Homeಕರ್ನಾಟಕಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಸ ಯೋಜನೆಗಳು, ವೆಬ್ ಪೋರ್ಟಲ್ ಲೋಕಾರ್ಪಣೆ

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಸ ಯೋಜನೆಗಳು, ವೆಬ್ ಪೋರ್ಟಲ್ ಲೋಕಾರ್ಪಣೆ

- Advertisement -
- Advertisement -

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ (ಕೆಸಿಸಿಡಿಸಿ) ತನ್ನ ಹೊಸ ಸಾಲ, ಸಹಾಯಧನ ಹಾಗೂ ಕಲ್ಯಾಣ ಯೋಜನೆಗಳು ಮತ್ತು ಅಧಿಕೃತ ವೆಬ್ ಪೋರ್ಟಲ್‌ನ ಲೋಕಾರ್ಪಣೆಯನ್ನು 2025ರ ಅಕ್ಟೋಬರ್ 17ರಂದು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಕೆಎಂಡಿಸಿ ಭವನದಲ್ಲಿ ನೆರವೇರಿಸಿತು.

ಕಾರ್ಯಕ್ರಮವನ್ನು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಚಿವರು, “ಕರ್ನಾಟಕ ಸರ್ಕಾರವು ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ನಿಗಮಗಳನ್ನು ಸ್ಥಾಪಿಸಿ, ವಿಶೇಷ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.

ಅದೇ ರೀತಿಯಲ್ಲಿ, ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಹಿತಕ್ಕಾಗಿ ಮತ್ತು ಅವರ ಸಂಸ್ಥೆಗಳ ಬಲವರ್ಧನೆಗಾಗಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಮುಖ್ಯಮಂತ್ರಿ ನಿಗಮಕ್ಕೆ ನೀಡಿರುವ 250 ಕೋಟಿ ರೂಪಾಯಿ ಅನುದಾನ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಉಪಯೋಗವಾಗಲೆಂದು ನಾನು ಆಶಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ನಿಗಮದ ಹೊಸ ಯೋಜನೆಗಳು ಕ್ರಿಶ್ಚಿಯನ್ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿ ಎಂದು ಶುಭ ಕೋರಿದರು.

ನಿಗಮದ ಅಧ್ಯಕ್ಷ ಪ್ರೊ. ಎಸ್. ಜಾಫೆಟ್ ಮಾತನಾಡಿ, ನಿಗಮದ ಸ್ಥಾಪನೆಗೆ ಕಾರಣರಾದ ಮುಖ್ಯಮಂತ್ರಿ, ಸಚಿವರು, ಸರ್ಕಾರ ಹಾಗೂ ಕ್ರಿಶ್ಚಿಯನ್ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು. ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಬದ್ಧರಾಗಿರುವುದಾಗಿ ತಿಳಿಸಿದರು. ನಿಗಮದ ಯೋಜನೆಗಳ ಬಗ್ಗೆ ಚರ್ಚ್‌ಗಳು, ಕ್ರೈಸ್ತ ಸಂಸ್ಥೆಗಳು ಮತ್ತು ಮುಖಂಡರು ಹೆಚ್ಚಿನ ಪ್ರಚಾರ ನೀಡುವುದರ ಮೂಲಕ ಅರ್ಹ ವ್ಯಕ್ತಿಗಳು ಯೋಜನೆಗಳ ಪ್ರಯೋಜನವನ್ನು ಪಡೆಯಲು ಸಹಕಾರ ನೀಡುವಂತೆ ವಿನಂತಿಸಿದರು.

ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಟೋನಿ ಮರಿಯಾ ಇಮ್ಯಾನ್ಯುಯಲ್, ನಿರ್ದೇಶಕ ಮಂಡಳಿಯ ಸದಸ್ಯರಾದ ಸಂಜೀವ್ ಕುಮಾರ್ ಜಾಗೀರ್ದಾರ್, ಪ್ರಶಾಂತ್ ರಾಜ್ ಜತ್ತನ್ನ, ಹರ್ಷ ಮೆಲ್ವಿನ್ ಲಾಸ್ರಾದೊ, ಸಂದೀಪ್ ಕೆ.ಸಿ, ಜೋಸೆಫ್ ಕುಮಾರ್, ಜಿ.ಜೆ. ರವಿಕುಮಾರ್, ಜೆ. ಕ್ಷೇವಿಯರ್ ಹಾಗೂ ಅಲ್ಪಸಂಖ್ಯಾತ ಅಯೋಗ್ಯದ ಅಧ್ಯಕ್ಷರು, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಅಲ್ಪಸಂಖ್ಯಾತರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಒಳ ಮೀಸಲಾತಿ ಪ್ರಕರಣ : ಸರ್ಕಾರದ ಪರ ವಾದ ಮಂಡಿಸಲು ಉದಯ್ ಹೊಳ್ಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...