀಸ್ ಠಾಣೆಯಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅವರ ವಿರುದ್ಧ ‘ಜಾತಿ ಆಧಾರಿತ ತಾರತಮ್ಯ, ಸಾರ್ವಜನಿಕ ಅವಮಾನ, ಉದ್ದೇಶಿತ ಮಾನಸಿಕ ಕಿರುಕುಳ ಮತ್ತು ದೌರ್ಜನ್ಯಗಳು ಪ್ರಾರಂಭವಾದವು ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.

“ಹರಿಯಾಣದ ಆಗಿನ ಡಿಜಿಪಿ ಮನೋಜ್ ಯಾದವ ಅವರು ಪ್ರಾರಂಭಿಸಿದ ಜಾತಿ ಆಧಾರಿತ ತಾರತಮ್ಯ, ಮಾನಸಿಕ ಕಿರುಕುಳ, ಸಾರ್ವಜನಿಕ ಅವಮಾನ ಮತ್ತು ದೌರ್ಜನ್ಯಗಳು ಇಂದಿಗೂ ನನ್ನ ವಿರುದ್ಧ ಮುಂದುವರೆದಿದೆ. ಆಗಿನ ಎಸಿಎಸ್ ಹೋಂ ಆಗಿದ್ದ ರಾಜೀವ್ ಅರೋರಾ, ಐಎಎಸ್ (ನಿವೃತ್ತ) ಅವರು ನನಗೆ ಸಮಯಕ್ಕೆ ಸರಿಯಾಗಿ ಗಳಿಕೆ ರಜೆಯನ್ನು ಸಹ ಮಂಜೂರು ಮಾಡಲಿಲ್ಲ, ಇದರಿಂದಾಗಿ ಮರಣದ ಮೊದಲು ನಾನು ಕೊನೆಯ ಬಾರಿಗೆ ನನ್ನ ತಂದೆಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ಇದು ನನಗೆ ಅಪಾರ ನೋವು ಮತ್ತು ಮಾನಸಿಕ ಕಿರುಕುಳವನ್ನುಂಟುಮಾಡುತ್ತಿದೆ; ಇಲ್ಲಿಯವರೆಗೆ ಸರಿಪಡಿಸಲಾಗದ ನಷ್ಟವಾಗಿದೆ. ಇದನ್ನು ಅಂದಿನ ಹರಿಯಾಣದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ಲಿಖಿತವಾಗಿ ತಿಳಿಸಲಾಗಿದೆ. ಆದರೆ, ಅವರು ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಪೂರಣ್‌ ಕುಮಾರ್ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಹರಿಯಾಣ ಡಿಜಿಪಿ ಶತ್ರುಜೀತ್ ಕಪೂರ್, ಐಪಿಎಸ್ ಅಧಿಕಾರಿಗಳಾದ ಅಮಿತಾಭ್ ಧಿಲ್ಲೋನ್ ಮತ್ತು ಸಂಜಯ್ ಕುಮಾರ್ ಅವರೂ ತಮ್ಮ ವಿರುದ್ಧದ ಜಾತಿ ಆಧಾರಿತ ತಾರತಮ್ಯ, ಸಾರ್ವಜನಿಕ ಅವಮಾನ ಮತ್ತು ಮಾನಸಿಕ ಕಿರುಕುಳವನ್ನು ಮುಂದುವರಿಸಿದ್ದಾರೆ. ಈ ಕಿರುಕುಳವು ನನಗೆ ಅಧಿಕೃತ ವಾಹನ ಮತ್ತು ವಸತಿ ಹಂಚಿಕೆಗೆ ಸಂಬಂಧಿಸಿದೆ ಎಂದು ಅವರು ಹೇಳಿದ್ದಾರೆ.

ತಮ್ಮ ವಿರುದ್ಧ “ಹುಸಿ ಅನಾಮಧೇಯ ದೂರುಗಳು” ಬಂದಿವೆ ಎಂದು ಪೂರಣ್‌ ಕುಮಾರ್ ಆರೋಪಿಸಿದ್ದಾರೆ. “ನನ್ನಂತಹ ಪರಿಶಿಷ್ಟ ಜಾತಿ ಅಧಿಕಾರಿಗಳ ವಿರುದ್ಧ ಗುರಿಯಾಗಿಟ್ಟುಕೊಂಡು ಪ್ರತೀಕಾರ ಮತ್ತು ಸೇಡಿನ ಮಾನಸಿಕ ಕಿರುಕುಳ, ಅವಮಾನ ಮತ್ತು ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ… ಇದರಿಂದಾಗಿ ಇಂದು ಈ ತೀವ್ರ ನಿರ್ಧಾರ ತೆಗೆದುಕೊಳ್ಳಲು ನನ್ನನ್ನು ಒತ್ತಾಯಿಸಲಾಗಿದೆ” ಎಂದು ಅವರು ಬರೆದಿದ್ದಾರೆ.

ಡಿಜಿಪಿ ಕಪೂರ್, ನನ್ನ ಜೊತೆಗೆ ತಾತ್ಕಾಲಿಕವಾಗಿ ನೇಮಿಸಿದ್ದ ಪೊಲೀಸ್ ಅಧಿಕಾರಿಯನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ ಎಂದು ತಮಗೆ ತಿಳಿಸಲಾಗಿದೆ ಎಂದು ಐಪಿಎಸ್ ಅಧಿಕಾರಿ ಬರೆದಿದ್ದಾರೆ. ಡಿಜಿಪಿ ಕಪೂರ್ ಮತ್ತು ಇತರ ಐಪಿಎಸ್ ಅಧಿಕಾರಿಗಳು ‘ನನಗೆ ಮತ್ತು ನನ್ನ ಕುಟುಂಬಕ್ಕೆ ಹಾನಿ ಮಾಡಲು ಸಂಪೂರ್ಣವಾಗಿ ಸಜ್ಜಾಗಿರುವುದರಿಂದ’ ಪೊಲೀಸ್ ಅಧಿಕಾರಿಯೊಬ್ಬರು ‘ಜಾಗರೂಕರಾಗಿರಿ’ ಎಂದು ಎಚ್ಚರಿಸಿದ್ದಾರೆ ಎಂದು ಅವರು ಹೇಳಿದರು.

ಎಲ್ಲವನ್ನೂ ಕೊನೆಗೊಳಿಸಲು ಅಂತಿಮ ನಿರ್ಧಾರ

ಟಿಪ್ಪಣಿಯಲ್ಲಿ ಉಲ್ಲೇಖಿಸಲಾದ ಉನ್ನತ ಅಧಿಕಾರಿಗಳು ತಮ್ಮ ಕೃತ್ಯಗಳಿಂದಾಗಿ ಈ ತೀವ್ರ ಹೆಜ್ಜೆ ಇಡಲು ನನ್ನನ್ನು ಒತ್ತಾಯಿಸಲು, ಪ್ರೋತ್ಸಾಹಿಸಲು ಜವಾಬ್ದಾರರು ಎಂದು ಐಪಿಎಸ್ ಅಧಿಕಾರಿ ಹೇಳಿದ್ದಾರೆ.

“ಮಧ್ಯಂತರ ಅವಧಿಯಲ್ಲಿಯೂ ಸಹ ನಾನು ಎಚ್ಚರಿಕೆಯಿಂದ ಯೋಚಿಸಿದೆ, ಜಾತಿ ಆಧಾರಿತ ತಾರತಮ್ಯ, ಸಾರ್ವಜನಿಕ ಅವಮಾನ, ಉದ್ದೇಶಿತ ಮಾನಸಿಕ ಕಿರುಕುಳ ಮತ್ತು ದೌರ್ಜನ್ಯಗಳನ್ನು ಇನ್ನು ಮುಂದೆ ಮುಂದುವರಿಸಲು ಸಂಬಂಧಪಟ್ಟವರ ಈ ನಿರಂತರ ಮತ್ತು ಸಂಘಟಿತ ಪಿತೂರಿಯನ್ನು ನಾನು ಸಹಿಸಲಾರೆ ಎಂದು ಮನವರಿಕೆಯಾಯಿತು. ಆದ್ದರಿಂದ, ಎಲ್ಲವನ್ನೂ ಕೊನೆಗೊಳಿಸಲು ಈ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ” ಎಂದು ಅವರು ಬರೆದಿದ್ದಾರೆ.

ಅಧಿಕಾರಿಗಳಿಗೆ ವಿವಿಧ ಪ್ರಾತಿನಿಧ್ಯಗಳನ್ನು ನೀಡಿದ್ದೇನೆ, ನಾನು ನಿರೀಕ್ಷಿಸಿದ್ದು ‘ಸಮಾನ ಗೌರವ ಎಂದು ಅವರು ಬರೆದಿದ್ದಾರೆ.

ಹರಿಯಾಣ: ಮೇಲಧಿಕಾರಿಗಳಿಂದ ಜಾತಿ ಕಿರುಕುಳ ಆರೋಪ ಮಾಡಿದ್ದ ಹಿರಿಯ ಐಪಿಎಸ್‌ ಅಧಿಕಾರಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...