Homeಅಂತರಾಷ್ಟ್ರೀಯ'ಮತ್ತೊಂದು ನಕ್ಬಾ': ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

‘ಮತ್ತೊಂದು ನಕ್ಬಾ’: ಗಾಝಾ ಚೇತರಿಕೆಗೆ ತಲೆಮಾರುಗಳೇ ಬೇಕು ಎಂದ ಯುಎನ್ ತಜ್ಞರು

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣವನ್ನು ಮತ್ತೊಂದು ನಕ್ಬಾ (ದುರಂತ) ಎನ್ನಬಹುದು. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ವಿಶ್ವಸಂಸ್ಥೆಯ ತಜ್ಞರು ಹೇಳುತ್ತಾರೆ.

ಕದನ ವಿರಾಮ ಜಾರಿಯಾದ ಹಿನ್ನೆಲೆ, ಸದ್ಯಕ್ಕೆ ಇಸ್ರೇಲ್ ಬಾಂಬ್ ದಾಳಿಯನ್ನು ನಿಲ್ಲಿಸಿದೆ. ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಈಗಾಗಲೇ ಉತ್ತರ ಗಾಝಾ ತಲುಪಿದವರ ಪೈಕಿ ಕೆಲವರು ರಕ್ಷಣಾ ತಂಡಗಳ ಜೊತೆಗೂಡಿ ತಮ್ಮವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಕುಸಿದ ಕಟ್ಟಡಗಳ ಅವಶೇಷಗಳನ್ನು ಬುಲ್ಡೋಝರ್ ಮೂಲಕ ತೆರವುಗೊಳಿಸಿ ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ತಮ್ಮ ಊರುಗಳತ್ತ ಮರಳುತ್ತಿರುವ ಜನರ ಮನೆಗಳು ಸಂಪೂರ್ಣ ನಾಶವಾಗಿರುವುದರಿಂದ ಅವರಿಗೆ ತಾತ್ಕಾಲಿಕವಾಗಿ ತಂಗಲು ಡೇರೆಗಳು ಮತ್ತು ಕಾರವಾನ್‌ಗಳ ಅಗತ್ಯವಿದೆ. ಅದು ತಕ್ಷಣವೇ ತಲುಪಿಸಲು ಅವಕಾಶ ನೀಡಬೇಕು. ಗಾಝಾದ ಗಡಿಗಳನ್ನು ತೆರೆಯಬೇಕು ಎಂದು ವಿಶ್ವಸಂಸ್ಥೆ ಆಗ್ರಹಿಸಿದೆ.

ಉತ್ತರ ಗಾಝಾದಿಂದ ಇಸ್ರೇಲ್ ತನ್ನ ಸೇನೆಯನ್ನು ಹಿಂತೆಗೆದುಕೊಂಡಿದೆ. ಅಲ್ಲಿಗೆ ಜನರು ಮರಳುತ್ತಿದ್ದಾರೆ. ಆದರೆ, ಕಣ್ಣು ಹಾಯಿಸಿದಷ್ಟು ಪ್ರದೇಶದಲ್ಲಿ ಕೇವಲ ಕಟ್ಟಡಗಳ ಅವಶೇಷಗಳು ಹೊರತು ಇನ್ನೇನು ಕಾಣುತ್ತಿಲ್ಲ ಎಂದು ಜನರ ವಸತಿ ಹಕ್ಕಿನ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಬಾಲಕೃಷ್ಣನ್ ರಾಜಗೋಪಾಲ್ ಹೇಳಿದ್ದಾರೆ.

“ಮಾನಸಿಕ ಪರಿಣಾಮಗಳು ಮತ್ತು ಆಘಾತವು ಆಳವಾದವು. ಉತ್ತರ ಗಾಝಾಗೆ ಹಿಂದಿರುಗುತ್ತಿರುವ ಜನರಲ್ಲಿ ನಾವೀಗ ನೋಡುತ್ತಿರುವುದು ಅದನ್ನೇ ಎಂದು ಶನಿವಾರ ಅಲ್- ಜಝೀರಾಗೆ ನೀಡಿದ ಸಂದರ್ಶನದಲ್ಲಿ ರಾಜಗೋಪಾಲ್ ತಿಳಿಸಿದ್ದಾರೆ.

ಇಸ್ರೇಲ್ ಆಕ್ರಮಣದಿಂದ ಗಾಝಾ ಶೇಕಡ 92ರಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ಧ್ವಂಸಗೊಂಡಿವೆ. ಹಾಗಾಗಿ, ಲಕ್ಷಾಂತರು ಜನರು ಡೇರೆಗಳು ಮತ್ತು ಇತರ ತಾತ್ಕಾಲಿಕ ಆಶ್ರಯಗಳಲ್ಲಿ ವಾಸಿಸಬೇಕಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಈ ವರ್ಷದ ಆರಂಭದಲ್ಲಿ ತಾತ್ಕಾಲಿಕ ಕದನ ವಿರಾಮ ಜಾರಿಯಾದಾಗ ಗಾಝಾಗೆ ಡೇರೆಗಳು ಮತ್ತು ಕಾರವಾನ್‌ಗಳನ್ನು ತಲುಪಿಸಬೇಕಾಗಿತ್ತು. ಆದರೆ, ಇಸ್ರೇಲ್‌ನ ಕಟ್ಟುನಿಟ್ಟಿನ ದಿಗ್ಬಂಧನದಿಂದಾಗಿ ಅದು ಸಾಧ್ಯವಾಗಿಲ್ಲ ಎಂದು ರಾಜಗೋಪಾಲ್ ಹೇಳಿದ್ದಾರೆ.

ಈಗ ತಕ್ಷಣ ಗಾಝಾದ ಗಡಿಗಳನ್ನು ತೆರೆದು ನೆರವು ಸಾಮಾಗ್ರಿಗಳನ್ನು ಜನರಿಗೆ ತಲುಪಿಸಲು ಅನುಮತಿಸಬೇಕು. ಯುದ್ಧ ಭೂಮಿಯಲ್ಲಿ ಕಟ್ಟಡಗಳ ಅವಶೇಷಗಳು ಹೊರತು ಜೀವಿಸಲು ಬೇಕಾದ ಏನೂ ಇಲ್ಲ. ಗಡಿ ತೆರೆಯದ ಹೊರತು ಗಾಝಾಗೆ ಹಿಂದಿರುಗಿದ ಜನರಿಗೆ ಯಾವುದೇ ಪ್ರಯೋಜನ ಆಗದು ಎಂದು ರಾಜಗೋಪಾಲ್ ತಿಳಿಸಿದ್ದಾರೆ.

ಗಾಝಾ ಪಟ್ಟಿಯಾದ್ಯಂತ ಮನೆಗಳ ನಾಶವನ್ನು ವಿವರಿಸಲು ‘ದೇಶ ಹತ್ಯೆ’ ಎಂಬ ಪದವನ್ನು ಬಳಸಿದ ರಾಜಗೋಪಾಲ್, ಗಾಝಾದಲ್ಲಿನ ವಸತಿ ನಾಶವು ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನಡೆಸಿದ ನರಮೇಧದ ಪ್ರಮುಖ ಅಂಶ ಎಂದಿದ್ದಾರೆ.

ಮನೆಗಳನ್ನು ನಾಶಪಡಿಸುವುದು, ಒಂದು ಪ್ರದೇಶದಿಂದ ಜನರನ್ನು ತೆರವುಗೊಳಿಸುವುದು ಮತ್ತು ಆ ಪ್ರದೇಶವನ್ನು ವಾಸಯೋಗ್ಯವಲ್ಲದವನ್ನಾಗಿ ಮಾಡುವುದು ನರಮೇಧದಕ್ಕೆ ಪ್ರಮುಖ ಉದಾಹರಣೆಗಳಾಗಿವೆ. ಗಾಝಾ ಚೇತರಿಸಿಕೊಳ್ಳಲು ತಲೆಮಾರುಗಳೇ ಬೇಕು ಎಂದು ರಾಜಗೋಪಾಲ್ ಹೇಳಿದ್ದಾರೆ.

1948ರಲ್ಲಿ ಇಸ್ರೇಲ್ ರಚನೆಯಾದಾಗ ಪ್ಯಾಲೆಸ್ತೀನ್‌ನಲ್ಲಿ ನಡೆದ ಜನಾಂಗೀಯ ಉಲ್ಲೇಖಿಸಿದ ಅವರು, “ಇದು ಮತ್ತೊಂದು ನಕ್ಬಾದಂತಿದೆ. ಏಕೆಂದರೆ, 1948ರಲ್ಲಿ ಏನು ನಡೆದಿತ್ತೋ ಅದೇ ಕಳೆದ ಎರಡು ವರ್ಷಗಳಲ್ಲಿ ನಡೆದಿದೆ ಎಂದಿದ್ದಾರೆ.

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...