Homeಮುಖಪುಟಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

ಪೌರತ್ವ ಕಾಯ್ದೆಯಲ್ಲಿ ಬದಲಾವಣೆಗಳಾಗಬಹುದು: ದಿಟ್ಟ ಪ್ರತಿಭಟನೆಗಳಿಗೆ ಮಣಿಯುವ ಸುಳಿವು ಕೊಟ್ಟ ಅಮಿತ್‌ ಶಾ?

- Advertisement -
- Advertisement -

ಪೌರತ್ವ ತಿದ್ದುಪಡಿ ಮಸೂದೆಯು ಕಾಯ್ದೆಯಾಗಿ ಬದಲಾದ ನಂತರ ಉದ್ಭವಿಸಿರುವ ಭಾರೀ ಪ್ರತಿಭಟನೆಗಳು ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಪ್ರತಿಭಟನೆಗಳು ಒಂದೆಡೆಯಾದರೆ, ಇನ್ನೊಂದೆಡೆ ದೇಶ-ವಿದೇಶದ ಗಣ್ಯರು ಸೇರಿದಂತೆ ಬಿಜೆಪಿಯ ಮಿತ್ರಪಕ್ಷಗಳೇ ಕಾಯ್ದೆಯ ವಿರುದ್ಧ ಮಾತನಾಡಲು ಶುರುಮಾಡಿವೆ.

ಎಲ್ಲಕ್ಕಿಂತ ಹೆಚ್ಚಾಗಿ ಬಿಜೆಪಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರು ಈಶಾನ್ಯ ಭಾರತದಲ್ಲಿ ಪ್ರತಿರೋಧ ಮುಗಿಲು ಮುಟ್ಟಿದೆ. ಅಸ್ಸಾಂನಲ್ಲಿ ಅಧಿಕಾರ ಹಂಚಿಕೊಂಡಿರುವ ಬಿಜೆಪಿಯ ಮಿತ್ರಪಕ್ಷ ಎಜಿಪಿ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರುವ ಸೂಚನೆ ನೀಡಿದೆ. ಬಿಜೆಪಿಯ ಮುಖಂಡರು ಸರಣಿ ರಾಜೀನಾಮೆ ನೀಡುತ್ತಿದ್ದಾರೆ. ಇದೆಲ್ಲವೂ ಅಮಿತ್‌ ಶಾ ಮತ್ತು ನರೇಂದ್ರ ಮೋದಿಯವರನ್ನು ಕಂಗೆಡಿಸಿದೆ. ಹಾಗಾಗಿ ಗೃಹ ಸಚಿವ ಅಮಿತ್‌ ಶಾ ಕಾಯ್ದೆಯಲ್ಲಿ ಬದಲಾವಣೆ ತರುವುದಾಗಿ ಸುಳಿವು ನೀಡಿದ್ದಾರೆ.

ನಾವು ಇದರ ಬಗ್ಗೆ ಮಾತನಾಡುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ (ಸಿಎಎ) ಕೆಲವು ಬದಲಾವಣೆಗಳಾಗಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂ ಮತ್ತು ಈಶಾನ್ಯದ ಇತರ ರಾಜ್ಯಗಳ ಜನರಿಗೆ ಅವರ ಸಂಸ್ಕೃತಿ, ಭಾಷೆ, ಸಾಮಾಜಿಕ ಗುರುತು ಮತ್ತು ರಾಜಕೀಯ ಹಕ್ಕುಗಳ ಮೇಲೆ ದುಷ್ಪರಿಣಾಮಗಳು ಬೀರುವುದಿಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಈಶಾನ್ಯ ರಾಜ್ಯಗಳಲ್ಲಿ ಶನಿವಾರ ಹಿಂಸಾಚಾರ ಮುಂದುವರೆದಿದ್ದು, ಹಲವಾರು ಅಗ್ನಿಶಾಮಕ ಘಟನೆಗಳು ನಡೆದಿದ್ದು, ಪ್ರತಿಭಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ ಮತ್ತು ಒಬ್ಬ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂಬ ವರದಿಗಳು ಬಂದ ನಂತರ ಅಮಿತ್‌ ಶಾ ಮೇಲಿನ ಹೇಳಿಕೆ ನೀಡಿದ್ದಾರೆ.

“ಈಶಾನ್ಯ ರಾಜ್ಯದ ಜನರನ್ನು ರಕ್ಷಿಸುವುದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ವರು ಜಾರ್ಖಂಡ್‌ನ ಗಿರಿಡಿಹ್‌ನಲ್ಲಿ ಶನಿವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನು ಜಾರಿಯಾದ ನಂತರ ತಮ್ಮ ಮೊದಲ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಈ ವಿಷಯದ ಬಗ್ಗೆ ಚರ್ಚಿಸಲು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಅವರ ಕ್ಯಾಬಿನೆಟ್ ಮಂತ್ರಿಗಳು ಶುಕ್ರವಾರ ಭೇಟಿಯಾಗಿದ್ದರು. “ಮೇಘಾಲಯದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದರು ಎಂದು ತಿಳಿಸಿದ್ದಾರೆ.

ಯಾವುದೇ ಸಮಸ್ಯೆ ಇಲ್ಲ ಎಂದು ಅವರಿಗೆ ಅರ್ಥಮಾಡಿಸಲು ನಾನು ಪ್ರಯತ್ನಿಸಿದೆ. ಆದರೂ, ಕಾಯ್ದೆಯಲ್ಲಿ ಕೆಲವು ಬದಲಾವಣೆಗಳು ಬೇಕೆಂದ ಅವರು ನನ್ನನ್ನು ವಿನಂತಿಸಿದರು. ಕ್ರಿಸ್‌ಮಸ್ ನಂತರ ಬಿಡುವಾಗಲಿದ್ದು ಆಗ ನನ್ನ ಬಳಿಗೆ ಬರಲು ನಾನು ಸಂಗ್ಮಾ ಜಿ ಅವರನ್ನು ಕೇಳಿದ್ದೇನೆ ಮತ್ತು ಮೇಘಾಲಯಕ್ಕೆ ರಚನಾತ್ಮಕ ಪರಿಹಾರದ ಬಗ್ಗೆ ನಾವು ಯೋಚಿಸಬಹುದು. ಯಾರಿಗೂ ಭಯಪಡಬೇಕಾಗಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ.

ಆನಂತರ ಅಮಿತ್‌ ಶಾರವರು ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದಾರೆ. ಟ್ರಿಪಲ್ ತಲಾಖ್ ನಿಷೇಧ, 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪ್ರಮುಖ ಕ್ರಮಗಳನ್ನು ಅಲ್ಪಸಂಖ್ಯಾತ ವಿರೋಧಿಗಳೆಂದು ಬ್ರಾಂಡ್ ಮಾಡುವ ಅಭ್ಯಾಸವನ್ನು ಕಾಂಗ್ರೆಸ್‌ ಮಾಡುತ್ತಿದೆ, ಇದು ವೋಟ್‌ ಬ್ಯಾಂಕ್‌ ರಾಜಕೀಯ ಎಂದು ಅಮಿತ್‌ ಶಾ ಆರೋಪಿಸಿದ್ದಾರೆ. ಆ ಮೂಲಕ ತಾವು ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತಂದರೂ ಸಹ ಅದು ಕಾಂಗ್ರೆಸ್‌ ಅನುಕೂಲಕರವಾಗಬಾರದೆಂಬ ಎಚ್ಚರಿಕೆಯನ್ನು ಅಮಿತ್‌ ಶಾ ವಹಿಸದಂತೆ ಕಾಣುತ್ತಿದೆ.

ಏನೇ ಆದರೂ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಸ್ವಲ್ಪ ಮಟ್ಟಿಗೆ ಮಣಿದ ಹಾಗೆ ಕಾಣುತ್ತಿದೆ. ಪ್ರತಿಭಟನೆಗಳು ಮುಂದುವರಿದಿದ್ದು ಕೇಂದ್ರ ಸರ್ಕಾರ ಏನು ಮಾಡಲಿದೆ ಎಂಬುದು ಸ್ವಲ್ಪ ದಿನದಲ್ಲಿಯೇ ಗೊತ್ತಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...