Homeಮುಖಪುಟಕ್ಷಮೆ ಕೇಳಲು ನಾನು ’ರಾಹುಲ್‌ ಸಾವರ್ಕರ್‌’ ಅಲ್ಲ ಹೇಳಿಕೆ: ಮಹಾರಾಷ್ಟ್ರದ ಮೈತ್ರಿಯಲ್ಲಿ ಬಿರುಕು ಮೂಡಿಸುವುದೇ?

ಕ್ಷಮೆ ಕೇಳಲು ನಾನು ’ರಾಹುಲ್‌ ಸಾವರ್ಕರ್‌’ ಅಲ್ಲ ಹೇಳಿಕೆ: ಮಹಾರಾಷ್ಟ್ರದ ಮೈತ್ರಿಯಲ್ಲಿ ಬಿರುಕು ಮೂಡಿಸುವುದೇ?

- Advertisement -
- Advertisement -

ನನ್ನ ಹೆಸರು ರಾಹುಲ್‌ ಸಾವರ್ಕರ್‌ ಅಲ್ಲ, ಬದಲಾಗಿ ರಾಹುಲ್‌ ಗಾಂಧಿ. ಸತ್ಯವನ್ನು ಹೇಳಿದ್ದಕ್ಕಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಶನಿವಾರ ರಾಹುಲ್‌ ಗಾಂಧಿ ಘೋಷಿಸಿ ಪಕ್ಷದ ಕಾರ್ಯಕರ್ತರಿಂದ ಭಾರೀ ಮೆಚ್ಚುಗೆ ಪಡೆದಿದ್ದರು. ಇದೀಗ ಆ ವಿಷಯವು ಮಹರಾಷ್ಟ್ರದಲ್ಲಿ ಪರ ವಿರೋಧದ ಚರ್ಚೆಗೆ ನಾಂದಿ ಹಾಡಿದೆ.

ಮಹಾರಾಷ್ಟ್ರದ ಕಾಂಗ್ರೆಸ್‌ನ ನೂತನ ಮಿತ್ರಪಕ್ಷ ಶಿವಸೇನೆಯು, ತಮ್ಮ ಪಕ್ಷವು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರೂ ಅವರನ್ನು ಗೌರವಿಸಿಸುತ್ತದೆ. ಅದೇ ರೀತಿ ಕಾಂಗ್ರೆಸ್ ಸಹ ವೀರ್ ಸಾವರ್ಕರ್ ಅವರನ್ನು ಅವಮಾನಿಸಬಾರದು ಎಂದು ಹೇಳಿದೆ.

ನಾವು ಪಂಡಿತ್ ನೆಹರು ಮತ್ತು ಮಹಾತ್ಮ ಗಾಂಧಿಯನ್ನು ಗೌರವಿಸುತ್ತೇವೆ. “ನೀವು ವೀರ್ ಸಾವರ್ಕರ್ ಅವರನ್ನು ಅವಮಾನಿಸಬಾರದು. ಸಂವೇದನಾಶೀಲರಾದ ಯಾರಿಗೂ ಹೆಚ್ಚಿನ ವಿವರಣೆಯ ಅಗತ್ಯವಿಲ್ಲ” ಎಂದು ಶಿವಸೇನೆಯ ಹಿರಿಯ ಮುಖಂಡ ಸಂಜಯ್ ರಾವತ್‌ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

“ವೀರ್ ಸಾವರ್ಕರ್ ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ದೇವರಲ್ಲ, ರಾಷ್ಟ್ರಕ್ಕೂ ಕೂಡ. ಅವರ ಹೆಸರು ರಾಷ್ಟ್ರೀಯ ಹೆಮ್ಮೆ ಮತ್ತು ಸ್ವಾಭಿಮಾನದಿಂದ ಕೂಡಿದೆ. ನೆಹರೂ ಮತ್ತು ಗಾಂಧಿಯವರಂತೆ ಅವರು ಸ್ವಾತಂತ್ರ್ಯ ಸಾಧಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅಂತಹ ಎಲ್ಲ ದೇವರುಗಳನ್ನು ಗೌರವಿಸಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಅವರು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ಸಾವರ್ಕರ್ ವಿಷಯವು ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ (ಎನ್‌ಸಿಪಿ-ಕಾಂಗ್ರೆಸ್-ಶಿವಸೇನೆ) ಮೈತ್ರಿಕೂಟದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಎನ್‌ಸಿಪಿ ಅಜಿತ್ ಪವಾರ್ “ಉದ್ಧವ್ ಜಿ, ಸೋನಿಯಾ ಜಿ, ಮತ್ತು ಪವಾರ್ ಸಾಹೆಬ್ ಪ್ರಬುದ್ಧ ಜನರು. ಅವರು ಅದನ್ನು ನಿಭಾಯಿಸುತ್ತಾರೆ ಎಂದು ಉತ್ತರಿಸಿದ್ದಾರೆ.

ಇದಕ್ಕೂ ಮೊದಲು ಸಿಎಬಿಯನ್ನು ಶಿವಸೇನೆ ವಿರೋಧಿಸಿತ್ತು. ಆದರೆ ಲೋಕಸಭೆಯಲ್ಲಿ ಆಶ್ಚರ್‍ಯಕರವಾಗಿ ಅದರ ಪರ ಮತ ಹಾಕಿತ್ತು. ಶಿವಸೇನೆಯ ಈ ನಿಲುವಿನಿಂದ ಸಿಟ್ಟಿಗೆದ್ದ ರಾಹುಲ್‌ ಗಾಂಧಿ “ಸಿಎಬಿ ಭಾರತೀಯ ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಅದನ್ನು ಬೆಂಬಲಿಸುವ ಎಲ್ಲರೂ ನಮ್ಮ ರಾಷ್ಟ್ರದ ಅಡಿಪಾಯದ ಮೇಲೆ ಆಕ್ರಮಣ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಟ್ವೀಟ್‌ ಮಾಡಿದ್ದರು. ತದನಂತರ ಶಿವಸೇನೆ ರಾಜ್ಯಸಭೆಯಲ್ಲಿ ಸಿಎಬಿಯನ್ನು ವಿರೋಧಿಸಿ ಪದತ್ಯಾಗ ಮಾಡಿತ್ತು.

ಇನ್ನು ರಾಹುಲ್‌ ಗಾಂಧಿ “ಮೋದಿಯವರು ಮೇಕ್‌ ಇನ್‌ ಇಂಡಿಯಾ ಎಂದು ಘೋಷಣೆ ನೀಡಿದ್ದರು. ಆದರೀಗ ರೇಪ್‌ ಇನ್‌ ಇಂಡಿಯಾ” ಆಗಿದೆ ಎಂದು ಟೀಕಿಸಿದ್ದರು. ಈ ಹೇಳಿಕೆಗೆ ರಾಹುಲ್‌ ಕ್ಷಮೆಯಾಚಿಸಬೇಕೆಂದು ಬಿಜೆಪಿಯು ಪಟ್ಟು ಹಿಡಿದಿತ್ತು. ಉಭಯ ಸದನಗಳಲ್ಲಿ ಈ ಬಗ್ಗೆ ಪ್ರತಿಭಟನೆಗಳು ದಾಖಲಾಗಿದ್ದವು.

ಇದಕ್ಕೆ ಪ್ರತಿಕ್ರಿಯೆಯಾಗಿ “ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ. ಸತ್ಯವನ್ನು ಮಾತನಾಡಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರೂ ಹಾಗೆ ಮಾಡುವುದಿಲ್ಲ. ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶಕ್ಕೆ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು ಶನಿವಾರ ಮಧ್ಯಾಹ್ನ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆದ ಪಕ್ಷದ ಮೆಗಾ ರ್‍ಯಾಲಿಯಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...