Homeದಲಿತ್ ಫೈಲ್ಸ್ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

2025 ರ ಅಕ್ಟೋಬರ್ 1 ರಂದು ರಾಯ್ ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುಂಪೊಂದು ಫತೇಪುರದ ದಲಿತ ವ್ಯಕ್ತಿ ಹರಿಓಂ ವಾಲ್ಮೀಕಿಯನ್ನು ಥಳಿಸಿ ಕ್ರೂರವಾಗಿ ಕೊಂದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಫತೇಪುರದಲ್ಲಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡಿ, ರಾಜ್ಯ ಸರ್ಕಾರವು ಆರೋಪಿಗಳನ್ನು ರಕ್ಷಿಸುತ್ತಿದೆ, ದೃಢ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿದರು. ಈ ಘಟನೆಯು ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹರಿಓಂ ವಾಲ್ಮೀಕಿ ರಾಯ್ ಬರೇಲಿಯ ಉಂಚಹಾರ್ ಪ್ರದೇಶದಲ್ಲಿ ತನ್ನ ಅತ್ತೆ-ಮಾವಂದಿರನ್ನು ಭೇಟಿ ಮಾಡಲು ಹೋಗಿದ್ದಾಗ, ಅವರನ್ನು ಕಳ್ಳನೆಂದು ತಪ್ಪಾಗಿ ಭಾವಿಸಿ ಸ್ಥಳೀಯ ಗುಂಪೊಂದು ಹಲ್ಲೆ ನಡೆಸಿತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹರಿಓಂ ಹಲ್ಲೆಯ ಸಮಯದಲ್ಲಿ ರಾಹುಲ್ ಗಾಂಧಿಯ ಹೆಸರನ್ನು ಪದೇ ಪದೇ ಉಲ್ಲೇಖಿಸಿ, ದಾಳಿಕೋರರಿಂದ ಉಳಿಸುವಂತೆ ಬೇಡಿಕೊಂಡರು. ಇದಕ್ಕೆ ಪ್ರತಿಕ್ರಿಯೆಯಾಗಿ, ಗುಂಪು ಇದು ಬಾಬಾ (ಸಿಎಂ ಯೋಗಿ) ನಿಯಮ, ರಾಹುಲ್ ಗಾಂಧಿಯ ನಿಯಮವಲ್ಲ ಎಂದು ಹೇಳಿತು.

ಹಲ್ಲೆಯ ನಂತರ ಪೊಲೀಸರು ಸ್ಥಳಕ್ಕೆ ಬಂದರಾದರೂ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ವಿಫಲರಾದರು ಎಂದು ಆರೋಪಿಸಲಾಗಿದೆ. ಇದು ಅವನ ಸಾವಿಗೆ ಕಾರಣವಾಯಿತು. ನಂತರ, ಹರಿಓಂ ಕಳ್ಳ ಎಂದು ಹೇಳಲಾಯಿತು, ಮೃತನ ಹೆಂಡತಿ ದೇಹವನ್ನು ಗುರುತಿಸಿ ಗಂಡನ ಮುಗ್ಧನೆಂದು ಹೇಳಿದರು.

ಘಟನೆಯ ನಂತರ, ರಾಯ್ ಬರೇಲಿ ಪೊಲೀಸರ ನಿರ್ಲಕ್ಷ್ಯಕ್ಕಾಗಿ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಯಿತು. ಆದದೆ, ಇಲ್ಲಿಯವರೆಗೆ ಕೇವಲ 17 ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ. ಹಲ್ಲೆಕೋರರಲ್ಲಿ ಹಲವರು ಬಿಜೆಪಿಗೆ ಸಂಬಂಧಿಸಿದವರು ಎಂದು ಹೇಳಲಾಗುತ್ತಿದೆ. ಕೆಲವರು ತಲೆಮರೆಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಬಲಿಪಶುವಿನ ಕುಟುಂಬದ ಪ್ರಕಾರ, ಇದು ರಾಜಕೀಯ ಹಸ್ತಕ್ಷೇಪ ಮತ್ತು ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನವನ್ನು ಎಂದು ಹೇಳಿದ್ದಾರೆ.

ದುಃಖಿತ ಕುಟುಂಬವನ್ನು ಭೇಟಿಯಾದ ರಾಹುಲ್

ಪ್ರಕರಣದ ವಿವರಗಳನ್ನು ತಿಳಿದ ನಂತರ, ರಾಹುಲ್ ಗಾಂಧಿ ಅಕ್ಟೋಬರ್ 17 ರಂದು ದೆಹಲಿಯಿಂದ ಕಾನ್ಪುರಕ್ಕೆ ವಿಮಾನದ ಮೂಲಕ ತೆರಳಿ, ನಂತರ ರಸ್ತೆ ಮೂಲಕ ಫತೇಪುರಕ್ಕೆ ಪ್ರಯಾಣ ಬೆಳೆಸಿದರು. ಆರಂಭದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಭಾವ್ಯ ಬೆದರಿಕೆಗಳನ್ನು ಉಲ್ಲೇಖಿಸಿ ಸ್ಥಳೀಯ ಆಡಳಿತವು ಅವರನ್ನು ತಡೆಯಲು ಪ್ರಯತ್ನಿಸಿತು. ಆದರೆ, ರಾಹುಲ್ ಗಾಂಧಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡದೆ ಹಿಂತಿರುಗಲು ನಿರಾಕರಿಸಿದರು. ಅಂತಿಮವಾಗಿ, ಅವರಿಗೆ ಮುಂದುವರಿಯಲು ಅವಕಾಶ ನೀಡಲಾಯಿತು.

ಭೇಟಿಯ ಸಮಯದಲ್ಲಿ, ಹರಿಓಂ ಅವರ ತಂದೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡುವಾಗ ಕಣ್ಣೀರು ಹಾಕಿದರು ಎಂದು ವರದಿಯಾಗಿದೆ. ಅವರ ತಾಯಿ ಕೂಡ ಅಳುತ್ತಿದ್ದರು. ರಾಹುಲ್ ಗಾಂಧಿ ಅವರು ಪೋಷಕರಿಗೆ ಸಾಂತ್ವನದ ಮಾತುಗಳನ್ನು ಹೇಳಿದರು. ಕಾಂಗ್ರೆಸ್ ಪಕ್ಷವು ಅವರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲ ನೀಡುತ್ತದೆ ಎಂದು ಭರವಸೆ ನೀಡಿದರು. ಹರಿಓಂ ಅವರ ಸಹೋದರಿ ಕುಸುಮ್, ಸರ್ಕಾರ ಕುಟುಂಬವನ್ನು ತಮ್ಮ ಮನೆಗೆ ಸೀಮಿತಗೊಳಿಸಿದೆ, ಹೊರಗಿನವರೊಂದಿಗೆ ಮಾತನಾಡುವುದನ್ನು ನಿರ್ಬಂಧಿಸಿದೆ ಎಂದು ಆರೋಪಿಸಿದರು, ಇದು ಕಾಂಗ್ರೆಸ್ ನಾಯಕರನ್ನು ಮತ್ತಷ್ಟು ಕೆರಳಿಸಿತು.

ಅಪರಾಧಿಗಳನ್ನು ರಕ್ಷಿಸುವುದನ್ನು ನಿಲ್ಲಿಸಿ: ರಾಹುಲ್

ಕುಟುಂಬದ ಭೇಟಿಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಘಟನೆಯನ್ನು ಬಲವಾದ ಪದಗಳಲ್ಲಿ ಖಂಡಿಸಿದರು. ಹರಿಓಂ ಅಪರಾಧಿಯಲ್ಲ, ಅಪರಾಧಿಗೆ ಬಲಿಯಾಗಿದ್ದಾನೆ. ಹೊಣೆಗಾರರನ್ನು ರಕ್ಷಿಸುವುದನ್ನು ನಿಲ್ಲಿಸುವಂತೆ ನಾನು ಸಿಎಂ ಯೋಗಿ ಅವರನ್ನು ಒತ್ತಾಯಿಸುತ್ತೇನೆ. ಅಪರಾಧಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಿ. ದೇಶಾದ್ಯಂತ ದಲಿತರು ಗುಂಪು ಹತ್ಯೆಯಿಂದ ಹಿಡಿದು ಅತ್ಯಾಚಾರದವರೆಗೆ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಬಲಿಪಶುಗಳ ಜೊತೆ ನಿಂತು ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸುತ್ತದೆ” ಎಂದರು.

“ಕುಟುಂಬವು ನನ್ನನ್ನು ಭೇಟಿಯಾಗಿದೆಯೋ ಇಲ್ಲವೋ ಎಂಬುದು ಸಮಸ್ಯೆಯಲ್ಲ, ಸಮಸ್ಯೆ ಅನ್ಯಾಯ. ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ, ಮೌನಗೊಳಿಸಲಾಗಿದೆ ಮತ್ತು ಪ್ರತ್ಯೇಕಿಸಲಾಗಿದೆ. ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವ ಹರಿಓಂ ಅವರ ಸಹೋದರಿ ಕೂಡ ಆಡಳಿತಾತ್ಮಕ ಒತ್ತಡದಿಂದಾಗಿ ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ಹೊರಹಾಕಿದರು.

ರಾಹುಲ್ ಗಾಂಧಿಯವರ ಭೇಟಿ ರಾಜ್ಯದಲ್ಲಿ ಹೊಸ ರಾಜಕೀಯ ಬಿಸಿಯನ್ನು ಹುಟ್ಟುಹಾಕಿದೆ, ಬಿಜೆಪಿ ದಲಿತ ವಿರೋಧಿ ಮತ್ತು ಅಪರಾಧಿಗಳನ್ನು ರಕ್ಷಿಸುವಲ್ಲಿ ಭಾಗಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಲಿಪಶುವಿನ ಕುಟುಂಬವನ್ನು ಬೆದರಿಸುವ ಆರೋಪದ ಮೇಲೆ ಈಗ ಪರಿಶೀಲನೆಗೆ ಒಳಪಟ್ಟಿರುವ ಸ್ಥಳೀಯ ಆಡಳಿತವನ್ನೂ ಈ ಭೇಟಿ ಬಹಿರಂಗಪಡಿಸಿದೆ.

ಹರಿಓಂ ವಾಲ್ಮೀಕಿಗೆ ನ್ಯಾಯ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರದಿಂದ ಉತ್ತರದಾಯಿತ್ವವನ್ನು ಒತ್ತಾಯಿಸಿ ಸಂಸತ್ತಿನ ಒಳಗೆ ಮತ್ತು ಹೊರಗೆ ಈ ವಿಷಯವನ್ನು ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ.

ಉತ್ತರ ಪ್ರದೇಶ| ದಲಿತ ಮಹಿಳಾ ಉದ್ಯೋಗಿಗೆ ಕಿರುಕುಳ; ಐಟಿಐ ಕಾಲೇಜು ಪ್ರಾಂಶುಪಾಲರು-ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...