Homeಮುಖಪುಟನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣ: ರಿಲಯನ್ಸ್ ಪವರ್ ಸಿಎಫ್‌ಒ ಬಂಧನ

ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣ: ರಿಲಯನ್ಸ್ ಪವರ್ ಸಿಎಫ್‌ಒ ಬಂಧನ

- Advertisement -
- Advertisement -

ರೂಪಾಯಿ 68 ಕೋಟಿ ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿದ ಆರೋಪದ ಮೇಲೆ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಸಮೂಹ ಕಂಪನಿ ರಿಲಯನ್ಸ್ ಪವರ್‌ನ ಸಿಎಫ್‌ಒ ಅಶೋಕ್ ಪಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ.

ವಿಚಾರಣೆಯ ಬಳಿಕ ಶುಕ್ರವಾರ ರಾತ್ರಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ನಿಬಂಧನೆಗಳ ಅಡಿಯಲ್ಲಿ ಅಶೋಕ್ ಪಾಲ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ಅಶೋಕ್ ಪಾಲ್ ಅವರನ್ನು ಶನಿವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಮತ್ತು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೋರಲಾಗುವುದು ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಈ ಪ್ರಕರಣವು ರಿಲಯನ್ಸ್ ಪವರ್‌ನ ಅಂಗಸಂಸ್ಥೆಯಾದ ರಿಲಯನ್ಸ್ ಎನ್‌ಯು ಬೆಸ್ ಲಿಮಿಟೆಡ್ ಪರವಾಗಿ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಇಸಿಐ) ಗೆ ಸಲ್ಲಿಸಲಾದ 68.2 ಕೋಟಿ ರೂ.ಗಳ ಬ್ಯಾಂಕ್ ಗ್ಯಾರಂಟಿಗೆ ಸಂಬಂಧಿಸಿದೆ, ಅದು ‘ನಕಲಿ’ ಎಂದು ಕಂಡುಬಂದಿದೆ.

ಈ ಕಂಪನಿಯನ್ನು ಹಿಂದೆ ಮಹಾರಾಷ್ಟ್ರ ಎನರ್ಜಿ ಜನರೇಷನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು. ವ್ಯಾಪಾರ ಗುಂಪುಗಳಿಗೆ ‘ನಕಲಿ’ ಬ್ಯಾಂಕ್ ಗ್ಯಾರಂಟಿಗಳನ್ನು ಒದಗಿಸುವ ದಂಧೆಯನ್ನು ನಡೆಸುತ್ತಿದ್ದ ಆರೋಪಿ ಕಂಪನಿಯನ್ನು ಒಡಿಶಾ ಮೂಲದ ಬಿಸ್ವಾಲ್ ಟ್ರೇಡ್‌ಲಿಂಕ್ ಎಂದು ಇಡಿ ಗುರುತಿಸಿದೆ.

ತನಿಖೆಯ ಭಾಗವಾಗಿ, ಇಡಿ ಆಗಸ್ಟ್‌ನಲ್ಲಿ ಕಂಪನಿ ಮತ್ತು ಅದರ ಪ್ರವರ್ತಕರ ವಿರುದ್ಧ ಶೋಧ ನಡೆಸಿ, ಅದರ ವ್ಯವಸ್ಥಾಪಕ ನಿರ್ದೇಶಕ ಪಾರ್ಥ ಸಾರಥಿ ಬಿಸ್ವಾಲ್ ಅವರನ್ನು ಬಂಧಿಸಿತ್ತು.

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW)ನವೆಂಬರ್ 2024ರಲ್ಲಿ ದಾಖಲಿಸಿದ ಎಫ್‌ಐಆರ್‌ನಿಂದ ಈ ಹಣ ಅಕ್ರಮ ವರ್ಗಾವಣೆ ಪ್ರಕರಣ ಹುಟ್ಟಿಕೊಂಡಿದೆ.

ಕಂಪನಿಯು ಶೇಕಡ 8ರಷ್ಟು ಕಮಿಷನ್ ಮೇಲೆ ‘ನಕಲಿ’ ಬ್ಯಾಂಕ್ ಗ್ಯಾರಂಟಿಗಳನ್ನು ನೀಡುವಲ್ಲಿ ನಿರತವಾಗಿದೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ರಿಲಯನ್ಸ್ ಪವರ್ ‘ವಂಚನೆ ಮತ್ತು ಪಿತೂರಿಯ ಬಲಿಪಶು ಎಂದು ರಿಲಯನ್ಸ್ ಗ್ರೂಪ್ ಆಗ ಹೇಳಿತ್ತು. ನವೆಂಬರ್ 7, 2024ರಂದು ಷೇರು ವಿನಿಮಯ ಕೇಂದ್ರಕ್ಕೆ ಸರಿಯಾದ ಬಹಿರಂಗಪಡಿಸುವಿಕೆಯನ್ನು ಮಾಡಿತ್ತು.

ಅಕ್ಟೋಬರ್ 2024ರಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗಲ್ಲಿ ಥರ್ಡ್ ಪಾರ್ಟಿ (ಆರೋಪಿ ಕಂಪನಿ) ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗಿದೆ ಮತ್ತು ಕಾನೂನು ಪ್ರಕ್ರಿಯೆ ನಂತರ ನಡೆಯಲಿದೆ ಎಂದು ರಿಲಯನ್ಸ್ ಗ್ರೂಪ್ ವಕ್ತಾರರು ತಿಳಿಸಿದ್ದರು.

ಇಡಿ ಮೂಲಗಳ ಪ್ರಕಾರ, ಭುವನೇಶ್ವರ ಮೂಲದ ಕಂಪನಿಯೊಂದು s-bi.co.in ಎಂಬ ಇಮೇಲ್ ಡೊಮೇನ್ ಬಳಸಿತ್ತು, ಇದು sbi.co.in ಗೆ ಸಮಾನವಾಗಿದೆ. ಇದರಿಂದಾಗಿ, ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದಲೇ ಸಂವಹನ ನಡೆಸಲಾಗುತ್ತಿದೆ ಎಂಬ ಒಂದು ನಂಬಿಕೆಯ ಮುಖಭಾವ ಸೃಷ್ಟಿಸಲಾಗಿತ್ತು.

ಎಸ್‌ಇಸಿಐಗೆ ‘ನಕಲಿ’ ಸಂವಹನವನ್ನು ಕಳುಹಿಸಲು ನಕಲಿ ಡೊಮೇನ್ ಅನ್ನು ಬಳಸಲಾಗಿದೆ ಎಂದು ಹೇಳಲಾಗ್ತಿದೆ.

ಇಡಿಯ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಕಂಪನಿಯು ಕಮಿಷನ್‌ಗಾಗಿ ‘ನಕಲಿ’ ಬಿಲ್‌ಗಳನ್ನು ಸೃಷ್ಟಿಸಿತ್ತು ಮತ್ತು ಅನೇಕ ‘ಬಹಿರಂಗಪಡಿಸದ ಬ್ಯಾಂಕ್ ಖಾತೆಗಳನ್ನು ಬಳಸಿತ್ತು.

ಈ ಬ್ಯಾಂಕ್ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿಗಳ ಸಂದಿಗ್ಧ ವಹಿವಾಟುಗಳು ನಡೆದಿವೆ. ಕಂಪನಿಯು ಕೇವಲ ಕಾಗದದಲ್ಲಿ ಮಾತ್ರ ಇದೆ. ಏಕೆಂದರೆ, ಅದರ ನೋಂದಾಯಿತ ಕಚೇರಿಯು ಬಿಸ್ವಾಲ್‌ನ ಸಂಬಂಧಿಯೊಬ್ಬರ ವಸತಿ ಆಸ್ತಿಯಾಗಿದೆ. ತನಿಖೆಯ ಸಂದರ್ಭದಲ್ಲಿ ಆ ವಿಳಾಸದಲ್ಲಿ ಕಂಪನಿಯ ಯಾವುದೇ ದಾಖಲೆಗಳು ಕಂಡುಬಂದಿಲ್ಲ ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ವರದಿಗಳು ವಿವರಿಸಿವೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ ‘ಆತ್ಮಹತ್ಯೆ’ ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...