Homeಮುಖಪುಟ'ತಾಂತ್ರಿಕ ಸಮಸ್ಯೆ': ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

‘ತಾಂತ್ರಿಕ ಸಮಸ್ಯೆ’: ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

- Advertisement -
- Advertisement -

ನವದೆಹಲಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಟ್ಟಿರುವುದು ಉದ್ದೇಶಪೂರ್ವಕವಾಗಿರಲಿಲ್ಲ, ಅದು ತಾಂತ್ರಿಕ ಸಮಸ್ಯೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಹೇಳಿದ್ದಾರೆ.

ಭಾನುವಾರ (ಅ.12) ಎರಡನೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುತ್ತಕಿ, “ಶುಕ್ರವಾರದ ಪತ್ರಿಕಾಗೋಷ್ಠಿಯನ್ನು ಕಡಿಮೆ ಅವಧಿಯಲ್ಲಿ ಆಯೋಜಿಸಲಾಗಿತ್ತು. ಭಾಗವಹಿಸುವವರ ಪಟ್ಟಿಯನ್ನೂ ನಿರ್ದಿಷ್ಟ ಪತ್ರಕರ್ತರೊಂದಿಗೆ ಸೇರಿ ಸಿದ್ಧಪಡಿಸಲಾಗಿತ್ತು. ಹಾಗಾಗಿ, ಇದು ಹೆಚ್ಚಾಗಿ ತಾಂತ್ರಿಕ ಸಮಸ್ಯೆಯಾಗಿದೆ. ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಹೊರಗಿಟ್ಟಿಲ್ಲ ಎಂದಿದ್ದಾರೆ. ಎರಡನೇ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರು ಭಾಗವಹಿಸಿದ್ದರು.

ಮುತ್ತಕಿ ಆರು ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಅಕ್ಟೋಬರ್ 10 (ಶುಕ್ರವಾರ) ರಂದು ನವದೆಹಲಿಯಲ್ಲಿ ನಡೆದ ಅವರ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಭಾಗವಹಿಸಲು ಅವಕಾಶವಿರಲಿಲ್ಲ.

ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದು ಮಹಿಳೆಯರು ಶಿಕ್ಷಣ ಮತ್ತು ಹೆಚ್ಚಿನ ಕೆಲಸದ ಸ್ಥಳಗಳನ್ನು ಪ್ರವೇಶಿಸುವುದನ್ನು ತಡೆಯುವುದರಲ್ಲಿ ಕುಖ್ಯಾತಿ ಪಡೆದಿರುವ ತಾಲಿಬಾನ್‌ನ ಸ್ತ್ರೀದ್ವೇಷದ ಪ್ರತಿಬಿಂಬ ಎಂದು ಹಲವರು ಟೀಕಿಸಿದ್ದರು. ಭಾರತದಲ್ಲಿ ಇಂತದಕ್ಕೆ ಅವಕಾಶ ನೀಡಿದ ಪತ್ರಕರ್ತರು ಮತ್ತು ಕೇಂದ್ರ ಸರ್ಕಾರವನ್ನು ಜನರು ತರಾಟೆಗೆ ತೆಗೆದುಕೊಂಡಿದ್ದರು.

ಪಾಕಿಸ್ತಾನದೊಂದಿಗಿನ ಅಫ್ಘಾನಿಸ್ತಾನದ ಸಂಘರ್ಷದ ಕುರಿತು ಮಾತನಾಡಿದ ಮುತ್ತಕಿ, “ನಾವು ಪರಿಸ್ಥಿತಿಗೆ ಶಾಂತಿಯುತ ಪರಿಹಾರವನ್ನು ಬಯಸುತ್ತೇವೆ. ಆದರೆ ಶಾಂತಿ ಪ್ರಯತ್ನಗಳು ಯಶಸ್ವಿಯಾಗದಿದ್ದರೆ ನಮಗೆ ಇತರ ಆಯ್ಕೆಗಳಿವೆ” ಎಂದಿದ್ದಾರೆ.

ಗುರುವಾರ ಪಾಕಿಸ್ತಾನ ಕಾಬೂಲ್‌ನಲ್ಲಿ ವಾಯುದಾಳಿ ನಡೆಸಿದ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಭಾರತದಲ್ಲಿ ಕುಳಿತು ಮುತ್ತಕಿ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

“ನಾವು ಪಾಕಿಸ್ತಾನದ ಜನರು ಮತ್ತು ಸರ್ಕಾರದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆ. ಆದರೆ ಆ ದೇಶದ ಕೆಲವು ಅಂಶಗಳನ್ನು ಮುಂದಿಟ್ಟು ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಮುತ್ತಕಿ ಪಾಕಿಸ್ತಾನವನ್ನು ಟೀಕಿಸಿದ್ದಾರೆ.

ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಆರ್‌ಎಸ್‌ಎಸ್‌ ಶಿಬಿರಗಳಲ್ಲಿ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...