Homeಮುಖಪುಟ'ನೆಲದ ಕಾನೂನಿಗೆ ಬದ್ಧರಾಗಿರಬೇಕು ಅಥವಾ ಪರಿಣಾಮ ಎದುರಿಸಲು ಸಿದ್ಧರಾಗಿರಬೇಕು..'; ಬಿಜೆಪಿಗೆ ಪ್ರಿಯಾಂಕ್‌ ತಿರುಗೇಟು

‘ನೆಲದ ಕಾನೂನಿಗೆ ಬದ್ಧರಾಗಿರಬೇಕು ಅಥವಾ ಪರಿಣಾಮ ಎದುರಿಸಲು ಸಿದ್ಧರಾಗಿರಬೇಕು..’; ಬಿಜೆಪಿಗೆ ಪ್ರಿಯಾಂಕ್‌ ತಿರುಗೇಟು

- Advertisement -
- Advertisement -

ಸರ್ಕಾರಿ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ನಂತರ ರಜ್ಯ ರಾಜಕಾರಣದಲ್ಲಿ ವಾಗ್ವಾದ ಭುಗಿಲೆದ್ದಿದೆ.

ಮುಖ್ಯಮಂತ್ರಿಗಳಿಗೆ ಪ್ರಿಯಾಂಕ್‌ ಬರದಿರುವ =ಪತ್ರದಲ್ಲಿ, ಸರ್ಕಾರಿ ಶಾಲೆಗಳು, ಆಟದ ಮೈದಾನಗಳು, ದೇವಾಲಯಗಳಲ್ಲಿ ಶಾಖೆಗಳು ಮತ್ತು ಕೂಟಗಳನ್ನು ನಡೆಸುವ ಮೂಲಕ ಆರ್‌ಎಸ್‌ಎಸ್ ಮಕ್ಕಳು ಮತ್ತು ಯುವಕರಲ್ಲಿ ವಿಭಜಕ ವಿಚಾರಗಳನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ. ಅಂತಹ ಕಾರ್ಯಕ್ರಮಗಳನ್ನು ಸಂವಿಧಾನಬಾಹಿರ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವಕ್ಕೆ ವಿರುದ್ಧವೆಂದು ಕರೆದು ಅವುಗಳ ಮೇಲೆ ಸಂಪೂರ್ಣ ನಿಷೇಧ ಹೇರುವಂತೆ ಅವರು ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

ಇದಾದ ಸ್ವಲ್ಪ ಸಮಯದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಗೃಹ ಸಚಿವರಾಗಿದ್ದಾಗ 2002 ರಲ್ಲಿ ಬೆಂಗಳೂರಿನ ನಾಗವಾರದಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಹಳೆಯ ಛಾಯಾಚಿತ್ರವನ್ನು ಹಂಚಿಕೊಂಡಿದೆ.

“ಪ್ರಿಯಾಂಕ್‌ ಖರ್ಗೆ ಅವರೇ ಇಲ್ಲಿ ನೋಡಿ, ನಿಮ್ಮ ತಂದೆ ವೈಯಕ್ತಿಕವಾಗಿ ಶಿಬಿರಕ್ಕೆ ಭೇಟಿ ನೀಡಿದರು, ಆರ್‌ಎಸ್‌ಎಸ್‌ನ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಮೆಚ್ಚಿದರು ಮತ್ತು ಪೂರ್ಣ ಸಹಕಾರವನ್ನು ನೀಡಿದರು. ಹೈಕಮಾಂಡ್ ಅನ್ನು ಮೆಚ್ಚಿಸಲು ನೀವು ಇಂದು ಇಂತಹ ಕೃತ್ಯ ಮಾಡುತ್ತಿದ್ದೀರಾ” ಪ್ರಶ್ನಿಸಿದೆ.

ಬಿಜೆಪಿ ಪೋಸ್ಟ್‌ಗೆ ತಿರುಗೇಟು ನೀಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿಯ ಹೇಳಿಕೆಗಳನ್ನು ಸುಳ್ಳು ಪ್ರಚಾರ ಎಂದು ಕರೆದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರಿಗಳು ಮತ್ತು ಸಮುದಾಯ ಪ್ರತಿನಿಧಿಗಳೊಂದಿಗೆ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಆರ್‌ಎಸ್‌ಎಸ್‌ ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ಅವರು ಸ್ಪಷ್ಟಪಡಿಸಿದರು.

“ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರದಂತೆ ನಿಮ್ಮ ಜನರಿಗೆ ಎಚ್ಚರಿಕೆ ನೀಡಲು ಅವರು ಆಗಿನ ಪೊಲೀಸ್ ಆಯುಕ್ತ ಸಾಂಗ್ಲಿಯಾನ ಅವರೊಂದಿಗೆ ಅಲ್ಲಿಗೆ ಹೋಗಿದ್ದರು, ಸಂಘಟಕರು ನೆಲದ ಕಾನೂನಿಗೆ ಬದ್ಧರಾಗಿರಬೇಕು ಅಥವಾ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು” ಎಂದು ಪ್ರಿಯಾಂಕ್ ಬರೆದಿದ್ದಾರೆ.

ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...