Homeಮುಖಪುಟಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

ಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

- Advertisement -
- Advertisement -

ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ನಿಯಮಗಳನ್ನು ಉಲ್ಲಂಘಿಸಿ ದೀಪಾವಳಿ ಪ್ರಯುಕ್ತ ಜನರು ಪಟಾಕಿ ಸಿಡಿಸಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದೆಗೆಟ್ಟಿದೆ.

ಸೋಮವಾರ (ನಿನ್ನೆ) ರಾತ್ರಿಯಿಡೀ ಜನರು ಪಟಾಕಿಗಳನ್ನು ಸಿಡಿಸಿದ ಪರಿಣಾಮ, ಮಂಗಳವಾರ (ಇಂದು) ಬೆಳಿಗ್ಗೆ ರಾಜಧಾನಿ ನಗರದಾದ್ಯಂತ ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬೆಳಿಗ್ಗೆ 7 ಗಂಟೆಯ ಸುಮಾರಿಗೆ 451 ತಲುಪಿತ್ತು. ಇದು ರಾಷ್ಟ್ರೀಯ ಸರಾಸರಿಗಿಂತ 1.8 ಪಟ್ಟು ಹೆಚ್ಚು ಮತ್ತು ತೀವ್ರ ವಾಯಮಾಲಿನ್ಯವನ್ನು ಸೂಚಿಸುತ್ತದೆ.

ದೀಪಾವಳಿ ರಾತ್ರಿ (ಸೋಮವಾರ ರಾತ್ರಿ) ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ತೀವ್ರ ಕಳಪೆ’ ಮಟ್ಟಕ್ಕೆ ಇಳಿದಿತ್ತು. ದೆಹಲಿಯ ಸ್ಯಾಟ್‌ಲೈಟ್ ನಗರಗಳಾದ ನೋಯ್ಡಾ ಮತ್ತು ಗುರ್‌ಗಾಂವ್‌ನಲ್ಲೂ ಪರಿಸ್ಥಿತಿ ತೀವ್ರವಾಗಿ ಹದೆಗೆಟ್ಟಿದೆ. ಮಂಗಳವಾರ ಬೆಳಿಗ್ಗೆ ಈ ನಗರಗಳಲ್ಲಿ ಕ್ರಮವಾಗಿ 407 ಮತ್ತು 402 ಎಕ್ಯೂಐ ದಾಖಲಾಗಿದೆ.

ದೆಹಲಿಯ ಬಹುತೇಕ ವಾಯು ಗುಣಮಟ್ಟ ಮಾಪನ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ‘ರೆಡ್‌ಝೋನ್‌’ ತಲುಪಿರುವುದಾಗಿ ದಾಖಲಾಗಿದೆ. ವಝೀರ್‌ಪುರ (435), ದ್ವಾರಕಾ (422), ಅಶೋಕ್ ವಿಹಾರ್ (445), ಮತ್ತು ಆನಂದ್ ವಿಹಾರ್‌ (440)ಗಳಲ್ಲಿ ಗಾಳಿಯು ತೀವ್ರ ಕಳಪೆ ಮಟ್ಟಕ್ಕೆ ಇಳಿದಿದೆ. ಇದು ವಾಯು ಮಾಲಿನ್ಯದ ಗಂಭೀರ ಸ್ಥಿತಿಯನ್ನು ಸೂಚಿಸುತ್ತದೆ ಎಂದು ವರದಿಗಳು ವಿವರಿಸಿವೆ.

0 ಯಿಂದ 50ರ ನಡುವಿನ ವಾಯುಗುಟ್ಟವನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತೀ ಕಳಪೆ’ ಮತ್ತು 401 ರಿಂದ 500 ‘ತೀವ್ರ ಕಳಪೆ’ ಅಥವಾ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ.

2020ರಿಂದ ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

ಈ ವರ್ಷ ಸುಪ್ರೀಂ ಕೋರ್ಟ್ ಅಕ್ಟೋಬರ್ 18 ರಿಂದ 20 ರವರೆಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿಗಳನ್ನು ಸಿಡಿಸಲು ಅನುಮತಿ ನೀಡಿತ್ತು. ಬೆಳಿಗ್ಗೆ 6 ರಿಂದ ಬೆಳಿಗ್ಗೆ 7 ರವರೆಗೆ ಮತ್ತು ರಾತ್ರಿ 8 ರಿಂದ ರಾತ್ರಿ 10 ರವರೆಗೆ ಎರಡು ಸಮಯಗಳಲ್ಲಿ ಮಾತ್ರ ಪಟಾಕಿ ಸಿಡಿಸಲು ಅನುಮತಿಸಿತ್ತು. ಆದರೆ, ಜನರು ನಿಯಮ ಮೀರಿ ನಿಗದಿ ಸಮಯಕ್ಕಿಂತ ಮೊದಲು ಮತ್ತು ನಂತರ ಪಟಾಕಿಗಳು ಸಿಡಿಸಿದ್ದಾರೆ ಎನ್ನಲಾಗಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿ ಇರುವಾಗ ಹಸಿರು ಪಟಾಕಿಗಳನ್ನು ಸಿಡಿಸುವುದು ಕೂಡ ಸಮಂಜಸವಲ್ಲ. ಏಕೆಂದರೆ, ಅದೇನು ಕಡಿಮೆ ವಿಷಕಾರಿಯಲ್ಲ ಎಂದು ತಜ್ಞರು ಎಚ್ಚರಿಸಿದ್ದರು.

ದೀಪಾವಳಿ ರಾತ್ರಿ ದೆಹಲಿ ಅಗ್ನಿಶಾಮಕ ಸೇವೆಗಳಿಗೆ 269 ತುರ್ತು ಕರೆಗಳು ಬಂದಿವೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ಜೀವಹಾನಿ ಅಥವಾ ದೊಡ್ಡ ಮಟ್ಟದ ಗಾಯಗಳು ಸೇರಿದಂತೆ ಯಾವುದೇ ಪ್ರಮುಖ ಅವಘಡಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಕಳೆದ ವಾರ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿದ್ದಾಗ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (ಜಿಆರ್‌ಎಪಿ) ನ ಎರಡನೇ ಹಂತವನ್ನು ಜಾರಿಗೊಳಿಸಿತ್ತು. ಧೂಳು ನಿಯಂತ್ರಣವನ್ನು ತೀವ್ರಗೊಳಿಸುವುದು. ಸಾರ್ವಜನಿಕ ಸಾರಿಗೆ ಸೇವೆಗಳ ವಿಸ್ತರಣೆ ಮತ್ತು ಡೀಸೆಲ್ ಜನರೇಟರ್ ಸೆಟ್‌ಗಳ ಮೇಲಿನ ನಿರ್ಬಂಧಗಳು ಜಿಆರ್‌ಪಿಎ ಎರಡನೇ ಹಂತದಲ್ಲಿ ಸೇರಿವೆ.

ದೆಹಲಿ-ಎನ್‌ಸಿಆರ್‌ನ ಸ್ಥಳೀಯಾಡಳಿತ ಈಗಾಗಲೇ ಪ್ರತಿದಿನ ಯಂತ್ರಗಳ ಮೂಲಕ ಗುಡಿಸುವುದು ಮತ್ತು ರಸ್ತೆಗಳ ಮೇಲೆ ನೀರು ಚಿಮುಕಿಸುವುದನ್ನ ಪ್ರಾರಂಭಿಸಿವೆ.

ಬಲವಾದ ಗಾಳಿ ಬೀಸದ ಕಾರಣ ನಗರದಲ್ಲಿ ಹೊಗೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31–33 ಡಿಗ್ರಿ ಮತ್ತು 20–22 ಡಿಗ್ರಿಗಳ ನಡುವೆ ಉಳಿಯುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1–3 ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಆದರೆ ಗರಿಷ್ಠ ತಾಪಮಾನವು ಋತುಮಾನದ ಸರಾಸರಿಗೆ ಹತ್ತಿರದಲ್ಲಿದೆ.

ಬಿಹಾರ ಮಹಾಮೈತ್ರಿಯಲ್ಲಿ ಅಸಮಾಧಾನ : ಚುನಾವಣಾ ಕಣದಿಂದ ಹಿಂದೆ ಸರಿದ ಜೆಎಂಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...