Homeಮುಖಪುಟಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಸಾಮಾಜಿಕ ಒತ್ತಡಕ್ಕೆ ಬಂಧಿಸಿದ್ದೇವೆ ಎಂದ ಪೊಲೀಸರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಹಿಂದೂ-ಮುಸ್ಲಿಂ ದಂಪತಿಯನ್ನು ಅಕ್ರಮವಾಗಿ ಬಂಧಿಸಿದ ಪೊಲೀಸರಿಗೆ ಶನಿವಾರ (ಅ.19) ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್, ಪೊಲೀಸರ ನಡೆ ಕಾನೂನುಬಾಹಿರ ಮತ್ತು ಸಂವಿಧಾನದ 21ನೇ ವಿಧಿಯಡಿ ಖಾತ್ರಿ ಪಡಿಸಲಾದ ದಂಪತಿಯ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ.

ದಂಪತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದ್ದು, ಅವರಿಗೆ ಯಾವುದೇ ಕಿರುಕುಳ ನೀಡದೆ ಅಲೀಗಢ ತಲುಪುವವರೆಗೆ ರಕ್ಷಣೆ ಒದಗಿಸುವಂತೆ ಸೂಚಿಸಿದೆ.

ಶೇನ್ ಅಲೀ ಮತ್ತು ರಶ್ಮಿ ಈ ಪ್ರಕರಣದ ದಂಪತಿ. ನನ್ನ ಮಗಳನ್ನು ಶೇನ್ ಅಲೀ ಅಪಹರಿಸಿದ್ದಾನೆ ಎಂದು ಸೆಪ್ಟೆಂಬರ್ 27ರಂದು ಅಲೀಗಢದ ಅಕ್ರಬಾದ್ ಪೊಲೀಸ್ ಠಾಣೆಯಲ್ಲಿ ರಶ್ಮಿಯ ತಂದೆ ದೂರು ದಾಖಲಿಸಿದ್ದರು.

ಅಕ್ಟೋಬರ್ 15ರಂದು ಹೈಕೋರ್ಟ್‌ ಮುಂದೆ ಹಾಜರಾದ ದಂಪತಿ, ನಾವು ಇಬ್ಬರೂ ವಯಸ್ಕರು, ಪರಸ್ಪರ ಇಷ್ಟಪಟ್ಟು ಮದುವೆ ಮಾಡಿಕೊಂಡಿದ್ದೇವೆ ಎಂದಿದ್ದರು. ತನ್ನ ವಿರುದ್ದ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಶೇನ್ ಅಲೀ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ದಂಪತಿ ಹೈಕೋರ್ಟ್‌ನಿಂದ ಹೊರ ಬಂದ ಕೂಡಲೇ ರಶ್ಮಿಯ ತಂದೆ ಸ್ಥಳೀಯ ಪೊಲೀಸರ ಸಹಾಯದಿಂದ ಇಬ್ಬರನ್ನೂ ಅಪಹರಿಸಿದ್ದರು. ಅವರನ್ನು ಅಲೀಗಢಕ್ಕೆ ಕರೆದೊಯ್ದು, ರಶ್ಮಿಯನ್ನು ‘ಒನ್ ಸ್ಟಾಪ್ ಸೆಂಟರ್’ ಅಥವಾ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದರು. ಶೇನ್ ಅಲೀಯನ್ನು ಪೊಲೀಸರು ಬಂಧಿಸಿ ಲಾಕ್‌ ಅಪ್‌ನಲ್ಲಿ ಇಟ್ಟಿದ್ದರು.

ಅಕ್ಟೋಬರ್ 17ರಂದು ದಂಪತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 183ರ ಅಡಿ ರಶ್ಮಿ ಹೇಳಿಕೆ ನೀಡಿದ್ದರು.

ಈ ನಡುವೆ ಶೇನ್ ಅಲೀಯ ಸಹೋದರ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಶನಿವಾರ ರಜಾ ದಿನವಾದರೂ ನ್ಯಾಯಮೂರ್ತಿಗಳಾದ ಸಲೀಲ್ ಕುಮಾರ್ ರೈ ಮತ್ತು ದಿವೇಶ್ ಚಂದ್ರ ಸಮಂತ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ, “ಅಕ್ಟೋಬರ್ 17 ರಂದು ರಶ್ಮಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಅಲ್ಲಿ ಆಕೆ ವಯಸ್ಕಳೆಂದು ಕಂಡುಬಂದಿದೆ. ಅಲ್ಲದೆ, ಶೇನ್ ಅಲೀಯನ್ನು ಸ್ವಇಚ್ಛೆಯಿಂದ ಮದುವೆಯಾಗಿರುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಸರ್ಕಾರಿ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

“ವಿಡಿಯೋ ಕಾನ್ಫರೆನ್ಸ್‌ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾದ ರಶ್ಮಿ, “ತನಗೆ 21 ವರ್ಷ ವಯಸ್ಸಾಗಿದ್ದು, ಶೇನ್ ಅಲಿಯನ್ನು ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ. ಆತನೊಂದಿಗೆ ಜೀವಿಸಲು ಬಯಸಿದ್ದೇನೆ ಎಂದಿದ್ದಾರೆ. ತನ್ನ ಹಿಂದಿನ ಹೇಳಿಕೆಯನ್ನು ಯಾವುದೇ ಒತ್ತಡವಿಲ್ಲದೆ ನೀಡಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮಹಿಳೆ ಮೇಜರ್ ಆಗಿರುವುದರಿಂದ ಆಕೆ ಬಯಸಿದ ಯಾರೊಂದಿಗಾದರೂ ಹೋಗಿ ಜೀವಿಸಲು ಸ್ವತಂತ್ರಳು ಎಂದಿರುವ ಹೈಕೋರ್ಟ್ ಪೀಠ, ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನಿರ್ಧರಿಸಲು ಅವರ ವಿವಾಹದ ಸಿಂಧುತ್ವವು ಪ್ರಸ್ತುತವಲ್ಲ ಎಂದಿದೆ.

ಅಕ್ಟೋಬರ್ 15ರಂದು ಹೈಕೋರ್ಟ್ ಆವರಣದಿಂದ ಅಪಹರಿಸಿ ಅಲಿಗಢಕ್ಕೆ ಕರೆದೊಯ್ದಿದ್ದಾರೆ ಎಂಬ ದಂಪತಿಯ ಹೇಳಿಕೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

“ಅಕ್ರಬಾದ್ ಠಾಣೆಯಲ್ಲಿ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್‌ನ ತನಿಖಾಧಿಕಾರಿ, ದಂಪತಿಯ ಧಾರ್ಮಿಕ ಭಿನ್ನಾಭಿಪ್ರಾಯಗಳು ಮತ್ತು ಅವರ ವಿವಾಹದ ಕಾನೂನುಬದ್ಧತೆಯ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಅಂತಹ ಯಾವುದೇ ತನಿಖೆಯ ಅಗತ್ಯವಿರಲಿಲ್ಲ. ಮ್ಯಾಜಿಸ್ಟ್ರೇಟ್ ಆಕೆಯನ್ನು ಬಿಡುಗಡೆ ಮಾಡಿದ ನಂತರ ಪೊಲೀಸರ ಏಕೈಕ ಕೆಲಸವೆಂದರೆ ದಂಪತಿ ಹೇಳಿದ ಜಾಗಕ್ಕೆ ಸೂಕ್ತ ರಕ್ಷಣೆಯೊಂದಿಗೆ ಅವರನ್ನು ಕಳುಹಿಸಿ ಕೊಡುವುದಾಗಿದೆ ಹೈಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ಅಂತರ್ಧರ್ಮೀಯ ವಿವಾಹ ಹಿನ್ನೆಲೆ ಸಾಮಾಜಿಕ ಒತ್ತಡದಿಂದ ದಂಪತಿಯನ್ನು ಬಂಧಿಸಲಾಗಿದೆ ಎಂಬ ಪೊಲೀಸರ ಅಥವಾ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಒಬ್ಬರು ವ್ಯಕ್ತಿಯನ್ನು ಸೂಕ್ತ ಕಾನೂನಿನಡಿ ಮಾತ್ರ ಬಂಧಿಸಬಹುದು, ಸಾಮಾಜಿಕ ಒತ್ತಡ ಹಿನ್ನೆಲೆ ಬಂಧಿಸಲು ಸಾಧ್ಯವಿಲ್ಲ ಎಂದಿದೆ.

ಪೊಲೀಸರ ಕ್ರಮ ವಿಧಿ 21 ರ ಉಲ್ಲಂಘನೆ ಎಂದು ಹೇಳಿದ ನ್ಯಾಯಪೀಠ, ಸರ್ಕಾರದ ಕರ್ತವ್ಯ ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸುವುದು, ಸಾಮಾಜಿಕ ಒತ್ತಡಕ್ಕೆ ಶರಣಾಗುವುದು ಅಲ್ಲ ಎಂದು ಸ್ಪಷ್ಟಪಡಿಸಿದೆ.

ದಂಪತಿಗೆ ರಕ್ಷಣೆ ಒದಗಿಸಲು ಮತ್ತು ಅವರ ಸ್ವತಂತ್ರ ಜೀವನಕ್ಕೆ ಯಾರೂ ಅಡ್ಡಿಪಡಿಸದಂತೆ ನೋಡಿಕೊಳ್ಳಲು
ಪ್ರಯಾಗ್‌ರಾಜ್ ಪೊಲೀಸ್ ಆಯುಕ್ತರು, ಅಲಿಗಢ ಮತ್ತು ಬರೇಲಿಯ ಎಸ್‌ಎಸ್‌ಪಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಘಟನೆಯ ಬಗ್ಗೆ ತನಿಖೆ ನಡೆಸಿ ನವೆಂಬರ್ 28, 2025ರೊಳಗೆ ವರದಿ ಸಲ್ಲಿಸುವಂತೆ ಅಲಿಗಢದ ಎಸ್‌ಎಸ್‌ಪಿಗೆ ಆದೇಶಿಸಿದೆ.

ಕೇರಳ ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಕೇಳಿದ ಇಬ್ಬರು ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...