Homeಕರ್ನಾಟಕಮೂರು ತಿಂಗಳಾದರೂ ಹೊರಬೀಳದ 'ಡಿನೋಟಿಫಿಕೇಶನ್' ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಮೂರು ತಿಂಗಳಾದರೂ ಹೊರಬೀಳದ ‘ಡಿನೋಟಿಫಿಕೇಶನ್’ ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿ ಮೂರು ತಿಂಗಳಾದರೂ ಚನ್ನರಾಯಪಟ್ಟಣ ಭೂಸ್ವಾಧೀನ ರದ್ದುಪಡಿಸುವ ಅಧಿಕೃತ ‘ಡಿನೋಟಿಫಿಕೇಶನ್’ ಆದೇಶವನ್ನು ಸರ್ಕಾರ ಹೊರಡಿಸದಿರುವ ಕಾರಣ, ಭೂಸ್ವಾಧೀನ ವಿರೋಧಿ ಹೋರಾಟದ ರೈತರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಅಧಿಕೃತ ಆದೇಶ ಹೊರಡಿಸದಿರುವ ಕಾರಣ ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ತಿಳಿಸಿದೆ.

ಘೋಷಣೆಯಾದರೂ ಮೌಖಿಕ ಆದೇಶಕ್ಕೆ ಸಿಗದ ಅಧಿಕೃತ ಮುದ್ರೆ

ಚನ್ನರಾಯಪಟ್ಟಣದ ರೈತರು, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ನಡೆಸಿದ ತೀವ್ರ ಸಂಘರ್ಷಮಯ ಹೋರಾಟದ ಫಲವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 15ರಂದು ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಸ್ಪಷ್ಟವಾಗಿ ಘೋಷಿಸಿದ್ದರು. ಸರ್ಕಾರದ ಈ ತೀರ್ಮಾನ ದೇಶವ್ಯಾಪಿ ಸುದ್ದಿಯಾಗಿತ್ತು, ಸರ್ಕಾರವು ಕೂಡಾ ಇದನ್ನು ರೈತಪರ ನಿಲುವು ಎಂದು ವ್ಯಾಪಕವಾಗಿ ಪ್ರಚಾರ ಮಾಡಿತ್ತು. ಆದರೆ, ಘೋಷಣೆ ಹೊರಬಿದ್ದು ತಿಂಗಳುಗಳೇ ಕಳೆದರೂ, ಸರ್ಕಾರದ ಮೌಖಿಕ ಆದೇಶವು ಡಿನೋಟಿಫಿಕೇಶನ್ ರೂಪದಲ್ಲಿ ಅಧಿಕೃತವಾಗಿ ಹೊರಬಂದಿಲ್ಲ.

ಆತಂಕಕ್ಕೆ ಕಾರಣವಾದ ಸಭೆಯ ಹುನ್ನಾರ

ಈ ಮಧ್ಯೆ, ಸರ್ಕಾರದ ಘೋಷಣೆಗೆ ವ್ಯತಿರಿಕ್ತವಾಗಿ, ಎರಡು ಹಳ್ಳಿಗಳಿಗೆ ಬೆಲೆ ನಿಗದಿ ಸಭೆ ನಡೆಸುವ ಹುನ್ನಾರಗಳು ನಡೆದಿದ್ದವು. ರೈತರ ತೀವ್ರ ಪ್ರತಿರೋಧದ ನಂತರ ಈ ಸಭೆಯನ್ನು ಮುಂದೂಡಲಾಗಿದೆ. “ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿದರೆ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಭಯದಲ್ಲೇ ರೈತರು ಬದುಕುವಂತಾಗಿದೆ” ಎಂದು ಹೋರಾಟಗಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಒಂದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ರೈತರ ಆತಂಕವನ್ನು ಹೆಚ್ಚಿಸಿದೆ.

ಹೋರಾಟ ತೀವ್ರಗೊಳಿಸಲು ರೈತರ ಸಿದ್ಧತೆ

ಡಿನೋಟಿಫಿಕೇಶನ್ ಆದೇಶದ ವಿಳಂಬದಿಂದ ರೋಸಿಹೋಗಿರುವ ರೈತರು, ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಯೋಜನೆಯೊಂದಿಗೆ ಹೆಜ್ಜೆ ಇಟ್ಟಿದ್ದಾರೆ. ತಮ್ಮ ತಮ್ಮ ಊರುಗಳಲ್ಲಿ ಸಭೆಗಳನ್ನು ಕರೆಯುವ ಮೂಲಕ ಸಂಘಟನೆಯನ್ನು ಗಟ್ಟಿಗೊಳಿಸಿಕೊಂಡು ಹೋರಾಟವನ್ನು ಚುರುಕುಗೊಳಿಸಲು ಮುಂದಾಗಿದ್ದಾರೆ.

ಈ ಮಧ್ಯೆ, ಮಾನ್ಯ ಕೈಗಾರಿಕಾ ಸಚಿವರು ಅ.17 ರಂದು ಬ್ರಿಗೇಡ್ ಪೌಂಡೇಶನ್ ಸಹಯೋಗದಲ್ಲಿ ಲಕ್ಷ ಗಿಡಗಳ ನೆಡುವ ಕಾರ್ಯಕ್ರಮಕ್ಕಾಗಿ ಹರಳೂರು ಬಳಿಯ ಏರೋಸ್ಪೇಸ್ ಡಿಫೆನ್ಸ್ ಪಾರ್ಕ್‌ಗೆ ಭೇಟಿ ನೀಡುತ್ತಿದ್ದಾರೆ. “ಇಲ್ಲಿ ಶತಮಾನಗಳಿಂದ ಲಕ್ಷಾಂತರ ಗಿಡಮರಗಳನ್ನು ನೆಟ್ಟು ಪೋಷಿಸುತ್ತಿರುವ ರೈತರು ಆತಂಕದಲ್ಲಿದ್ದಾರೆ. ಇದು ವೈರುಧ್ಯವೇ ಸರಿ” ಎಂದು ರೈತ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಸಚಿವರ ಭೇಟಿಯ ಹಿನ್ನೆಲೆಯಲ್ಲಿ, ‘ಸಚಿವರು ಈ ರೈತರಿಗೆ ಸರ್ಕಾರ ಆದೇಶದಂತೆ ಈ ತಿಂಗಳಿನೊಳಗೆ ಡಿನೋಟಿಫಿಕೇಶನ್ ಮಾಡುವ ಖಚಿತ ಬರವಸೆ ನೀಡಿ ಅದನ್ನು ಕಾರ್ಯರೂಪಕ್ಕೆ ತರಬೇಕು’ ಎಂದು ಸಮಿತಿಯು ಬಲವಾಗಿ ಒತ್ತಾಯಿಸಿದೆ. ಅಧಿಕೃತ ಆದೇಶ ಹೊರಬೀಳುವವರೆಗೆ ರೈತರ ಆತಂಕ ನಿವಾರಣೆಯಾಗುವುದು ಕಷ್ಟ.

ರೈತರ ಸಮಸ್ಯೆ ಬಗೆಹರಿಸುವುದು ಉಸ್ತುವಾರಿ ಸಚಿವರ ಜವಾಬ್ದಾರಿ

ನಮ್ಮ ಉಸ್ತುವಾರಿ ಸಚಿವರಾದ ಕೆ. ಎಚ್. ಮುನಿಯಪ್ಪನವರು ಕೂಡ ಅಂದಿನ ಸಭೆಯಲ್ಲಿ ಸರ್ಕಾರದ ಪರವಾಗಿ ಹಾಜರಿದ್ದು, ಭೂಸ್ವಾಧೀನ ರದ್ದತಿ ಆದೇಶಕ್ಕೆ ಸಾಕ್ಷಿಯಾಗಿದ್ದರು. ಮೂರು ತಿಂಗಳಾದರೂ ಸರ್ಕಾರದ ಆದೇಶ ಜಾರಿಯಾಗದಿರುವುದನ್ನು ಅವರು ಸೂಕ್ಷ್ಮವಾಗಿ ಪರಿಗಣಿಸಬೇಕು. ಅಲ್ಲದೆ, ನಮ್ಮ ರೈತರ ಹಿತ ಕಾಯುವುದು ಮತ್ತು ಸಮಸ್ಯೆ ಬಗೆಹರಿಸುವುದು ಕೂಡ ಉಸ್ತುವಾರಿ ಸಚಿವರ ಜವಾಬ್ದಾರಿಯಾಗಿದ್ದು, ಅವರು ಅದರಂತೆ ಡಿನೋಟಿಫಿಕೇಶನ್ (ಭೂಸ್ವಾಧೀನ ರದ್ದತಿ) ಆದೇಶ ಹೊರಡಿಸಲು ಕ್ರಮವಹಿಸಬೇಕೆಂದು ಸಮಿತಿ ಒತ್ತಾಯಿಸುತ್ತದೆ.

ಪತ್ರಿಕಾಗೋಷ್ಠಿಯಲ್ಲಿ, ಪ್ರಭಾ ಬೆಳವಂಗಲ, ಕಾರಳ್ಳಿ‌ ಶ್ರೀನಿವಾಸ್, ಜಯರಾಮೇಗೌಡ, ಮಾರೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಚೀಮಾಚನಹಳ್ಳಿ ರಮೇಶ್‌, ಅಶ್ವತ್ತಪ್ಪ, ಜಯರಾಮೇಗೌಡ, ಸುಬ್ರಮಣಿ, ಕೃಷ್ಣಪ್ಪ, ವೆಂಕಟಮ್ಮ, ಪಿಳಪ್ಪ, ವೆಂಕಟೇಶ್, ಗೋಪಾಲಗೌಡ, ಮಂಜುನಾಥ್, ಗೋಪಿನಾಥ್, ಗೋಪಾಲಪ್ಪ, ವೆಂಕಟೇಶ್, ಅಶ್ವತ್ತಪ್ಪ, ಪ್ರಮೋದ್ ಭಾಗವಹಿಸಿದ್ದರು.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...