Homeಕರ್ನಾಟಕ'ಬೇಡಿಕೆ ಗಂಭೀರವಾಗಿ ಪರಿಗಣಿಸದಿದ್ದರೆ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ..; ಸರ್ಕಾರಕ್ಕೆ ಒಳಮೀಸಲಾತಿ ಹೋರಾಟಗಾರರಿಂದ ಎಚ್ಚರಿಕೆ

‘ಬೇಡಿಕೆ ಗಂಭೀರವಾಗಿ ಪರಿಗಣಿಸದಿದ್ದರೆ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ..; ಸರ್ಕಾರಕ್ಕೆ ಒಳಮೀಸಲಾತಿ ಹೋರಾಟಗಾರರಿಂದ ಎಚ್ಚರಿಕೆ

- Advertisement -
- Advertisement -

ನಮ್ಮ ಹಕ್ಕೊತ್ತಾಯಗಳು ಮತ್ತು ಬೇಡಿಕೆಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಪ್ರತಿಭಟನೆಯನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಲಾಗುವುದು ಎಂದು ಒಳಮೀಸಲಾತಿ ಹೋರಾಟಗಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಒಳಮೀಸಲಾತಿ ಜಾರಿ ವಿಳಂಬ ಖಂಡಿಸಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ರಾಜೀನಾಮೆಗೆ ಆಗ್ರಹಿಸಿದ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಮುಖಂಡರು, ಸಚಿವರ ಮನೆಗೆ ಮುತ್ತಿಗೆ ಹಾಕುವುದಕ್ಕೆ ಮುಂದಾದಾಗ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಒಕ್ಕೂಟ, “ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಗಾಗಿ ಆಗ್ರಹಿಸಿ ಕಳೆದ 35 ವರ್ಷಗಳಿಂದ ನಿರಂತರವಾಗಿ ಬೀದಿ ಹೋರಾಟ ಹಾಗೂ ಕಾನೂನು ಹೋರಾಟದಿಂದಾಗಿ ಆಗಸ್ಟ್‌ 1 2024ರಂದು ಮಾನ್ಯ ಸರ್ವೋಚ್ಚ ನ್ಯಾಯಾಲಯದ 7 ಜನ ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಒಳಮೀಸಲಾತಿಯ ಪರವಾಗಿ ತೀರ್ಪು ನೀಡಿ, ರಾಜ್ಯ ಸರ್ಕಾರಗಳ ಹೆಗಲಿಗೆ ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ನೀಡಿ 14 ತಿಂಗಳುಗಳು ಕಳೆದರೂ ಒಳಮೀಸಲಾತಿ ಕುರಿತಂತೆ ತಾರ್ಕಿಕ ಅಂತ್ಯ ಕಂಡಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ.

“ಕರ್ನಾಟಕ ಸರ್ಕಾರ ತಡವಾಗಿ ಒಳಮೀಸಲಾತಿ ಜಾರಿ ಮಾಡಲು ನಿವೃತ್ತ ನ್ಯಾಯಾಧೀಶರಾದ ಹೆಚ್‌. ಎನ್‌ ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸಂಗ್ರಹ ಮಾಡಿ, ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಯ ಕುರಿತು ನಿರ್ಣಯ ಮಾಡಲಾಗಿದೆ. ಇದು ಒಳಮೀಸಲಾತಿ ಹೋರಾಟಕ್ಕೆ ತಾತ್ವಿಕ ಗೆಲುವು ಸಿಕ್ಕಂತಾಗಿದೆ. ಆದರೆ, ಒಳಮೀಸಲಾತಿಯನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಕಳೆದ 2 ತಿಂಗಳಿನಿಂದ ರಾಜ್ಯ ಸರ್ಕಾರ ಮತ್ತು ಸಮಾಜ ಕಲ್ಯಾಣ ಇಲಾಖೆಯು ವಿಳಂಬ ಧೋರಣೆ ಅನುಸರಿಸುತ್ತಿರುವುದು ಒಳಮೀಸಲಾತಿ ಹೋರಾಟಗಾರರಲ್ಲಿ ರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೇಲೆ ಹಾಗೂ ಕರ್ನಾಟಕ ಸರ್ಕಾರದ ಮೇಲೆ ವಿಶ್ವಾಸವಿಲ್ಲದಾಗಿದೆ” ಎಂದು ಹೇಳಿದ್ದಾರೆ.

ವಿಳಂಬ ಖಂಡಿಸಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ ಮನೆಗೆ ಒಳಮೀಸಲಾತಿ ಹೋರಾಟಗಾರರು ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಹೋರಾಟಗಾರರನ್ನು ಬಂಧಿಸಿದರು.

“ನಮ್ಮ ಹಕ್ಕೊತ್ತಾಯಗಳಿಗೆ ಸಂಬಂಧಿಸಿದಂತೆ ಸರ್ಕಾರ ತೀರ್ಮಾನ ತೆಗೆದುಕೊಳ್ಳದಿದ್ದರೆ ಹೋರಾಟವನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಲಾಗುವುದು, ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಲಾಗುವುದು” ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯಗಳು

1. ಬಡ್ತಿ, ಬ್ಯಾಕ್ಲಾಗ್‌ ಹುದ್ದೆಗಳ ನೇಮಕಾತಿಗೆ ಒಳಮೀಸಲಾತಿಯನ್ನು ಅನ್ವಯಿಸಿ ಕೂಡಲೇ ಆದೇಶ ಹೊರಡಿಸಬೇಕು.

2. ಎಕೆ, ಎಡಿ, ಎಎ ಕುರಿತು ಈಗಾಗಲೇ ಹೊರಡಿಸಿರುವ ಆದೇಶದಲ್ಲಿ ಹಲವು ಗೊಂದಲಗಳಿರುವುದರಿಂದ ಪರಿಷ್ಕರಿಸಿ ಮರು ಆದೇಶವನ್ನು ತಕ್ಷಣವೇ ಹೊರಡಿಸಬೇಕು.

3. ಜಸ್ಟೀಸ್‌ ಎಚ್‌.ಎನ್‌. ನಾಗಮೋಹನ್‌ ದಾಸ್‌ ವರದಿಯಲ್ಲಿರುವ 4 ಲಕ್ಷ 73 ಸಾವಿರ ಜನರಲ್ಲಿ ನಕಲಿ ಜನರಿರುವ ಸಂಶಯ ಒಳಮೀಸಲಾತಿ ಹೋರಾಟಗಾರರಲ್ಲಿದೆ. ಹಾಗಾಗಿ, ಕೂಡಲೇ ಈ 4 ಲಕ್ಷ 73 ಸಾವಿರ ಜನರ ಮಾಹಿತಿಯನ್ನು ಬಹಿರಂಗಗೊಳಿಸಬೇಕು.

4. ತೆಲಂಗಾಣ ಮಾದರಿಯಂತೆ ಸ್ಥಳೀಯ ಸಂಸ್ಥೆಗಳಿಗೂ ಒಳಮೀಸಲಾತಿಯನ್ನು ಅನ್ವಯಿಸಬೇಕು.

5. ಆರ್ಥಿಕ ಕ್ಷೇತ್ರಗಳಿಗೂ ಒಳಮೀಸಲಾತಿಯನ್ನು ಅನ್ವಯಿಸಿ ಆದೇಶ ಹೊರಡಿಸಬೇಕು.

6. ಶಾಶ್ವತ ಆಯೋಗ ರಚಿಸಿ ಅಲೆಮಾರಿ ಸಮುದಾಯಗಳಿಗೆ ಶೇ.1 ಮೀಸಲಾತಿಯನ್ನು ನೀಡಬೇಕು.

7. ಎಸ್‌ಸಿಎಸ್‌ಪಿ/ಟಿಎಸ್‌ಪಿ ಸಲಹೆಗಾರರ ಹುದ್ದೆಯನ್ನು ಕೂಡಲೇ ರದ್ದುಪಡಿಸಬೇಕು ಹಾಗೂ ಹಲವು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡಬೇಕು.

8. ⁠ಒಳಮೀಸಲಾತಿ ಜಾರಿ ಕಾವಲು ಸಮಿತಿಯನ್ನು ರಚಿಸಬೇಕು.

ಒಳಮೀಸಲಾತಿ ಹೋರಾಟ: ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮುಖಂಡರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...