Homeಅಂತರಾಷ್ಟ್ರೀಯ'ಮತ್ತೊಂದು ನಕ್ಬಾ': ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

‘ಮತ್ತೊಂದು ನಕ್ಬಾ’: ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣವನ್ನು ಮತ್ತೊಂದು ನಕ್ಬಾ (ದುರಂತ) ಎನ್ನಬಹುದು. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ವಿಶ್ವಸಂಸ್ಥೆಯ ತಜ್ಞರು ಹೇಳುತ್ತಾರೆ.

ಕದನ ವಿರಾಮ ಜಾರಿಯಾದ ಹಿನ್ನೆಲೆ, ಸದ್ಯಕ್ಕೆ ಇಸ್ರೇಲ್ ಬಾಂಬ್ ದಾಳಿಯನ್ನು ನಿಲ್ಲಿಸಿದೆ. ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈಗಾಗಲೇ ಉತ್ತರ ಗಾಝಾ ತಲುಪಿದವರ ಪೈಕಿ ಕೆಲವರು ರಕ್ಷಣಾ ತಂಡಗಳ ಜೊತೆಗೂಡಿ ತಮ್ಮವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಕುಸಿದ ಕಟ್ಟಡಗಳ ಅವಶೇಷಗಳನ್ನು ಬುಲ್ಡೋಝರ್ ಮೂಲಕ ತೆರವುಗೊಳಿಸಿ ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ತಮ್ಮ ಊರುಗಳತ್ತ ಮರಳುತ್ತಿರುವ ಜನರ ಮನೆಗಳು ಸಂಪೂರ್ಣ ನಾಶವಾಗಿರುವುದರಿಂದ ಅವರಿಗೆ ತಾತ್ಕಾಲಿಕವಾಗಿ ತಂಗಲು ಡೇರೆಗಳು ಮತ್ತು ಕಾರವಾನ್‌ಗಳ ಅಗತ್ಯವಿದೆ. ಅದು ತಕ್ಷಣವೇ ತಲುಪಿಸಲು ಅವಕಾಶ ನೀಡಬೇಕು. ಗಾಝಾದ ಗಡಿಗಳನ್ನು ತೆರೆಯಬೇಕು ಎಂದು ವಿಶ್ವಸಂಸ್ಥೆ ಆಗ್ರಹಿಸಿದೆ.

ಉತ್ತರ ಗಾಝಾದಿಂದ ಇಸ್ರೇಲ್ ತನ್ನ ಸೇನೆಯನ್ನು ಹಿಂತೆಗೆದುಕೊಂಡಿದೆ. ಅಲ್ಲಿಗೆ ಜನರು ಮರಳುತ್ತಿದ್ದಾರೆ. ಆದರೆ, ಕಣ್ಣು ಹಾಯಿಸಿದಷ್ಟು ಪ್ರದೇಶದಲ್ಲಿ ಕೇವಲ ಕಟ್ಟಡಗಳ ಅವಶೇಷಗಳು ಹೊರತು ಇನ್ನೇನು ಕಾಣುತ್ತಿಲ್ಲ ಎಂದು ಜನರ ವಸತಿ ಹಕ್ಕಿನ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಬಾಲಕೃಷ್ಣನ್ ರಾಜಗೋಪಾಲ್ ಹೇಳಿದ್ದಾರೆ.

“ಮಾನಸಿಕ ಪರಿಣಾಮಗಳು ಮತ್ತು ಆಘಾತವು ಆಳವಾದವು. ಉತ್ತರ ಗಾಝಾಗೆ ಹಿಂದಿರುಗುತ್ತಿರುವ ಜನರಲ್ಲಿ ನಾವೀಗ ನೋಡುತ್ತಿರುವುದು ಅದನ್ನೇ ಎಂದು ಶನಿವಾರ ಅಲ್- ಜಝೀರಾಗೆ ನೀಡಿದ ಸಂದರ್ಶನದಲ್ಲಿ ರಾಜಗೋಪಾಲ್ ತಿಳಿಸಿದ್ದಾರೆ.

ಇಸ್ರೇಲ್ ಆಕ್ರಮಣದಿಂದ ಗಾಝಾ ಶೇಕಡ 92ರಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ಧ್ವಂಸಗೊಂಡಿವೆ. ಹಾಗಾಗಿ, ಲಕ್ಷಾಂತರು ಜನರು ಡೇರೆಗಳು ಮತ್ತು ಇತರ ತಾತ್ಕಾಲಿಕ ಆಶ್ರಯಗಳಲ್ಲಿ ವಾಸಿಸಬೇಕಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಈ ವರ್ಷದ ಆರಂಭದಲ್ಲಿ ತಾತ್ಕಾಲಿಕ ಕದನ ವಿರಾಮ ಜಾರಿಯಾದಾಗ ಗಾಝಾಗೆ ಡೇರೆಗಳು ಮತ್ತು ಕಾರವಾನ್‌ಗಳನ್ನು ತಲುಪಿಸಬೇಕಾಗಿತ್ತು. ಆದರೆ, ಇಸ್ರೇಲ್‌ನ ಕಟ್ಟುನಿಟ್ಟಿನ ದಿಗ್ಬಂಧನದಿಂದಾಗಿ ಅದು ಸಾಧ್ಯವಾಗಿಲ್ಲ ಎಂದು ರಾಜಗೋಪಾಲ್ ಹೇಳಿದ್ದಾರೆ.

ಈಗ ತಕ್ಷಣ ಗಾಝಾದ ಗಡಿಗಳನ್ನು ತೆರೆದು ನೆರವು ಸಾಮಾಗ್ರಿಗಳನ್ನು ಜನರಿಗೆ ತಲುಪಿಸಲು ಅನುಮತಿಸಬೇಕು. ಯುದ್ಧ ಭೂಮಿಯಲ್ಲಿ ಕಟ್ಟಡಗಳ ಅವಶೇಷಗಳು ಹೊರತು ಜೀವಿಸಲು ಬೇಕಾದ ಏನೂ ಇಲ್ಲ. ಗಡಿ ತೆರೆಯದ ಹೊರತು ಗಾಝಾಗೆ ಹಿಂದಿರುಗಿದ ಜನರಿಗೆ ಯಾವುದೇ ಪ್ರಯೋಜನ ಆಗದು ಎಂದು ರಾಜಗೋಪಾಲ್ ತಿಳಿಸಿದ್ದಾರೆ.

ಗಾಝಾ ಪಟ್ಟಿಯಾದ್ಯಂತ ಮನೆಗಳ ನಾಶವನ್ನು ವಿವರಿಸಲು ‘ದೇಶ ಹತ್ಯೆ’ ಎಂಬ ಪದವನ್ನು ಬಳಸಿದ ರಾಜಗೋಪಾಲ್, ಗಾಝಾದಲ್ಲಿನ ವಸತಿ ನಾಶವು ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನಡೆಸಿದ ನರಮೇಧದ ಪ್ರಮುಖ ಅಂಶ ಎಂದಿದ್ದಾರೆ.

ಮನೆಗಳನ್ನು ನಾಶಪಡಿಸುವುದು, ಒಂದು ಪ್ರದೇಶದಿಂದ ಜನರನ್ನು ತೆರವುಗೊಳಿಸುವುದು ಮತ್ತು ಆ ಪ್ರದೇಶವನ್ನು ವಾಸಯೋಗ್ಯವಲ್ಲದವನ್ನಾಗಿ ಮಾಡುವುದು ನರಮೇಧದಕ್ಕೆ ಪ್ರಮುಖ ಉದಾಹರಣೆಗಳಾಗಿವೆ. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ರಾಜಗೋಪಾಲ್ ಹೇಳಿದ್ದಾರೆ.

1948ರಲ್ಲಿ ಇಸ್ರೇಲ್ ರಚನೆಯಾದಾಗ ಪ್ಯಾಲೆಸ್ತೀನ್‌ನಲ್ಲಿ ನಡೆದ ಜನಾಂಗೀಯ ಉಲ್ಲೇಖಿಸಿದ ಅವರು, “ಇದು ಮತ್ತೊಂದು ನಕ್ಬಾದಂತಿದೆ. ಏಕೆಂದರೆ, 1948ರಲ್ಲಿ ಏನು ನಡೆದಿತ್ತೋ ಅದೇ ಕಳೆದ ಎರಡು ವರ್ಷಗಳಲ್ಲಿ ನಡೆದಿದೆ ಎಂದಿದ್ದಾರೆ.

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...