HomeUncategorizedತಮಿಳುನಾಡು: ಮರ್ಯಾದೆಗೇಡು ಹತ್ಯೆಗಳ ತಡೆಗೆ ಕಾಯ್ದೆಯನ್ನು ತರುತ್ತೇವೆ- ಎಂ. ಕೆ. ಸ್ಟಾಲಿನ್‌

ತಮಿಳುನಾಡು: ಮರ್ಯಾದೆಗೇಡು ಹತ್ಯೆಗಳ ತಡೆಗೆ ಕಾಯ್ದೆಯನ್ನು ತರುತ್ತೇವೆ- ಎಂ. ಕೆ. ಸ್ಟಾಲಿನ್‌

- Advertisement -
- Advertisement -

ದೇಶದಾದ್ಯಂತ ಅಂತರ್ಜಾತಿ ವಿವಾಹವಾದ ದಂಪತಿಗಳನ್ನು ಕುಟುಂಬದ ಸದಸ್ಯರು ಜಾತಿ ಕಾರಣಕ್ಕಾಗಿ ಹತ್ಯೆ ನಡೆಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಇದರ ಬೆನ್ನಲ್ಲೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ತಮಿಳುನಾಡಿನ ವಿಧಾನಸಭೆಯ ಕಲಾಪದ ವೇಳೆ ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳ ವಿರುದ್ದ ಪ್ರಭಲವಾದ ಕಾಯ್ದೆಯನ್ನು ರೂಪಿಸಲು ತಮ್ಮ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ “ಈಗಿರುವ ಪ್ರಸ್ತುತ ಕಾನೂನಿನಲ್ಲೇ ಇದನ್ನು ತಡೆಗಟ್ಟಬಹುದು, ಪ್ರತ್ಯೇಕ ಕಾಯ್ದೆ ಅಗತ್ಯವಿಲ್ಲ” ಎಂದಿದ್ದರು. ಡಿಎಂಕೆಯ ಮಿತ್ರ ಪಕ್ಷಗಳಾದ ಮಿತ್ರಪಕ್ಷಗಳಾದ ಸಿಪಿಐ, ಸಿಪಿಐ(ಎಂ) ಮತ್ತು ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಗಳ ಒತ್ತಡಕ್ಕೆ ಮಣಿದು ಅಂತಿಮವಾಗಿ ಜಾತಿ ಆಧಾರಿತ ದ್ವೇಷ ಅಪರಾಧಗಳು ಮತ್ತು ಮರ್ಯಾದೆಗೇಡು ಹತ್ಯೆಗಳು ತಡೆಗಟ್ಟುವ ಗುರಿಯನ್ನು ಹೊಂದಿರುವ ಕಾನೂನನ್ನು ರೂಪಿಸಲಾಗವುದು ಎಂದು ತಿಳಿಸಿದ್ದಾರೆ.

ಕಠಿಣ ಕಾನೂನು ಮತ್ತು ತೀರ್ಪುಗಳತ್ತ ಕರ್ನಾಟಕದ ನಿರಂತರ ಪ್ರಯತ್ನಗಳು
ಮಹಿಳಾ ಮತ್ತು ಸಮಾಜದ ವಿರುದ್ಧ ನಡೆಯುತ್ತಿರುವ ಗಂಭೀರ ಅಪರಾಧಗಳನ್ನು ನಿಗ್ರಹಿಸಲು ಕರ್ನಾಟಕ ಸರ್ಕಾವೂ ಮುಂದಾಗಿದೆ. ಈ ಹಿಂದೆ ಸೆಪ್ಟೆಂಬರ್ 2023ರಲ್ಲಿ ಮಾಧ್ಯಮ ವರದಿಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತಿಯ (ಐಪಿಸಿ) ನಿಯಮಗಳು ಇಂತಹ ಅಪರಾಧಗಳಿಗೆ ಸಾಕಷ್ಟು ಕಠಿಣವಲ್ಲವೆಂದು ಅಭಿಪ್ರಾಯಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಹೊಸ, ಕಠಿಣ ರಾಜ್ಯ ಕಾನೂನನ್ನು ರೂಪಿಸುವ ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದರು. ಮಹಿಳಾ ಸಂಘಟನೆಗಳು, ಕಾನೂನು ತಜ್ಞರು ಮತ್ತು ಇತರ ಸಾಮಾಜಿಕ ಪಾಲುದಾರರೊಂದಿಗೆ ವಿಚಾರಣಾ ಸಭೆಗಳನ್ನು ನಡೆಸುವ ಯೋಜನೆಯನ್ನು ಹೊಂದಿದ್ದೇವೆ, ಹೊಸ ಕಾನೂನು ಗಂಭೀರ ಅಪರಾಧಗಳ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರೂಪಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದರು.

ಇತ್ತ, ರಾಜ್ಯದ ನ್ಯಾಯಾಂಗವೂ ಇಂತಹ ಪ್ರಕರಣಗಳಲ್ಲಿ ಕಠಿಣ ತೀರ್ಪುಗಳನ್ನು ನೀಡುತ್ತಿದೆ ಎಂಬುದರ ಉದಾಹರಣೆಯಾಗಿ ಇತ್ತೀಚಿನ ಎರಡು ಪ್ರಮುಖ ತೀರ್ಪುಗಳು ಗಮನ ಸೆಳೆಯುತ್ತಿವೆ:

  • ಫೆಬ್ರವರಿ 2025: ಗದಗ ಜಿಲ್ಲೆಯ ಜಿಲ್ಲಾ ನ್ಯಾಯಾಲಯವು 2019ರ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ನಡೆದ “ಮರ್ಯಾದಾ ಹತ್ಯೆ” ಪ್ರಕರಣದಲ್ಲಿ ನಾಲ್ಕು ಸಂಬಂಧಿಕರಿಗೆ ಮರಣದಂಡನೆ ವಿಧಿಸಿತು.
  • ಏಪ್ರಿಲ್ 2025: ಕರ್ನಾಟಕದ ಮತ್ತೊಂದು ನ್ಯಾಯಾಲಯವು ಇಂತಹದೇ ಮತ್ತೊಂದು “ಮರ್ಯಾದಾ ಹತ್ಯೆ” ಪ್ರಕರಣದಲ್ಲಿ ಮೂವರಿಗೆ ಮರಣದಂಡನೆ ಹಾಗೂ ಒಂಬತ್ತು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು.

ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ಕಠಿಣ ಕಾನೂನು ರೂಪಿಸುತ್ತಿರುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುತ್ತವೆ ಎಂದು ಹಲವು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...