Homeಮುಖಪುಟತಾಲಿಬಾನ್ ಸಚಿವರ ಮುಂದೆ ಪತ್ರಕರ್ತನ ಹತ್ಯೆ ವಿಷಯ ಪ್ರಸ್ತಾಪಿಸುವಂತೆ ಒತ್ತಾಯಿಸಿದ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್

ತಾಲಿಬಾನ್ ಸಚಿವರ ಮುಂದೆ ಪತ್ರಕರ್ತನ ಹತ್ಯೆ ವಿಷಯ ಪ್ರಸ್ತಾಪಿಸುವಂತೆ ಒತ್ತಾಯಿಸಿದ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್

- Advertisement -
- Advertisement -

ಭಾರತಕ್ಕೆ ಭೇಟಿ ನೀಡಿರುವ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಮುಂದೆ, 2021ರಲ್ಲಿ ಅಫ್ಘಾನಿಸ್ತಾನದಲ್ಲಿ ಸಂಘರ್ಷವನ್ನು ವರದಿ ಮಾಡುವಾಗ ನಡೆದ, ಪುಲಿಟ್ಝರ್ ಪ್ರಶಸ್ತಿ ವಿಜೇತ ಭಾರತೀಯ ಪತ್ರಕರ್ತ ಡ್ಯಾನಿಶ್ ಸಿದ್ದಿಕಿ ಅವರ ಹತ್ಯೆ ವಿಷಯವನ್ನು ಪ್ರಸ್ತಾಪಿಸುವಂತೆ ಡ್ಯಾನಿಶ್ ಸಿದ್ದಿಕಿ ಫೌಂಡೇಶನ್ ಆಗ್ರಹಿಸಿದೆ. ಸಿದ್ದಿಕಿ ಅವರನ್ನು ಬಂಧಿಸಿ, ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂದು ಫೌಂಡೇಶನ್ ಆರೋಪಿಸಿದೆ.

ಭಾರತ ಸರ್ಕಾರ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಹೊಣೆಗಾರಿಕೆ ಕಾರ್ಯವಿಧಾನಗಳ ಮೂಲಕ ಸಿದ್ದಿಕಿ ಅವರ ಸಾವಿನ ನ್ಯಾಯಕ್ಕಾಗಿ ಒತ್ತಾಯಿಸುವಂತೆ ಶನಿವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸಿದ್ದಿಕಿ ಫೌಂಡೇಶನ್ ಆಗ್ರಹಿಸಿದೆ.

ಮುಲ್ಲಾ ಹಸನ್ ಅಖುಂದ್, ಅಬ್ದುಲ್ ಘನಿ ಬರಾದಾರ್ ಮತ್ತು ಜಬಿಯುಲ್ಲಾ ಮುಜಾಹಿದ್ ಸೇರಿದಂತೆ ಹಿರಿಯ ತಾಲಿಬಾನ್ ನಾಯಕರನ್ನು ಸಿದ್ದಿಕಿ ಹತ್ಯೆಗೆ ಸಂಬಂಧಿಸಿದಂತೆ ಯುದ್ಧಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಹೊಣೆಯಾಗಿಸಿ ಮಾರ್ಚ್ 2022ರಲ್ಲಿ ಸಿದ್ದಿಕಿ ಪೋಷಕರು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯಕ್ಕೆ ಔಪಚಾರಿಕ ದೂರು ಸಲ್ಲಿಸಿದ್ದಾರೆ.

ತಾಲಿಬಾನ್ ವಿದೇಶಾಂಗ ಸಚಿವ ಈಗ ಭಾರತಕ್ಕೆ ಭೇಟಿ ನೀಡಿರುವ ಹಿನ್ನೆಲೆ, ತಾಲಿಬಾನ್‌ಗೆ ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯ ತನ್ನ ಬಾಧ್ಯತೆಗಳನ್ನು ನೆನಪಿಸಲು ಮತ್ತು ಡ್ಯಾನಿಶ್ ಹತ್ಯೆಯ ಸ್ವತಂತ್ರ ತನಿಖೆಗೆ ಸಹಕಾರ ನೀಡುವಂತೆ ಒತ್ತಾಯಿಸಲು ಭಾರತಕ್ಕೆ ಉತ್ತಮ ಅವಕಾಶ ದೊರೆತಿದೆ ಎಂದು ಸಿದ್ದಿಕಿ ಫೌಂಡೇಶನ್ ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಫೋಟೋ ಜರ್ನಲಿಸ್ಟ್ ಆಗಿದ್ದ ಡ್ಯಾನಿಶ್ ಸಿದ್ದಿಕಿ ಅವರು ಜುಲೈ 2021ರಲ್ಲಿ ಕಂದಹಾರ್‌ನಲ್ಲಿ ಕರ್ತವ್ಯದಲ್ಲಿದ್ದಾಗ, ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವಿನ ಕಾಳಗದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಿದ್ದಿಕಿ ಪಾಕಿಸ್ತಾನ ಗಡಿ ಬಳಿಯ ಸ್ಪಿನ್ ಬೋಲ್ಡಾಕ್‌ನಲ್ಲಿ ಅಫ್ಘಾನ್‌ ವಿಶೇಷ ಪಡೆಗಳ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದರು.

ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ (ಸಿಪಿಜೆ), ರಿಪೋಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್‌) ಸೇರಿದಂತೆ ಸ್ವತಂತ್ರ ಪತ್ರಿಕಾ ಸಂಘಟನೆಗಳು ಡ್ಯಾನಿಶ್ ಸಿದ್ದಿಕಿ ಅವರಿಗೆ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ. ಅವರ ಮೃತದೇಹದ ಮೇಲೆ ಗಂಭೀರ ಗಾಯಗಳು ಇತ್ತು ಎಂದು ಆರೋಪಿಸಿವೆ. ಆದರೆ, ತಾಲಿಬಾನ್ ಇದನ್ನು ತಳ್ಳಿ ಹಾಕಿವೆ.

ಸಿದ್ದಿಕಿ ಅವರ ಹತ್ಯೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಜಾಗತಿಕ ಪತ್ರಿಕಾ ಮತ್ತು ಮಾನವ ಹಕ್ಕುಗಳ ಸಂಸ್ಥೆಗಳು ಹತ್ಯೆಯನ್ನು ಖಂಡಿಸಿತ್ತು ಮತ್ತು ತಾಲಿಬಾನ್ ವಿರುದ್ದ ಕ್ರಮಕ್ಕೆ ಆಗ್ರಹಿಸಿತ್ತು.

ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟಿನ ಬಗ್ಗೆ ಸಿದ್ದಿಕಿ ಮಾಡಿದ್ದ ವರದಿಗೆ 2018ರ ಪುಲಿಟ್ಝರ್ ಪ್ರಶಸ್ತಿ ಮತ್ತು ಭಾರತದ ಕೋವಿಡ್‌-19 ಕುರಿತ ವರದಿಗಾಗಿ 2022ರಲ್ಲಿ ಮರಣೋತ್ತರ ಪುಲಿಟ್ಝರ್ ಪ್ರಶಸ್ತಿ ಸಿದ್ದಿಕಿ ಅವರಿಗೆ ದೊರೆತಿತ್ತು. ಸಿದ್ದಿಕಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಗುರುತಿಸಲ್ಪಟ್ಟ ಭಾರತೀಯ ಪತ್ರಕರ್ತರಲ್ಲಿ ಒಬ್ಬರಾಗಿದ್ದರು.

‘ತಾಂತ್ರಿಕ ಸಮಸ್ಯೆ’: ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...