Homeಕರ್ನಾಟಕದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

ದೆಹಲಿ| ಅಲೆಮಾರಿಗಳ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ: ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದ

- Advertisement -
- Advertisement -

ದೆಹಲಿಯಲ್ಲಿ ಕರ್ನಾಟಕದ ಅಲೆಮಾರಿ ಸಮುದಾಯಗಳು ನಡೆಸುತ್ತಿರುವ ಮೀಸಲಾತಿ ಹೋರಾಟದಲ್ಲಿ ಹೊಸ ಭರವಸೆ ಮೂಡಿದ್ದು, ಕಾಂಗ್ರೆಸ್‌ ಮುಖಂಡರಾದ ಬಿ.ಕೆ.ಹರಿಪ್ರಸಾದ್‌ ಜೊತೆಗಿನ ಮಾತುಕತೆ ಫಲಪ್ರದವಾಗಿದೆ ಎಂದು ಮೀಸಲಾತಿ ‘ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ಶಿಫಾರಸ್ಸಿನಂತೆ ಅಲೆಮಾರಿಗಳು ಶೇ. 1 ಪ್ರತ್ಯೇಕ ಮೀಸಲಾತಿ, ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲು ಕರ್ನಾಟಕ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.

“ಪ್ರಕ್ರಿಯೆಯ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲು ದೀಪಾವಳಿ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಮಯ್ಯ, ರಣ್‌ದೀಪ್‌ ಸುರ್ಜೇವಾಲ, ಬಿ.ಕೆ. ಹರಿಪ್ರಸಾದ್‌ ಮತ್ತು ಹೆಚ್.‌ ಸಿ ಮಹದೇವಪ್ಪನವರ ಸಮ್ಮುಖದಲ್ಲಿ ಅಲೆಮಾರಿ ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲಾಗುವುದು ಎಂಬ ಭರವಸೆ ಸಿಕ್ಕಿದೆ” ಎಂದು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 14 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಅಲೆಮಾರಿ ಸಮುದಾಯದ ಹೋರಾಟ ಇಂದು ಪರಿಹಾರದ ಕಡೆ ಮುಖಮಾಡುವ ಹಂತಕ್ಕೆ ಬಂದು ತಲುಪಿದೆ. ಅಕ್ಟೋಬರ್‌ 2ಕ್ಕೆ ದೆಹಲಿ ತಲುಪಿದ ಅಲೆಮಾರಿ ಸಮುದಾಯದ ಸುಮಾರು 600 ಜನ ಪ್ರತಿನಿಧಿಗಳು ಹಾಗೂ ಕಲಾವಿದರು ದೆಹಲಿಯ ಜಂತರ್‌ ಮಂತರಿನಲ್ಲಿ ಪ್ರತಿಭಟಿಸಿದ್ದಲ್ಲದೆ, ತಮ್ಮ ಪಾರಂಪರಿಕ ವೇಷಭೂಷಣಗಳಿಂದ ಗಮನ ಸೆಳೆದರು. ಕಾಂಗ್ರೆಸ್‌ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು.

ಎಐಸಿಸಿ ಪರವಾಗಿ ಅಲೆಮಾರಿ ನಿಯೋಗವನ್ನು ಭೇಟಿ ಮಾಡಿದ್ದ ಅಭಿಷೇಕ್‌ ದತ್ತ ಅವರು ರಾಹುಲ್‌ ಗಾಂಧಿ ಅವರು ದೇಶದಲ್ಲಿಲ್ಲ, ರಾಷ್ಟ್ರಾಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿದ್ದಾರೆ. ಕರ್ನಾಟಕದ ಅಲೆಮಾರಿಗಳ ಈ ಸಮಸ್ಯೆಯನ್ನು ನಾವು ಅವರ ಗಮನಕ್ಕೆ ತರುತ್ತೇವೆ. ನೀವು ಕರ್ನಾಟಕಕ್ಕೆ ವಾಪಸ್‌ ಹೊರಡಿ ಎಂದು ಕೇಳಿಕೊಂಡಿದ್ದರು. ಆದರೆ, ಅಂದು ಸಂಜೆ ಅಂಬೇಡ್ಕರ್‌ ಭವನದಲ್ಲಿ ನಡೆದ ಅಲೆಮಾರಿ ಸಮುದಾಯದ 59 ಜನಜಾತಿಗಳ ಸಭೆ ಈ ಕುರಿತು ʼಸರ್ಕಾರದ ಕಡೆಯಿಂದ ಸ್ಪಷ್ಟ ತೀರ್ಮಾನ ಹೊರಬರುವ ತನಕ ದೆಹಲಿ ಬಿಡುವ ಮಾತೇ ಇಲ್ಲʼ ಎಂದು ತೀರ್ಮಾನ ತೆಗೆದುಕೊಂಡಿತ್ತು. ಅಂದಿನಿಂದ ದಿ: 15.10.2025 ರವರೆಗೆ ಅಲೆಮಾರಿ ಪ್ರತಿನಿಧಿಗಳ ತಂಡವು ಎಐಸಿಸಿ ಕಚೇರಿಯ ಆವರಣದಲ್ಲಿ ನಿರಂತರ ಧರಣಿ ಸತ್ಯಾಗ್ರವನನ್ನು ಮುಂದುವರೆಸಿತ್ತು. ಕಾಂಗ್ರೆಸ್ ಹೈಕಮಾಂಡ್‌ನ ಅನೇಕ ಮುಖಂಡರುಗಳನ್ನು ಕಂಡು ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಮನವರಿಕೆ ಮಾಡಿಸುವ ಪ್ರಯತ್ನ ನಡೆಸಿತ್ತು.

ಎಐಸಿಸಿ ಕಡೆಯಿಂದ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ರಾಷ್ಟ್ರೀಯ ಘಟಕಗಳಿಗೆ ಮೇಲುಸ್ತುವಾರಿಗಳಾಗಿರುವ ಕೆ. ರಾಜು ಅವರು ಈ ಮಧ್ಯೆ ಕರ್ನಾಟಕದ ಅನೇಕ ಸಚಿವರುಗಳ ಜೊತೆ ಮಾತುಕತೆ ನಡೆಸಿದರು. ಬಿ.ಕೆ. ಹರಿಪ್ರಸಾದ್‌ ಅವರನ್ನು ಮಧ್ಯಸ್ತಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರ ಹುಡುಕಬೇಕೆಂದು ಕೋರಿದ್ದರು. ನಿನ್ನೆ ಚಂಡೀಘಡದಲ್ಲಿ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿದ್ದ ಬಿ.ಕೆ. ಹರಿಪ್ರಸಾದ ಅವರು ಸಮಸ್ಯೆಯನ್ನು ಬಗೆಹರಿಸಲು ದೆಹಲಿಯ ಎಐಸಿಸಿ ಕಚೇರಿಗೆ ವಾಪಸ್‌ ಬಂದಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಅಲೆಮಾರಿ ಪ್ರತಿನಿಧಿ ತಂಡವನ್ನು ಮಾತುಕತೆಗೆ ಕರೆದಿದ್ದರು. ಅವರೊಡನೆ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಕರ್ನಾಟಕದ ಎಂಎಲ್‌ಸಿ ಆರತಿ ಕೃಷ್ಣ ಅವರು ಸಹ ಇದ್ದರು.

“ದೆಹಲಿಗೆ ಇಂದು ಬರಬೇಕಿದ್ದ ರಾಹುಲ್‌ ಗಾಂಧಿ ಅವರು ಅವರ ತಾಯಿಯವರ ಆರೋಗ್ಯ ಏರುಪೇರಾದ್ದರಿಂದ ಅವರು ಶಿಮ್ಲಾಗೆ ಹೋಗಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವಂತೆ ನಮಗೆ ಸೂಚಿಸಿದ್ದಾರೆ. ತಡಮಾಡದೆ ಪರಿಹಾರದ ಕುರಿತು ಚರ್ಚಿಸೋಣ. ಸಮಸ್ಯೆ ಬಗೆಹರಿಯದಿದ್ದರೆ ರಾಹುಲ್‌ ಗಾಂಧಿ ಅವರ ಜೊತೆ ಸಭೆ ನಿಗದಿ ಮಾಡೋಣ” ಬಿಕೆ ಹರಿಪ್ರಸಾದ್ ತಿಳಿಸಿದ್ದಾರೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಅಲೆಮಾರಿ ಸಮುದಾಯದ ನಿಯೋಗವು ತನ್ನ ಹಕ್ಕೊತ್ತಾಯಗಳಾದ ‘ಎ’ ಗುಂಪಿನಲ್ಲಿ ಶೇ. 1 ಪ್ರತ್ಯೇಕ ಮೀಸಲಾತಿ, 49 ಅಲೆಮಾರಿ ಸಮುದಾಯಗಗಳಿಗೆ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಪರಿಣಾಮಕಾರಿ ಪ್ಯಾಕೇಜ್‌ ಬೇಕು ಎಂಬ ಹಕ್ಕೊತ್ತಾಯಗಳ ಕುರಿತು ಪ್ರಸ್ತಾಪವನ್ನು ಮುಂದಿಟ್ಟರು.

ಬಿ.ಕೆ. ಹರಿಪ್ರಸಾದ್‌ ಅವರು ಅಲ್ಲಿಂದಲೇ ಕೆ. ರಾಜು, ಗುರುದೀಪ್‌ ಸಪ್ಪಾಲ್‌, ವೇಣುಗೋಪಾಲ್‌, ಸುರ್ಜೆವಾಲ್‌ ಜಿ ಹಾಗೂ ಹೆಚ್.‌ ಸಿ. ಮಹದೇವಪ್ಪ ಅವರೊಡನೆ ದೂರವಾಣಿ ಮೂಲಕ ಕೂಲಂಕುಷವಾಗಿ ಚರ್ಚಿಸಿದರು. ಚರ್ಚೆಯ ಅಂತಿಮ ಫಲಿತಾಂಶವಾಗಿ, ಅಲೆಮಾರಿ ಸಮುದಾಯಕ್ಕೆ ಶೇ. 1 ಪ್ರತ್ಯೇಕ ಮೀಸಲಾತಿ ನೀಡಲು ಕರ್ನಾಟಕ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ. ಇದರ ಪ್ರಕ್ರಿಯೆ ಹೇಗೆ ಎಂಬ ಕುರಿತು ಮಾತ್ರ ಸಭೆಯಲ್ಲಿ ಚರ್ಚಿಸಿಕೊಳ್ಳಬೇಕಿದೆ. ವಿಶೇಷ ಪ್ಯಾಕೇಜ್‌ ಮತ್ತು 49 ಅಲೆಮಾರಿ ಸಮುದಾಯಗಗಳಿಗೆ ಮಾತ್ರ ಸೀಮಿತವಾದ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನೂ ಮಾಡಲು ಸರ್ಕಾರ ಬದ್ಧವಿದೆ ಎಂದು ತಿಳಿದುಬಂದಿದೆ.’

ಇವೆಲ್ಲವುಗಳ ಕುರಿತು ಕುಲಂಕುಷವಾಗಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಎಐಸಿಸಿ ಕಡೆಯಿಂದ ಬಿ.ಕೆ. ಹರಿಪ್ರಸಾದ್‌, ಕೆ. ರಾಜು ಹಾಗೂ ಸುರ್ಜೆವಾಲರು ಸಹ ಇರುವಂತೆ ಕರ್ನಾಟಕ ಸರ್ಕಾರದ ಜೊತೆ ದೀಪಾವಳಿ ನಂತರದ ಮೊದಲ ವಾರದಲ್ಲೇ ಸಭೆ ನಿಗದಿ ಮಾಡಲಾಗುತ್ತದೆ. ಸಭೆ ವ್ಯವಸ್ಥೆ ಮಾಡುವ ಹೊಣೆಗಾರಿಕೆ ಬಿ.ಕೆ. ಹರಿಪ್ರಸಾದ್‌ ಅವರದಾಗಿರುತ್ತದೆ. ನಿಯೋಗದ ಜೊತೆ ದೂರವಾಣಿ ಮೂಲಕ ಮಾತನಾಡಿದ ಎಚ್.‌ಸಿ. ಮಹದೇವಪ್ಪನವರು ದಯವಿಟ್ಟು ವಾಪಾಸ್‌ ಬನ್ನಿ, ಖಂಡಿತ ಅಲೆಮಾರಿ ಸಮುದಾಯಗಳ ಸಮಸ್ಯೆ ಬಗೆಹರಿಸಿಕೊಡುತ್ತೇವೆ ಎಂದು ಕೇಳಿಕೊಂಡರು ಎಂದು ಅಲೆಮಾರಿ ಹೋರಾಟಗಾರರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಧರಣಿಯನ್ನು ಅಂತ್ಯಗೊಳಿಸಿ ಕರ್ನಾಟಕಕ್ಕೆ ವಾಪಾಸ್‌ ಆಗಲು ಕರ್ನಾಟಕ ಅಸ್ಪ್ರಷ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ತೀರ್ಮಾನಿಸಿದೆ. ಕೊಟ್ಟ ಮಾತಿನಂತೆ ಕರ್ನಾಟಕ ಸರ್ಕಾರ ಹಾಗೂ ಎಐಸಿಸಿ ಮುಖಂಡರು ನಡೆದುಕೊಳ್ಳುತ್ತಾರೆ ಎಂದು ವಿಶ್ವಾಸಿಸುತ್ತೇವೆ. ಒಂದು ವೇಳೆ ನಮ್ಮ ನಿರೀಕ್ಷೆ ಮತ್ತೆ ಹುಸಿಯಾದರೆ ಮತ್ತೆ ದೆಹಲಿಗೆ ಬರುವುದು ಖಚಿತ ಎಂದು ಸ್ಪಷ್ಟಪಡಿಸಲು ಬಯಸುತ್ತಿದ್ದೇವೆ. ಸಮುದಾಯದ ನೋವನ್ನು ಕೇಳಿಸಿಕೊಳ್ಳಲು ರಾಹುಲ್‌ ಗಾಂಧಿ ಅವರು ಭೇಟಿಗೆ ಸಮಯ ನೀಡಲೇಬೇಕು ಎಂದು ಸಹ ಮತ್ತೊಮ್ಮೆ ಒತ್ತಾಯಿಸಲು ಬಯಸುತ್ತೇವೆ ಎಂದು ಹೋರಾಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ನಡೆದ ಮಾತುಕತೆಯಲ್ಲಿ ಅಲೆಮಾರಿ ಸಮುದಾಯ ಪರವಾಗಿ ಅದರ ಮುಖಂಡರುಗಳಾದ ಎ.ಎಸ್.‌ ಪ್ರಭಾಕರ್‌, ಮಂಜುನಾಥ್‌ ದಾಯತ್ಕರ್, ಬಸವರಾಜ್‌ ನಾರಾಯಣಕರ್, ಚಾವಡಿ ಲೋಕೇಶ್‌, ಮಂಡ್ಯ ರಾಜಣ್ಣ, ಸಂದೀಪ್‌ ಕುಮಾರ್‌ ದಾಸರ್‌, ಶರಣಪ್ಪ ಚನ್ನದಾಸರ್‌, ಸಿಂದೋಳು ಸಮುದಾಯದ ಹನುಮಂತು ಮುಂತಾದವರು ಭಾಗವಹಿಸಿದ್ದರು. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕರಾದ ಕರಿಯಪ್ಪ ಗುಡಿಮನಿ, ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್‌ ಶ್ರೀಧರ್‌ ಹಾಗೂ ಎದ್ದೇಳು ಕರ್ನಾಟಕದ ತಾರಾ ರಾವ್‌ ಅವರು ಸಹ ಈ ಚರ್ಚೆಗಳಲ್ಲಿ ಸಕ್ರಿಯ ಪಾತ್ರ ನಿರ್ವಹಿಸಿದರು.

ಆರ್‌ಎಸ್‌ಎಸ್‌ ಹಿಂದುತ್ವದ ಪರಿಧಿಯಲ್ಲಿ ಪರಿಶಿಷ್ಟರಿಗೆ ಸ್ಥಾನವಿಲ್ಲ: ಸಚಿವ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...