Homeಮುಖಪುಟಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಸಾಮಾಜಿಕ ಒತ್ತಡಕ್ಕೆ ಬಂಧಿಸಿದ್ದೇವೆ ಎಂದ ಪೊಲೀಸರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಹಿಂದೂ-ಮುಸ್ಲಿಂ ದಂಪತಿಯನ್ನು ಅಕ್ರಮವಾಗಿ ಬಂಧಿಸಿದ ಪೊಲೀಸರಿಗೆ ಶನಿವಾರ (ಅ.19) ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್, ಪೊಲೀಸರ ನಡೆ ಕಾನೂನುಬಾಹಿರ ಮತ್ತು ಸಂವಿಧಾನದ 21ನೇ ವಿಧಿಯಡಿ ಖಾತ್ರಿ ಪಡಿಸಲಾದ ದಂಪತಿಯ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ.

ದಂಪತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದ್ದು, ಅವರಿಗೆ ಯಾವುದೇ ಕಿರುಕುಳ ನೀಡದೆ ಅಲೀಗಢ ತಲುಪುವವರೆಗೆ ರಕ್ಷಣೆ ಒದಗಿಸುವಂತೆ ಸೂಚಿಸಿದೆ.

ಶೇನ್ ಅಲೀ ಮತ್ತು ರಶ್ಮಿ ಈ ಪ್ರಕರಣದ ದಂಪತಿ. ನನ್ನ ಮಗಳನ್ನು ಶೇನ್ ಅಲೀ ಅಪಹರಿಸಿದ್ದಾನೆ ಎಂದು ಸೆಪ್ಟೆಂಬರ್ 27ರಂದು ಅಲೀಗಢದ ಅಕ್ರಬಾದ್ ಪೊಲೀಸ್ ಠಾಣೆಯಲ್ಲಿ ರಶ್ಮಿಯ ತಂದೆ ದೂರು ದಾಖಲಿಸಿದ್ದರು.

ಅಕ್ಟೋಬರ್ 15ರಂದು ಹೈಕೋರ್ಟ್‌ ಮುಂದೆ ಹಾಜರಾದ ದಂಪತಿ, ನಾವು ಇಬ್ಬರೂ ವಯಸ್ಕರು, ಪರಸ್ಪರ ಇಷ್ಟಪಟ್ಟು ಮದುವೆ ಮಾಡಿಕೊಂಡಿದ್ದೇವೆ ಎಂದಿದ್ದರು. ತನ್ನ ವಿರುದ್ದ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಶೇನ್ ಅಲೀ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ದಂಪತಿ ಹೈಕೋರ್ಟ್‌ನಿಂದ ಹೊರ ಬಂದ ಕೂಡಲೇ ರಶ್ಮಿಯ ತಂದೆ ಸ್ಥಳೀಯ ಪೊಲೀಸರ ಸಹಾಯದಿಂದ ಇಬ್ಬರನ್ನೂ ಅಪಹರಿಸಿದ್ದರು. ಅವರನ್ನು ಅಲೀಗಢಕ್ಕೆ ಕರೆದೊಯ್ದು, ರಶ್ಮಿಯನ್ನು ‘ಒನ್ ಸ್ಟಾಪ್ ಸೆಂಟರ್’ ಅಥವಾ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದರು. ಶೇನ್ ಅಲೀಯನ್ನು ಪೊಲೀಸರು ಬಂಧಿಸಿ ಲಾಕ್‌ ಅಪ್‌ನಲ್ಲಿ ಇಟ್ಟಿದ್ದರು.

ಅಕ್ಟೋಬರ್ 17ರಂದು ದಂಪತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 183ರ ಅಡಿ ರಶ್ಮಿ ಹೇಳಿಕೆ ನೀಡಿದ್ದರು.

ಈ ನಡುವೆ ಶೇನ್ ಅಲೀಯ ಸಹೋದರ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಶನಿವಾರ ರಜಾ ದಿನವಾದರೂ ನ್ಯಾಯಮೂರ್ತಿಗಳಾದ ಸಲೀಲ್ ಕುಮಾರ್ ರೈ ಮತ್ತು ದಿವೇಶ್ ಚಂದ್ರ ಸಮಂತ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ, “ಅಕ್ಟೋಬರ್ 17 ರಂದು ರಶ್ಮಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಅಲ್ಲಿ ಆಕೆ ವಯಸ್ಕಳೆಂದು ಕಂಡುಬಂದಿದೆ. ಅಲ್ಲದೆ, ಶೇನ್ ಅಲೀಯನ್ನು ಸ್ವಇಚ್ಛೆಯಿಂದ ಮದುವೆಯಾಗಿರುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಸರ್ಕಾರಿ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

“ವಿಡಿಯೋ ಕಾನ್ಫರೆನ್ಸ್‌ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾದ ರಶ್ಮಿ, “ತನಗೆ 21 ವರ್ಷ ವಯಸ್ಸಾಗಿದ್ದು, ಶೇನ್ ಅಲಿಯನ್ನು ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ. ಆತನೊಂದಿಗೆ ಜೀವಿಸಲು ಬಯಸಿದ್ದೇನೆ ಎಂದಿದ್ದಾರೆ. ತನ್ನ ಹಿಂದಿನ ಹೇಳಿಕೆಯನ್ನು ಯಾವುದೇ ಒತ್ತಡವಿಲ್ಲದೆ ನೀಡಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮಹಿಳೆ ಮೇಜರ್ ಆಗಿರುವುದರಿಂದ ಆಕೆ ಬಯಸಿದ ಯಾರೊಂದಿಗಾದರೂ ಹೋಗಿ ಜೀವಿಸಲು ಸ್ವತಂತ್ರಳು ಎಂದಿರುವ ಹೈಕೋರ್ಟ್ ಪೀಠ, ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನಿರ್ಧರಿಸಲು ಅವರ ವಿವಾಹದ ಸಿಂಧುತ್ವವು ಪ್ರಸ್ತುತವಲ್ಲ ಎಂದಿದೆ.

ಅಕ್ಟೋಬರ್ 15ರಂದು ಹೈಕೋರ್ಟ್ ಆವರಣದಿಂದ ಅಪಹರಿಸಿ ಅಲಿಗಢಕ್ಕೆ ಕರೆದೊಯ್ದಿದ್ದಾರೆ ಎಂಬ ದಂಪತಿಯ ಹೇಳಿಕೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

“ಅಕ್ರಬಾದ್ ಠಾಣೆಯಲ್ಲಿ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್‌ನ ತನಿಖಾಧಿಕಾರಿ, ದಂಪತಿಯ ಧಾರ್ಮಿಕ ಭಿನ್ನಾಭಿಪ್ರಾಯಗಳು ಮತ್ತು ಅವರ ವಿವಾಹದ ಕಾನೂನುಬದ್ಧತೆಯ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಅಂತಹ ಯಾವುದೇ ತನಿಖೆಯ ಅಗತ್ಯವಿರಲಿಲ್ಲ. ಮ್ಯಾಜಿಸ್ಟ್ರೇಟ್ ಆಕೆಯನ್ನು ಬಿಡುಗಡೆ ಮಾಡಿದ ನಂತರ ಪೊಲೀಸರ ಏಕೈಕ ಕೆಲಸವೆಂದರೆ ದಂಪತಿ ಹೇಳಿದ ಜಾಗಕ್ಕೆ ಸೂಕ್ತ ರಕ್ಷಣೆಯೊಂದಿಗೆ ಅವರನ್ನು ಕಳುಹಿಸಿ ಕೊಡುವುದಾಗಿದೆ ಹೈಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ಅಂತರ್ಧರ್ಮೀಯ ವಿವಾಹ ಹಿನ್ನೆಲೆ ಸಾಮಾಜಿಕ ಒತ್ತಡದಿಂದ ದಂಪತಿಯನ್ನು ಬಂಧಿಸಲಾಗಿದೆ ಎಂಬ ಪೊಲೀಸರ ಅಥವಾ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಒಬ್ಬರು ವ್ಯಕ್ತಿಯನ್ನು ಸೂಕ್ತ ಕಾನೂನಿನಡಿ ಮಾತ್ರ ಬಂಧಿಸಬಹುದು, ಸಾಮಾಜಿಕ ಒತ್ತಡ ಹಿನ್ನೆಲೆ ಬಂಧಿಸಲು ಸಾಧ್ಯವಿಲ್ಲ ಎಂದಿದೆ.

ಪೊಲೀಸರ ಕ್ರಮ ವಿಧಿ 21 ರ ಉಲ್ಲಂಘನೆ ಎಂದು ಹೇಳಿದ ನ್ಯಾಯಪೀಠ, ಸರ್ಕಾರದ ಕರ್ತವ್ಯ ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸುವುದು, ಸಾಮಾಜಿಕ ಒತ್ತಡಕ್ಕೆ ಶರಣಾಗುವುದು ಅಲ್ಲ ಎಂದು ಸ್ಪಷ್ಟಪಡಿಸಿದೆ.

ದಂಪತಿಗೆ ರಕ್ಷಣೆ ಒದಗಿಸಲು ಮತ್ತು ಅವರ ಸ್ವತಂತ್ರ ಜೀವನಕ್ಕೆ ಯಾರೂ ಅಡ್ಡಿಪಡಿಸದಂತೆ ನೋಡಿಕೊಳ್ಳಲು
ಪ್ರಯಾಗ್‌ರಾಜ್ ಪೊಲೀಸ್ ಆಯುಕ್ತರು, ಅಲಿಗಢ ಮತ್ತು ಬರೇಲಿಯ ಎಸ್‌ಎಸ್‌ಪಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಘಟನೆಯ ಬಗ್ಗೆ ತನಿಖೆ ನಡೆಸಿ ನವೆಂಬರ್ 28, 2025ರೊಳಗೆ ವರದಿ ಸಲ್ಲಿಸುವಂತೆ ಅಲಿಗಢದ ಎಸ್‌ಎಸ್‌ಪಿಗೆ ಆದೇಶಿಸಿದೆ.

ಕೇರಳ ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಕೇಳಿದ ಇಬ್ಬರು ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...