Homeಮುಖಪುಟತಾಲಿಬಾನ್ ಸಚಿವರ ಮುಂದೆ ಪತ್ರಕರ್ತನ ಹತ್ಯೆ ವಿಷಯ ಪ್ರಸ್ತಾಪಿಸುವಂತೆ ಒತ್ತಾಯಿಸಿದ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್

ತಾಲಿಬಾನ್ ಸಚಿವರ ಮುಂದೆ ಪತ್ರಕರ್ತನ ಹತ್ಯೆ ವಿಷಯ ಪ್ರಸ್ತಾಪಿಸುವಂತೆ ಒತ್ತಾಯಿಸಿದ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್

- Advertisement -
- Advertisement -

ಭಾರತಕ್ಕೆ ಭೇಟಿ ನೀಡಿರುವ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಮುಂದೆ, 2021ರಲ್ಲಿ ಅಫ್ಘಾನಿಸ್ತಾನದಲ್ಲಿ ಸಂಘರ್ಷವನ್ನು ವರದಿ ಮಾಡುವಾಗ ನಡೆದ, ಪುಲಿಟ್ಝರ್ ಪ್ರಶಸ್ತಿ ವಿಜೇತ ಭಾರತೀಯ ಪತ್ರಕರ್ತ ಡ್ಯಾನಿಶ್ ಸಿದ್ದಿಕಿ ಅವರ ಹತ್ಯೆ ವಿಷಯವನ್ನು ಪ್ರಸ್ತಾಪಿಸುವಂತೆ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್ ಆಗ್ರಹಿಸಿದೆ. ಸಿದ್ದಿಕಿ ಅವರನ್ನು ಬಂಧಿಸಿ, ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂದು ಫೌಂಡೇಶನ್ ಆರೋಪಿಸಿದೆ.

ಭಾರತ ಸರ್ಕಾರ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಹೊಣೆಗಾರಿಕೆ ಕಾರ್ಯವಿಧಾನಗಳ ಮೂಲಕ ಸಿದ್ದಿಕಿ ಅವರ ಸಾವಿನ ನ್ಯಾಯಕ್ಕಾಗಿ ಒತ್ತಾಯಿಸುವಂತೆ ಶನಿವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸಿದ್ದಿಕಿ ಫೌಂಡೇಶನ್ ಆಗ್ರಹಿಸಿದೆ.

ಮುಲ್ಲಾ ಹಸನ್ ಅಖುಂದ್, ಅಬ್ದುಲ್ ಘನಿ ಬರಾದಾರ್ ಮತ್ತು ಜಬಿಯುಲ್ಲಾ ಮುಜಾಹಿದ್ ಸೇರಿದಂತೆ ಹಿರಿಯ ತಾಲಿಬಾನ್ ನಾಯಕರನ್ನು ಸಿದ್ದಿಕಿ ಹತ್ಯೆಗೆ ಸಂಬಂಧಿಸಿದಂತೆ ಯುದ್ಧಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಹೊಣೆಯಾಗಿಸಿ ಮಾರ್ಚ್ 2022ರಲ್ಲಿ ಸಿದ್ದಿಕಿ ಪೋಷಕರು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯಕ್ಕೆ ಔಪಚಾರಿಕ ದೂರು ಸಲ್ಲಿಸಿದ್ದಾರೆ.

ತಾಲಿಬಾನ್ ವಿದೇಶಾಂಗ ಸಚಿವ ಈಗ ಭಾರತಕ್ಕೆ ಭೇಟಿ ನೀಡಿರುವ ಹಿನ್ನೆಲೆ, ತಾಲಿಬಾನ್‌ಗೆ ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯ ತನ್ನ ಬಾಧ್ಯತೆಗಳನ್ನು ನೆನಪಿಸಲು ಮತ್ತು ಡ್ಯಾನಿಶ್ ಹತ್ಯೆಯ ಸ್ವತಂತ್ರ ತನಿಖೆಗೆ ಸಹಕಾರ ನೀಡುವಂತೆ ಒತ್ತಾಯಿಸಲು ಭಾರತಕ್ಕೆ ಉತ್ತಮ ಅವಕಾಶ ದೊರೆತಿದೆ ಎಂದು ಸಿದ್ದಿಕಿ ಫೌಂಡೇಶನ್ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಫೋಟೋ ಜರ್ನಲಿಸ್ಟ್ ಆಗಿದ್ದ ಡ್ಯಾನಿಶ್ ಸಿದ್ದಿಕಿ ಅವರು ಜುಲೈ 2021ರಲ್ಲಿ ಕಂದಹಾರ್‌ನಲ್ಲಿ ಕರ್ತವ್ಯದಲ್ಲಿದ್ದಾಗ, ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವಿನ ಕಾಳಗದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಿದ್ದಿಕಿ ಪಾಕಿಸ್ತಾನ ಗಡಿ ಬಳಿಯ ಸ್ಪಿನ್ ಬೋಲ್ಡಾಕ್‌ನಲ್ಲಿ ಅಫ್ಘಾನ್‌ ವಿಶೇಷ ಪಡೆಗಳ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದರು.

ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ (ಸಿಪಿಜೆ), ರಿಪೋಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್‌) ಸೇರಿದಂತೆ ಸ್ವತಂತ್ರ ಪತ್ರಿಕಾ ಸಂಘಟನೆಗಳು ಡ್ಯಾನಿಶ್ ಸಿದ್ದಿಕಿ ಅವರಿಗೆ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ. ಅವರ ಮೃತದೇಹದ ಮೇಲೆ ಗಂಭೀರ ಗಾಯಗಳು ಇತ್ತು ಎಂದು ಆರೋಪಿಸಿವೆ. ಆದರೆ, ತಾಲಿಬಾನ್ ಇದನ್ನು ತಳ್ಳಿ ಹಾಕಿವೆ.

ಸಿದ್ದಿಕಿ ಅವರ ಹತ್ಯೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಜಾಗತಿಕ ಪತ್ರಿಕಾ ಮತ್ತು ಮಾನವ ಹಕ್ಕುಗಳ ಸಂಸ್ಥೆಗಳು ಹತ್ಯೆಯನ್ನು ಖಂಡಿಸಿತ್ತು ಮತ್ತು ತಾಲಿಬಾನ್ ವಿರುದ್ದ ಕ್ರಮಕ್ಕೆ ಆಗ್ರಹಿಸಿತ್ತು.

ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟಿನ ಬಗ್ಗೆ ಸಿದ್ದಿಕಿ ಮಾಡಿದ್ದ ವರದಿಗೆ 2018ರ ಪುಲಿಟ್ಝರ್ ಪ್ರಶಸ್ತಿ ಮತ್ತು ಭಾರತದ ಕೋವಿಡ್‌-19 ಕುರಿತ ವರದಿಗಾಗಿ 2022ರಲ್ಲಿ ಮರಣೋತ್ತರ ಪುಲಿಟ್ಝರ್ ಪ್ರಶಸ್ತಿ ಸಿದ್ದಿಕಿ ಅವರಿಗೆ ದೊರೆತಿತ್ತು. ಸಿದ್ದಿಕಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಗುರುತಿಸಲ್ಪಟ್ಟ ಭಾರತೀಯ ಪತ್ರಕರ್ತರಲ್ಲಿ ಒಬ್ಬರಾಗಿದ್ದರು.

‘ತಾಂತ್ರಿಕ ಸಮಸ್ಯೆ’: ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...