Homeಅಂತರಾಷ್ಟ್ರೀಯ'ಮತ್ತೊಂದು ನಕ್ಬಾ': ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

‘ಮತ್ತೊಂದು ನಕ್ಬಾ’: ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣವನ್ನು ಮತ್ತೊಂದು ನಕ್ಬಾ (ದುರಂತ) ಎನ್ನಬಹುದು. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ವಿಶ್ವಸಂಸ್ಥೆಯ ತಜ್ಞರು ಹೇಳುತ್ತಾರೆ.

ಕದನ ವಿರಾಮ ಜಾರಿಯಾದ ಹಿನ್ನೆಲೆ, ಸದ್ಯಕ್ಕೆ ಇಸ್ರೇಲ್ ಬಾಂಬ್ ದಾಳಿಯನ್ನು ನಿಲ್ಲಿಸಿದೆ. ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈಗಾಗಲೇ ಉತ್ತರ ಗಾಝಾ ತಲುಪಿದವರ ಪೈಕಿ ಕೆಲವರು ರಕ್ಷಣಾ ತಂಡಗಳ ಜೊತೆಗೂಡಿ ತಮ್ಮವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಕುಸಿದ ಕಟ್ಟಡಗಳ ಅವಶೇಷಗಳನ್ನು ಬುಲ್ಡೋಝರ್ ಮೂಲಕ ತೆರವುಗೊಳಿಸಿ ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ತಮ್ಮ ಊರುಗಳತ್ತ ಮರಳುತ್ತಿರುವ ಜನರ ಮನೆಗಳು ಸಂಪೂರ್ಣ ನಾಶವಾಗಿರುವುದರಿಂದ ಅವರಿಗೆ ತಾತ್ಕಾಲಿಕವಾಗಿ ತಂಗಲು ಡೇರೆಗಳು ಮತ್ತು ಕಾರವಾನ್‌ಗಳ ಅಗತ್ಯವಿದೆ. ಅದು ತಕ್ಷಣವೇ ತಲುಪಿಸಲು ಅವಕಾಶ ನೀಡಬೇಕು. ಗಾಝಾದ ಗಡಿಗಳನ್ನು ತೆರೆಯಬೇಕು ಎಂದು ವಿಶ್ವಸಂಸ್ಥೆ ಆಗ್ರಹಿಸಿದೆ.

ಉತ್ತರ ಗಾಝಾದಿಂದ ಇಸ್ರೇಲ್ ತನ್ನ ಸೇನೆಯನ್ನು ಹಿಂತೆಗೆದುಕೊಂಡಿದೆ. ಅಲ್ಲಿಗೆ ಜನರು ಮರಳುತ್ತಿದ್ದಾರೆ. ಆದರೆ, ಕಣ್ಣು ಹಾಯಿಸಿದಷ್ಟು ಪ್ರದೇಶದಲ್ಲಿ ಕೇವಲ ಕಟ್ಟಡಗಳ ಅವಶೇಷಗಳು ಹೊರತು ಇನ್ನೇನು ಕಾಣುತ್ತಿಲ್ಲ ಎಂದು ಜನರ ವಸತಿ ಹಕ್ಕಿನ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಬಾಲಕೃಷ್ಣನ್ ರಾಜಗೋಪಾಲ್ ಹೇಳಿದ್ದಾರೆ.

“ಮಾನಸಿಕ ಪರಿಣಾಮಗಳು ಮತ್ತು ಆಘಾತವು ಆಳವಾದವು. ಉತ್ತರ ಗಾಝಾಗೆ ಹಿಂದಿರುಗುತ್ತಿರುವ ಜನರಲ್ಲಿ ನಾವೀಗ ನೋಡುತ್ತಿರುವುದು ಅದನ್ನೇ ಎಂದು ಶನಿವಾರ ಅಲ್- ಜಝೀರಾಗೆ ನೀಡಿದ ಸಂದರ್ಶನದಲ್ಲಿ ರಾಜಗೋಪಾಲ್ ತಿಳಿಸಿದ್ದಾರೆ.

ಇಸ್ರೇಲ್ ಆಕ್ರಮಣದಿಂದ ಗಾಝಾ ಶೇಕಡ 92ರಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ಧ್ವಂಸಗೊಂಡಿವೆ. ಹಾಗಾಗಿ, ಲಕ್ಷಾಂತರು ಜನರು ಡೇರೆಗಳು ಮತ್ತು ಇತರ ತಾತ್ಕಾಲಿಕ ಆಶ್ರಯಗಳಲ್ಲಿ ವಾಸಿಸಬೇಕಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಈ ವರ್ಷದ ಆರಂಭದಲ್ಲಿ ತಾತ್ಕಾಲಿಕ ಕದನ ವಿರಾಮ ಜಾರಿಯಾದಾಗ ಗಾಝಾಗೆ ಡೇರೆಗಳು ಮತ್ತು ಕಾರವಾನ್‌ಗಳನ್ನು ತಲುಪಿಸಬೇಕಾಗಿತ್ತು. ಆದರೆ, ಇಸ್ರೇಲ್‌ನ ಕಟ್ಟುನಿಟ್ಟಿನ ದಿಗ್ಬಂಧನದಿಂದಾಗಿ ಅದು ಸಾಧ್ಯವಾಗಿಲ್ಲ ಎಂದು ರಾಜಗೋಪಾಲ್ ಹೇಳಿದ್ದಾರೆ.

ಈಗ ತಕ್ಷಣ ಗಾಝಾದ ಗಡಿಗಳನ್ನು ತೆರೆದು ನೆರವು ಸಾಮಾಗ್ರಿಗಳನ್ನು ಜನರಿಗೆ ತಲುಪಿಸಲು ಅನುಮತಿಸಬೇಕು. ಯುದ್ಧ ಭೂಮಿಯಲ್ಲಿ ಕಟ್ಟಡಗಳ ಅವಶೇಷಗಳು ಹೊರತು ಜೀವಿಸಲು ಬೇಕಾದ ಏನೂ ಇಲ್ಲ. ಗಡಿ ತೆರೆಯದ ಹೊರತು ಗಾಝಾಗೆ ಹಿಂದಿರುಗಿದ ಜನರಿಗೆ ಯಾವುದೇ ಪ್ರಯೋಜನ ಆಗದು ಎಂದು ರಾಜಗೋಪಾಲ್ ತಿಳಿಸಿದ್ದಾರೆ.

ಗಾಝಾ ಪಟ್ಟಿಯಾದ್ಯಂತ ಮನೆಗಳ ನಾಶವನ್ನು ವಿವರಿಸಲು ‘ದೇಶ ಹತ್ಯೆ’ ಎಂಬ ಪದವನ್ನು ಬಳಸಿದ ರಾಜಗೋಪಾಲ್, ಗಾಝಾದಲ್ಲಿನ ವಸತಿ ನಾಶವು ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನಡೆಸಿದ ನರಮೇಧದ ಪ್ರಮುಖ ಅಂಶ ಎಂದಿದ್ದಾರೆ.

ಮನೆಗಳನ್ನು ನಾಶಪಡಿಸುವುದು, ಒಂದು ಪ್ರದೇಶದಿಂದ ಜನರನ್ನು ತೆರವುಗೊಳಿಸುವುದು ಮತ್ತು ಆ ಪ್ರದೇಶವನ್ನು ವಾಸಯೋಗ್ಯವಲ್ಲದವನ್ನಾಗಿ ಮಾಡುವುದು ನರಮೇಧದಕ್ಕೆ ಪ್ರಮುಖ ಉದಾಹರಣೆಗಳಾಗಿವೆ. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ರಾಜಗೋಪಾಲ್ ಹೇಳಿದ್ದಾರೆ.

1948ರಲ್ಲಿ ಇಸ್ರೇಲ್ ರಚನೆಯಾದಾಗ ಪ್ಯಾಲೆಸ್ತೀನ್‌ನಲ್ಲಿ ನಡೆದ ಜನಾಂಗೀಯ ಉಲ್ಲೇಖಿಸಿದ ಅವರು, “ಇದು ಮತ್ತೊಂದು ನಕ್ಬಾದಂತಿದೆ. ಏಕೆಂದರೆ, 1948ರಲ್ಲಿ ಏನು ನಡೆದಿತ್ತೋ ಅದೇ ಕಳೆದ ಎರಡು ವರ್ಷಗಳಲ್ಲಿ ನಡೆದಿದೆ ಎಂದಿದ್ದಾರೆ.

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...