Homeಅಂತರಾಷ್ಟ್ರೀಯಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

- Advertisement -
- Advertisement -

ಕದನ ವಿರಾಮದ ಹಿನ್ನೆಲೆ, ಇಸ್ರೇಲ್ ಗಾಝಾ ಮೇಲಿನ ಬಾಂಬ್ ದಾಳಿಯನ್ನು ನಿಲ್ಲಿಸಿದ್ದು, ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಪ್ರಮುಖವಾಗಿ ಉತ್ತರ ಗಾಝಾದತ್ತ ಜನರು ಆಗಮಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದರು. ಬಾಂಬ್ ದಾಳಿ ನಡೆಸಿ ಇಸ್ರೇಲಿ ಸೇನೆ ಅವರಲ್ಲಿ ಹಲವರನ್ನು ಸುಖಾಸುಮ್ಮನೆ ಹತ್ಯೆಗೈದಿದೆ. ಇನ್ನುಳಿದವರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ತೆರಳಿದ್ದರು.

ಕಳೆದ ತಿಂಗಳು ಇಸ್ರೇಲ್ ಸೇನೆ ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ನೆಲದ ದಾಳಿಯನ್ನು ತೀವ್ರಗೊಳಿಸಿದಾಗ ಸಮುದ್ರ ತೀರದ ಅಲ್- ರಶೀದ್ ರಸ್ತೆಯ ಮೂಲಕ ಸಾವಿರಾರು ಅಮಾಯಕ, ಅಸಹಾಯ, ಜನರು ಪಲಾಯನ ಮಾಡಿದ್ದ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿತ್ತು. ಇದೀಗ ಅದೇ ರಸ್ತೆಯ ಮೂಲಕ ಜನರು ಹಿಂದಿರುಗುವ ದೃಶ್ಯಗಳನ್ನು ತೋರಿಸುತ್ತಿವೆ.

ಗಾಝಾ ಪಟ್ಟಿಯ ನಗರಗಳಾದ ಗಾಝಾ, ರಫಾ, ಖಾನ್ ಯೂನಿಸ್, ಜಬಲಿಯಾ, ದೇರ್ ಅಲ್ ಬಲಾಹ್, ಬನೀ ಸುಹೈಲಾ, ಬೈತ್ ಹನೌನ್, ಬೈತ್ ಲಾಹಿಯಾ ಮತ್ತು ಅಬಾಸನ್ ಅಲ್-ಕಬೀರಾಗಳ ಪೈಕಿ ಗಾಝಾ, ರಫಾ, ಜಬಲಿಯಾ ಮತ್ತು ಖಾನ್ ಯೂನಿಸ್‌ಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದರು. ಗಾಝಾ ನಗರದಲ್ಲಿ ಅತೀ ಹೆಚ್ಚು, ಅಂದರೆ ಸುಮಾರು 6 ಲಕ್ಷ ಜನರಿದ್ದರು.

ಇಸ್ರೇಲ್ ಗಾಝಾ, ರಫಾ, ಖಾನ್ ಯೂನಿಸ್ ಮತ್ತು ಜಬಲಿಯಾದ ಮೇಲೆಯೇ ಹೆಚ್ಚಿನ ದಾಳಿ ನಡೆಸಿದೆ. ಪರಿಣಾಮ 70 ಸಾವಿರದಷ್ಟು ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಈ ನಗರಗಳ ಬಹುತೇಕ ಕಟ್ಟಡಗಳನ್ನು ಇಸ್ರೇಲ್ ಧ್ವಂಸ ಮಾಡಿದೆ. ಈಗ ಎಲ್ಲಿ ನೋಡಿದರೂ ಬರೀ ಅವಶೇಷಗಳ ರಾಶಿ ಮಾತ್ರ ಕಾಣುತ್ತಿದೆ. ಈ ಅವಶೇಷಗಳ ಅಡಿಯಲ್ಲಿ ಇನ್ನೆಷ್ಟು ಸಾವಿರ ಜನರ ಮೃತ ದೇಹಗಳು ಇದೆ ಎಂದು ಗೊತ್ತಿಲ್ಲ.

ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿರುವ ಹಿನ್ನೆಲೆ ಉತ್ತರ ಗಾಝಾದತ್ತ ಹಿಂದಿರುಗಿದ ಜನರು, ರಕ್ಷಣಾ ತಂಡಗಳ ಜೊತೆಗೂಡಿ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಗಾಝಾದ ಸುದ್ದಿ ಸಂಸ್ಥೆ ವಫಾದ ವರದಿ ಪ್ರಕಾರ, ಶನಿವಾರ ಒಂದೇ ದಿನ ಸುಮಾರು 135 ಮೃತದೇಹಗಳು ಅವಶೇಷಗಳಡಿ ಸಿಕ್ಕಿವೆ.

ಗಾಝಾದಾದ್ಯಂತ ಆಸ್ಪತ್ರೆಗಳಿಂದ ಹಲವಾರು ಶವಗಳನ್ನು ಹೊರ ತೆಗೆಯಲಾಗಿದೆ. ಈ ಪೈಕಿ 43 ಶವಗಳನ್ನು ಅಲ್-ಶಿಫಾ ಆಸ್ಪತ್ರೆಗೆ ಮತ್ತು 60 ಶವಗಳನ್ನು ಗಾಝಾ ನಗರದ ಅಲ್-ಅಹ್ಲಿ ಅರಬ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವುಗಳನ್ನು ನುಸೈರಾತ್, ದೇರ್ ಅಲ್-ಬಲಾಹ್ ಮತ್ತು ಖಾನ್ ಯೂನಿಸ್ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ ಎಂದು ಅಲ್-ವಫಾ ವರದಿ ಹೇಳಿದೆ.

ಅಲ್-ರಶೀದ್ ರಸ್ತೆಯ ಮೂಲಕ ಮಕ್ಕಳು, ಮಹಿಳೆಯರು, ವೃದ್ಧರು, ಕಾರು, ವ್ಯಾನ್‌ ಮತ್ತು ಪೀಠೋಪಕರಣಗಳಿಂದ ತುಂಬಿದ ಕತ್ತೆ ಬಂಡಿಗಳ ಮೂಲಕ ಗಾಝಾ ನಗರದ ಕಡೆಗೆ ಸಾಗುತ್ತಿರುವ ದೃಶ್ಯಗಳನ್ನು ಅಲ್ ಜಝೀರಾ ಸುದ್ದಿ ಸಂಸ್ಥೆಯ ತಾರೀಖ್ ಅಬೂ ಅಝೂಮ್ ವಿವರಿಸಿದ್ದಾರೆ. ಜನರು ತಾತ್ಕಾಲಿಕ ಡೇರೆಗಳನ್ನು ತೆಗೆದು ತಮ್ಮ ನಾಶವಾದ ಮನೆಗಳ ಅವಶೇಷಗಳ ಮೇಲೆ ಹೊಸ ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. 

ತಿಂಗಳುಗಳ ಕಾಲ ನಿರಂತರವಾಗಿ ಇಸ್ರೇಲ್ ಬಾಂಬ್ ದಾಳಿ ನಡೆಸಿದ ಹಿನ್ನೆಲೆ, ಗಾಝಾ ನಗರದಲ್ಲಿ ಬಹುತೇಕ ಏನೂ ಉಳಿದಿಲ್ಲ. ಸಂಪೂರ್ಣ ವಿನಾಶ ಉಂಟಾಗಿದೆ. ಅಲ್ಲಿ ಕಾರ್ಯನಿರ್ವಹಿಸುವ ಯಾವುದೇ ಮೂಲಸೌಕರ್ಯವಿಲ್ಲ, ಶುದ್ಧ ನೀರಿಲ್ಲ, ವಿದ್ಯುತ್ ಇಲ್ಲ. ಒಂದು ಕಾಲದಲ್ಲಿ ಮನೆಗಳಾಗಿದ್ದ ಕಟ್ಟಡಗಳ ಅವಶೇಷಗಳ ರಾಶಿ ಮಾತ್ರ ಇವೆ ಎಂದು ಅಬೂ ಅಝೂಮ್ ತಿಳಿಸಿದ್ದಾರೆ. 

ಹಿಂದಿರುಗುವ ಕುಟುಂಬಗಳಿಗೆ ತಾತ್ಕಾಲಿಕ ಡೇರೆಗಳು ಮತ್ತು ಮೊಬೈಲ್ ಆಶ್ರಯಗಳ ತುರ್ತು ಅವಶ್ಯಕತೆಯಿದೆ ಎಂದು ದೇರ್ ಅಲ್-ಬಲಾಹ್‌ನಿಂದ ವರದಿ ಮಾಡುತ್ತಿರುವ ಅಲ್ ಜಝೀರಾದ ಮೋತ್ ಕಹ್ಲೌಟ್ ಹೇಳಿದ್ದಾರೆ. ಇಲ್ಲಿನ ಜನರಲ್ಲಿ ಏನೂ ಉಳಿದಿಲ್ಲ. ಏನಿದೆಯೋ ಅದನ್ನು ಹೊತ್ತುಕೊಂಡು ಅಜ್ಞಾತದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಅಲ್- ರಶೀದ್ ರಸ್ತೆಯ ಮೂಲಕ ಹಾದು ಹೋಗುತ್ತಿರುವ ಅನೇಕ ಜನರನ್ನು ಅಲ್‌-ಜಝೀರಾದ ವರದಿಗಾರರು ಮಾತನಾಡಿಸಿದ್ದಾರೆ. ಈ ವೇಳೆ ಕೆಲವರು ನಮ್ಮ ಊರುಗಳತ್ತ ಹೋಗುತ್ತಿದ್ದೇವೆ. ಅಲ್ಲಿ ನಮ್ಮ ಮನೆ ಇದೆಯೋ, ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ಇನ್ನೂ ಹಲವರು, ಮಕ್ಕಳು, ಗಂಡ, ಹೆಂಡತಿ, ಸಹೋದರರನ್ನು ಕಳೆದುಕೊಂಡ ನೋವು ತೋಡಿಕೊಂಡಿದ್ದಾರೆ. ಈ ನಡುವೆಯೂ ನಾಶಗೊಂಡ ನಗರದಲ್ಲಿ ಅವಶೇಷಗಳ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಉತ್ಸಾಹವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...