Homeದಲಿತ್ ಫೈಲ್ಸ್ಎಐ ಚಿತ್ರ ಹಂಚಿಕೊಂಡ ಯುವಕನಿಗೆ ಜಾತಿ ದೌರ್ಜನ್ಯ: ಪಾದ ತೊಳೆಸಿ, ಬ್ರಾಹ್ಮಣರ ಕ್ಷಮೆ ಯಾಚಿಸಲು ಒತ್ತಾಯಿಸಿದ...

ಎಐ ಚಿತ್ರ ಹಂಚಿಕೊಂಡ ಯುವಕನಿಗೆ ಜಾತಿ ದೌರ್ಜನ್ಯ: ಪಾದ ತೊಳೆಸಿ, ಬ್ರಾಹ್ಮಣರ ಕ್ಷಮೆ ಯಾಚಿಸಲು ಒತ್ತಾಯಿಸಿದ ಆರೋಪ

- Advertisement -
- Advertisement -

ಎಐ ರಚಿತ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಯುವಕನೊಬ್ಬನಿಗೆ, ಇನ್ನೊಬ್ಬ ವ್ಯಕ್ತಿಯ ಪಾದಗಳನ್ನು ತೊಳೆಯುವಂತೆ ಮತ್ತು ಬ್ರಾಹ್ಮಣ ಸಮುದಾಯದವರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಲಾಗಿದೆ ಎಂಬ ಆರೋಪದ ಕುರಿತು ಮಧ್ಯಪ್ರದೇಶದ ದಾಮೋಹ್ ಜಿಲ್ಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸತಾರಿಯಾ ಗ್ರಾಮದ ನಿವಾಸಿ ಪುರುಷೋತ್ತಮ ಕುಶ್ವಾಹ ಎಂಬಾತ, ತನ್ನ ಗ್ರಾಮದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಅನುಜ್ ಪಾಂಡೆ ಎಂಬ ವ್ಯಕ್ತಿ ಶೂಗಳ ಹಾರವನ್ನು ಧರಿಸಿರುವ ಎಐ ರಚಿತ ಚಿತ್ರವನ್ನು ಪೋಸ್ಟ್ ಮಾಡಿದ್ದರು. ಅಲ್ಲದೆ, ಅನುಜ್ ಪಾಂಡೆ ಮದ್ಯ ಮಾರಾಟ ನಿಷೇಧಿಸಿರುವ ಗ್ರಾಮದ ಸಾಮೂಹಿಕ ನಿರ್ಧಾರವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು ಎನ್ನಲಾಗಿದೆ.

ಕುಶ್ವಾಹ 15 ನಿಮಿಷಗಳಲ್ಲಿ ತಾನು ಹಾಕಿದ್ದ ಪೋಸ್ಟ್ ಡಿಲಿಟ್ ಮಾಡಿ ಕ್ಷಮೆಯಾಚಿಸಿದ್ದರು. ಆದರೂ, ಗ್ರಾಮದ ಪ್ರಬಲ ವರ್ಗದ ಜನರು ಆತನ ಮೇಲೆ ಆಕ್ರೋಶಗೊಂಡಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕುಶ್ವಾಹ, ಪ್ರಬಲ ಜಾತಿಯ ಪಾಂಡೆಯ ಪಾದಗಳನ್ನು ತೊಳೆಯುತ್ತಿರುವುದು ಮತ್ತು “ನಾನು ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆಯಾಚಿಸುತ್ತಿದ್ದೇನೆ. ಇಂತಹ ತಪ್ಪು ಮತ್ತೆ ಸಂಭವಿಸುವುದಿಲ್ಲ. ನಾವು ಬ್ರಾಹ್ಮಣರನ್ನು ಹೀಗೆಯೇ ಪೂಜಿಸುತ್ತಲೇ ಇರುತ್ತೇವೆ” ಎಂದು ಹೇಳಿರುವುದನ್ನು ನೋಡಬಹುದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ವೈರಲ್ ಆಗಿರುವ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ. ಗ್ರಾಮದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡಲು, ಕ್ರಮ ಕೈಗೊಳ್ಳಲಾಗುತ್ತಿದೆ. ಪೊಲೀಸ್ ತಂಡಗಳು ಗ್ರಾಮದಲ್ಲಿ ನಿರಂತರವಾಗಿ ಗಸ್ತು ತಿರುಗುತ್ತಿವೆ ಎಂದು ತಿವಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರಾಮದಲ್ಲಿ ಶಾಂತಿ ಕಾಪಾಡಲು ಹಿರಿಯ ಅಧಿಕಾರಿಗಳು ಮತ್ತು ಗ್ರಾಮದ ಪ್ರಮುಖರ ನಡುವೆ ಮಾತುಕತೆ ನಡೆಸಲಾಗಿದೆ. ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪಟೇರಾ ಪೊಲೀಸ್ ಠಾಣೆಯ ಉಸ್ತುವಾರಿಗೆ ಸೂಚಿಸಲಾಗಿದೆ. ಜಾತಿ ದೌರ್ಜನ್ಯದ ಕುರಿತು ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಸತಾರಿಯಾ ಗ್ರಾಮದಲ್ಲಿ ಮದ್ಯ ನಿಷೇಧವನ್ನು ಜನರೇ ಕಟ್ಟು ನಿಟ್ಟಾಗಿ ಜಾರಿಗೆ ತಂದಿದ್ದಾರೆ. ಇದನ್ನು ಉಲ್ಲಂಘಿಸಿ ಮದ್ಯ ಮಾರಾಟ ಮಾಡಿದ ಆರೋಪ ಅನುಜ್ ಪಾಂಡೆ ವಿರುದ್ದ ಕೇಳಿ ಬಂದಿತ್ತು. ಈ ಕಾರಣಕ್ಕೆ ಆತನಿಗೆ ಗ್ರಾಮದಾದ್ಯಂತ ತಿರುಗಾಡಿ ಕ್ಷಮೆ ಯಾಚಿಸುವಂತೆ ಮತ್ತು 2,100 ರೂ. ದಂಡ ಪಾವತಿಸಲು ಸೂಚಿಸಲಾಗಿತ್ತು. ಈ ಕುರಿತ ಎಐ ರಚಿತ ಚಿತ್ರವನ್ನು ಪುರುಷೋತ್ತಮ ಖುಶ್ವಾಹ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಖುಶ್ವಾಹ ಅವರ ಪೋಸ್ಟ್ ನೋಡಿ ಪಾಂಡೆ ಮತ್ತು ಆತನ ಸಮುದಾಯದವರು ಆಕ್ರೋಶಗೊಂಡಿದ್ದರು. ಪಾಂಡೆ ಖುಶ್ವಾಹ ಮತ್ತು ಆತನ ಕುಟುಂಬವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎನ್ನಲಾಗಿದೆ.

ಇದು ಬಳಿಕ ಜಾತಿ ಸಂಘರ್ಷಕ್ಕೆ ಕಾರಣವಾಗಿದೆ. ಅಕ್ಕಪಕ್ಕದ ಹಳ್ಳಿಗಳ ಬ್ರಾಹ್ಮಣರು ಒಟ್ಟುಗೂಡಿ, ಖುಶ್ವಾಹ ಹಾಕಿರುವ ಪೋಸ್ಟ್, ಕೇವಲ ಅನುಜ್ ಪಾಂಡೆಗೆ ಮಾಡಿದ ಅವಮಾನವಲ್ಲ, ಇಡೀ ಬ್ರಾಹ್ಮಣ ಸಮುದಾಯಕ್ಕೆ ಮಾಡಿದ ಅವಮಾನ ಎಂದು ತೀರ್ಮಾನಿಸಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ ಮಾತನಾಡಿರುವ ಪಾಂಡೆ, “ನಾವು ಖುಶ್ವಾಹಗೆ ಜಾತಿ ದೌರ್ಜನ್ಯ ಎಸಗಿಲ್ಲ. ಆತನದ್ದು ಮತ್ತು ನನ್ನದು ಗುರು ಶಿಷ್ಯರ ರೀತಿಯ ಸಂಬಂಧ. ಆತ ಮಾಡಿದ ತಪ್ಪಿಗೆ ನನ್ನ ಪಾದ ತೊಳೆದು ಕ್ಷಮೆ ಯಾಚಿಸಿದ್ದಾನೆ ಎಂದಿದ್ದಾರೆ.

ಪ್ರತೀಕಾರದ ಭಯದಿಂದಾಗಿ ಕುಶ್ವಾಹ ಮತ್ತು ಅವರ ಕುಟುಂಬವು ಈ ವಿಷಯದ ಬಗ್ಗೆ ಮಾತನಾಡಲು ಅಥವಾ ಔಪಚಾರಿಕ ದೂರು ದಾಖಲಿಸಲು ಹಿಂಜರಿಯುತ್ತಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಆರ್‌ಎಸ್‌ಎಸ್‌ ಶಿಬಿರಗಳಲ್ಲಿ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...