Homeಮುಖಪುಟಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ 5 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ 5 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕ್ರಿಮಿನಲ್ ಕಾನೂನುಗಳು ಮುಗ್ದ ನಾಗರಿಕರಿಗೆ ಕಿರುಕುಳ ನೀಡುವ ಅಸ್ತ್ರವಾಗಬಾರದು ಎಂದ ನ್ಯಾಯಾಲಯ

- Advertisement -
- Advertisement -

“ಕ್ರಿಮಿನಲ್ ಕಾನೂನುಗಳು ಮುಗ್ದ ನಾಗರಿಕರಿಗೆ ಕಿರುಕುಳ ನೀಡುವ ಅಸ್ತ್ರವಾಗಬಾರದು” ಎಂದಿರುವ ಸುಪ್ರೀಂ ಕೋರ್ಟ್, ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಸಾಮೂಹಿಕವಾಗಿ ಮತಾಂತರಗೊಳಿಸಲಾಗಿದೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ದಾಖಲಿಸಲಾಗಿದ್ದ ಐದು ಎಫ್‌ಐಆರ್‌ಗಳನ್ನು ಶುಕ್ರವಾರ (ಅ.17) ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು, ಪ್ರಯಾಗ್‌ರಾಜ್‌ನ ಸ್ಯಾಮ್ ಹಿಗ್ಗಿನ್‌ಬಾಟಮ್ ಕೃಷಿ, ತಂತ್ರಜ್ಞಾನ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಇತರರ ವಿರುದ್ಧ 2021ರ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಮಾಡಿದೆ ಎಂದು ವರದಿಯಾಗಿದೆ.

ಬಲವಂತದ ಮತಾಂತರದಲ್ಲಿ ಭಾಗವಹಿಸಿದ ಅಥವಾ ಅದಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಉಪಕುಲಪತಿ ರಾಜೇಂದ್ರ ಬಿಹಾರಿ ಲಾಲ್ ಮತ್ತು ಇತರ ವಿರುದ್ದ ದಾಖಲಿಸಿದ್ದ ಎಫ್‌ಐಆರ್‌ಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗಳು ‘ಕಾನೂನು ದೌರ್ಬಲ್ಯಗಳು, ಕಾರ್ಯವಿಧಾನದ ಲೋಪಗಳು ಮತ್ತು ವಿಶ್ವಾಸಾರ್ಹ ಸಾಕ್ಷ್ಯಗಳ ಕೊರತೆ’ ಯನ್ನು ಹೊಂದಿವೆ ಎಂದು ನ್ಯಾಯಮೂರ್ತಿ ಪಾರ್ದಿವಾಲಾ ಹೇಳಿದ್ದಾರೆ. ವಿಚಾರಣೆಯನ್ನು ಮುಂದುವರಿಸುವುದು ‘ನ್ಯಾಯದ ಅಣಕ’ ಎಂದು ತಿಳಿಸಿದ್ದಾರೆ.

“ಕ್ರಿಮಿನಲ್ ಕಾನೂನನ್ನು ಅಮಾಯಕ ವ್ಯಕ್ತಿಗಳಿಗೆ ಕಿರುಕುಳ ನೀಡುವ ಸಾಧವಾಗಿ ಬಳಸಲು ಅನುಮತಿಸುವುದಿಲ್ಲ. ಪ್ರಾಸಿಕ್ಯೂಷನ್ ಸಂಸ್ಥೆಗಳು ನಂಬಿಕೆಗೆ ಅರ್ಹವಲ್ಲದ ವಿಷಯಗಳ ಆಧಾರದ ಮೇಲೆ ತಮ್ಮ ಇಚ್ಛೆಯಂತೆ ಮತ್ತು ಕಲ್ಪನಾತೀತವಾಗಿ ಮೊಕದ್ದಮೆ ಹೂಡುತ್ತಿವೆ” ಎಂದು 2022ರಲ್ಲಿ ದಾಖಲಾದ ಎಫ್‌ಐಆರ್‌ಗಳಲ್ಲಿ ಒಂದರ ನೋಂದಣಿಯಲ್ಲಿನ ‘ಸ್ಪಷ್ಟವಾದ ಉಲ್ಲಂಘನೆಗಳನ್ನು’ ಉಲ್ಲೇಖಿಸುತ್ತಾ ಪೀಠ ಹೇಳಿರುವುದಾಗಿ ವರದಿಯಾಗಿದೆ.

ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಥವಾ ದತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು 2021ರ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ ಅಥವಾ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಕ್ರಿಮಿನಲ್ ಅಪರಾಧವಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

ಪ್ರತಿಯೊಂದು ಎಫ್‌ಐಆರ್‌ನ ವಿವರಗಳನ್ನು ಪರಿಶೀಲಿಸಿದ ನ್ಯಾಯಾಲಯವು, ಮತಾಂತರಗೊಂಡಿದ್ದಾರೆ ಎನ್ನಲಾದ ಯಾವುದೇ ವ್ಯಕ್ತಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿಲ್ಲ ಎಂದು ತಿಳಿಸಿದೆ.

ಪ್ರಕರಣದ ಒಂದು ಎಫ್‌ಐಆರ್ ಬಗ್ಗೆ ಮಾತನಾಡಿದ ನ್ಯಾಯಾಧೀಶರು, ದೂರುದಾರ ವಿಶ್ವ ಹಿಂದೂ ಪರಿಷತ್ ಸದಸ್ಯ ಮತಾಂತರ ನಿಷೇಧ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ವ್ಯಾಖ್ಯಾನಿಸಲಾದ ‘ನೊಂದಣಿಗೊಂಡ ವ್ಯಕ್ತಿ’ ಅಲ್ಲ ಎಂದು ಹೇಳಿರುವುದಾಗಿ ಟೆಲಿಗ್ರಾಫ್ ವರದಿ ತಿಳಿಸಿದೆ.

ತಿದ್ದುಪಡಿ ಮಾಡದ ಕಾನೂನಿನ ಸೆಕ್ಷನ್ 4ರ ಅಡಿಯಲ್ಲಿ, ದೂರುದಾರ ಮತಾಂತರಗೊಂಡ ವ್ಯಕ್ತಿಯ ಸಂಬಂಧಿಯಾಗಿರಬೇಕು ಎಂದಿತ್ತು. ಯಾವುದೇ ವ್ಯಕ್ತಿಗೆ ಮತಾಂತರದ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡುವಂತೆ ಕಾನೂನನ್ನು 2024ರಲ್ಲಿ ತಿದ್ದುಪಡಿ ಮಾಡಲಾಯಿತು.

ಪ್ರಸ್ತುತ ಪ್ರಕರಣದ ಎಫ್‌ಐಆರ್ ಅನ್ನು ಕಾನೂನು ತಿದ್ದುಪಡಿ ಮಾಡುವ ಮೊದಲೇ ದಾಖಲಿಸಲಾಗಿದ್ದು, ಹಾಗಾಗಿ, ದೂರು ಅಮಾನ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಆಪಾದಿತ ಘಟನೆಯ ಬಗ್ಗೆ ವಿಳಂಬಿತ ದೂರುಗಳನ್ನು ಸಲ್ಲಿಸಲು ‘ಸ್ವಹಿತಾಸಕ್ತಿ ಹೊಂದಿರುವ ವ್ಯಕ್ತಿಗಳನ್ನು’ ಪ್ರೋತ್ಸಾಹಿಸುವ ಮೂಲಕ ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯನ್ನು ಸರಿದೂಗಿಸಲು ಪ್ರಯತ್ನಿಸಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.

“ಸಾಕ್ಷಿಗಳು ಕಾನೂನುಬಾಹಿರ ಧಾರ್ಮಿಕ ಮತಾಂತರಕ್ಕೆ ಒಳಗಾಗಿಲ್ಲ, ಅಥವಾ ಏಪ್ರಿಲ್ 14, 2022ರಂದು ನಡೆದ ಸಾಮೂಹಿಕ ಮತಾಂತರದ ಸ್ಥಳದಲ್ಲಿ ಅವರು ಇರಲಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಒಂದೇ ಘಟನೆಗೆ ಸಂಬಂಧಿಸಿದಂತೆ ಹಲವಾರು ಎಫ್‌ಐಆರ್‌ಗಳು ದಾಖಲಾಗಿವೆ ಎಂಬುವುದನ್ನು ಗಮನಿಸಿದ ಪೀಠ, “ಇದು ತನಿಖಾ ಪ್ರಕ್ರಿಯೆಯ ನ್ಯಾಯಸಮ್ಮತತೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಆರೋಪಿಗಳನ್ನು ಅನಗತ್ಯ ಕಿರುಕುಳಕ್ಕೆ ಒಳಪಡಿಸುತ್ತದೆ” ಎಂದಿದೆ.

ಆದಾಗ್ಯೂ, ಆರು ಪ್ರಕರಣಗಳಲ್ಲಿ ಒಂದು ಪ್ರತ್ಯೇಕ ಅಪರಾಧಗಳನ್ನು ಒಳಗೊಂಡಿರುವುದರಿಂದ ನ್ಯಾಯಾಲಯವು ಅರ್ಜಿಗಳ ಗುಂಪಿನಿಂದ ಬೇರ್ಪಡಿಸಿದೆ. ಆ ಪ್ರಕರಣದಲ್ಲಿ ಕಳೆದ ಡಿಸೆಂಬರ್‌ನಲ್ಲಿ ಆರೋಪಿಗಳಿಗೆ ನೀಡಲಾದ ಬಂಧನದಿಂದ ಮಧ್ಯಂತರ ರಕ್ಷಣೆಯ ಬಗ್ಗೆ ನ್ಯಾಯಾಲಯ ನಿರ್ಧರಿಸುವವರೆಗೆ ಅದು ಮುಂದುವರಿಯಲಿದೆ ಎಂದು ಹೇಳಿದೆ.

ಡಿಸೆಂಬರ್ 2021ಮತ್ತು ಜನವರಿ 2023 ರ ನಡುವೆ, ಫತೇಪುರ್ ಜಿಲ್ಲೆ ಮತ್ತು ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ಭಾರತೀಯ ದಂಡ ಸಂಹಿತೆ ಮತ್ತು ರಾಜ್ಯದ ಮತಾಂತರ ವಿರೋಧಿ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಆರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು.

ವಿಶ್ವ ಹಿಂದೂ ಪರಿಷತ್ತಿನ ಫತೇಪುರ್ ಘಟಕದ ಉಪಾಧ್ಯಕ್ಷ ಹಿಮಾಂಶು ದೀಕ್ಷಿತ್ ಅವರ ದೂರಿನ ಆಧಾರದ ಮೇಲೆ ಏಪ್ರಿಲ್ 15, 2022 ರಂದು ದಾಖಲಿಸಲಾದ ಎಫ್‌ಐಆರ್‌ ಇವುಗಳಲ್ಲಿ ಒಂದು.

ಕ್ರಿಶ್ಚಿಯನ್ ಧರ್ಮದ ಆಚರಣೆಯ ದಿನವಾದ ಮಾಂಡಿ ಗುರುವಾರದಂದು ಇವಾಂಜೆಲಿಕಲ್ ಚರ್ಚ್ ಆಫ್ ಇಂಡಿಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 90 ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲಾಗಿದೆ ಎಂದು ಈ ಪ್ರಕರಣ ಆರೋಪವಾಗಿತ್ತು.

ಹಣ ಮತ್ತು ಇತರ ಆಮಿಷಗಳನ್ನು ಒಡ್ಡಿ ಹಿಂದೂಗಳನ್ನು ಕಾರ್ಯಕ್ರಮಕ್ಕೆ ಕರೆಸಲಾಗಿತ್ತು. ಅಲ್ಲಿ ಮತಾಂತರ ಮಾಡಲಾಗಿತ್ತು ಎಂದು ದೂರುದಾರ ಆರೋಪಿಸಿದ್ದರು.

ದೂರು ಸ್ವೀಕರಿಸಿ ಪೊಲೀಸರು ಮತಾಂತರ ವಿರೋಧಿ ಕಾನೂನಿನ ಜೊತೆಗೆ, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ ಮತ್ತು ಸುಲಿಗೆಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಡಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...