Homeಅಂತರಾಷ್ಟ್ರೀಯಕದನ ವಿರಾಮದ ನಡುವೆ ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತನ ಗುಂಡಿಕ್ಕಿ ಹತ್ಯೆ

ಕದನ ವಿರಾಮದ ನಡುವೆ ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತನ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗುತ್ತಿರುವ ನಡುವೆ, ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತ ಸಾಲೇಹ್ ಅಲ್‌-ಜಾಫರಾವಿ ಅವರನ್ನು ಶಸ್ತ್ರದಾರಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಯುದ್ಧದ ವರದಿ ಮಾಡುವ ವಿಡಿಯೋಗಳಿಂದ ಖ್ಯಾತಿ ಗಳಿಸಿದ್ದ 28 ವರ್ಷದ ಜಾಫರಾವಿ ಅವರನ್ನು, ಗಾಝಾ ನಗರದ ಸಬ್ರಾ ಸಮೀಪ ನಡೆದ ಘರ್ಷಣೆಗಳ ವರದಿ ಮಾಡುವಾಗ ಸಶಸ್ತ್ರ ಗುಂಪಿನ ಸದಸ್ಯ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ತನ್ನ ಸನದ್ ಏಜೆನ್ಸಿಯು ಕೆಲವು ವರದಿಗಾರರು ಮತ್ತು ಹೋರಾಟಗಾರರು ಹಂಚಿಕೊಂಡಿರುವ ವಿಡಿಯೋಗಳನ್ನು ಪರಿಶೀಲಿಸಿದೆ. ಆ ವಿಡಿಯೋದಲ್ಲಿ ‘ಪ್ರೆಸ್’ ಎಂದು ಬರೆದ ಜಾಕೆಟ್ ಧರಿಸಿರುವ ಒಬ್ಬರು ವ್ಯಕ್ತಿಯ ದೇಹ ಟ್ರಕ್ ಒಂದರ ಹಿಂದೆ ಬಿದ್ದಿರುವುದು ಕಾಣಿಸಿದೆ. ಸಾಲೇಹ್ ಅಲ್‌-ಜಾಫರಾವಿ ಭಾನುವಾರ ಬೆಳಿಗ್ಗೆಯಿಂದ ಕಾಣಿಯಾಗಿದ್ದಾರೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ವಿವರಿಸಿದೆ.

ಭಾನುವಾರ ಸಬ್ರಾದಲ್ಲಿ ಹಮಾಸ್, ಭದ್ರತಾ ಪಡೆಗಳು ಮತ್ತು ಡೋಗ್ಮುಶ್ ಕುಟುಂಬದ ಹೋರಾಟಗಾರರ ನಡುವೆ ಘರ್ಷಣೆಗಳು ನಡೆದಿವೆ ಎಂದು ಪ್ಯಾಲೆಸ್ತೀನ್ ಮೂಲಗಳು ತಿಳಿಸಿವೆ. ಆದರೆ, ಸ್ಥಳೀಯ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ ಎಂದು ಅಲ್‌-ಜಝೀರಾ ಹೇಳಿದೆ.

ಸಬ್ರಾದಲ್ಲಿ ನಡೆದ ಘರ್ಷಣೆ ಇಸ್ರೇಲ್ ಬೆಂಬಲಿತ ಶಸಸ್ತ್ರ ಗುಂಪೊಂದಕ್ಕೆ ಸಂಬಂಧಿಸಿದೆ ಎಂದು ಗಾಝಾದ ಒಳಾಡಳಿತ ಸಚಿವಾಲಯದ ಮೂಲವೊಂದು ಹೇಳಿರುವುದಾಗಿ ಆಲ್- ಜಝೀರಾ ತಿಳಿಸಿದೆ.

ದಕ್ಷಿಣ ಗಾಝಾದಿಂದ ಗಾಝಾ ನಗರಕ್ಕೆ ಹಿಂತಿರುಗುತ್ತಿರುವ ಸ್ಥಳಾಂತರಗೊಂಡ ಜನರನ್ನು ಶಸಸ್ತ್ರ ಗುಂಪಿನ ಸದಸ್ಯರು ಹತ್ಯೆಗೈದಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಆ ಗುಂಪಿನ ಮೇಲೆ ಮುತ್ತಿಗೆ ಹಾಕಿದವು ಎಂದು ಮೂಲಗಳನ್ನು ಉಲ್ಲೇಖಿಸಿ ಅಲ್‌-ಜಝೀರಾ ಹೇಳಿದೆ.

“ನಾನು ಪ್ರತಿ ಕ್ಷಣವೂ ಭಯದಲ್ಲಿ ಬದುಕುತ್ತಿದ್ದೇನೆ”

ಕಳೆದ ಜನವರಿಯಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಿಸಿದ್ದಾಗ ಅಲ್‌-ಜಝೀರಾ ಜೊತೆ ಮಾತನಾಡಿದ್ದ ಅಲ್‌-ಜಾಫರಾವಿ, ಉತ್ತರ ಗಾಝಾದಿಂದ ಸ್ಥಳಾಂತರಗೊಂಡ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.

ತನ್ನ ಕೆಲಸದ ಕಾರಣದಿಂದಾಗಿ ಇಸ್ರೇಲ್‌ನಿಂದ ಹಲವಾರು ಬೆದರಿಕೆಗಳು ಬಂದಿವೆ ಎಂದು ಹೇಳಿಕೊಂಡಿದ್ದರು.

“ನಿಜ ಹೇಳಬೇಕೆಂದರೆ, ನಾನು ಪ್ರತಿ ಸೆಕೆಂಡ್ ಭಯದಲ್ಲಿ ಬದುಕುತ್ತಿದ್ದೇನೆ. ವಿಶೇಷವಾಗಿ ಇಸ್ರೇಲಿ ಪಡೆಗಳು ನನ್ನ ಬಗ್ಗೆ ಏನು ಹೇಳುತ್ತಿದೆ ಎಂದು ಕೇಳಿದ ನಂತರ. ಮುಂದಿನ ಸೆಕೆಂಡ್ ಏನಾಗುತ್ತದೆ ಎಂದು ತಿಳಿಯದೆ ನಾನು ಎರಡನೇ ದರ್ಜೆಯ ಜೀವನ ನಡೆಸುತ್ತಿದ್ದೇನೆ” ಎಂದಿದ್ದರು.

ಅಕ್ಟೋಬರ್ 2023ರಲ್ಲಿ ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಪ್ರಾರಂಭಿಸಿದಾಗಿನಿಂದ ಗಾಝಾದಲ್ಲಿ 270ಕ್ಕೂ ಹೆಚ್ಚು ಮಾಧ್ಯಮ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಕದನ ವಿರಾಮ: ಮೊದಲ ಹಂತದಲ್ಲಿ 7 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...