Homeಅಂತರಾಷ್ಟ್ರೀಯಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

- Advertisement -
- Advertisement -

ಕದನ ವಿರಾಮದ ಹಿನ್ನೆಲೆ, ಇಸ್ರೇಲ್ ಗಾಝಾ ಮೇಲಿನ ಬಾಂಬ್ ದಾಳಿಯನ್ನು ನಿಲ್ಲಿಸಿದ್ದು, ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಪ್ರಮುಖವಾಗಿ ಉತ್ತರ ಗಾಝಾದತ್ತ ಜನರು ಆಗಮಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದರು. ಬಾಂಬ್ ದಾಳಿ ನಡೆಸಿ ಇಸ್ರೇಲಿ ಸೇನೆ ಅವರಲ್ಲಿ ಹಲವರನ್ನು ಸುಖಾಸುಮ್ಮನೆ ಹತ್ಯೆಗೈದಿದೆ. ಇನ್ನುಳಿದವರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ತೆರಳಿದ್ದರು.

ಕಳೆದ ತಿಂಗಳು ಇಸ್ರೇಲ್ ಸೇನೆ ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ನೆಲದ ದಾಳಿಯನ್ನು ತೀವ್ರಗೊಳಿಸಿದಾಗ ಸಮುದ್ರ ತೀರದ ಅಲ್- ರಶೀದ್ ರಸ್ತೆಯ ಮೂಲಕ ಸಾವಿರಾರು ಅಮಾಯಕ, ಅಸಹಾಯ, ಜನರು ಪಲಾಯನ ಮಾಡಿದ್ದ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿತ್ತು. ಇದೀಗ ಅದೇ ರಸ್ತೆಯ ಮೂಲಕ ಜನರು ಹಿಂದಿರುಗುವ ದೃಶ್ಯಗಳನ್ನು ತೋರಿಸುತ್ತಿವೆ.

ಗಾಝಾ ಪಟ್ಟಿಯ ನಗರಗಳಾದ ಗಾಝಾ, ರಫಾ, ಖಾನ್ ಯೂನಿಸ್, ಜಬಲಿಯಾ, ದೇರ್ ಅಲ್ ಬಲಾಹ್, ಬನೀ ಸುಹೈಲಾ, ಬೈತ್ ಹನೌನ್, ಬೈತ್ ಲಾಹಿಯಾ ಮತ್ತು ಅಬಾಸನ್ ಅಲ್-ಕಬೀರಾಗಳ ಪೈಕಿ ಗಾಝಾ, ರಫಾ, ಜಬಲಿಯಾ ಮತ್ತು ಖಾನ್ ಯೂನಿಸ್‌ಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದರು. ಗಾಝಾ ನಗರದಲ್ಲಿ ಅತೀ ಹೆಚ್ಚು, ಅಂದರೆ ಸುಮಾರು 6 ಲಕ್ಷ ಜನರಿದ್ದರು.

ಇಸ್ರೇಲ್ ಗಾಝಾ, ರಫಾ, ಖಾನ್ ಯೂನಿಸ್ ಮತ್ತು ಜಬಲಿಯಾದ ಮೇಲೆಯೇ ಹೆಚ್ಚಿನ ದಾಳಿ ನಡೆಸಿದೆ. ಪರಿಣಾಮ 70 ಸಾವಿರದಷ್ಟು ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಈ ನಗರಗಳ ಬಹುತೇಕ ಕಟ್ಟಡಗಳನ್ನು ಇಸ್ರೇಲ್ ಧ್ವಂಸ ಮಾಡಿದೆ. ಈಗ ಎಲ್ಲಿ ನೋಡಿದರೂ ಬರೀ ಅವಶೇಷಗಳ ರಾಶಿ ಮಾತ್ರ ಕಾಣುತ್ತಿದೆ. ಈ ಅವಶೇಷಗಳ ಅಡಿಯಲ್ಲಿ ಇನ್ನೆಷ್ಟು ಸಾವಿರ ಜನರ ಮೃತ ದೇಹಗಳು ಇದೆ ಎಂದು ಗೊತ್ತಿಲ್ಲ.

ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿರುವ ಹಿನ್ನೆಲೆ ಉತ್ತರ ಗಾಝಾದತ್ತ ಹಿಂದಿರುಗಿದ ಜನರು, ರಕ್ಷಣಾ ತಂಡಗಳ ಜೊತೆಗೂಡಿ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಗಾಝಾದ ಸುದ್ದಿ ಸಂಸ್ಥೆ ವಫಾದ ವರದಿ ಪ್ರಕಾರ, ಶನಿವಾರ ಒಂದೇ ದಿನ ಸುಮಾರು 135 ಮೃತದೇಹಗಳು ಅವಶೇಷಗಳಡಿ ಸಿಕ್ಕಿವೆ.

ಗಾಝಾದಾದ್ಯಂತ ಆಸ್ಪತ್ರೆಗಳಿಂದ ಹಲವಾರು ಶವಗಳನ್ನು ಹೊರ ತೆಗೆಯಲಾಗಿದೆ. ಈ ಪೈಕಿ 43 ಶವಗಳನ್ನು ಅಲ್-ಶಿಫಾ ಆಸ್ಪತ್ರೆಗೆ ಮತ್ತು 60 ಶವಗಳನ್ನು ಗಾಝಾ ನಗರದ ಅಲ್-ಅಹ್ಲಿ ಅರಬ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವುಗಳನ್ನು ನುಸೈರಾತ್, ದೇರ್ ಅಲ್-ಬಲಾಹ್ ಮತ್ತು ಖಾನ್ ಯೂನಿಸ್ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ ಎಂದು ಅಲ್-ವಫಾ ವರದಿ ಹೇಳಿದೆ.

ಅಲ್-ರಶೀದ್ ರಸ್ತೆಯ ಮೂಲಕ ಮಕ್ಕಳು, ಮಹಿಳೆಯರು, ವೃದ್ಧರು, ಕಾರು, ವ್ಯಾನ್‌ ಮತ್ತು ಪೀಠೋಪಕರಣಗಳಿಂದ ತುಂಬಿದ ಕತ್ತೆ ಬಂಡಿಗಳ ಮೂಲಕ ಗಾಝಾ ನಗರದ ಕಡೆಗೆ ಸಾಗುತ್ತಿರುವ ದೃಶ್ಯಗಳನ್ನು ಅಲ್ ಜಝೀರಾ ಸುದ್ದಿ ಸಂಸ್ಥೆಯ ತಾರೀಖ್ ಅಬೂ ಅಝೂಮ್ ವಿವರಿಸಿದ್ದಾರೆ. ಜನರು ತಾತ್ಕಾಲಿಕ ಡೇರೆಗಳನ್ನು ತೆಗೆದು ತಮ್ಮ ನಾಶವಾದ ಮನೆಗಳ ಅವಶೇಷಗಳ ಮೇಲೆ ಹೊಸ ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. 

ತಿಂಗಳುಗಳ ಕಾಲ ನಿರಂತರವಾಗಿ ಇಸ್ರೇಲ್ ಬಾಂಬ್ ದಾಳಿ ನಡೆಸಿದ ಹಿನ್ನೆಲೆ, ಗಾಝಾ ನಗರದಲ್ಲಿ ಬಹುತೇಕ ಏನೂ ಉಳಿದಿಲ್ಲ. ಸಂಪೂರ್ಣ ವಿನಾಶ ಉಂಟಾಗಿದೆ. ಅಲ್ಲಿ ಕಾರ್ಯನಿರ್ವಹಿಸುವ ಯಾವುದೇ ಮೂಲಸೌಕರ್ಯವಿಲ್ಲ, ಶುದ್ಧ ನೀರಿಲ್ಲ, ವಿದ್ಯುತ್ ಇಲ್ಲ. ಒಂದು ಕಾಲದಲ್ಲಿ ಮನೆಗಳಾಗಿದ್ದ ಕಟ್ಟಡಗಳ ಅವಶೇಷಗಳ ರಾಶಿ ಮಾತ್ರ ಇವೆ ಎಂದು ಅಬೂ ಅಝೂಮ್ ತಿಳಿಸಿದ್ದಾರೆ. 

ಹಿಂದಿರುಗುವ ಕುಟುಂಬಗಳಿಗೆ ತಾತ್ಕಾಲಿಕ ಡೇರೆಗಳು ಮತ್ತು ಮೊಬೈಲ್ ಆಶ್ರಯಗಳ ತುರ್ತು ಅವಶ್ಯಕತೆಯಿದೆ ಎಂದು ದೇರ್ ಅಲ್-ಬಲಾಹ್‌ನಿಂದ ವರದಿ ಮಾಡುತ್ತಿರುವ ಅಲ್ ಜಝೀರಾದ ಮೋತ್ ಕಹ್ಲೌಟ್ ಹೇಳಿದ್ದಾರೆ. ಇಲ್ಲಿನ ಜನರಲ್ಲಿ ಏನೂ ಉಳಿದಿಲ್ಲ. ಏನಿದೆಯೋ ಅದನ್ನು ಹೊತ್ತುಕೊಂಡು ಅಜ್ಞಾತದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಅಲ್- ರಶೀದ್ ರಸ್ತೆಯ ಮೂಲಕ ಹಾದು ಹೋಗುತ್ತಿರುವ ಅನೇಕ ಜನರನ್ನು ಅಲ್‌-ಜಝೀರಾದ ವರದಿಗಾರರು ಮಾತನಾಡಿಸಿದ್ದಾರೆ. ಈ ವೇಳೆ ಕೆಲವರು ನಮ್ಮ ಊರುಗಳತ್ತ ಹೋಗುತ್ತಿದ್ದೇವೆ. ಅಲ್ಲಿ ನಮ್ಮ ಮನೆ ಇದೆಯೋ, ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ಇನ್ನೂ ಹಲವರು, ಮಕ್ಕಳು, ಗಂಡ, ಹೆಂಡತಿ, ಸಹೋದರರನ್ನು ಕಳೆದುಕೊಂಡ ನೋವು ತೋಡಿಕೊಂಡಿದ್ದಾರೆ. ಈ ನಡುವೆಯೂ ನಾಶಗೊಂಡ ನಗರದಲ್ಲಿ ಅವಶೇಷಗಳ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಉತ್ಸಾಹವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...